Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...