Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...