Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...