Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...