Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...