Homeಕರ್ನಾಟಕಎಲ್ಲರನ್ನೂ ಅತಂತ್ರತೆಯಲ್ಲಿಟ್ಟಿರುವ ಉಪಚುನಾವಣೆಯಲ್ಲಿ ಏನಾಗಬಹುದು?

ಎಲ್ಲರನ್ನೂ ಅತಂತ್ರತೆಯಲ್ಲಿಟ್ಟಿರುವ ಉಪಚುನಾವಣೆಯಲ್ಲಿ ಏನಾಗಬಹುದು?

- Advertisement -
- Advertisement -

| ಸುನಿಲ್ ಶಿರಸಂಗಿ |

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರನ್ನು ಓಲೈಸಿಕೊಳ್ಳುವುದು ಅಷ್ಟು ಸುಲಭವಲ.್ಲ ಒಂದಡೆ ಅನರ್ಹರನ್ನು ಮಣಿಸಲು ಕಾಂಗ್ರೆಸ್ ತನ್ನ ಬತ್ತಳಿಕೆಯಲ್ಲಿನ ಎಲ್ಲ ತಂತ್ರಗಳನ್ನು ಬಳಸಿಕೊಳ್ಳುತಿದೆ. ಇನ್ನು ಈ ರಾಜೀನಾಮೆ ಪರ್ವದಲ್ಲಿ ತನ್ನ 3 ಶಾಸಕರನ್ನು ಕಳೆದುಕೊಂಡಿರುವ ಜೆಡಿಎಸ್ ಅವುಗಳನ್ನು ಗೆಲ್ಲಲು ಶತಪ್ರಯತ್ನ ಮಾಡುತ್ತದೆ. ಜೊತೆಗೆ ಇನ್ನು 2ರಿಂದ 3 ಕ್ಷೇತ್ರಗಳ ಸೋಲು ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ.

ಅನರ್ಹ ಶಾಸಕರ ರಾಜಕೀಯ ಅತಂತ್ರ ಸ್ಥಿತಿಯ ನಡುವೆಯೇ ಅವರಿಂದಾಗಿಯೇ ಬಂದೆರಗಿರುವ 15 ಕ್ಷೇತ್ರಗಳ ಉಪಚುನಾವಣೆಯ ಪ್ರಕ್ರಿಯೆಗೆ ಚಾಲನೆ ದೊರತಿದೆ.

ಅನರ್ಹರಿಗೆ ಬಿಜೆಪಿ ಬಿಸಿತುಪ್ಪವಾದರೆ, ಬಿಜೆಪಿಗೆ ಅನರ್ಹರು ಬಿಸಿತುಪ್ಪವಾಗಿದ್ದಾರೆ. ನುಂಗುವ ಹಾಗಿಲ್ಲ, ಉಗುಳುವ ಮಾತೇ ಇಲ್ಲ. ಶಾಸಕರ ರಾಜೀನಾಮೆಯಿಂದಲೇ ಬಿ.ಎಸ್.ಯಡ್ಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಚನೆಯಾದದ್ದು ಅನ್ನುವುದರಲ್ಲಿ ಸಂದೇಹವಿಲ್ಲ. ಅದನ್ನು ಯಡ್ಡಿ ಪದೇ ಪದೇ ಬೇರೆ ಬೇರೆ ರೀತಿಯಲ್ಲಿ ಹೇಳಿಯೂ ಆಗಿದೆ.

ತಂತಿಯ ಮೇಲೆ ನಡೆಯುತ್ತಿರುವ ಅನರ್ಹ ಶಾಸಕರು ಒಂದು ಸಲ ಸುಪ್ರಿಂಕೋರ್ಟ್‍ನತ್ತ ಇನ್ನೊಂದು ಸಲ ಇಷ್ಟವಿಲ್ಲದೆ ಅಪ್ಪಿಕೊಳ್ಳಲು ಸಿದ್ದವಾಗಿರುವ ಬಿಜೆಪಿಯತ್ತ, ಮತ್ತೊಂದು ಸಲ ಕ್ಷೇತ್ರದ ಮತದಾರರತ್ತ ಪಿಳಿ ಪಿಳಿ ಕಣ್ಣು ಬಿಟ್ಟು ನೋಡುವಂತಾಗಿದೆ.

ಅನರ್ಹರಿಗಿರುವ ಮೊದಲನೆ ಆತಂಕ ಸುಪ್ರಿಂಕೋರ್ಟ್‍ನದ್ದು, ಬುಧವಾರ ಬರುವ ತೀರ್ಪು ವಿರುದ್ದ ಬಂದರೆ ಬಹಳಷ್ಟು ಅನರ್ಹರ ರಾಜಕೀಯ ಭವಿಷ್ಯವೇ ಮುಗಿದಂತೆ. ಇನ್ನು ತೀರ್ಪು ಇವರ ಪರವಾಗಿ ಬಂದರು ಕೇವಲ ಮುಂದಿನ ಗುರಿಯ ಮೊದಲು ಸಣ್ಣ ಮೆಟ್ಟಿಲು ಹತ್ತಿದಂತೆ ಮಾತ್ರ…

ಯಾರ ರಾಜೀನಾಮೆಯಿಂದ ತಮಗೆ ಸರಕಾರ ರಚಿಸಲು ಸಾಧ್ಯವಾಯ್ತು ಎನ್ನುವುದನ್ನು ಎಷ್ಟೇ ಸಾರಿ ಆಡಿದರೂ, ಮತ್ತೆ ಮತ್ತೆ ಬಿಜೆಪಿಯೊಳಗಿನ ಭಿನ್ನಮತಗಳು ಅನರ್ಹ ಶಾಸಕರನ್ನು ಅಡಕತ್ತರಿಯಲ್ಲೇ ಇಟ್ಟಿದೆ. ಅನರ್ಹರೆಲ್ಲರಿಗೂ ಟಿಕೆಟ್ ನೀಡಿ ಅವರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ನಂಬಲು ಯಾರು ಸಿದ್ಧರಿಲ್ಲ..

ಯಾವ ಕುಮಾರಸ್ವಾಮಿ ಮೇಲೆ ಗೂಬೆ ಕೂರಿಸಿ ಆರೋಪಗಳ ಸುರಿಮಳೆಗೈದು ರಾಜೀನಾಮೆ ನೀಡಿದರೋ ಅದೇ ಕುಮಾರಸ್ವಾಮಿ ಮತ್ತೆ ಅನರ್ಹರಿಗೆ ಆತಂಕ ತಂದಿಟ್ಟಿದ್ದಾರೆ.

ಉಪಚುನಾವಣೆಯಲ್ಲಿ ಅನರ್ಹರನ್ನು ಗೆಲ್ಲಿಸಿಕೊಂಡು ಬರುವ ವಿಶ್ವಾಸವನ್ನು ಕಳೆದುಕೊಂಡಿರುವ ಕೇಸರಿ ಪಡೆ ದಕ್ಷಿಣ ಭಾರತದಲ್ಲಿರುವ ಏಕೈಕ ಬಿಜೆಪಿ ಸರಕಾರವನ್ನು ಉಳಿಸಿಕೊಳ್ಳಲು ಹೊಸ ದಾರಿ ಹುಡುಕುತ್ತಿದೆ.

ಇಂತಹ ಅವಕಾಶಕ್ಕಾಗಿ ಕಾಯುತ್ತಿರುವ ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ನಾವಿರುವುದೇ ನಿಮ್ಮ ಸರಕಾರ ಉಳಿಸುವುದಕ್ಕಾಗಿ, ಆ ಮೂಲಕ ಅಧಿಕಾರ ಅನುಭವಿಸುವುದಕ್ಕಾಗಿ ಅಂತ ಸೂಚನೆ ಕೊಟ್ಟಾಗಿದೆ.

ಸುಪ್ರೀಂಕೋರ್ಟಿನ ಆದೇಶ (ಬುಧವಾರ 13-11-2019ರಂದು ಪ್ರಕಟವಾಗಲಿದೆ) ತಮ್ಮ ಪರವಾಗಿ ಬಂದ್ರು ಬಿಜೆಪಿ ಹೈಕಮಾಂಡನ್ನು ಒಲೈಸಿಕೊಂಡು ಕೇಸರಿ ಪಕ್ಷದ ಟಿಕೆಟ್ ಪಡೆದರು ಅನರ್ಹರು ನಿಟ್ಟುಸಿರು ಬಿಡುವಂತಿಲ್ಲ.

ಯಾಕೆಂದರೆ ನಿಜವಾದ ಪರೀಕ್ಷೆ ಆರಂಭವಾಗುವುದೇ ಅಲ್ಲಿಂದ. ಕ್ಷೇತ್ರದ ಮೇಲೆ ಎಷ್ಟೇ ಹಿಡಿತವಿದ್ದರು ಸಹ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರನ್ನು ಓಲೈಸಿಕೊಳ್ಳುವುದು ಅಷ್ಟು ಸುಲಭವಲ.್ಲ ಒಂದಡೆ ಅನರ್ಹರನ್ನು ಮಣಿಸಲು ಕಾಂಗ್ರೆಸ್ ತನ್ನ ಬತ್ತಳಿಕೆಯಲ್ಲಿನ ಎಲ್ಲ ತಂತ್ರಗಳನ್ನು ಬಳಸಿಕೊಳ್ಳುತಿದೆ. ಇನ್ನು ಈ ರಾಜೀನಾಮೆ ಪರ್ವದಲ್ಲಿ ತನ್ನ 3 ಶಾಸಕರನ್ನು ಕಳೆದುಕೊಂಡಿರುವ ಜೆಡಿಎಸ್ ಅವುಗಳನ್ನು ಗೆಲ್ಲಲು ಶತಪ್ರಯತ್ನ ಮಾಡುತ್ತದೆ. ಜೊತೆಗೆ ಇನ್ನು 2ರಿಂದ 3 ಕ್ಷೇತ್ರಗಳ ಸೋಲು ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುತ್ತಿದೆ.

ಈಗಾಗಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು 18ರಂದು ಕೊನೆಗೊಳ್ಳಲಿದೆ. ಸಮಯದ ವಿರುದ್ದ ಹೋರಾಡುತ್ತಿರುವ ಅನರ್ಹರು ಅಷ್ಟರೊಳಗೆ ಎಲ್ಲವನ್ನೂ ಮಾಡಬೇಕಿದೆ.

ಯಾರ್ಯಾರ ಸಾಧ್ಯತೆ/ಅಸಹಾಯಕತೆ ಏನು?
ಬಿಜೆಪಿ ಮತ್ತು ಯಡ್ಯೂರಪ್ಪ

ಹೈಕಮಾಂಡ್‍ನ ಅಸಹಕಾರ, ಸ್ವಪಕ್ಷೀಯರ ಭಿನ್ನರಾಗದ ಮಧ್ಯೆಯೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳಲು ಹೋರಾಡುತ್ತಿರುವ ಬಿ.ಎಸ್.ಯಡ್ಯೂರಪ್ಪ ಅದಕ್ಕಾಗಿ ಅನರ್ಹರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರಬೇಕು. ಇಲ್ಲವಾದರೆ ಜೆಡಿಎಸ್ ಬೆಂಬಲ ಪಡೆಯವಲ್ಲಿ ಸಫಲವಾಗಬೇಕು..

ಇನ್ನು ಬಿಜೆಪಿ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿನ ಚುನಾವಣಾ ಫಲಿತಾಂಶದ ನಂತರ ಮಧ್ಯಂತರ ಚುನಾವಣೆಗೆ ಹೊಗುವ ಸ್ಥಿತಿಯಲ್ಲಿ ಇಲ್ಲ.. ಹಾಗಾಗಿ ಮತ್ತೆ ಯಡ್ಯೂರಪ್ಪ ಬೆಂಬಲಿಸಲೇಬೇಕಾದ ಅನಿವಾರ್ಯ ಸ್ಥಿತಿ ಅಮಿತ್ ಶಾ ಬಳಗಕ್ಕೆ ಬಂದಿದೆ..

ಅನರ್ಹರು:

ಕೋಟಿನಲ್ಲಿ ತಮ್ಮ ಪರವಾಗಿ ತೀರ್ಪು ಬಂದರೆ ಬಿಜೆಪಿ ಹೈಕಮಾಂಡನ್ನು ಓಲೈಸಿಕೊಂಡು ಟಿಕೆಟ್ ಪಡೆದು ಮತದಾರರ ಮನಗೆದ್ದು ಬಿಎಸ್‍ವೈ ಸಂಪುಟದಲ್ಲಿ ಮಂತ್ರಿಗಿರಿ ಭಾಗ್ಯ ಪಡೆಯುವುದು. ತೀರ್ಪು ವಿರುದ್ದ ಬಂದರೆ ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಿ ಅವರು ಗೆಲ್ಲುವ ಹಾಗೆ ಮಾಡುವುದು. ಇದಷ್ಟು ಸರಳ ಅಲ್ಲ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಆದರೆ, ಬೇರೇನೂ ದಾರಿಯಿಲ್ಲ.

ಜೆಡಿಎಸ್:

ತಮ್ಮ ಶಾಸಕರು ರಾಜೀನಾಮೆ ನೀಡಿರುವುದರಿಂದ ಕಳೆದುಕೊಂಡಿರುವ ಮೂರು ಸ್ಥಾನಗಳನ್ನು ಗೆಲ್ಲುವ ಪ್ರಯತ್ನಕ್ಕಿಂತ ಹೆಚ್ಚಾಗಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಬಹುಮತ ಬರದ ಹಾಗೆ ನೋಡಿಕೊಳ್ಳುವುದು. ಆಗ ಸರಕಾರ ಗೌಡರ ಮರ್ಜಿಯಲ್ಲಿ ಇರುವ ಹಾಗೆ ನೋಡಿಕೊಳ್ಳಬಹುದು.

ಅಂದರೆ, ಉಳಿದ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುವುದು. ಈ ಸದ್ಯ ಗೌಡರು ನಖಶಿಖಾಂತ ವಿರೋಧಿಸುತ್ತಿರುವ ಸಿದ್ದರಾಮಯ್ಯನವರ ಕ್ಯಾಂಡಿಡೇಟುಗಳನ್ನು ಸ್ವತಃ ಅವರೇ ಗೆಲ್ಲಿಸಿದರೆ ಮಾತ್ರ ಜೆಡಿಎಸ್‍ಗೆ ಅನುಕೂಲವಿದೆ.

ಕಾಂಗ್ರೆಸ್

ತಮ್ಮ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು. ಯಾವುದೇ ಕಾರಣಕ್ಕೆ ಬಿಜೆಪಿಗೆ ಬಹುಮತ ಬರದೆ ಇರುವ ಹಾಗೆ ನೋಡಿಕೊಳ್ಳುವುದು. ಆಗ ಬರುವ ಮಧ್ಯಂತರ ಚುನಾವಣೆಗಾಗಿ ಸಿದ್ದವಾಗುವುದು. ಇದೇ ಅವರ ಆಯ್ಕೆ ಎಂದು ದೇವೇಗೌಡರೂ ಹೇಳುತ್ತಿದ್ದಾರೆ. ಆದರೂ ಇದು ಅಷ್ಟು ಸುಲಭದ ಸಂಗತಿ ಅಲ್ಲ. ಕಾಂಗ್ರೆಸ್ ಒಡೆದ ಮನೆಯಾಗಿರುವುದು ಒಂದು ಕಾರಣವಾಗಿದ್ದರೆ, ನಂತರದ ಚುನಾವಣೆಯನ್ನು ಎದುರಿಸಲು ಬೇಕಾದ ಗಟ್ಟಿ ಹೈಕಮ್ಯಾಂಡ್ ಅಥವಾ ಸ್ಟೇಟ್ ಕಮ್ಯಾಂಡ್ 2018ರಲ್ಲಿದ್ದ ಪರಿಸ್ಥಿತಿಯಲ್ಲೂ ಇಲ್ಲ.

ಮತದಾರ:

ಒಟ್ಟಾರೆ ಕರ್ನಾಟಕದ ಮತದಾರ ಮಾತ್ರ ಅತಂತ್ರ, ಅಶಕ್ತ ಸರಕಾರಗಳ ಕೈಯಲ್ಲಿ ಸಿಕ್ಕು ನರಳುವುದು ತಪ್ಪಲ್ಲ.

ಇದು ನೀತಿ ಸಂಹಿತೆಯ ಉಲ್ಲಂಘನೆ ವ್ಯಾಪ್ತಿಗೆ ಬರುವುದಿಲ್ಲವೇ?

ಅನರ್ಹಗೊಂಡ ಶಾಸಕರುಗಳ ಕ್ಷೇತ್ರಗಳಿಗೆ ಚುನಾವಣಾ ಆಯೋಗವು ಅಕ್ಟೋಬರ್‍ನಲ್ಲಿ ಚುನಾವಣೆ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ನಂತರ ತಾನೇ ಸುಪ್ರೀಂಕೋರ್ಟಿನಲ್ಲಿ ಚುನಾವಣೆಯನ್ನು ಮುಂದೂಡುವುದರ ಕುರಿತು ಹೇಳಿಕೆ ನೀಡಿಬಿಟ್ಟಿತು. ಸಹಜವಾಗಿ ಅಷ್ಟು ದಿನಗಳ ಕಾಲ ನೀತಿ ಸಂಹಿತೆ ಇರುವುದು ಸಾಧ್ಯವಿರಲಿಲ್ಲ.

ಇದರ ಲಾಭ ಪಡೆದ ಅಧಿಕಾರಾರೂಢ ಬಿಜೆಪಿ ಪಕ್ಷವು ಸದರಿ ಕ್ಷೇತ್ರಗಳಿಗೆ ಅನುದಾನದ ಹೊಳೆ ಹರಿಸುತ್ತಿದೆ. ಅದಕ್ಕಾಗಿ ಬೇರೆ ಶಾಸಕರ ಕ್ಷೇತ್ರಗಳಿಗೆ ನೀಡಿದ ಅನುದಾನವನ್ನೂ ಕಡಿತಗೊಳಿಸಲಾಗಿದೆ. ಹಿಂದಿನ ಸರ್ಕಾರದ ಸಂದರ್ಭದಲ್ಲಿ ಘೋಷಿಸಲಾದ ತಾಲೂಕುಗಳ ಜೊತೆಗೆ ಘೋಷಿತವಾಗದ, ಮಂಚೇನಹಳ್ಳಿ ತಾಲೂಕನ್ನು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಕೆ.ಸುಧಾಕರ್ ಅನುಕೂಲಕ್ಕಾಗಿ ಘೋಷಿಸಲಾಯಿತು. ಗೌರಿಬಿದನೂರು ತಾಲೂಕು ವ್ಯಾಪ್ತಿಗೆ ಬರುತ್ತಿದ್ದ ಮಂಚೇನಹಳ್ಳಿ ಹೋಬಳಿಯು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರುತ್ತಿತ್ತು. ಈಗ ಚಿಕ್ಕಬಳ್ಳಾಪುರದ ಮೂರು ಹೋಬಳಿಗಳಲ್ಲೇ ಒಂದನ್ನು ಕಿತ್ತು ಮಂಚೇನಹಳ್ಳಿಗೆ ಕೊಡಬೇಕು. ಆ ಕಡೆ ಗೌರಿಬಿದನೂರು ತಾಲೂಕಿನಿಂದ ಕಿತ್ತು ಸೇರಿಸಿದರೆ ಅವರು ಅತಂತ್ರರಾಗುತ್ತಾರೆ. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕನಕಪುರದಿಂದ ಕಿತ್ತು ಮೆಡಿಕಲ್ ಕಾಲೇಜನ್ನು ನೀಡಲಾಯಿತು. ಇವೆರಡೂ ಸುಧಾಕರ್ ತನ್ನ ಸಾಧನೆ ಎಂಬಂತೆ ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಹಾಗೆಯೇ ಹೊಸಕೋಟೆ ತಾಲೂಕಿನಲ್ಲೂ ಹಲವಾರು ಯೋಜನೆಗಳನ್ನು ಯಡಿಯೂರಪ್ಪನವರು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸಮ್ಮುಖದಲ್ಲಿ ಘೋಷಿಸಿದರು. ಇವ್ಯಾವುವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ ಬರುವುದಿಲ್ಲ. ಏಕೆಂದರೆ ನೀತಿ ಸಂಹಿತೆ ಘೋಷಣೆಯಾಗುವ (ನವೆಂಬರ್ 12ಕ್ಕೆ) ಮುಂಚೆಯೇ ಆಗಿಬಿಟ್ಟಿವೆ.

ಮದ್ಯ ನಿಷೇಧಕ್ಕಾಗಿ ಹೋರಾಡುತ್ತಿರುವ ಮಹಿಳೆಯರು ಇದೇ ನ.12ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ಮಾಡಲು ಅನುಮತಿ ಕೇಳಿದ್ದರು. ನೀತಿ ಸಂಹಿತೆ ಶುರುವಾದ ಮೇಲೆ ಯಾರೂ ಬಂದು ಭರವಸೆ ನೀಡಲಾಗದು ಎಂಬ ಕಾರಣ ಹೇಳಿ ನಿರಾಕರಿಸಲಾಯಿತು. ನಂತರ ಅವರು ನ.7ರಂದು ಒಂದು ದಿನದ ಧರಣಿ ಮಾಡಿದರು (ನೂರರ ನೋಟ ಅಂಕಣದಲ್ಲಿ ಅದರ ವಿವರಗಳಿವೆ).
ಯಾರಿಗೂ ಬೇಡವಾಗಿದ್ದ, ಶಾಸಕರ ಮತ್ತು ಬಿಜೆಪಿಯ ಅಧಿಕಾರದ ದಾಹದ ಕಾರಣಕ್ಕೆ ಬರುತ್ತಿರುವ ಉಪಚುನಾವಣೆಯಿಂದ ಆಗುತ್ತಿರುವ ನೀತಿ ಸಂಹಿತೆ ಉಲ್ಲಂಘನೆ ಮತ್ತು ಜನಸಾಮಾನ್ಯರಿಗಾಗುತ್ತಿರುವ ನಷ್ಟಕ್ಕೆ ಹೊಣೆ ಯಾರು ಎಂಬ ಪ್ರಶ್ನೆ ಸಹಾ ಯಾರಿಗೂ ಬೇಡವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...