Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...