Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...