Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...