Homeಕರ್ನಾಟಕಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...