Homeಎಕಾನಮಿಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

- Advertisement -
- Advertisement -

ಭ್ರಷ್ಟಾಚಾರಭರಿತ ಎಲೆಕ್ಟೋರಲ್ ಬಾಂಡ್ ಎಂಬ ಕಾನೂನುಬಾಹಿರ ಬಾಂಡನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ರಿಸರ್ವ್ ಬ್ಯಾಂಕ್ ಮತ್ತು ಚುನಾವಣಾ ಆಯೋಗಗಳು ಈ ಕಣ್‍ಕಟ್ಟಿನ ರಾಜಕೀಯ ನಿಧಿ ಹಂಚಿಕೆಯ ಬಗೆಗೆ ವ್ಯಾಪಕ ಚರ್ಚೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ಈ ಕರಾಳಕೃತ್ಯದ ವಿವರಗಳು ಹೊರಬರದಂತೆ ತಡೆಗೋಡೆ ನಿರ್ಮಿಸಿದೆ.
2017ರಲ್ಲಿ ಚುನಾವಣೆಗೆ ನಿಧಿಯನ್ನು ನೀಡುವ ಬಾಂಡ್‍ಗಳ ಬಿಡುಗಡೆಗೆ ಮೊದಲು, ಹಣಕಾಸು ಸಚಿವಾಲಯ ರಿಸರ್ವ್ ಬ್ಯಾಂಕ್‍ನ ಸಲಹೆ ಕೋರಿತ್ತು. ಈ ಬಾಂಡ್‍ಗಳ ಪ್ರಸ್ತಾವನೆಗೆ ರಿಸರ್ವ್ ಬ್ಯಾಂಕ್ ಗಂಭೀರ ವಿರೋಧ ವ್ಯಕ್ತಪಡಿಸಿತ್ತು. ಈ ಚುನಾವಣೆ ಬಾಂಡ್‍ಗಳನ್ನು ಸರ್ಕಾರ ಬಿಡುಗಡೆ ಮಾಡುವುದಾದರೆ ಹಣಕಾಸು ದುವ್ರ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಮತ್ತು ಬಾಂಡುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆ ಮಾಡಿದರೆ ಭಾರತೀಯ ಬ್ಯಾಂಕುಗಳ ಬಗೆಗೆ ನಂಬಿಕೆ ಕಳೆದುಹೋಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಎಚ್ಚರಿಕೆ ನೀಡಿತ್ತು.

“ಈ ಬಾಂಡುಗಳ bearer bond ಜಗಳು. ಅವುಗಳನ್ನು ಬೇರೆಯವರಿಗೆ ವರ್ಗಾವಣೆ ಮಾಡಲೂ ಅವಕಾಶ ಕಲ್ಪಿಸಿರುವುದರಿಂದ ಯಾರು ಹಣವನ್ನು ನೀಡಿದ್ದಾರೆ ಎಂಬುದು ಪತ್ತೆಯಾಗುವುದೇ ಇಲ್ಲ” ಎಂದು ರಿಸರ್ವ್ ಬ್ಯಾಂಕ್ ತಿಳಿಸಿತು. ಆದರೆ ಸರ್ಕಾರ ಆರ್‍ಬಿಐನ ಎಚ್ಚರಿಕೆಯ ಮಾತುಗಳನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಆಗಿನ ಕಂದಾಯ ವಿಭಾಗದ ಕಾರ್ಯದರ್ಶಿಯಾಗಿದ್ದ ಹಸಮುಖ್ ಅಧಿಯ “ರಿಸರ್ವ ಬ್ಯಾಂಕ್ ಸರ್ಕಾರದ ಕಾರ್ಯತಂತ್ರವನ್ನು ಅರ್ಥಮಾಡಿಕೊಂಡಿಲ್ಲ. ಅಲ್ಲದೆ ಫೈನಾನ್ಸ್ ಬಿಲ್ ಅಚ್ಚಾದ ಮೇಲೆ ಈ ಸಲಹೆ ನೀಡಿದೆ. ಈ ವಿಳಂಬ ಸಲಹೆಯನ್ನು ಪರಿಗಣಿಸಲು ಸಾಧ್ಯವಿಲ್ಲ” ಎಂದು ಹೇಳಿ ಆರ್.ಬಿ.ಐ ಸಲಹೆಯನ್ನು ತಳ್ಳಿಹಾಕಿದ್ದರು. 2017 ಫೆಬ್ರವರಿ ಮೊದಲ ತಾರೀಖು ಆಗಿನ ಅರ್ಥಸಚಿವರಾದ ಜೈಟ್ಲಿಯವರು ತಮ್ಮ ಬಜೆಟ್ ಭಾಷಣದಲ್ಲಿ ಚುನಾವಣೆ ಬಾಂಡ್‍ಗಳನ್ನು ಸೃಷ್ಟಿಮಾಡುವ ಪ್ರಸ್ತಾಪ ಮಾಡಿದರು ಹಾಗೂ ರಾಜಕೀಯ ಪಕ್ಷಗಳಿಗೆ ಹಣ ಒದಗಿಸುವ ಪದ್ಧತಿಯಲ್ಲಿ ನುಸುಳಿರುವ ಲೋಪದೋಷಗಳನ್ನು ಅಳಿಸಿಹಾಕುವ ಕಾರಣಕ್ಕಾಗಿ ಈ ಆರ್.ಬಿ.ಐ ತಿದ್ದುಪಡಿ ಬಿಲ್ ಮಾಡಿರುವುದಾಗಿ ಹೇಳಿದರು.
ಅದಾದನಂತರ ಚುನಾವಣೆ ಆಯೋಗವು ಕೂಡಾ ಮೇ 2017ರಲ್ಲಿ ಕಾನೂನು ಇಲಾಖೆ ಮಂತ್ರಾಲಯಕ್ಕೆ ಚುನಾವಣೆ ಬಾಂಡ್ ಬಿಡುಗಡೆ ಮಾಡುವ ಬಗೆಗೆ ಎಚ್ಚರಿಕೆ ನೀಡಿತ್ತು. 2017 ಮೇ 26ರ ಕಾಗದದಲ್ಲಿ “Representation of People Actನ 29 ಸಿ ವಿಧಿಗೆ ಸರ್ಕಾರ ಮಾಡಿರುವ ತಿದ್ದುಪಡಿ ಸರಿಯಲ್ಲ, ಇದು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಹೆಸರುಗಳನ್ನು ಮುಚ್ಚಿಡುವ ಹುನ್ನಾರ” ಎಂದು ಪತ್ರ ಬರೆಯಿತು. ಈ ತಿದ್ದುಪಡಿಯನ್ನು ವಾಪಾಸ್ ಪಡೆಯಿರಿ ಎಂಬ ಸಲಹೆಯನ್ನೂ ನೀಡಿತ್ತು.

ಚುನಾವಣೆ ಆಯೋಗದ ಸೂಚನೆಯನ್ನು ಧಿಕ್ಕರಿಸಿದ ಹಣಕಾಸು ಇಲಾಖೆಯ ರಾಜ್ಯ ಖಾತೆ ಸಚಿವ ಪೊನ್ ರಾಧಾಕೃಷ್ಣನ್ 2018ರ ಚಳಿಗಾಲದ ಪಾರ್ಲಿಮೆಂಟ್ ಅಧಿವೇಶನದಲ್ಲಿ ‘ಈ ವಿಚಾರದಲ್ಲಿ ಚುನಾವಣಾ ಆಯೋಗ ಯಾವುದೇ ಸೂಚನೆ ನೀಡಿಲ್ಲ’ ಎಂದು ತಿಳಿಸಿದರು. Breach of privilege notice ನೀಡಿದಾಗ ಸಚಿವರು ಪಾರ್ಲಿಮೆಂಟಿನ ದಾರಿತಪ್ಪಿಸಲು ಯತ್ನಿಸುತ್ತಿದ್ದಾರೆ ಎಂಬುದು ಬಯಲಿಗೆ ಬಂದಿತ್ತು.

ಮಾರ್ಚ್ 2018ರವರೆಗೆ 6128 ಕೋಟಿ ರೂ. ಮೌಲ್ಯದ ಚುನಾವಣೆ ಬಾಂಡ್‍ಗಳು ಮಾರಾಟವಾಗಿವೆ. ಇದರಲ್ಲಿ ಶೇ.95ರಷ್ಟು ಹಣ ಬಿಜೆಪಿಗೇ ಪಾವತಿಯಾಗಿದೆ. ಚುನಾವಣೆ ಬಾಂಡ್‍ಗಳು ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ, ಒಂದು ಕೋಟಿ ಮೌಲ್ಯಗಳ ಮುಖಬೆಲೆಯಲ್ಲಿ ಬಿಡುಗಡೆ ಆಗಿವೆ. ಭಾರತೀಯ ಸ್ಟೇಟ್ ಬ್ಯಾಂಕ್ ಮಾತ್ರ ಈ ಬಾಂಡ್‍ಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಈ ಬಾಂಡುಗಳನ್ನು ವರ್ಷದಲ್ಲಿ 4 ಸಾರಿ ಮಾತ್ರ ತಲಾ 8-10 ದಿನಗಳ ಅಲ್ಪಾವಧಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಆದರೆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ವರ್ಷದಲ್ಲಿ ಮಾತ್ರ ಈ ನಾಲ್ಕು ಅವಧಿಯಲ್ಲದೆ 30 ದಿನಗಳ ಒಂದು ದೀರ್ಘಾವಧಿಯ ವಿಶೇಷ ಮಾರಾಟದ ಅವಕಾಶ ಕಲ್ಪಿಸಲಾಗುವುದು. ಬಾಂಡ್ ಕೊಂಡವರು ಅದನ್ನು ತಮಗೆ ಇಷ್ಟಬಂದ ರಾಜಕೀಯ ಪಕ್ಷಕ್ಕೆ ನೀಡಬಹುದು. ಹಿಂದಿನ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಕನಿಷ್ಠ ಶೇ.1ಕ್ಕಿಂತ ಹೆಚ್ಚು ಮತಗಳಿಸಿದ ಪಕ್ಷಗಳಿಗೆ ಮಾತ್ರ ಈ ಬಾಂಡ್‍ಗಳನ್ನು ನೀಡಬಹುದಾಗಿದೆ. ಬ್ಯಾಂಕ್‍ನಿಂದ ಬಾಂಡ್ ಕೊಂಡುಕೊಂಡ ಹದಿನೈದು ದಿನಗಳ ಒಳಗಾಗಿ ಅದನ್ನು ನಗದು ಮಾಡಿಕೊಳ್ಳಬೇಕು. ಅಂದರೆ ಅಷ್ಟರೊಳಗೆ ಕೊಂಡವರು, ಅದನ್ನು ತಮಗಿಷ್ಟ ಬಂದ ಪಕ್ಷಕ್ಕೆ ಕೊಟ್ಟು, ಆ ಪಕ್ಷ ಅದನ್ನು ಕ್ಯಾಶ್ ಮಾಡಿಕೊಳ್ಳಬೇಕು.
ಈ ಬಾಂಡ್‍ಗಳಲ್ಲಿ ಕ್ರಮಾಂಕ ಸೂಚಿಸಬಾರದೆಂದು ಬಿಜೆಪಿ ಪಕ್ಷ ಸರ್ಕಾರಕ್ಕೆ ಸೂಚಿಸಿತ್ತು. ಬಾಂಡ್‍ಗಳಿಗೆ ಕ್ರಮಸಂಖ್ಯೆ ಹಾಕದಿದ್ದರೆ ಯಾವ ಮೊತ್ತದ ಬಾಂಡ್ ಯಾರ ಕೈಸೇರಿತು ಎಂಬುದು ಗೊತ್ತಾಗುವುದಿಲ್ಲ. ಗೊತ್ತಾಗಬಾರದು ಎಂಬುದೇ ಉದ್ದೇಶ. ಈ ಮೊದಲು ಬೇರೆ ದೇಶದವರು ದೇಣಿಗೆ ಕೊಡಲು ನಿಷೇಧವಿತ್ತು. ಈಗ ಬೇರೆ ದೇಶದವರು ದೇಣಿಗೆ ಕೊಟ್ಟರೂ ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಸರ್ಕಾರ ಸೂಚಿಸಿತ್ತು.

ರಾಜಕೀಯ ಪಕ್ಷಗಳಿಗೆ ತಾವಾಗಿಯೇ ಯಾರೂ ಚುನಾವಣೆಗೆ ಹಣ ನೀಡುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾರ್ಪೊರೇಟ್ ಸಂಸ್ಥೆಗಳಂತೂ ತಮಗೆ ಲಾಭ ಮಾಡಿಕೊಡುವವರಿಗೆ ದೇಣಿಗೆ ಕೂಡುವರೆಂಬುದೂ ಗುಟ್ಟಿನ ವಿಚಾರವೇನಲ್ಲ. ತನಿಖಾ ಇಲಾಖೆ ಹಾಗೂ Regulatory bodyಜಥಿಗಳು ಸರ್ಕಾರವನ್ನು ಬಳಸಿಕೊಂಡು ಕಾರ್ಪೊರೇಟ್ ಕಂಪೆನಿಗಳನ್ನು ಹಣ್ಣು ಮಾಡುವ ವ್ಯವಸ್ಥೆ ಇದ್ದೇಇದೆ. ಆ ಮೂಲಕ ಚುನಾವಣೆಗೆ ಹಣ ತಾನಾಗಿಯೇ ಬಂದುಬೀಳುತ್ತದೆ. ಈ ಸೌಲಭ್ಯ ದೊರೆಯುವುದು ಆಡಳಿತ ಪಕ್ಷಕ್ಕೆ ಮಾತ್ರ.
`ಕಾಮನ್ ಕಾಸ್’ ಸಂಸ್ಥೆ ಸರ್ವೋಚ್ಚ ನ್ಯಾಯಾಲಯದಲ್ಲಿ ಚುನಾವಣೆ ಬಾಂಡ್ ವಿಚಾರವಾಗಿ ಖಟ್ಲೆ ಹೂಡಿದೆ. ರಾಜಕೀಯ ಪಕ್ಷಗಳು ತಮಗೆ ಸಂದಾಯವಾಗಿರುವ ಎಲೆಕ್ಟೋರಲ್ ಬಾಂಡುಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ ಎಂದು ನಿರ್ದೇಶನ ನೀಡಿತ್ತು. ಈ ನಡುವೆ ಚುನಾವಣೆ ಆಯೋಗ ಕೂಡ ನ್ಯಾಯಾಲಯಕ್ಕೆ ಚುನಾವಣಾ ಬಾಂಡ್ ಬಿಡುಗಡೆಯನ್ನು ಪ್ರಶ್ನಿಸಿ ಒಂದು ಅಫಿಡವಿಟ್ ಸಲ್ಲಿಸಿದೆ.

ಸರ್ಕಾರ ಭ್ರಷ್ಟಾಚಾರವನ್ನು ಈ ಕಾನೂನುಬದ್ಧವಾಗಿ ಜಾರಿಗೆ ತಂದಿರುವ ಈ ಚುನಾವಣೆ ಬಾಂಡನ್ನು ಹಿಂತೆಗೆಯಬೇಕೆಂದು ಒತ್ತಾಯ ತರಬೇಕಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ಕೊಡುವ ಕ್ರಮವನ್ನು ಪರಿಶುದ್ಧಗೊಳಿಸುತ್ತೇನೆ ಎಂದೇಳಿದ್ದ ಮೋದಿ ಸರ್ಕಾರ, ಚುನಾವಣಾ ಬಾಂಡ್ ವಿತರಣೆ ಮಾಡುವ ಮೂಲಕ ಕಾರ್ಪೊರೇಟ್ ಕಂಪನಿಗಳ ಕಪ್ಪುಹಣ ಆಡಳಿತ ನಡೆಸುವವರ ಕೈಸೇರುವಂತೆ ವ್ಯವಸ್ಥೆ ಮಾಡಿಕೊಂಡಿದೆ. ತಮ್ಮ ಬಳಿ ಇರುವ ಬ್ಲ್ಯಾಕ್‍ಮನಿಯನ್ನು ಸರ್ಕಾರದ ಚುಕ್ಕಾಣಿ ಹಿಡಿದವರಿಗೆ ಒಪ್ಪಿಸುವ ಕಾರ್ಪೊರೇಟ್ ಕಂಪನಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಅನುಕೂಲವಾಗುತ್ತದೆ. ದೇಣಿಗೆ ಪಡೆದ ಋಣಕ್ಕೆ ಪ್ರತಿಯಾಗಿ ಸರ್ಕಾರದ ಗದ್ದುಗೆ ಏರುವ ರಾಜಕೀಯ ಪಕ್ಷವೂ ಅಂತಹ ಕಂಪನಿಗಳ ಲಾಭಕೋರತನಕ್ಕೆ ಬೆಂಬಲ ನೀಡಬೇಕಾಗುತ್ತದೆ. ಕೊನೆಗೆ ಕತ್ತರಿ ಬೀಳುವುದು ಶ್ರೀಸಾಮಾನ್ಯನ ಜೇಬಿಗೆ!

ಭ್ರಷ್ಟಾಚಾರವನ್ನು ಮಾನ್ಯಮಾಡುವ ಈ ಅನೀತಿಯನ್ನು ಮನಗಂಡು ಸರ್ಕಾರ ಈ ಕೂಡಲೇ ಚುನಾವಣಾ ಬಾಂಡ್ ಸ್ಕೀಮನ್ನು ರದ್ದುಗೊಳಿಸುವಂತೆ ಒತ್ತಾಯಿಸುವುದು ಇಂದಿನ ತುರ್ತಾಗಿದೆ. ಇಲ್ಲವಾದಲ್ಲಿ ಚುನಾವಣೆಗಳಲ್ಲಿ ಸಿದ್ಧಾಂತ, ಜನಪರ ಚಿಂತನೆಗಳು ಶಾಶ್ವತವಾಗಿ ಮೂಲೆಗುಂಪಾಗಿ ಹಣವೇ ಫಲಿತಾಂಶವನ್ನು ಖಾಯಮ್ಮಾಗಿ ನಿರ್ಧರಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...