Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...