Homeಕರ್ನಾಟಕಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು.

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು. ಇದನ್ನು ಆಳುವ ಖೂಳರು ಕಿವಿ ಮೇಲೆ ಹಾಕಿಕೊಳ್ಳಲೇ ಇಲ್ಲ. ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೈವೇ-ಹಳ್ಳಿಗಳಲ್ಲಿ ಅಪಘಾತ ಸಾಮಾನ್ಯ ಎಂಬಂತಾಗಿದೆ. ತಲೆಗೆ ಗಂಭೀರ ಗಾಯಗಳಾದರೆ, ಹೃದಯಕ್ಕೆ ಹೊಡೆತ ಬಿದ್ದರೆ, ಹೃದಯಾಘಾತ ಸಂಭವಿಸಿದರೆ, ಹೆರಿಗೆ ಸಮಯದಲ್ಲಿ ಸಮಸ್ಯೆಯಾದರೆ, ಜೀರ್ಣಾಂಗಕ್ಕೆ ಪೆಟ್ಟಾಗಿ ರಕ್ತಸ್ರಾವ ಶುರುವಾದರೆ ಅರ್ಧ ಗಂಟೆಯಿಂದ ಎರಡು ಗಂಟೆಯೊಳಗೆ ತುರ್ತು ಚಿಕಿತ್ಸೆ ಕೊಟ್ಟರಷ್ಟೇ ಜೀವ ಉಳಿಸಬಹುದು. ವೈದ್ಯಕೀಯ ಪರಿಭಾಷೆಯ ಈ ಗೋಲ್ಡನ್ ಪಿರಿಯಡ್‍ನಲ್ಲಿ ಚಿಕಿತ್ಸೆ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಶಿರಸಿ-ಯಲ್ಲಾಪುರ ಸೀಮೆಯವರು ಗಾಯಾಳು/ರೋಗಿಯನ್ನು ಹುಬ್ಬಳ್ಳಿ ಅಥವಾ ಧಾರವಾಡಕ್ಕೆ ಕರೆದೊಯ್ಯಲು ಮೂರು ತಾಸು ಬೇಕು. ಮಣಿಪಾಲ-ಮಂಗಳೂರು ನಾಲ್ಕೈದು ತಾಸುಗಳೇ ಬೇಕಾಗುತ್ತದೆ. ಕಾರವಾರದವರು ಪಣಜಿ ಆಸ್ಪತ್ರೆ ತಲುಪಲು ಎರಡು ಗಂಟೆಯಾದರೂ ಅವಶ್ಯ. ಸಿದ್ದಾಪುರ ಭಾಗದವರು ಶಿವಮೊಗ್ಗ ತಲುಪಬೇಕೆಂದರೆ 3 ಗಂಟೆ ಪ್ರಯಾಣ.

ಗೋಲ್ಡನ್ ಪಿರಿಯಡ್‍ನಲ್ಲಿ ಸುಸಜ್ಜಿತ ಆಸ್ಪತ್ರೆಗೆ ರೋಗಿಗಳನ್ನು/ಗಾಯಾಳುಗಳನ್ನು ಸೇರಿಸಲಾಗದೆ ವಾರ್ಷಿಕವಾಗಿ ನೂರಾರು ಜೀವಗಳು ಹೋಗುತ್ತಿವೆ. 2018ರ ಮೇ ತಿಂಗಳಿಂದ 2019ರ ಎಪ್ರಿಲ್‍ವರೆಗೆ ಜಿಲ್ಲೆಯಲ್ಲಿ ಸರಾಸರಿ ದಿನಕ್ಕೆರಡರಂತೆ ಗಂಭೀರ ಅಪಘಾತಗಳಾಗಿವೆ. 239 ಮಂದಿ ಸಾವಿಗೀಡಾಗಿದ್ದಾರೆ; 522 ಮಂದಿಯ ಅಂಗ ಊನವಾಗಿದೆ; 1,331 ಜನರು ಗಾಯಗೊಂಡು ಬಚಾವಾಗಿದ್ದಾರೆ. ತುರ್ತು ಸಮಯದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಿರುವ ಅಂಬ್ಯುಲೆನ್ಸ್ ಸಹ ಜಿಲ್ಲೆಯವರಿಗೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಒಂದಿದ್ದರೆ ಹಲವು ಜೀವಗಳನ್ನು ಖಂಡಿತ ಉಳಿಸಬಹುದಿತ್ತು. ಉತ್ತರ ಕನ್ನಡದಲ್ಲಿ ಮೆಡಿಕಲ್ ಕಾಲೇಜು ಶುರುವಾಗಿ ಮೂರು ವರ್ಷವಾಗಿದೆ. ಆದರೆ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಬೇಕೆಂಬ ಬೇಡಿಕೆ ಈಡೇರಿಲ್ಲ.

ಈ ನರಕ ಯಾತನೆಯಿಂದ ಜಿಲ್ಲೆಯನ್ನು ಪಾರು ಮಾಡಲೇಬೇಕೆಂಬ ಯೋಚನೆಯಿಂದ ಒಂದಿಷ್ಟು ಯುವಕರು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಅಕ್ಷರ ಆಂದೋಲನ ಆರಂಭಿಸಿದ್ದಾರೆ.ಟ್ವಿಟರ್, ಫೇಸ್‍ಬುಕ್, ವಾಟ್ಸಾಪ್‍ಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. “ವಿ ನೀಡ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್‍ಟ್ಯಾಗ್‍ನಿಂದ ಯುವಕರು ಜನಪ್ರತಿನಿಧಿಗಳ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ. ಪರಸ್ಪರ ಪರಿಚಯವೇ ಇಲ್ಲದ ಈ ಸಮಾನ ಮನಸ್ಕರ ಸ್ವಯಂ ಪ್ರೇರಣೆಯ ಸುಸಜ್ಜಿತ ಆಸ್ಪತ್ರೆ ಬೇಡಿಕೆಯ ಸರಣಿ ಟ್ವೀಟ್‍ಗೆ ಪ್ರಧಾನಿ, ಸಿಎಂ, ಜಿಲ್ಲೆಯ ದಂಡಪಿಂಡ ಮಂತ್ರಿ ದೇಶಪಾಂಡೆ, ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಜಿಲ್ಲೆಯ ಐದು ಶಾಸಕರು ಗಡಿಬಿಡಿಗೆ ಬಿದ್ದಂತೆ ಎದ್ದು ಕುಂತಿದ್ದಾರೆ.

ಜೂನ್ 8ರ ಶನಿವಾರ ಸಂಜೆ 5.30ರಿಂದ 7.30 ಗಂಟೆವರೆಗೆ ಏಕಕಾಲದಲ್ಲಿ ಜಿಲ್ಲೆಯ ಜನ ಪ್ರಧಾನಿ ಕಾರ್ಯಾಲಯದಿಂದ ಸ್ಥಳೀಯ ಶಾಸಕರ ತನಕದ ಆಯಕಟ್ಟಿನ ಅಧಿಕಾರಸ್ಥರೆಲ್ಲರಿಗೆ ಸುಸಜ್ಜಿತ ಆಸ್ಪತ್ರೆಗಾಗಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಏಳು ಸಾವಿರಕ್ಕೂ ಹೆಚ್ಚು ಜನರು ತೊಡಗಿಕೊಂಡು ಅಧಿಕಾರಸ್ಥರು ಜಿಲ್ಲೆಯತ್ತ ತಿರುಗಿ ನೋಡುವಂತೆ ಮಾಡಿದ್ದು ದಾಖಲೆಯೇ ಸರಿ!! ಜಿಲ್ಲೆಯ ಯುವಕರು ಸಾಮಾಜಿಕ ಕಳಕಳಿಯ ಹೊಸ ಟ್ರೆಂಡ್ ಹುಟ್ಟಿಹಾಕಿದ್ದಾರೆ. ಈ ಅಭಿಯಾನದಿಂದ ಬೆಚ್ಚಿಬಿದ್ದಿರುವ ಜನಪ್ರತಿನಿಧಿಗಳು ಬೆಂಬಲ ಮಾತಾಡುತ್ತಿದ್ದಾರೆ. ಕಾರವಾರ ಶಾಸಕಿ ರೂಪಾಲಿ ನಾಯಕ್ ತಾನು ಹಿಂದೆ ವೈದ್ಯಕೀಯ ಶಿಕ್ಷಣ ಮಂತ್ರಿಯಾಗಿದ್ದ ಡಿಕೆಶಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಬರೆದ ಪತ್ರ ತೋರಿಸುತ್ತಿದ್ದರೆ, ಶಿರಸಿಯ ಕಾಗೇರಿ ಮಾಣಿ ಸುಸಜ್ಜಿತ ಆಸ್ಪತ್ರೆ ಶಿರಸಿ ಅಥವಾ ಕುಮಟಾದಲ್ಲಿ ಆಗುವ ಜರೂರಿದೆ ಎನ್ನುತ್ತಿದ್ದಾರೆ. ಭಟ್ಕಳದ ಶಾಸಕ ಸುನೀಲ್ ನಾಯ್ಕ ವೈದ್ಯಕೀಯ ಶಿಕ್ಷಣ ಮಂತ್ರಿಗೆ ಅವಸರವಸರದಲ್ಲಿ ಒಂದು ಪತ್ರ ಗೀಚಿದ್ದಾರೆ. ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ ನೆಟ್ಟಿಗರ ಬೇಡಿಕೆಗೆ ಬಲ ಕೊಟ್ಟಿದ್ದಾರೆ.

ಸಿಎಂ ಕುಮ್ಮಿ ಕಚೇರಿಯ ಅಧಿಕೃತ ಪೇಜ್‍ನಿಂದ ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದೆ. “ಉತ್ತರ ಕನ್ನಡಿಗರ ಆಸ್ಪತ್ರೆ ಅಭಿಯಾನ ನನ್ನ ಗಮನಕ್ಕೆ ಬಂದಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಭರವಸೆ ಬಂದಿದೆ. ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸಹಕಾರ ನೀಡಬಹುದೆಂದು ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸುತ್ತೇನೆ. ಉತ್ತರ ಕನ್ನಡದ ಸಂಸದನ ಜತೆಯಲ್ಲಿಟ್ಟುಕೊಂಡು ಕೇಂದ್ರದ ಸಹಾಯ ಕೋರಿಸುತ್ತೇನೆ” ಅಂದಿದ್ದಾರೆ. ಆದರೆ ಜಿಲ್ಲೆಗೆ ದೊಡ್ಡ ದಂಡವಾಗಿರುವ ಮಂತ್ರಿ ದೋಷಪಾಂಡೆ ಮತ್ತು ಅನಂತ್ಮಾಣಿ ಇದ್ಯಾವುದೂ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಮೂರೂ ಮುಚ್ಚಿಕೊಂಡು ಸ್ವಂತ ‘ದಂದೆ’ಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತನ್ನ ಎಂಪಿಗಿರಿ ಅನಿವಾರ್ಯ ಎಂಬಂತೆ ಒಣ ಪೋಸು ಕೊಡುವ, ಅಭಿವೃದ್ಧಿ ಹಿಂದೂತ್ವ ಎಂದು ಬೊಬ್ಬಿರಿವ ಅನಂತ್ಮಾಣಿ ಆಸ್ಪತ್ರೆಗೆ ಒತ್ತಾಯಿಸಿ ಸರಣಿ ಟ್ವಿಟ್ ಮಾಡಿದವರನ್ನು ಬ್ಲಾಕ್ ಮಾಡಿ ತನ್ನ ಅಸಲಿ ಕರ್ಮಗೇಡಿತನ ತೋರಿಸಿಕೊಂಡಿದ್ದಾನೆ.

“ಉತ್ತರ ಕನ್ನಡ ಟ್ರೋಲರ್ಸ್” ಎಂಬ ಟ್ವಟರ್ ಖಾತೆಯಿಂದ ಮಾಣಿಗೆ ಟ್ವಿಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸುವ ಯೋಗ್ಯತೆಯಿಲ್ಲದ ಸಂಸದ ಸಾಹೇಬ ಆಸ್ಪತ್ರೆ ಬೇಡಿಕೆ ಇಡುತ್ತಿರುವವರನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಇಟ್ಟಿದ್ದಾನೆ. ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಟ್ರೋಮಾ ಸೆಂಟರ್ ಸ್ಥಾಪನೆಗೆ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಕಳಿಸಿ ಬಹಳ ದಿನಗಳೇ ಆಗಿಹೋಗಿವೆ. ಇದಕ್ಕೆ ಜಾಗದ ತಲಾಶ್ ಸಹ ನಡೆದಿದೆ. ಬಹುಶಃ ಸಂಸದ ಮಾಣಿಗೆ ಇದೆಲ್ಲ ಗೊತ್ತಿರುವಂತಿಲ್ಲ. ಖಾಸಗಿಯವರಿಂದ ದುಬಾರಿ ಟ್ರೋಮಾ ಸೆಂಟರ್ ನಿರ್ಮಾಣ ಸಾಧ್ಯವಾಗದು. ಅದು ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಆಗಬೇಕಾದ ಅನಿವಾರ್ಯತೆಯಿದೆ. ಜನರ ಈ ಹೋರಾಟಕ್ಕೆ ಬರೀ ಕಣ್ಣೊರೆಸುವ ಕಿತಾಪತಿ ಆಗಬಾರದೆಂಬುದು ಆಸ್ಪತ್ರೆ ಬಯಸುವವರ ಕಳಕಳಿ. ಗುರಿಮುಟ್ಟುವ ತನಕ ಜನಪ್ರತಿನಿಧಿಗಳು ಹಿಂದಡಿ ಇಡಬಾರದೆಂದು ಜನ ಬಯಸಿದ್ದಾರೆ.ಹಾಗೆಯೇ ಭಾವನಾತ್ಮಕ ಹೋರಾಟ ಜೋರಾದಾಗ ಆಳುವವರು ಟ್ರಾಮಾ ಸೆಂಟರ್ ಬೋರ್ಡ್ ಹಾಕಿ, ನಾಲ್ಕು ಡಾಕ್ಟರ್‍ಗಳ ನೇಮಿಸುವ ನಾಟಕ ಆಡದಿರಲಿ. ಉತ್ತರ ಕನ್ನಡಿಗರ ಜೀವ ಉಳಿಸುವ ಪ್ರಾಮಾಣಿಕ ಕೆಲಸ ತುರ್ತಾಗಿ ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...