Homeಕರ್ನಾಟಕಊರೂರು ನುಂಗುತ್ತಿರುವ ಕಡಲ ಮುಂದೆ ಆಡಳಿತಗಾರರ ಪಿಟೀಲು!

ಊರೂರು ನುಂಗುತ್ತಿರುವ ಕಡಲ ಮುಂದೆ ಆಡಳಿತಗಾರರ ಪಿಟೀಲು!

- Advertisement -
- Advertisement -

 ಶುದ್ದೋಧನ|

ಅರಬ್ಬೀ ಸಮುದ್ರದ ತೀರದಲ್ಲಿರುವ ಉತ್ತರ ಕನ್ನಡದ ಐದೂ ತಾಲ್ಲೂಕುಗಳಲ್ಲಿ ಕಡಲು ಕೊರೆತ ಭೂತ ಬೆನ್ನಿಗೆ ಬಿದ್ದು ಕಾಡುತ್ತಿದೆ. ಮಳೆಗಾಲ ಬಂತೆಂದರೆ ಸಾಕು; ಕಡಲತಡಿಯ ಮಂದಿ ಜೀವಭಯದಿಂದ ತತ್ತರಿಸುತ್ತಾರೆ. ಕಡಲಿನ ಹೆಬ್ಬಲೆಗಳು ಯಾವ ಗಳಿಗೆಯಲ್ಲಿ ತೋಟ-ಮನೆಗೆ ನುಗ್ಗಿ ಆಪೋಷನ ಪಡೆಯುತ್ತವೆಯೋ ಎಂಬ ಚಡಪಡಿಕೆ ಶುರುವಾಗುತ್ತದೆ. ರಾತ್ರಿಯಿಡೀ ನಿದ್ದೆ ಮಾಡದೆ ಎದ್ದು ಕೂರುವ ಪರಿಸ್ಥಿತಿ. ಮಳೆಗಾಲ ಎಂದರೆ ಸಮುದ್ರ ದಂಡೆಯ ಜನರ ಪಾಲಿಗೆ ಬದುಕು ಬರ್ಬಾದ್ ಆಗುವ ಆತಂಕದ ಕಾಲ!! ಈ ಕಡಲುಕೊರೆತವನ್ನು ಜಿಲ್ಲೆಯ ಆಳುವ ವರ್ಗ ಗಂಭೀರವಾಗಿ ಪರಿಗಣಿಸಿಲ್ಲ. ಈ ಎರಡು ದಶಕದಲ್ಲಿ ಕಡಲುಕೊರೆತ ಕಾಮಗಾರಿ ಹೆಸರಲ್ಲಿ ಕೋಟಿಕೋಟಿ ನುಂಗಿ ಕುಬೇರರಾದ ಗುತ್ತಿಗೆದಾರ-ಇಂಜಿನಿಯರ್-ರಾಜಕಾರಣಿಗಳ ದೊಡ್ಡ ದಂಡೇ ಇದೆ.

ಜಿಲ್ಲೆಯ ಮಂತ್ರಿ, ಸಂಸದ-ಶಾಸಕರಿಗೆ ತಂತಮ್ಮ ಕ್ಷೇತ್ರದ ಕಡಲು ಕೊರೆತ ಶಾಶ್ವತವಾಗಿ ನಿಲ್ಲಿಸಿ ಜನರಿಗೆ ನೆಮ್ಮದಿ ಕೊಡಬೇಕೆಂಬ ಕನಿಷ್ಠ ಕಾಳಜಿಯೂ ಇಲ್ಲ. ಬೇಸಿಗೆಯಲ್ಲೇ ಸಮುದ್ರ ದಾಳಿ ಆಗಬಹುದಾದ ಏರಿಯಾದ ಸ್ಪಷ್ಟ ಕಲ್ಪನೆ, ಮಾಹಿತಿಯಿದ್ದರೂ ಜಿಲ್ಲಾಡಳಿತ ಉದಾಸೀನದಿಂದಲೇ ಉಳಿದುಬಿಡುತ್ತದೆ. ಯಾವಾಗ ಮಳೆ ಜೋರಾಗುತ್ತದೋ ಆಗ ಅಲೆಗಳ ಅಬ್ಬರ ಕಡಲತಡಿಯವರನ್ನು ದಿಕ್ಕೆಡಿಸುತ್ತದೆ. ಜನರ ಚೀತ್ಕಾರ ಆರಂಭವಾದಾಗ ಸಂಬಂಧಿಸಿದ ಅಧಿಕಾರಿ-ಶಾಸಕ-ಮಂತ್ರಿಗಳು ಕಣ್ಣೊರೆಸುವ “ಆಟ” ಆರಂಭಿಸುತ್ತಾರೆ. ಸಮುದ್ರಕ್ಕೆ ಕಲ್ಲುಹಾಕುವ ಬೋಗಸ್ ಕಾಮಗಾರಿ ಮಾಡಿ ಸಿಕ್ಕಷ್ಟು ಸ್ವಾಹಾ ಮಾಡುತ್ತಾರೆ. ಮುಂದಿನ ವರ್ಷಕ್ಕೆ ಪಿಡುಗು ಹಾಗೇ ಉಳಿಸುತ್ತಾರೆ.
ಪಕ್ಕದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಡಲ್ಕೊರೆತದ ಹಾವಳಿ ಇಲ್ಲವೆಂದಲ್ಲ. ಆದರೆ ಅಲ್ಲಿಯ ಆಳುವವರ್ಗ ಸವiಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ವಿಶೇಷ ಅನುದಾನ ತಂದು ತೊಂದರೆ ಮರುಕಳಿಸದಂತೆ ನಿಗಾ ವಹಿಸುತ್ತಿದೆ. ಇಂಥ ಇಚ್ಛಾಶಕ್ತಿ ಉತ್ತರಕನ್ನಡವು ಹೆತ್ತ ಜನಪ್ರತಿನಿಧಿ ಭೂಪರಿಗಿಲ್ಲ! ಹೀಗಾಗಿ ಜನಸಾಮಾನ್ಯರ ಜೀವನಕ್ಕಾಧಾರವಾದ ಗದ್ದೆ-ತೋಟ-ಬಾವಿ-ಕಸುಬಿಗೆಲ್ಲಾ ಉಪ್ಪು ನೀರು ನುಗ್ಗಿ ಬಂಜರಾಗುತ್ತಿದೆ; ಮನೆಗಳು ಕಣ್ಣೆದುರೇ ಕಡಲಲ್ಲಿ ಕರಗುತ್ತಿವೆ. ಕಲ್ಲು ಹೃದಯದ ಪಡಪೋಸಿ ಜನಪ್ರತಿನಿಧಿಗಳು ಏನೂ ಆಗಿಲ್ಲ ಎಂಬಂತೆ ಆರಾಮಾಗಿದ್ದರೆ.

ಆಳುವ ಮಂದಿಯ ಉದಾಸೀನ-ಹೊಣೆಗೇಡಿತನದಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಕಡಲ್ಕೊರೆತದ ಆರ್ಭಟ ಜೋರಾಗುತ್ತಲೇ ಇದೆ. ಕಳೆದ ಮೂರು ವರ್ಷದಿಂದ ಅಂದಿನ-ಇಂದಿನ ಸಿಎಂಗಳು, ಸಂಸದರು, ಮಂತ್ರಿಗಳು, ಎಮ್ಮೆಲ್ಲೆಗಳಿಗೆಲ್ಲಾ ತಮ್ಮನ್ನು ಸಮುದ್ರದ ಬಾಯಿಂದ ಬಚಾವು ಮಾಡಿರೆಂದು ಮನವಿ ಮೇಲೆ ಮನವಿ ಮಾಡಿಕೊಳ್ಳುತ್ತಲೇ ಬಂದಿರುವ ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿ ಕಡಲು ಕಿನಾರೆಯ ಮಂದಿ ಅಳಲು ಅರಣ್ಯ ರೋದನದಂತೆ ಆಗಿರುವುದು ವ್ಯವಸ್ಥೆಯ ಕ್ರೌರ್ಯಕ್ಕೆ ಹಿಡಿದ ಕನ್ನಡಿಯಂತಿದೆ.

ತೊಪ್ಪಲಕೇರಿಯ ಮನೆ-ಮರ-ಬಾವಿಗಳನ್ನೆಲ್ಲ ಸಮುದ್ರ ಒಂದೊಂದಾಗಿ ನುಂಗಲು ಶುರುಮಾಡಿ ಹಲವು ವರ್ಷವಾಗಿದೆ. ಮೂರು ವರ್ಷದ ಹಿಂದೆ ಅಲೆಗಳ ಆರ್ಭಟಕ್ಕೆ ಆ ಪುಟ್ಟ ಕೇರಿ ತತ್ತರಿಸಿಹೋಯಿತು. ಕಂಗಾಲಾದ ಜನ ಕಾಪಾಡಿ ಎಂದು ಜಿಲ್ಲಾಧಿಕಾರಿ, ಅಂದಿನ ಶಾಸಕಿ ಶಾರದಾ ಶೆಟ್ಟಿ, ಇಂದಿನ ಶಾಸಕ ದಿನಕರ ಶೆಟ್ಟಿ, ಸಂಸದ ಅನಂತ್ಮಾಣಿ, ಮಂತ್ರಿ ಮಹಾಶಯ ದೇಶ್‍ಪಾಂಡೆ, ಹಿಂದಿನ ಸಿಎಂ ಸಿದ್ಧು, ಇಂದಿನ ಸಿಎಂ ಕುಮ್ಮಿ ಕೈ-ಕಾಲು ಹಿಡಿದು ಅಂಗಲಾಚಿದರೂ ಪ್ರಯೋಜನವೇನೂ ಆಗಲಿಲ್ಲ. ರಾಜ್ಯದ ಮಾನವ ಹಕ್ಕು ಆಯೋಗಕ್ಕೆ ಪರಿಸ್ಥಿತಿಯ ಗಂಭೀರತೆ ಬಗ್ಗೆ ಮನವಿ ಕಳಿಸಿದರು. ದುರಂತವೆಂದರೆ ಮಾನವಹಕ್ಕು ಆಯೋಗಕ್ಕೂ ಈ ಮಂದಿಯ ಸಾವುಬದುಕಿನ ಹೋರಾಟ ಅರ್ಥವಾಗಲಿಲ್ಲ.

ತೊಪ್ಪಲಕೇರಿಯ ಜನರ ದೂರು ಸರ್ಕಾರಿ ಕಚೇರಿಗಳ ಟೇಬಲ್‍ನಿಂದ ಟೇಬಲ್‍ಗೆ ಹಾರಾಡಿತೇ ಹೊರತು ಜನಪರವಾಗಿ ಯಾರೂ ಚಿಂತಿಸಲಿಲ್ಲ. ಕೊನೆಗೊಮ್ಮೆ ಶಾಸಕ, ಎಸಿ, ತಹಸೀಲ್ದಾರ್ ತೊಪ್ಪಲಕೇರಿಗೆ ಬರುವುದು ಅನಿವಾರ್ಯವಾಯ್ತು. ಬಂದವರು ಜನರಿಗೆ ಸಾಂತ್ವನ ಹೇಳಲಿಲ್ಲ; ಪುನರ್ವಸತಿ ಬಗ್ಗೆ ಮಾತಾಡಲಿಲ್ಲ; ಸಮುದ್ರ ಕೊರೆತ ತಡೆಯುವ ಕಾಮಗಾರಿ ಆರಂಭಿಸುವ ಬಗ್ಗೆಯೂ ಭರವಸೆ ಕೊಡಲಿಲ್ಲ. ಬದಲಿಗೆ ನೊಂದವರನ್ನು ಇನ್ನಷ್ಟು ಧೃತಿಗೆಡಿಸುವ ಮಾತಾಡಿದರು. ಕಾಮಗಾರಿಗೆ ಹಣಕಾಸಿನ ಅಡಚಣೆಯಿದೆ; ಬಜೆಟ್‍ನಲ್ಲಿ ತೊಪ್ಪಲಕೇರಿ ಕಡಲ್‍ಕೊರೆತ ಸೇರಿಲ್ಲ ಎಂದು ಹೊಣೆಗೇಡಿತನ ಪ್ರದರ್ಶಿಸಿ ಹೋದರು.

ತೊಪ್ಪಲಕೇರಿಯ ಮಂದಿಯ ಅಳಲು ಹೃದಯವಿದ್ರಾವಕವಾಗಿದೆ. ರಾತ್ರಿ ಮಲಗಿದಾಗ ಮನೆ ಎಷ್ಟೊತ್ತಿಗೆ ಅಲೆಗಳ ಹೊಡೆತಕ್ಕೆ ಉರುಳುತ್ತದೋ ಗೊತ್ತಾಗುತ್ತಿಲ್ಲ. ಇಂಥ ಭಯದಲ್ಲಿ ಹೆಂಗಸರು, ಮಕ್ಕಳನ್ನು ಇಟ್ಟುಕೊಂಡು ರಾತ್ರಿ ಹೇಗೆ ಕಳೆಯಬೇಕು? ಪತ್ರಿಕೆ-ಟಿವಿಯಲ್ಲಿ ನಮ್ಮ ಪರಿಸ್ಥಿತಿ ಸುದ್ದಿಯಾದರೂ ಜಿಲ್ಲಾಡಳಿತಕ್ಕೆ, ಶಾಸಕನಿಗೆ, ಕನಿಷ್ಟ ಮಾನವ ಹಕ್ಕು ಆಯೋಗಕ್ಕೂ ಎಚ್ಚರ ಆಗಿಲ್ಲ ಎಂದು ಕಂಗೆಟ್ಟಿರುವ ಮಂದಿ ಹೇಳುತ್ತಾರೆ. ಮಾನವ ಹಕ್ಕು ಆಯೋಗದ ನಿರ್ಲಕ್ಷ ಧೋರಣೆಗೆ ಬೇಸತ್ತರೂ ನೊಂದವರು ಸರಣಿ ಪತ್ರ ಬರೆಯುತ್ತಲೇ ಇದ್ದರು. ಕೊನೆಗೊಂದು ದಿನ “ನಾವೆಲ್ಲ ಸತ್ತ ನಂತರ ಲೆಕ್ಕ ಮಾಡಲು ಬರ್ತೀರಾ, ಸರ್…” ಎಂದೂ ಪತ್ರ ಬರೆದರು. ಆದರೂ ಎಮ್ಮೆಲ್ಲೆಯಿಂದ ಹಿಡಿದು ಮುಖ್ಯಮಂತ್ರಿವರೆಗಿನ ಎಲ್ಲರೂ ಕಣ್ಣು-ಬಾಯಿ ಮುಚ್ಚಿಕೊಂಡೇ ಇದ್ದಾರೆ.

ಈಗ ತೊಪ್ಪಲಕೇರಿಯ ಕಡಲ ಗುಮ್ಮದ ಅಂಜಿಕೆಯಲ್ಲೇ ದಿನ ಕಳೆಯುತ್ತಿರುವ ಮಂದಿ ಕೊನೇ ಪ್ರಯತ್ನವೆಂದು ಪ್ರಧಾನಿ ಮೋದಿಗೆ ಕಾಪಾಡುವಂತೆ ಟ್ವೀಟ್ ಮಾಡಿದ್ದಾರೆ. ನಮೋ ಆ್ಯಪ್ ಮೂಲಕ ದೂರು ಕಳಿಸಿದ್ದಾರೆ. ಸಿಎಂ ಆಫೀಸಿನಲ್ಲೂ ಆ ಟ್ವೀಟ್‍ಗೆ ಸ್ಪಂದನೆ ಬಂದಿಲ್ಲ. ಕಡಲು ಮಾತ್ರ ಮುನ್ನುಗ್ಗಿ ಬರುತ್ತಲೇ ಇದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...