Homeಕರ್ನಾಟಕಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು.

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು. ಇದನ್ನು ಆಳುವ ಖೂಳರು ಕಿವಿ ಮೇಲೆ ಹಾಕಿಕೊಳ್ಳಲೇ ಇಲ್ಲ. ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೈವೇ-ಹಳ್ಳಿಗಳಲ್ಲಿ ಅಪಘಾತ ಸಾಮಾನ್ಯ ಎಂಬಂತಾಗಿದೆ. ತಲೆಗೆ ಗಂಭೀರ ಗಾಯಗಳಾದರೆ, ಹೃದಯಕ್ಕೆ ಹೊಡೆತ ಬಿದ್ದರೆ, ಹೃದಯಾಘಾತ ಸಂಭವಿಸಿದರೆ, ಹೆರಿಗೆ ಸಮಯದಲ್ಲಿ ಸಮಸ್ಯೆಯಾದರೆ, ಜೀರ್ಣಾಂಗಕ್ಕೆ ಪೆಟ್ಟಾಗಿ ರಕ್ತಸ್ರಾವ ಶುರುವಾದರೆ ಅರ್ಧ ಗಂಟೆಯಿಂದ ಎರಡು ಗಂಟೆಯೊಳಗೆ ತುರ್ತು ಚಿಕಿತ್ಸೆ ಕೊಟ್ಟರಷ್ಟೇ ಜೀವ ಉಳಿಸಬಹುದು. ವೈದ್ಯಕೀಯ ಪರಿಭಾಷೆಯ ಈ ಗೋಲ್ಡನ್ ಪಿರಿಯಡ್‍ನಲ್ಲಿ ಚಿಕಿತ್ಸೆ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಶಿರಸಿ-ಯಲ್ಲಾಪುರ ಸೀಮೆಯವರು ಗಾಯಾಳು/ರೋಗಿಯನ್ನು ಹುಬ್ಬಳ್ಳಿ ಅಥವಾ ಧಾರವಾಡಕ್ಕೆ ಕರೆದೊಯ್ಯಲು ಮೂರು ತಾಸು ಬೇಕು. ಮಣಿಪಾಲ-ಮಂಗಳೂರು ನಾಲ್ಕೈದು ತಾಸುಗಳೇ ಬೇಕಾಗುತ್ತದೆ. ಕಾರವಾರದವರು ಪಣಜಿ ಆಸ್ಪತ್ರೆ ತಲುಪಲು ಎರಡು ಗಂಟೆಯಾದರೂ ಅವಶ್ಯ. ಸಿದ್ದಾಪುರ ಭಾಗದವರು ಶಿವಮೊಗ್ಗ ತಲುಪಬೇಕೆಂದರೆ 3 ಗಂಟೆ ಪ್ರಯಾಣ.

ಗೋಲ್ಡನ್ ಪಿರಿಯಡ್‍ನಲ್ಲಿ ಸುಸಜ್ಜಿತ ಆಸ್ಪತ್ರೆಗೆ ರೋಗಿಗಳನ್ನು/ಗಾಯಾಳುಗಳನ್ನು ಸೇರಿಸಲಾಗದೆ ವಾರ್ಷಿಕವಾಗಿ ನೂರಾರು ಜೀವಗಳು ಹೋಗುತ್ತಿವೆ. 2018ರ ಮೇ ತಿಂಗಳಿಂದ 2019ರ ಎಪ್ರಿಲ್‍ವರೆಗೆ ಜಿಲ್ಲೆಯಲ್ಲಿ ಸರಾಸರಿ ದಿನಕ್ಕೆರಡರಂತೆ ಗಂಭೀರ ಅಪಘಾತಗಳಾಗಿವೆ. 239 ಮಂದಿ ಸಾವಿಗೀಡಾಗಿದ್ದಾರೆ; 522 ಮಂದಿಯ ಅಂಗ ಊನವಾಗಿದೆ; 1,331 ಜನರು ಗಾಯಗೊಂಡು ಬಚಾವಾಗಿದ್ದಾರೆ. ತುರ್ತು ಸಮಯದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಿರುವ ಅಂಬ್ಯುಲೆನ್ಸ್ ಸಹ ಜಿಲ್ಲೆಯವರಿಗೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಒಂದಿದ್ದರೆ ಹಲವು ಜೀವಗಳನ್ನು ಖಂಡಿತ ಉಳಿಸಬಹುದಿತ್ತು. ಉತ್ತರ ಕನ್ನಡದಲ್ಲಿ ಮೆಡಿಕಲ್ ಕಾಲೇಜು ಶುರುವಾಗಿ ಮೂರು ವರ್ಷವಾಗಿದೆ. ಆದರೆ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಬೇಕೆಂಬ ಬೇಡಿಕೆ ಈಡೇರಿಲ್ಲ.

ಈ ನರಕ ಯಾತನೆಯಿಂದ ಜಿಲ್ಲೆಯನ್ನು ಪಾರು ಮಾಡಲೇಬೇಕೆಂಬ ಯೋಚನೆಯಿಂದ ಒಂದಿಷ್ಟು ಯುವಕರು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಅಕ್ಷರ ಆಂದೋಲನ ಆರಂಭಿಸಿದ್ದಾರೆ.ಟ್ವಿಟರ್, ಫೇಸ್‍ಬುಕ್, ವಾಟ್ಸಾಪ್‍ಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. “ವಿ ನೀಡ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್‍ಟ್ಯಾಗ್‍ನಿಂದ ಯುವಕರು ಜನಪ್ರತಿನಿಧಿಗಳ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ. ಪರಸ್ಪರ ಪರಿಚಯವೇ ಇಲ್ಲದ ಈ ಸಮಾನ ಮನಸ್ಕರ ಸ್ವಯಂ ಪ್ರೇರಣೆಯ ಸುಸಜ್ಜಿತ ಆಸ್ಪತ್ರೆ ಬೇಡಿಕೆಯ ಸರಣಿ ಟ್ವೀಟ್‍ಗೆ ಪ್ರಧಾನಿ, ಸಿಎಂ, ಜಿಲ್ಲೆಯ ದಂಡಪಿಂಡ ಮಂತ್ರಿ ದೇಶಪಾಂಡೆ, ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಜಿಲ್ಲೆಯ ಐದು ಶಾಸಕರು ಗಡಿಬಿಡಿಗೆ ಬಿದ್ದಂತೆ ಎದ್ದು ಕುಂತಿದ್ದಾರೆ.

ಜೂನ್ 8ರ ಶನಿವಾರ ಸಂಜೆ 5.30ರಿಂದ 7.30 ಗಂಟೆವರೆಗೆ ಏಕಕಾಲದಲ್ಲಿ ಜಿಲ್ಲೆಯ ಜನ ಪ್ರಧಾನಿ ಕಾರ್ಯಾಲಯದಿಂದ ಸ್ಥಳೀಯ ಶಾಸಕರ ತನಕದ ಆಯಕಟ್ಟಿನ ಅಧಿಕಾರಸ್ಥರೆಲ್ಲರಿಗೆ ಸುಸಜ್ಜಿತ ಆಸ್ಪತ್ರೆಗಾಗಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಏಳು ಸಾವಿರಕ್ಕೂ ಹೆಚ್ಚು ಜನರು ತೊಡಗಿಕೊಂಡು ಅಧಿಕಾರಸ್ಥರು ಜಿಲ್ಲೆಯತ್ತ ತಿರುಗಿ ನೋಡುವಂತೆ ಮಾಡಿದ್ದು ದಾಖಲೆಯೇ ಸರಿ!! ಜಿಲ್ಲೆಯ ಯುವಕರು ಸಾಮಾಜಿಕ ಕಳಕಳಿಯ ಹೊಸ ಟ್ರೆಂಡ್ ಹುಟ್ಟಿಹಾಕಿದ್ದಾರೆ. ಈ ಅಭಿಯಾನದಿಂದ ಬೆಚ್ಚಿಬಿದ್ದಿರುವ ಜನಪ್ರತಿನಿಧಿಗಳು ಬೆಂಬಲ ಮಾತಾಡುತ್ತಿದ್ದಾರೆ. ಕಾರವಾರ ಶಾಸಕಿ ರೂಪಾಲಿ ನಾಯಕ್ ತಾನು ಹಿಂದೆ ವೈದ್ಯಕೀಯ ಶಿಕ್ಷಣ ಮಂತ್ರಿಯಾಗಿದ್ದ ಡಿಕೆಶಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಬರೆದ ಪತ್ರ ತೋರಿಸುತ್ತಿದ್ದರೆ, ಶಿರಸಿಯ ಕಾಗೇರಿ ಮಾಣಿ ಸುಸಜ್ಜಿತ ಆಸ್ಪತ್ರೆ ಶಿರಸಿ ಅಥವಾ ಕುಮಟಾದಲ್ಲಿ ಆಗುವ ಜರೂರಿದೆ ಎನ್ನುತ್ತಿದ್ದಾರೆ. ಭಟ್ಕಳದ ಶಾಸಕ ಸುನೀಲ್ ನಾಯ್ಕ ವೈದ್ಯಕೀಯ ಶಿಕ್ಷಣ ಮಂತ್ರಿಗೆ ಅವಸರವಸರದಲ್ಲಿ ಒಂದು ಪತ್ರ ಗೀಚಿದ್ದಾರೆ. ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ ನೆಟ್ಟಿಗರ ಬೇಡಿಕೆಗೆ ಬಲ ಕೊಟ್ಟಿದ್ದಾರೆ.

ಸಿಎಂ ಕುಮ್ಮಿ ಕಚೇರಿಯ ಅಧಿಕೃತ ಪೇಜ್‍ನಿಂದ ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದೆ. “ಉತ್ತರ ಕನ್ನಡಿಗರ ಆಸ್ಪತ್ರೆ ಅಭಿಯಾನ ನನ್ನ ಗಮನಕ್ಕೆ ಬಂದಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಭರವಸೆ ಬಂದಿದೆ. ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸಹಕಾರ ನೀಡಬಹುದೆಂದು ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸುತ್ತೇನೆ. ಉತ್ತರ ಕನ್ನಡದ ಸಂಸದನ ಜತೆಯಲ್ಲಿಟ್ಟುಕೊಂಡು ಕೇಂದ್ರದ ಸಹಾಯ ಕೋರಿಸುತ್ತೇನೆ” ಅಂದಿದ್ದಾರೆ. ಆದರೆ ಜಿಲ್ಲೆಗೆ ದೊಡ್ಡ ದಂಡವಾಗಿರುವ ಮಂತ್ರಿ ದೋಷಪಾಂಡೆ ಮತ್ತು ಅನಂತ್ಮಾಣಿ ಇದ್ಯಾವುದೂ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಮೂರೂ ಮುಚ್ಚಿಕೊಂಡು ಸ್ವಂತ ‘ದಂದೆ’ಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತನ್ನ ಎಂಪಿಗಿರಿ ಅನಿವಾರ್ಯ ಎಂಬಂತೆ ಒಣ ಪೋಸು ಕೊಡುವ, ಅಭಿವೃದ್ಧಿ ಹಿಂದೂತ್ವ ಎಂದು ಬೊಬ್ಬಿರಿವ ಅನಂತ್ಮಾಣಿ ಆಸ್ಪತ್ರೆಗೆ ಒತ್ತಾಯಿಸಿ ಸರಣಿ ಟ್ವಿಟ್ ಮಾಡಿದವರನ್ನು ಬ್ಲಾಕ್ ಮಾಡಿ ತನ್ನ ಅಸಲಿ ಕರ್ಮಗೇಡಿತನ ತೋರಿಸಿಕೊಂಡಿದ್ದಾನೆ.

“ಉತ್ತರ ಕನ್ನಡ ಟ್ರೋಲರ್ಸ್” ಎಂಬ ಟ್ವಟರ್ ಖಾತೆಯಿಂದ ಮಾಣಿಗೆ ಟ್ವಿಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸುವ ಯೋಗ್ಯತೆಯಿಲ್ಲದ ಸಂಸದ ಸಾಹೇಬ ಆಸ್ಪತ್ರೆ ಬೇಡಿಕೆ ಇಡುತ್ತಿರುವವರನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಇಟ್ಟಿದ್ದಾನೆ. ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಟ್ರೋಮಾ ಸೆಂಟರ್ ಸ್ಥಾಪನೆಗೆ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಕಳಿಸಿ ಬಹಳ ದಿನಗಳೇ ಆಗಿಹೋಗಿವೆ. ಇದಕ್ಕೆ ಜಾಗದ ತಲಾಶ್ ಸಹ ನಡೆದಿದೆ. ಬಹುಶಃ ಸಂಸದ ಮಾಣಿಗೆ ಇದೆಲ್ಲ ಗೊತ್ತಿರುವಂತಿಲ್ಲ. ಖಾಸಗಿಯವರಿಂದ ದುಬಾರಿ ಟ್ರೋಮಾ ಸೆಂಟರ್ ನಿರ್ಮಾಣ ಸಾಧ್ಯವಾಗದು. ಅದು ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಆಗಬೇಕಾದ ಅನಿವಾರ್ಯತೆಯಿದೆ. ಜನರ ಈ ಹೋರಾಟಕ್ಕೆ ಬರೀ ಕಣ್ಣೊರೆಸುವ ಕಿತಾಪತಿ ಆಗಬಾರದೆಂಬುದು ಆಸ್ಪತ್ರೆ ಬಯಸುವವರ ಕಳಕಳಿ. ಗುರಿಮುಟ್ಟುವ ತನಕ ಜನಪ್ರತಿನಿಧಿಗಳು ಹಿಂದಡಿ ಇಡಬಾರದೆಂದು ಜನ ಬಯಸಿದ್ದಾರೆ.ಹಾಗೆಯೇ ಭಾವನಾತ್ಮಕ ಹೋರಾಟ ಜೋರಾದಾಗ ಆಳುವವರು ಟ್ರಾಮಾ ಸೆಂಟರ್ ಬೋರ್ಡ್ ಹಾಕಿ, ನಾಲ್ಕು ಡಾಕ್ಟರ್‍ಗಳ ನೇಮಿಸುವ ನಾಟಕ ಆಡದಿರಲಿ. ಉತ್ತರ ಕನ್ನಡಿಗರ ಜೀವ ಉಳಿಸುವ ಪ್ರಾಮಾಣಿಕ ಕೆಲಸ ತುರ್ತಾಗಿ ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...