Homeಅಂಕಣಗಳುನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..

ರಾಜ್ಯದ ಹೈಯರ್ ಎಜುಕೇಷನ್ ಮಿನಿಸ್ಟರ್ ‘ಜಟ್ಟಿ ದೆವ್ವೇಗೌಡ’ರ ಕಡೆಯಿಂದ ಕಾಲೇಜು ಸ್ಟೂಡೆಂಟುಗಳಿಗೆ ಬಿಸಿಬಿಸಿ ಸುದ್ದಿಯೊಂದು ಲಭ್ಯವಾಗಿದ್ದು, ಶಿಕ್ಷಣ ಮಂತ್ರಿಯ ಹೊಸ ಹೇಳಿಕೆಗೆ ಹುಡುಗ ಹುಡುಗಿಯರು ಕೆಂಡಾಮಂಡಲರಾಗಿದ್ದಾರೆ. ಆದರೆ ಈ ಮಂತ್ರಿಯ ಹೇಳಿಕೆ ಬ್ಲೂಜೆಪಿ ವಯೋವೃದ್ಧರಿಗೆ ರೋಮಾಂಚನ ಉಂಟುಮಾಡಿದೆ. ‘ಕಾಲೇಜಲ್ಲಿ ಓದೋ ಹುಡುಗ ಹುಡುಗೀರು ಲವ್ವುಗಿವ್ವು ಮಾಡ್ಬೇಡಿ, ಪಾರ್ಕು ಥೇಟ್ರು ಸುತ್ತಬೇಡಿ, ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ’ ಅಂತ ಜಟ್ಟಿ ದೆವ್ವೇಗೌಡರು ಫತ್ವಾ ಹೊರಡಿಸಿದ್ದಾರೆ. ಇದರಿಂದ ಕನಲಿ ಕೆಂಡವಾಗಿರೋ ಕಾಲೇಜು ಯುವಕ ಯುವತಿಯರು “ನಾವು ಲವ್ವಾದ್ರೂ ಮಾಡ್ಕೋತೀವಿ, ಡವ್ವಾದ್ರು ಮಾಡ್ಕೋತೀವಿ, ಮೊದಲು ತಾವು ವಯಸ್ಕರ ಶಿಕ್ಷಣ ಶಾಲೆಗೆ ಸೇರ್ಕೊಂಡು ಹೈಸ್ಕೂಲ್ ಪಾಸಾಗೋದು ನೋಡಿ, ಎಸೆಸೆಲ್ಸಿಯೂ ಪಾಸಾಗದ ಟಪಾಸ್ ಗಿರಾಕಿಗಳು ನಮಗೆ ಬುದ್ದಿವಾದ ಹೇಳೋ ಅವಶ್ಯಕತೆ ಇಲ್ಲ, ಇನ್ನೊಂದ್ಸಲ ಅದು ಮಾಡ್ಬೇಡಿ, ಇದು ಮಾಡ್ಬೇಡಿ ಅಂತ ನಮಗೆ ರೂಲ್ಸ್ ಮಾಡೋಕೆ ಬಂದ್ರೆ ಭಾಷಣ ಮಾಡ್ತಿರೋ ಸ್ಟೇಜಲ್ಲೇ ನಿಮ್ಮ ಪೈಜಾಮ ಎಳೆದು ಅರೆಬೆತ್ತಲೆ ನಿಲ್ಲಿಸ್ತೀವಿ“ ಎಂದು ಇನ್ನೂ ಹೇಳಿಲ್ಲವೆಂದು ವರದಿಯಾಗಿದೆ.

******

ABP ನ್ಯೂಸ್ ಚಾನೆಲ್ ಇತ್ತೀಚೆಗೊಂದು ಕುಟುಕು ಕಾರ್ಯಾಚರಣೆ ನಡೆಸಿ ಗೋರಕ್ಷಕರ ಹೆಸರಿನಲ್ಲಿ ಕೊಲೆ ದರೋಡೆ ಮಾಡುತ್ತ ಹಫ್ತಾ ವಸೂಲಿ ದಂಧೆ ನಡೆಸುತ್ತಿದ್ದ ಹೋಪ್ಲೆಸ್ ಹೇತ್ಲಾಂಡಿಗಳನ್ನು ಜನರ ಮುಂದೆ ಬೆತ್ತಲು ಮಾಡಿದೆ. ಮನೆಯಲ್ಲಿ ಹೆಂಡ್ತಿಮಕ್ಕಳಿಗೆ ಎರಡೊತ್ತಿನ ಅನ್ನ ಹಾಕಲು ಯೋಗ್ಯತೆಯಿಲ್ಲದ ಚಿಳ್ಳೆಪಿಳ್ಳೆಗಳೆಲ್ಲ ಗಂಟಲಿಗೊಂದು ಬಾವುಟ ಹೆಟ್ಟಿಕೊಂಡು “ಜೈ ಶ್ರೀ ಮಾಮ್” ಎನ್ನುತ್ತ ಹಸು ದನ ಸಾಕಿದವರ ಮೇಲೆ ಬಿದ್ದು ಸಾಯ ಹೊಡೆದು ಕೊಂದು ಜೈಲು ಸೇರುತ್ತಿವೆ. ಇಂಥದ್ದೇ ಹೀನಾಯ ಸಾಹಸದಲ್ಲಿ ಇಬ್ಬರನ್ನು ಕೊಂದು ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದ ಎರಡು ಹೇತ್ಲಾಂಡಿ ವೀರರನ್ನು ಓಆಖಿಗಿ ರಹಸ್ಯ ಕ್ಯಾಮೆರಾದೆದುರು ಬಾಯಿ ಬಿಡಿಸಿದೆ. ಇವರು ಕೋರ್ಟಿನಲ್ಲಿ ‘ನಮಗೇನೂ ಗೊತ್ತಿಲ್ಲ, ಆ ಕೊಲೆಗಳು ನಡೆದ ದಿನ ನಾವು “ಅಂತರರಾಷ್ಟ್ರೀಯ ಗೋಮೂತ್ರ ಸೇವಕರ ದಿನಾಚರಣೆ”ಯಲ್ಲಿ ಭಾಗವಹಿಸಿ ಬಕೇಟಿನಲ್ಲಿ ಗೋಮೂತ್ರ ಕುಡಿಯುತ್ತಿದ್ದೆವು, ಈ ಕೊಲೆಗೂ ನಮಗೂ ಸಂಬಂಧವಿಲ್ಲ’ ಎಂದಿದ್ದರು. ಜಾಮೀನು ಪಡೆದು ಹೊರಬಂದ ಕೂಡಲೆ ಇದ್ದಕ್ಕಿದ್ದಂತೆ ಗಂಡಸರಾದ ಈ ಕೊಲೆಗಡುಕರು ಓಆಖಿಗಿ ರಹಸ್ಯ ಕ್ಯಾಮೆರಾದೆದುರು ಆ ಕೊಲೆಗಳನ್ನು ಮಾಡಿದ್ದು ನಾವೇ, ನಮ್ ಸಪೋರ್ಟಿಗೆ ಪಿಳ್ಳಜುಟ್ಟು ಪಾರ್ಟಿಯವ್ರು ಇದ್ದಾರೆ, ಇನ್ನೊಂದೆರಡು ಕೊಲೆ ಮಾಡಿ ನೀವು ಸಾಯೋಮಟ ಜೈಲಿಗೆ ಹೋಗಿ, ನಿಮ್ಮ ಮನೆಮಂದಿ ಬಾಯಿಗೆ ಮಣ್ಣು ಹಾಕೋ ಜವಾಬ್ದಾರಿ ನಮ್ದು ಅಂತ ಪಿಳ್ಳಜುಟ್ಟು ಪಾರ್ಟಿಯ ಪುಟಗೋಸಿಗಳು ಒಪ್ಪಿಕೊಂಡಿದ್ದಾರೆಂದು ಹೇಳಿದ್ದಾರೆ. ತಮ್ಮ ಮನೆಮಕ್ಕಳನ್ನು ಹೈಯರ್ ಎಜುಕೇಷನ್ನಿಗೆ ಹೊರದೇಶಕ್ಕೆ ಕಳಿಸಿ ಅವರ ಬಾಳು ಬಂಗಾರ ಮಾಡುವ ಈ ಪಿಳ್ಳಜುಟ್ಟು ಪುಟಗೋಸಿಗಳು, ತಳ ಸಮುದಾಯದ ಜನರ ಬದುಕಿನ ಮೇಲೆ ಚಪ್ಪಡಿಕಲ್ಲು ಎಳೆದು ಅದರ ಮೇಲೆ ಬಾಳೆಎಲೆ ಹಾಸಿಕೊಂಡು ಪಾಯಸ ನೆಕ್ಕಿಕೊಂಡು ಕುಳಿತುಬಿಡುತ್ತಾರೆಂಬುದು ಬಡ ಸಮುದಾಯಗಳಿಗೆ ಇನ್ನೂ ಅರಿವಾಗಿಲ್ಲವೆಂಬ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ‘ಗ್ಯಾಂಗ್ಸ್ ಆಫ್ ವಾಸ್ಸೆಪುರ್’ ಎಂಬ ಚಿತ್ರ ತೆಗೆದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ಈ ಭಡವ ರಾಸ್ಕಲ್‍ಗಳ ಬಗ್ಗೆ “ ಗ್ಯಾಂಗ್ಸ್ ಆಫ್ ಗಂಜಳಾಪುರ್” ಎಂಬ ಚಿತ್ರ ತೆಗೆಯಲಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

******

‘ಹಾಳೂರಿಗೆ ಉಳಿದೋನೆ ಐಲುಗಿರಾಕಿ’ ಎನ್ನೋ ಗಾದೆಗೆ ಕರೆಕ್ಟಾಗಿ ಫಿಟ್ ಆಗುವ ‘ಅನಂತ್ ಗಮಾಡ್ ಹೆಗಡೆ’ ಹೋದಲ್ಲಿ ಬಂದಲ್ಲೆಲ್ಲ ಕಯ್ಯಯ್ಯೋ ಕಯ್ಯಯ್ಯೋ ಅನ್ನುತ್ತ ಅತ್ತ ಪಕ್ಷದಿಂದಲೂ, ಇತ್ತ ಜನರಿಂದಲೂ ಸಮಪ್ರಮಾಣದಲ್ಲಿ ಉಗಿಸಿಕೊಂಡು ತಿರುಗುತ್ತಿರುವುದು ನಿಮಗೆಲ್ಲರಿಗೂ ತಿಳಿದಿದೆ. ಹೊಸಾ ವಿಷ್ಯ ಏನಪ್ಪ ಅಂತಂದ್ರೆ.. “ ಬ್ಲೂಜೆಪಿ”ಯವ್ರು ಹುಲಿ ಇದ್ದಂಗೆ ಮಿಕ್ಕಿದೋರೆಲ್ಲ ಜಿಂಕೆ ಪಂಕೆ ಇದ್ದಂಗೆ, ನಮ್ದು ಹಂಗೈತೆ-ಹಿಂಗೈತೆ, ಲೊಟ್ಟೆ-ಲೊಸಕು, ಮಣ್ಣು ಮಸಕು ಅಂತೆಲ್ಲ ಕಯ್ಯಯ್ಯೋ ಅಂದಿದೆ. ಇವೆಲ್ಲವನ್ನು ‘ಅನಿಮಲ್ ಪ್ಲಾನೆಟ್’ ಚಾನೆಲ್‍ನ ನೇರಪ್ರಸಾರದಲ್ಲಿ ನೋಡಿದದವರು ಈ ಟೈಗರ್ ಸ್ಟೋರಿಗೆ ಥರಾವರಿ ಟ್ವಿಸ್ಟುಗಳನ್ನು ಕೊಡುತ್ತಿದ್ದಾರೆ. ಬ್ಲೂಜೆಪಿಯವರು ಟೈಗರ್‍ಗಳಾದರೆ ಮೊದಲು ಬಟ್ಟೆ ಬಿಚ್ಚಿ ಬರೇಬೆತ್ತಲೆ ಓಡಾಡಬೇಕು, ಯಾಕಂದ್ರೆ ಟೈಗರ್‍ಗಳು ಬಟ್ಟೆ ಹಾಕ್ಕಳಲ್ಲ ಅಂತ ಒಬ್ರು ಅಂದಿದ್ದಾರೆ. ತೊಡೆ ಸಂದಿಯಿಂದ ಮೂರಡಿ ಬಾಲ ನೇತಾಡ್ತಿದ್ರೆ ಮಾತ್ರ ಅದು ಟೈಗರ್ ಅನಿಸಿಕೊಳ್ತದೆ, ಆದ್ರಿಂದ ಗಮಾಡ್ ಹೆಗಡೆಗೂ ಒಂದು ಬಾಲ ಸಿಗಿಸಿ ಅದನ್ನವನು ಲಳ ಲಳ ಅಲ್ಲಾಡಿಸಿಕೊಂಡು ಓಡಾಡಬೇಕು, ಅವಾಗಷ್ಟೇ ಟೈಗರ್ ಅಂತ ಕನ್ಸಿಡರ್ ಮಾಡಬಹುದೆಂದು ಮತ್ತೊಬ್ಬರು ಅಂದಿದ್ದಾರೆ. ಇಲ್ಲ, ಇಲ್ಲ, ಟೈಗರ್‍ಗಳು ಹಸಿವಾದರೆ ಪುದೀನ ಕೊತ್ತಂಬರಿ ಸೊಪ್ಪು ತಿನ್ನೋದಿಲ್ಲ, ಅವಕ್ಕೆ ಹಸೀಮಾಂಸವೇ ಆಗಬೇಕು, ಆದ್ದರಿಂದ ಅನಂತ್ ಗಮಾಡ್ ಹೆಗಡೆ ಪಕ್ಷದೋರು ಊರಲ್ಲಿರೋ ಕೋಳಿ ಅಂಗಡಿ, ಮಟನ್ ಅಂಗಡಿಗಳಿಗೆ ಹುಲಿಗಳಂತೆ ಮಂಡಿ ಕೈಗಳನ್ನು ನೆಲಕ್ಕೂರಿ ನಾಲಿಗೆ ಹೊರಚಾಚಿ ನಡೆದುಕೊಂಡು ಹೋಗಿ ಅಲ್ಲಿ ವೇಸ್ಟ್ ಎಂದು ಎಸೆಯುವ ತ್ಯಾಜ್ಯಮಾಂಸವನ್ನು ಕಸದಡಬ್ಬಿಗೆ ಬಾಯಿ ಹಾಕಿ ಕಚಪಚನೆ ತಿನ್ನಬೇಕು, ಆಗಷ್ಟೇ ಇವರೆಲ್ಲ ಹುಲಿಗಳಾಗಲು ಸಾಧ್ಯ ಎಂದು ಜನರು ತರಾವರಿ ಐಡಿಯಾಗಳನ್ನು ಅನಂತ್ ಗಮಾಡ್ ಹೆಗಡೆಗೆ ಕೊಡುತ್ತಿದ್ದಾರೆ. ಅಗಣಿ ಹಾಕೋಕೆ ಹೋಗಿ ಇನ್ನೇನೋ ಸಿಗಿಸಿಕೊಂಡಂತಾಯ್ತಲ್ಲ ಎಂದು ಗಾಬರಿಯಾಗಿರೋ ಗಮಾರ್ ಹೆಗಡೆ ತನ್ನ ರಷ್ಯನ್ ಹೇರ್ ಸ್ಟೈಲ್ ತಲೆಗೂದಲಿಗೆ ಕೇಸರಿ ಕಲರ್ ಹೊಡೆಸಿಕೊಳ್ಳಲು ಕಟಿಂಗ್ ಶಾಪ್‍ಗೆ ಹೋದವರು ಇನ್ನೂ ಮನೆಗೆ ವಾಪಸಾಗಿಲ್ಲ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...