Homeಅಂಕಣಗಳುಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

ಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |

2019ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಭಾರತೀಯ ಜನತಾ ಪಕ್ಷ ಎಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಹಣವನ್ನು ಕಾರ್ಪೊರೇಟ್ ಕಂಪನಿಗಳಿಂದ ಪಡೆದಿದೆ. ಅವರು ಅಷ್ಟು ಹಣ ಬಿಟ್ಟಿ ಕೊಟ್ಟಿಲ್ಲ. ಮೋದಿ ಸರ್ಕಾರ ಅದಾನಿ, ಅಂಬಾನಿ ಮುಂತಾದ ಕಾರ್ಪೊರೇಟ್‍ಗಳ 50 ಕೋಟಿ ಸಾಲ ಮನ್ನಾ ಮಾಡಿದೆ. ಸರ್ಕಾರದ ಈ ಉಪಕಾರಕ್ಕಾಗಿ ಮೋದಿಯವರ ಪಕ್ಷಕ್ಕೆ ವಿಶೇಷ ಗಿಫ್ಟ್ ಕೊಡಮಾಡಲಾಗಿದೆ. ಮೋದಿ ಸರ್ಕಾರ ಭ್ರಷ್ಟಾಚಾರದಿಂದ ಮುಕ್ತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಮ್ಮ ಚುನಾವಣಾ ಪ್ರಚಾರದ ಹ್ಯಾಂಡ್‍ಬಿಲ್‍ನಲ್ಲಿ ಹೇಳಿದ್ದಾರೆ. ಮೋದಿಯವರ ಸರ್ಕಾರದ ಭ್ರಷ್ಟಾಚಾರಕ್ಕೆ ಒಂದು ಉದಾಹರಣೆಯಾಗಿ ರಫೆಲ್ ಯುದ್ಧವಿಮಾನ ಖರೀದಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಕಛೇರಿಯಿಂದ ಒಪ್ಪಂದ ಕುದುರಿಸಿದ್ದು ಈಗ ಹೊರಬಿದ್ದಿದೆ. ಅದಕ್ಕಾಗಿ ನೇಮಕವಾಗಿದ್ದ ರಕ್ಷಣಾ ಇಲಾಖೆಯ ಸದಸ್ಯರ ನಿಯೋಗ ಅಂತಿಮಗೊಳಿಸಿದ ಕರಾರುಗಳನ್ನು ಬದಲಿಸುವ ಕೆಲಸ ಸರ್ಕಾರದಿಂದ ನಡೆದಿದೆ. ಅದನ್ನು ಪ್ರಶ್ನಿಸಿದ ರಕ್ಷಣಾ ಇಲಾಖೆಯ ನಿಯೋಗದವರು ಸರ್ಕಾರವೇ ಒಪ್ಪಂದವನ್ನು ನೇರವಾಗಿ ಒಪ್ಪಂದ ಮಾಡಿಕೊಳ್ಳಲಿ ನಮಗೆ ಮುಜುಗರ ಉಂಟುಮಾಡುವುದು ಬೇಡ ಎಂದು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ ವಿಮಾನ ನಿರ್ಮಾಣದ ಗಂಧವೇ ಇಲ್ಲದ ಅಂಬಾನಿಯನ್ನು ಒಬ್ಬ ಪಾಲುದಾರನನ್ನಾಗಿ ಮಾಡಿಕೊಂಡು ಅವರಿಗೆ 65 ಕೋಟಿ ರೂಪಾಯಿ ಲಾಭ ಅನಾಯಾಸವಾಗಿ ಮಾಡಿಕೊಡುವ ಹುನ್ನಾರ ಮಾಡಿದೆ.

ಯೋಗ, ಸ್ವಚ್ಛ ಭಾರತ ಎರಡೂ ಹೊಸ ಯೋಜನೆಗಳಲ್ಲ. ಕರ್ನಾಟಕದಲ್ಲಿ ಯೋಗ ತರಗತಿ ಹತ್ತಾರು ವರ್ಷ ಹಿಂದಿನಿಂದ ತರಗತಿಗಳ ಸ್ಥಾನಗಳಿಂದ ನಡೆಯುತ್ತಿವೆ. ಸ್ವಚ್ಛ ಭಾರತದ ಯೋಜನೆಯನ್ನು ಬಿಜೆಪಿಯವರಿಗೂ ಹಿಂದಿನಿಂದಲೂ ನಡೆಸುತ್ತಿದ್ದಾರೆ. ಅದನ್ನು ಪ್ರಥಮವಾಗಿ ರೂಪಿಸಿದವರು ಪ್ರೊ.ಮರುಳಸಿದ್ಧಯ್ಯನವರು. ಅದನ್ನು ಜಾರಿಗೆ ತಂದವರು ಸಚಿವ ಎಂ.ಪಿ.ಪ್ರಕಾಶ್‍ರವರು. ಇನ್ನು ಸ್ವಾವಲಂಬನೆ ಸಾಧಿಸುವ, ಅಂದರೆ ಉದ್ಯೋಗಾವಕಾಶ ಕಲ್ಪಿಸುವ ಕೆಲಸ ಕುಂಟುತ್ತಾ ಸಾಗಿದೆ. ಅದಕ್ಕಾಗಿ ಘೋಷಿಸಲಾದ ಯೋಜನೆಗಳಿಂದ ಲಾಭ ಪಡೆದವರು ಗಣನೀಯ ಸಂಖ್ಯೆಯಲ್ಲಿಲ್ಲ. ಗ್ರಾಮಗಳಲ್ಲಿ ಇರುವವರೆಲ್ಲರಿಗೂ ಉಳುಮೆಗೆ ಭೂಮಿ ಕೊಡಬೇಕು. ದುಡಿದುಕೊಂಡು ತಿನ್ನಲು ಅವಕಾಶ ಮಾಡಿಕೊಡಬೇಕು. ಇದಾಗಬೇಕಾದರೆ ಭೂ ಸುಧಾರಣೆ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು. ಭೂ ಮಿತಿ ಶಾಸನವನ್ನು ಪುನರ್ ರೂಪಿಸಬೇಕು. ದುಡಿಯುವ ಎಲ್ಲರಿಗೂ ಕನಿಷ್ಠ 5 ಎಕರೆ ಜಮೀನು ಸಿಗಬೇಕು. ಅನ್ನ ಕಲಸಿ ಕೊಡುವುದು, ಬಡವರ ಖಾತೆಗೆ ಹಣ ಹಾಕುವುದು ಬಡತನ ನಿವಾರಣೆಗೆ ಪರಿಹಾರವಲ್ಲ. ಅದು ಓಟು ಗಿಟ್ಟಿಸಲು ಹೂಡುವ ತಂತ್ರ. ಈ ಗಿಮಿಕ್ ಬಿಟ್ಟು ಬಡವರಿಗೆ ಭೂಮಿ ಹಂಚುವ ಕೆಲಸ ಮಾಡಿದ್ದರೆ ಮೋದಿ ಅವರನ್ನು ಮೆಚ್ಚಿಕೊಳ್ಳಬಹುದಾಗಿತ್ತು.

ಉಚಿತ ಎಲ್‍ಪಿಜಿ ಸೌಲಭ್ಯವನ್ನು ಬಡವರಿಗೆ ನೀಡಿರುವುದು ಅವರ ಸಾಧನೆ ಎಂಬುದನ್ನು ಒಪ್ಪಬಹುದು. ಕೈಗೆಟುಕುವ ದರದಲ್ಲಿ ಜನೌಷಧಿ ಜನರಿಗೆ ಒದಗಿಸುವ ಅವರ ಯೋಜನೆಯೂ ಒಳ್ಳೆಯದೇ.

ಆದರೆ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದ್ದರು. ಈ 5 ವರ್ಷದ ಅವರ ಅಧಿಕಾರದ ಅವಧಿಯಲ್ಲಿ 10 ಕೋಟಿ ಉದ್ಯೋಗಗಳು ಸೃಷ್ಠಿಯಾಗಬೇಕಾಗಿತ್ತು. ಉದ್ಯೋಗ ಸೃಷ್ಟಿಸುವ ರೀತಿ ಘೋಷಣೆಯಾಗಿ ಬೆಳೆಯಿತು. ಗುಡಿಸುವ ಕೆಲಸಕ್ಕೆ ಅರ್ಜಿ ಕರೆದರೆ ಒಂದು ಲಕ್ಷ ಅರ್ಜಿಗಳು ಬರುತ್ತವೆ. ಅದರಲ್ಲಿ 2ರಿಂದ 3 ಸಾವಿರ ಜನ ಪದವೀಧರರು, ಸ್ನಾತಕೋತ್ತರ ಪದವೀಧರರೂ ಇರುತ್ತಾರೆ. ಅಂದರೆ ಓದಿದವರಿಗೂ, ಓದದವರಿಗೂ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂಬುದು ಉತ್ಪ್ರೇಕ್ಷೆಯಲ್ಲ.

ಸ್ವಾತಂತ್ರ್ಯ ಬಂದು 72 ವರ್ಷಗಳೇ ಕಳೆದರೂ ಬಡತನವನ್ನೂ ನೀಗುವ ಕೆಲಸ ನಡೆದೇ ಇಲ್ಲ. ಬಡವರ ಓಟನ್ನು ಕಿತ್ತುಕೊಂಡು ಅಧಿಕಾರಕ್ಕೆ ಬರುತ್ತೀರಿ, ಅವರ ಬಗೆಗೆ ಲೋಕಸಭೆ ಸದಸ್ಯರಾಗುವವರಿಗೆ ಕಿಂಚಿತ್ತೂ ಕಾಳಜಿಯಿಲ್ಲ. ಬಡತನದ ಸಂಪೂರ್ಣ ನಿವಾರಣೆಗೆ ಸರ್ಕಾರ ಮತ್ತು ಪಾರ್ಲಿಮೆಂಟ್ ಸದಸ್ಯರು ಒಂದು ಪರಿಣಾಮಕಾರಿ ಕಾನೂನನ್ನು ತರುವುದರಲ್ಲಿ ವಿಫಲರಾಗಿದ್ದಾರೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಅದರ ಪ್ರಸ್ತಾಪ ಇರುವುದಿಲ್ಲ. ಶ್ರೀಮಂತರನ್ನು ಓಲೈಸುವ ಪಕ್ಷ ಭಾರತೀಯ ಜನತಾ ಪಕ್ಷ. ಸಮಾನತೆಯನ್ನು ಸಾಧಿಸುವ ವಿಚಾರ ಅವರಿಗೆ ಬೇಕಾಗಿಲ್ಲ. ಅವರು Statusquoists. ಅಸಮಾನತೆಯ ಸಮಾಜದ ನಿರ್ಮಾಣವೇ ಅವರ ಗುರಿ, ದೊಡ್ಡ ಜಮೀನ್ದಾರರು, ಪಟ್ಟಭದ್ರ ಹಿತಾಸಕ್ತಿಗಳು, ಕಾರ್ಪೊರೇಟ್ ಸಂಸ್ಥೆಗಳ ಮಾಲೀಕರು ಅರೆಸ್ಸೆಸ್ ಮತ್ತು ಬಿಜೆಪಿಯ ಬೆನ್ನೆಲುಬು. ಈ ಕಠೋರ ಮನೋಭಾವದ ಭಾಜಪಕ್ಕೆ ಮತ ನೀಡಬೇಕೇ?.

ಹಳ್ಳಿಗಳಲ್ಲಿ ದುಡಿಯಲು ಆಸಕ್ತಿಯುಳ್ಳ ಎಲ್ಲ ಭೂ ಹೀನ ರೈತರಿಗೆ ಮತ್ತು ರೈತ ಕಾರ್ಮಿಕರಿಗೆ ತಲಾ 5 ಎಕರೆ ಜಮೀನು ನೀಡುವ ಮೂಲಕ ಗ್ರಾಮೀಣ ಬಡತನ ನೀಗಬೇಕು. ಅದರಂತೆಯೇ ಪಟ್ಟಣ ಮತ್ತು ತಾಲ್ಲೂಕು ಕೇಂದ್ರದಲ್ಲಿರುವ ಬಡವರ ಬಡತನ ನೀಗಲು ಬಿಜೆಪಿ ಯಾವ ಕಾರ್ಯಕ್ರಮವನ್ನೂ ಹಾಕಿಕೊಂಡಿಲ್ಲ. ಹಳ್ಳಿಗಳಲ್ಲಿ ದುಡಿದುಕೊಂಡು ತಿನ್ನುವ ಸಲುವಾಗಿ ಭೂಮಿ ಹಂಚುವ ರೀತಿಯಲ್ಲಿ ನಗರ ಪ್ರದೇಶಗಳಲ್ಲಿ ಪ್ರತಿಮನೆಯೂ ಒಂದು ಗೃಹ ಕೈಗಾರಿಕೆ, ಗುಡಿ ಕೈಗಾರಿಕೆ ಕೇಂದ್ರವಾಗಬೇಕು. ಆಗ ಜನರು ಸ್ವಾವಲಂಬಿಗಳಾಗುತ್ತಾರೆ.

ಜವಹರಲಾಲ್ ನೆಹ್ರು ಪ್ರಧಾನಿಯಾಗಿದ್ದಾಗ ಈ ಪ್ರಯೋಗ ಪಂಜಾಬಿನಲ್ಲಿ ನಡೆಯಿತು. ಆಗ ಕೈರಾನ್ ಎಂಬುವವರು ಪಂಜಾಬಿನ ಮುಖ್ಯಮಂತ್ರಿ ಆಗಿದ್ದರು. ಅವರು ಪಂಜಾಬನ್ನು ಗೃಹ ಕೈಗಾರಿಕೆಗಳ, ಗುಡಿ ಕೈಗಾರಿಕೆಗಳ ಆಗರ ಮಾಡಲು ಸಂಕಲ್ಪ ಮಾಡಿದರು. ಆ ಕೆಲಸದಲ್ಲಿ ಅವರು ಗೆಲುವನ್ನೂ ಸಂಪಾದಿಸಿದರು. ಬಡತನದ ಖಾಯಂ ನಿವಾರಣೆಗೆ ಬುನಾದಿಯನ್ನು ಹಾಕಿದರು. ಆದರೆ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆಂಬ ಅಪವಾದಕ್ಕೆ ತುತ್ತಾಗಿದ್ದರು. ಅದಕ್ಕಾಗಿ ಅವರ ಕೊಲೆಯಾಯಿತು. ಆದರೆ ಬಡತನ ನಿವಾರಣೆಗೆ ಅವರು ಕೈಗೊಂಡ ಕ್ರಮಗಳ ಬಗೆಗೆ ಪಂಜಾಬಿನ ಜನತೆ ಇಂದಿಗೂ ಕೈರಾನ್‍ರನ್ನು ನೆನೆಯುತ್ತಾರೆ.

ಪಂಜಾಬಿನಲ್ಲಿ ನಡೆದ ಈ ಪ್ರಯೋಗ ಭಾರತದಾದ್ಯಂತ ಪಸರಿಸಬೇಕು. ಈ ಕುರಿತು ಭಾಜಪ ಪ್ರಣಾಳಿಕೆಯಲ್ಲಿ ಪ್ರಸ್ತಾಪವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...