Homeಕರ್ನಾಟಕಒಂದೇ ವಾರದಲ್ಲಿ ಅನರ್ಹ ಶಾಸಕ ಎಂಟಿಬಿ ಅಕೌಂಟಿಗೆ 48 ಕೋಟಿ ಎಲ್ಲಿಂದ ಬಂತು?: ದಿನೇಶ್ ಗುಂಡೂರಾವ್...

ಒಂದೇ ವಾರದಲ್ಲಿ ಅನರ್ಹ ಶಾಸಕ ಎಂಟಿಬಿ ಅಕೌಂಟಿಗೆ 48 ಕೋಟಿ ಎಲ್ಲಿಂದ ಬಂತು?: ದಿನೇಶ್ ಗುಂಡೂರಾವ್ ಟ್ವೀಟ್….

- Advertisement -
- Advertisement -

ರಾಜ್ಯದ ಉಪಚುನಾವಣೆ ರಂಗೇರುತ್ತಿದೆ. ಇವತ್ತು ನಾಮಪತ್ರ ಸಲ್ಲಿಸಲು ಕಡೆಯ ದಿನ. ಎಲ್ಲಾ ಕಡೆ ನೂಕು ನುಗ್ಗುಲು. ಇದರ ನಡುವೆಯೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟೊಂದು ದೊಡ್ಡ ಸಂಚಲನ ಸೃಷ್ಟಿಸುತ್ತಿದೆ.

ಅದು ನೇರಾನೇರ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರಿಗೆ ಸಂಬಂಧಿಸಿದ್ದು. ಆ ಮೂಲಕ ರಾಜೀನಾಮೆ ಕೊಟ್ಟು ಮೈತ್ರಿ ಸರ್ಕಾರವನ್ನು ಬೀಳಿಸಿದ ಎಲ್ಲಾ ಅನರ್ಹ ಶಾಸಕರ ಹಿಂದಿನ ಪ್ರೇರಣೆಯನ್ನು ಕೆಣಕಿರುವಂತದ್ದು. ಅಷ್ಟಕ್ಕೂ ದಿನೇಶ್ ಗುಂಡೂರಾವ್ ಯೂತ್ ಕಾಂಗ್ರೆಸ್ಸಿನ ರಾಷ್ಟ್ರೀಯ ಪ್ರಚಾರ ಸಮಿತಿಯ ಮುಖ್ಯಸ್ಥ ಶ್ರೀವತ್ಸ ಅವರ ಟ್ವೀಟನ್ನು ಮರುಟ್ವೀಟ್ ಮಾಡಿ ಕೇಳಿರುವುದಾದರು ಏನು ಗೊತ್ತಾ?

“ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅನರ್ಹ ಶಾಸಕರೊಬ್ಬರ ಅಕೌಂಟಿಗೆ ದೊಡ್ಡ ಮೊತ್ತದ ಹಣ ವರ್ಗಾವಣೆಯಾಗಿದೆ. ಪಕ್ಷಾಂತರ ಮಾಡಲು ಶಾಸಕರಿಗೆ ಬಿಜೆಪಿ ನಾಯಕರು ಹಣದ ಆಮಿಷ ಒಡ್ಡಿದ ಆಡಿಯೋ/ವಿಡಿಯೋ ಟೇಪ್‌ಗಳು ಈಗಾಗಲೇ ಲಭ್ಯವಿವೆ. ಇಂಥಾ ಅನುಮಾನಸ್ಪದ ಹಣದ ಮೂಲದ ತನಿಖೆ ಮಾಡೋದಿಲ್ಲವೇ? ಐಟಿ ಮತ್ತು ಇಡಿಗಳು ಯಾಕೆ ಮೌನವಾಗಿವೆ” ಎಂದು ಪ್ರಶ್ನಿಸಿದ್ದಾರೆ.

ದಿನೇಶ್ ಗುಂಡೂರಾವ್ ಯಾವ ಶಾಸಕ ಎಂದು ತನ್ನ ಟ್ವೀಟ್‌ನಲ್ಲಿ ಉಲ್ಲೇಖಿಸಿಲ್ಲವಾದರು, ಅವರ ಪೋಸ್ಟ್ ಮಾಡಿರುವ ಶ್ರೀವತ್ಸ ಅವರ ಟ್ವೀಟಿನಲ್ಲಿ ಸ್ಪಷ್ಟವಾಗಿ ಆ ಶಾಸಕ ಎಂಟಿಬಿ ನಾಗರಾಜ್ ಎಂದು ದಾಖಲಾಗಿದೆ ಮಾತ್ರವಲ್ಲ, ಆಗಸ್ಟ್ ೨ನೇ ತಾರೀಕಿನಿಂದ ೮ನೇ ತಾರೀಕಿನವರೆಗೆ ಯಾವ ಯಾವ ದಿನಾಂಕದಂದು ಎಷ್ಟೆಷ್ಟು ಅಕೌಂಟುಗಳಿಂದ ಹಣ ವರ್ಗಾವಣೆ ಎಂಬ ಬ್ಯಾಲೆನ್ಸ್ ಶೀಟೇ ಇದೆ!

“ಯಡಿಯೂರಪ್ಪ ಮುಖ್ಯಮಂತ್ರಿಯಾದ ಕೆಲವೇ ದಿನಗಳಲ್ಲಿ, ಆಗಸ್ಟ್ 2ರಿಂದ 8ರನ ನಡುವೆ ಬಂಡಾಯ ಶಾಸಕ ಎಂಟಿಬಿ ನಾಗರಾಜ್ ಅಕೌಂಟಿಗೆ 48.32 ಕೋಟಿ ಸಂದಾಯವಾಗಿದೆ. ಪ್ರತಿ ಸಲವೂ 90 ಲಕ್ಷಕ್ಕಿಂತ ಹೆಚ್ಚು, ಆದ್ರೆ 1 ಕೋಟಿಗಿಂತ ಕಡಿಮೆ ಮೊತ್ತವನ್ನು ವರ್ಗಾವಣೆ ಮಾಡಲಾಗಿದೆ. ಈ ಹಣ ಅವರಿಗೆ ಎಲ್ಲಿಂದ ಬಂತು? ಸಿಬಿಐ-ಐಟಿ-ಇಡಿ ದಾಳಿ ಇಲ್ಲವೇ?” ಎಂದು ಶ್ರೀವತ್ಸ ತಮ್ಮ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ರಾಜೀನಾಮೆ ನೀಡಿ, ಮುಂಬೈ ವಾಸ್ತವ್ಯದಿಂದ ವಾಪಾಸದ ಕೆಲ ದಿನಗಳಲ್ಲೇ ದುಬಾರಿ ೧೧ ಕೋಟಿ ಬೆಲೆಬಾಳುವ ರಾಲ್ಸ್ ರಾಯ್ಸ್ ಕಾರನ್ನು ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದ ಎಂಟಿಬಿ ನಾಗರಾಜ್, ಇದೀಗ ಕಾಂಗ್ರೆಸ್ಸಿಗರ ಟ್ವೀಟಿನಿಂದ ಮತ್ತಷ್ಟು ಮುಜುಗರಕ್ಕೆ ಈಡಾಗಿದ್ದಾರೆ. ಅಂದಹಾಗೆ, ಅವರು ಸ್ಪರ್ಧಿಸುತ್ತಿರುವ ಹೊಸಕೋಟೆಯಲ್ಲಿ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಹಾಕದೆ ಶರತ್‌ಗೆ ಬೆಂಬಲ ಘೋಷಿಸಿದೆ. ಇತ್ತ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರ ಮಡದಿ ಪದ್ಮಾವತಿಯವರ ಸ್ಪರ್ಧೆಯೂ ಎಂಟಿಬಿ ನಾಗರಾಜ್‌ರ ಗೆಲುವಿನ ಸಂಭಾವ್ಯತೆ ಡೋಲಾಯಮಾನ ಆಗುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...