Homeಮುಖಪುಟಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

ಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

- Advertisement -
- Advertisement -

ಇಲ್ಲಿ ಕಾಂಗ್ರೆಸ್ ಎಂದಾಗ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳು ಎಂದೂ, ಪ್ರಗತಿಪರರು ಎಂದಾಗ ಎಡ, ಲಿಬರಲ್ ಇತ್ಯಾದಿ ಎಂದೂ ಓದಿಕೊಳ್ಳಬಹುದು. 2019ರ ಲೋಕಸಭಾ ಚುನಾವಣೆಯಲ್ಲಿ ಕಂಡುಬಂದ ಫಲಿತಾಂಶವು ಸಮಾಜದಲ್ಲಿ ಆಗಿರುವ ಬದಲಾವಣೆಯ ಪ್ರತೀಕ ಎಂಬುದು ಈಗಂತೂ ಸಾಬೀತಾಗಿದೆ. ಸೋತು ಸೊರಗಿ ಹೋಗಿರುವ ಪ್ರಧಾನ ಪ್ರತಿಪಕ್ಷವಾದ ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್‍ಗಾಂಧಿಯವರು ರಾಜೀನಾಮೆ ಕೊಟ್ಟರಲ್ಲದೇ, ಅದು ನಾಟಕವಲ್ಲ ಎಂದು ಸ್ಪಷ್ಟಪಡಿಸಿದರು. ಅವರು ರಾಜೀನಾಮೆ ಕೊಟ್ಟಾಗ, ಪಕ್ಷದೊಳಗೆ ಇನ್ನಷ್ಟು ಅಧಿಕಾರ ಪಡೆದುಕೊಳ್ಳಲು ಮತ್ತು ಕೆಲವು ಹಿರಿಯರನ್ನು ದೂರಲು ಮಾಡಿರುವ ನಾಟಕ ಎಂದು ಭಾವಿಸಲಾಯಿತು. ಬಿಜೆಪಿಯು ವಂಶಾಡಳಿತದ ಮೇಲೆ ನಡೆಸುತ್ತಿರುವ ದಾಳಿಯಿಂದ ತಪ್ಪಿಸಿಕೊಳ್ಳಲು ರಾಹುಲ್‍ಗಾಂಧಿ ನಿಜಕ್ಕೂ ಅಧಿಕಾರ ತ್ಯಜಿಸುತ್ತಿದ್ದಾರೆ ಎಂದೂ ಹೇಳಲಾಯಿತು. ಇವೆರಡರಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುದು ಪತ್ತೆಯಾಗುವುದು ಕಷ್ಟ. ಗಾಂಧಿ ಕುಟುಂಬ ಅಧಿಕಾರ ಬೇಡವೆಂದರೂ, ಅವರಿಗೇ ಅಂಟಿಕೊಂಡಿರಬೇಕಾದ ಅನಿವಾರ್ಯತೆ ಕಾಂಗ್ರೆಸ್ಸಿಗಿರಬಹುದು. ಇಲ್ಲವೇ ಅವರಿಗೂ ಅಧಿಕಾರ ಅಭ್ಯಾಸವಾಗಿರುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ ಸೋನಿಯಾಗಾಂಧಿ ಮತ್ತೆ ‘ಹಂಗಾಮಿ’ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಎಷ್ಟು ತಾತ್ಕಾಲಿಕ ಎಂಬುದನ್ನು ಮುಂದಿನ ದಿನಗಳು ಹೇಗೂ ತಿಳಿಸುತ್ತವೆ.

ಆದರೆ, ದೇಶಕ್ಕೊಂದು ಪ್ರತಿಪಕ್ಷವೂ ಗತಿಯಿರದ ಸ್ಥಿತಿಗೆ ಭಾರತದ ಪ್ರಜಾಪ್ರಭುತ್ವ ತಲುಪಿದೆ. ಸರ್ವಾಧಿಕಾರ ಲಕ್ಷಣಗಳು ಬಹಳ ಹಿಂದೆಯೇ ಕಾಣಿಸಿತ್ತಾದರೂ, ಅದು ಜಾರಿಗೆ ಬರುತ್ತಿರುವುದು ಕಣ್ಣ ಮುಂದೆಯೇ ಕಾಣುತ್ತಿದೆ. ದೇಶದ ಆರ್ಥಿಕ ಬಿಕ್ಕಟ್ಟು ತೀವ್ರವಾಗುತ್ತಿದ್ದರೂ, ದೇಶವಾಳುತ್ತಿರುವ ಪಕ್ಷವನ್ನು ಕಾಪಾಡಲು ಹೊರಗೆ ಪಾಕಿಸ್ತಾನವಿದೆ. ಒಳಗೆ ಜಾತಿ-ಧರ್ಮ ಮತ್ತು ಹಣಬಲವಿದೆ. ಹೀಗಿರುವಾಗ ಜನರೊಳಗಿಂದಲೇ ಪ್ರತಿಪಕ್ಷವು ಹುಟ್ಟಿಕೊಳ್ಳಬೇಕು ಎಂಬ ಮಾತು ಎಷ್ಟೇ ಕ್ಲೀಷೆಯೆನಿಸಿದರೂ ಬೇರೆ ಯಾವ ಷಾರ್ಟ್‍ಕಟ್ ಸಹಾ ಇದಕ್ಕಿಲ್ಲ.

ಮುಂದಣ ದಾರಿಯನ್ನು ಕಂಡುಕೊಳ್ಳುವಾಗ, ಹಿಂದಣ ಹೆಜ್ಜೆಯನ್ನು ಒಮ್ಮೆ ತಿರುಗಿ ನೋಡಿಕೊಳ್ಳಬೇಕು. ಕಳೆದ ಎರಡು ದಶಕಗಳಿಂದ, ಅದರಲ್ಲೂ 2019ರ ಚುನಾವಣೆಯ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಒಂದು ವಾದವನ್ನು ಒರೆಗೆ ಹಚ್ಚಿ ನೋಡುವ ಅಗತ್ಯವಿದೆ. ಬಿಜೆಪಿಗೆದುರಾಗಿ ಕಾಂಗ್ರೆಸ್ ಬಿಟ್ಟರೆ ಬೇರೆ ದಾರಿಯಿಲ್ಲವೆಂತಲೂ, ಕಾಂಗ್ರೆಸ್‍ನ ನೇತೃತ್ವದಲ್ಲಿ ಪ್ರತಿಪಕ್ಷಗಳೆಲ್ಲವೂ ಒಂದಾಗಬೇಕೆಂತಲೂ ಬಿಜೆಪಿ ವಿರೋಧಿಗಳು ಬಯಸಿದರು. ಅದೇ ಮುಳುವಾಯಿತು ಎಂದು ಹೇಳಲಾಗದಿದ್ದರೂ, ಅದು ಯಾವ ರೀತಿಯಲ್ಲೂ ಪ್ರಯೋಜನಕ್ಕೆ ಬರಲಿಲ್ಲ ಎಂಬುದಂತೂ ವಾಸ್ತವ.

ಈ ಒತ್ತಡವನ್ನು ವಿವಿಧ ರಾಜಕೀಯ ಪಕ್ಷಗಳ ಮೇಲೆ ಜನಪರವಾಗಿ ಆಲೋಚನೆ ಮಾಡುವ ಶಕ್ತಿಗಳಿಗಿಂತಲೂ ಮುಸ್ಲಿಂ ಮತಗಳ ಪ್ರಮಾಣವು ಉಂಟು ಮಾಡಿದ್ದವು. ಅದಕ್ಕೆ ಬೇಕಾದ ಆಟವನ್ನು ಒಂದಲ್ಲಾ ಒಂದು ರೀತಿಯಲ್ಲಿ ವಿವಿಧ ಪಕ್ಷಗಳು ಹೂಡಿದವು. ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ನೊಂದಿಗೆ ನಡೆಸಿದ ಮೈತ್ರಿಯ ವಿಫಲ ನಾಟಕವೂ ಅದಕ್ಕೇ ಆಗಿತ್ತು. ಬಲಶಾಲಿಯಲ್ಲದ ಕಾಂಗ್ರೆಸ್‍ಗೆ ಮತ ಹಾಕಬೇಡಿ ಎಂದು ಮಾಯಾವತಿಯವರು ಕರೆ ಕೊಟ್ಟಿದ್ದೂ ಮುಸ್ಲಿಮರಿಗೆ.

ಜನಪರವಾಗಿ ಆಲೋಚನೆ ಮಾಡುವ ಚುನಾವಣೇತರ ಶಕ್ತಿಗಳು ಮತ್ತು ಎಡಚಿಂತಕರು ಕಾಂಗ್ರೆಸ್ ಮೇಲೆ ಒಂದು ಒತ್ತಡ ಸೃಷ್ಟಿಸಲು ಯಶಸ್ವಿಯಾಗಿದ್ದರು. ಅದು ಒಂದು ಅಸಲೀ ಜನಪರ ನೆರೇಟಿವ್ ಮುಂದಿಡಬೇಕು ಮತ್ತು ಜನಸಾಮಾನ್ಯರ ನಿಜವಾದ ಕಷ್ಟಗಳಿಗೆ ಸ್ಪಂದಿಸಲು ಬೇಕಾದ ನೀತಿಗಳನ್ನು ಜಾರಿಗೆ ತರುವ ಆಶ್ವಾಸನೆ ಕೊಡಬೇಕು ಎಂಬ ಒತ್ತಡ ಕಾಂಗ್ರೆಸ್‍ನ ಮೇಲೆ ಉಂಟಾಗಿತ್ತು. ರಾಹುಲ್‍ಗಾಂಧಿ ನೇರವಾಗಿ ಅನಿಲ್ ಅಂಬಾನಿಯ ಮೇಲೆ ಪದೇ ಪದೇ ಆರೋಪಗಳನ್ನು ಮಾಡಿದ್ದಲ್ಲದೇ, ದೇಶದ 15-20 ಉದ್ದಿಮೆಪತಿಗಳ ಹಿತಕ್ಕಾಗಿ ಈ ಸರ್ಕಾರವು ನಡೆಯುತ್ತಿದೆ ಎಂದು ಯಾವ ಮುಲಾಜಿಲ್ಲದೇ ಹೇಳಿದರು. ಅದರ ಪ್ರಣಾಳಿಕೆಯಲ್ಲಿದ್ದ ನ್ಯಾಯ್, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಹಿಂಪಡೆತ, ರೈತರ ಸಾಲಮನ್ನಾ ಒಳಗೊಂಡಂತೆ ಹಲವು ಜನಪರ ಅಂಶಗಳು ಅದನ್ನು ಸೂಚಿಸುತ್ತಿತ್ತು. ಇವತ್ತಿನ ವ್ಯವಸ್ಥೆಯಲ್ಲಿ ಕಮ್ಯುನಿಸ್ಟ್ ಪಕ್ಷವೊಂದು ಮುಂದಿಡಬಹುದಾದ ಹಲವು ಭರವಸೆಗಳು ಅದರಲ್ಲಿದ್ದವು.

ಪಿ.ಚಿದಂಬರಂರಂತಹ ಮುಕ್ತ ಮಾರುಕಟ್ಟೆ ಪ್ರತಿಪಾದಕ, ಭಾರತದಲ್ಲಿ ಜಾಗತೀಕರಣ ನೀತಿಗಳನ್ನು ಜಾರಿಗೆ ತಂದ ಮನಮೋಹನ್‍ಸಿಂಗ್‍ರಿಂದ ಹಿಡಿದು, ಕಾಂಗ್ರೆಸ್ ಪಕ್ಷವು ತನ್ನ ಮಧ್ಯಮ ಮಾರ್ಗಕ್ಕೆ ಅಂಟಿಕೊಂಡಿರಬೇಕು ಎಂದು ಒತ್ತಾಯಿಸುವ ಕ್ವಿಂಟ್‍ನ ಸಂಪಾದಕ ರಾಘವ್ ಬೆಹ್ಲ್ ಸಹಾ ಅದನ್ನು ಸಮರ್ಥಿಸಿ ಮಾತನಾಡಿದರು. ಹೆಚ್ಚು ಕಡಿಮೆ ಒಂದು ವರ್ಷದ ಮುಂಚೆಯೇ ಪ್ರಣಾಳಿಕೆ ತಯಾರಿಯ ಪ್ರಕ್ರಿಯೆ ಆರಂಭಿಸಿದ ಕಾಂಗ್ರೆಸ್ಸು, ಅದನ್ನು ಬಿಡುಗಡೆ ಮಾಡಿದ್ದು ತಡವಾಗಿ. ಅದನ್ನು ಜನರಿಗೆ ತಲುಪಿಸಲು ಬೇಕಿದ್ದ ಸಮಯವಾಗಲೀ, ತಲುಪಿಸಬಲ್ಲ ಯಂತ್ರಾಂಗವಾಗಲೀ ಅದಕ್ಕಿರಲೇ ಇಲ್ಲ. ಒಂದು ವೇಳೆ ತಲುಪಿದ್ದರೂ ಅಂತಹ ದೊಡ್ಡ ಪ್ರಯೋಜವಾಗುತ್ತಿರಲಿಲ್ಲ ಎಂಬುದನ್ನು ಫಲಿತಾಂಶವು ಎತ್ತಿ ತೋರಿಸಿತು.

ಜನಪರವಾದ ನೆರೇಟಿವ್ ಕಟ್ಟಿಕೊಟ್ಟಿದ್ದು ತಪ್ಪಲ್ಲ. ಅದಕ್ಕಿಂತ ಒಳ್ಳೆಯದೇನಿದೆ? ಆದರೆ ಕಾಂಗ್ರೆಸ್ಸಿನ ಬಾಯಲ್ಲಿ ಜನಪರವಾದ, ಉದ್ದಿಮೆಪತಿಗಳ ವಿರುದ್ಧದ ಮಾತುಗಳನ್ನು ಜನರು ನಂಬುವುದು ಕಷ್ಟ. ಈ ಮಾತುಗಳನ್ನು ಅದರ ಸರ್ವೋಚ್ಚ ನಾಯಕ ಆಡುತ್ತಿರುವಾಗಲೇ ಅದೇ ಪಕ್ಷದಲ್ಲಿ ಸಾವಿರಾರು ಕೋಟಿ ಆಸ್ತಿ ಹೊಂದಿರುವ ಎಷ್ಟೋ ಮರಿನಾಯಕರಿದ್ದಾರೆ. ಬಿಜೆಪಿಯ ನೀತಿಗಳಿಗಿಂತ ಭಿನ್ನವಾದ ಸಾಮಾಜಿಕ ನಿಲುವನ್ನೇನೂ ಹೊಂದಿರದ ಕಾಂಗ್ರೆಸ್ ನಾಯಕರನ್ನು ಜನರು ತಮ್ಮ ಕಣ್ಣೆದುರಿಗೆ ನೋಡುತ್ತಿದ್ದರು. ಇದನ್ನೆಲ್ಲಾ ಜನರನ್ನು ಮೋಸಗೊಳಿಸಿ ಓಟು ಪಡೆಯಲು ಮಾತ್ರ ಮಾಡಬೇಕೆಂದಿದ್ದಲ್ಲಿ ಅದನ್ನು ಬಿಜೆಪಿ ಇನ್ನೂ ಅದ್ಭುತವಾಗಿ ಮಾಡುತ್ತಿತ್ತು.

ಕಾಂಗ್ರೆಸ್ಸು ಒಂದು ಮಧ್ಯಮಮಾರ್ಗದ ಪಕ್ಷವಾಗಿಯೇ ಉಳಿದುಕೊಳ್ಳುವುದು ಒಳಿತು. ದೆಹಲಿಯಿಂದ ಹಳ್ಳಿಯ ಮೂಲೆಗಳ ತನಕ ಅದಕ್ಕಿರುವ ತಳಹದಿಯನ್ನು ರಾಹುಲ್‍ಗಾಂಧಿಯೂ ಬದಲಿಸುವುದು ಸಾಧ್ಯವಿಲ್ಲ. ಹೊಸ ಅಧ್ಯಕ್ಷೆಗೂ ಸಾಧ್ಯವಿಲ್ಲ.

ಇಲ್ಲಿ ನಿಜಕ್ಕೂ ಸೋಲುಂಡಿದ್ದು ಜನಪರ ಶಕ್ತಿಗಳು. ತಮ್ಮದೇ ಪರ್ಯಾಯವನ್ನು ಸಮಾಜದಲ್ಲಿ ಮತ್ತು ಸಂಸತ್ತಿನಲ್ಲಿ ಕಟ್ಟಲು ಸಾಧ್ಯವಾಗದೇ ಈಗಾಗಲೇ ತಿರಸ್ಕೃತಗೊಂಡಿರುವ ರಾಜಕೀಯ ಪಕ್ಷಗಳೇ ಅದನ್ನು ಮಾಡಲಿ ಎಂದು ಅವು ಬಯಸಿದವು. ಫಲಿತಾಂಶದ ತಕ್ಷಣದ ಶಾಕ್‍ನಿಂದ ಹೊರಬಂದ ಮೇಲಾದರೂ ಆ ನಿಟ್ಟಿನಲ್ಲಿ ಯೋಚಿಸಿ ಸಮಾಜದಲ್ಲೂ, ಸಂಸತ್ತಿನಲ್ಲೂ ಬದಲಾವಣೆ ತರಲು ಬೇಕಾದ ಸುದೀರ್ಘ ಕಷ್ಟಕರ ಪ್ರಯಾಣಕ್ಕೆ ಮುಂದಾದರೆ ಮಾತ್ರ ದೇಶಕ್ಕೆ ಭವಿಷ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...