Homeಕರ್ನಾಟಕಒಂದೇ ವಾರದಲ್ಲಿ ಅನರ್ಹ ಶಾಸಕ ಎಂಟಿಬಿ ಅಕೌಂಟಿಗೆ 48 ಕೋಟಿ ಎಲ್ಲಿಂದ ಬಂತು?: ದಿನೇಶ್ ಗುಂಡೂರಾವ್...

ಒಂದೇ ವಾರದಲ್ಲಿ ಅನರ್ಹ ಶಾಸಕ ಎಂಟಿಬಿ ಅಕೌಂಟಿಗೆ 48 ಕೋಟಿ ಎಲ್ಲಿಂದ ಬಂತು?: ದಿನೇಶ್ ಗುಂಡೂರಾವ್ ಟ್ವೀಟ್….

- Advertisement -
- Advertisement -

ರಾಜ್ಯದ ಉಪಚುನಾವಣೆ ರಂಗೇರುತ್ತಿದೆ. ಇವತ್ತು ನಾಮಪತ್ರ ಸಲ್ಲಿಸಲು ಕಡೆಯ ದಿನ. ಎಲ್ಲಾ ಕಡೆ ನೂಕು ನುಗ್ಗುಲು. ಇದರ ನಡುವೆಯೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟೊಂದು ದೊಡ್ಡ ಸಂಚಲನ ಸೃಷ್ಟಿಸುತ್ತಿದೆ.

ಅದು ನೇರಾನೇರ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರಿಗೆ ಸಂಬಂಧಿಸಿದ್ದು. ಆ ಮೂಲಕ ರಾಜೀನಾಮೆ ಕೊಟ್ಟು ಮೈತ್ರಿ ಸರ್ಕಾರವನ್ನು ಬೀಳಿಸಿದ ಎಲ್ಲಾ ಅನರ್ಹ ಶಾಸಕರ ಹಿಂದಿನ ಪ್ರೇರಣೆಯನ್ನು ಕೆಣಕಿರುವಂತದ್ದು. ಅಷ್ಟಕ್ಕೂ ದಿನೇಶ್ ಗುಂಡೂರಾವ್ ಯೂತ್ ಕಾಂಗ್ರೆಸ್ಸಿನ ರಾಷ್ಟ್ರೀಯ ಪ್ರಚಾರ ಸಮಿತಿಯ ಮುಖ್ಯಸ್ಥ ಶ್ರೀವತ್ಸ ಅವರ ಟ್ವೀಟನ್ನು ಮರುಟ್ವೀಟ್ ಮಾಡಿ ಕೇಳಿರುವುದಾದರು ಏನು ಗೊತ್ತಾ?

“ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅನರ್ಹ ಶಾಸಕರೊಬ್ಬರ ಅಕೌಂಟಿಗೆ ದೊಡ್ಡ ಮೊತ್ತದ ಹಣ ವರ್ಗಾವಣೆಯಾಗಿದೆ. ಪಕ್ಷಾಂತರ ಮಾಡಲು ಶಾಸಕರಿಗೆ ಬಿಜೆಪಿ ನಾಯಕರು ಹಣದ ಆಮಿಷ ಒಡ್ಡಿದ ಆಡಿಯೋ/ವಿಡಿಯೋ ಟೇಪ್‌ಗಳು ಈಗಾಗಲೇ ಲಭ್ಯವಿವೆ. ಇಂಥಾ ಅನುಮಾನಸ್ಪದ ಹಣದ ಮೂಲದ ತನಿಖೆ ಮಾಡೋದಿಲ್ಲವೇ? ಐಟಿ ಮತ್ತು ಇಡಿಗಳು ಯಾಕೆ ಮೌನವಾಗಿವೆ” ಎಂದು ಪ್ರಶ್ನಿಸಿದ್ದಾರೆ.

ದಿನೇಶ್ ಗುಂಡೂರಾವ್ ಯಾವ ಶಾಸಕ ಎಂದು ತನ್ನ ಟ್ವೀಟ್‌ನಲ್ಲಿ ಉಲ್ಲೇಖಿಸಿಲ್ಲವಾದರು, ಅವರ ಪೋಸ್ಟ್ ಮಾಡಿರುವ ಶ್ರೀವತ್ಸ ಅವರ ಟ್ವೀಟಿನಲ್ಲಿ ಸ್ಪಷ್ಟವಾಗಿ ಆ ಶಾಸಕ ಎಂಟಿಬಿ ನಾಗರಾಜ್ ಎಂದು ದಾಖಲಾಗಿದೆ ಮಾತ್ರವಲ್ಲ, ಆಗಸ್ಟ್ ೨ನೇ ತಾರೀಕಿನಿಂದ ೮ನೇ ತಾರೀಕಿನವರೆಗೆ ಯಾವ ಯಾವ ದಿನಾಂಕದಂದು ಎಷ್ಟೆಷ್ಟು ಅಕೌಂಟುಗಳಿಂದ ಹಣ ವರ್ಗಾವಣೆ ಎಂಬ ಬ್ಯಾಲೆನ್ಸ್ ಶೀಟೇ ಇದೆ!

“ಯಡಿಯೂರಪ್ಪ ಮುಖ್ಯಮಂತ್ರಿಯಾದ ಕೆಲವೇ ದಿನಗಳಲ್ಲಿ, ಆಗಸ್ಟ್ 2ರಿಂದ 8ರನ ನಡುವೆ ಬಂಡಾಯ ಶಾಸಕ ಎಂಟಿಬಿ ನಾಗರಾಜ್ ಅಕೌಂಟಿಗೆ 48.32 ಕೋಟಿ ಸಂದಾಯವಾಗಿದೆ. ಪ್ರತಿ ಸಲವೂ 90 ಲಕ್ಷಕ್ಕಿಂತ ಹೆಚ್ಚು, ಆದ್ರೆ 1 ಕೋಟಿಗಿಂತ ಕಡಿಮೆ ಮೊತ್ತವನ್ನು ವರ್ಗಾವಣೆ ಮಾಡಲಾಗಿದೆ. ಈ ಹಣ ಅವರಿಗೆ ಎಲ್ಲಿಂದ ಬಂತು? ಸಿಬಿಐ-ಐಟಿ-ಇಡಿ ದಾಳಿ ಇಲ್ಲವೇ?” ಎಂದು ಶ್ರೀವತ್ಸ ತಮ್ಮ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ರಾಜೀನಾಮೆ ನೀಡಿ, ಮುಂಬೈ ವಾಸ್ತವ್ಯದಿಂದ ವಾಪಾಸದ ಕೆಲ ದಿನಗಳಲ್ಲೇ ದುಬಾರಿ ೧೧ ಕೋಟಿ ಬೆಲೆಬಾಳುವ ರಾಲ್ಸ್ ರಾಯ್ಸ್ ಕಾರನ್ನು ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದ ಎಂಟಿಬಿ ನಾಗರಾಜ್, ಇದೀಗ ಕಾಂಗ್ರೆಸ್ಸಿಗರ ಟ್ವೀಟಿನಿಂದ ಮತ್ತಷ್ಟು ಮುಜುಗರಕ್ಕೆ ಈಡಾಗಿದ್ದಾರೆ. ಅಂದಹಾಗೆ, ಅವರು ಸ್ಪರ್ಧಿಸುತ್ತಿರುವ ಹೊಸಕೋಟೆಯಲ್ಲಿ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಹಾಕದೆ ಶರತ್‌ಗೆ ಬೆಂಬಲ ಘೋಷಿಸಿದೆ. ಇತ್ತ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರ ಮಡದಿ ಪದ್ಮಾವತಿಯವರ ಸ್ಪರ್ಧೆಯೂ ಎಂಟಿಬಿ ನಾಗರಾಜ್‌ರ ಗೆಲುವಿನ ಸಂಭಾವ್ಯತೆ ಡೋಲಾಯಮಾನ ಆಗುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...