Homeಮುಖಪುಟಒಂದು whistle blowers ಪಡೆ ಹುಟ್ಟು ಹಾಕೋಣ

ಒಂದು whistle blowers ಪಡೆ ಹುಟ್ಟು ಹಾಕೋಣ

- Advertisement -
- Advertisement -
  • ದೇವನೂರ ಮಹಾದೇವ |

ಈಗ ಚುನಾವಣೆ ನಮ್ಮ ಮುಂದಿದೆ. ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ದೊಡ್ಡದೊಡ್ಡ ನಾಯಕರು ಆಡುವ ಮಾತುಗಳನ್ನು ಕೇಳಿದರೆ ಚುನಾವಣೆ ಅಂದರೆ ಅದು ನಾಡು ಕಟ್ಟುವ ಕೆಲಸ ಅಂದುಕೊಂಡಿಲ್ಲ, ಬದಲಾಗಿ ರಣರಂಗ ಅಂದ್ಕೊಂಡಿದ್ದಾರೆ. ಅದಕ್ಕಾಗಿ ಠೇಂಕಾರದ ಮಾತಾಡ್ತಾರೆ. ಜೊತೆಗೆ – ಜಾದೂ ಭಾಷೇಲಿ ಮಾತಾಡ್ತಾರೆ, ಹರಾಜು ಹಾಕುವ ಭಾಷೇಲಿ ಮಾತಾಡ್ತಾರೆ. ಒಟ್ಟಿನಲ್ಲಿ ಇವರೆಲ್ಲ ಮರಳಲ್ಲಿ ಮನೆ ಕಟ್ಟುತ್ತಿರುವವರಂತೆ ಕಾಣಿಸ್ತಾರೆ.

ಒಂದೇ ಉದಾಹರಣೆ ಸಾಕು, ಬಿಜೆಪಿ ಪದೇ ಪದೇ ಹೇಳ್ತಾ ಇದೆ- “ನಾವು ಕಾಂಗ್ರೆಸ್‍ಮುಕ್ತ ಕರ್ನಾಟಕ ಮಾಡ್ತೇವೆ” ಅಂತ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಕೂಡ ಹೇಳ್ತಾ ಇದೆ- ‘ನಾವು ಬಿಜೆಪಿಮುಕ್ತ ಕರ್ನಾಟಕ ಮಾಡ್ತೇವೆ’ ಅಂತ. ಇವರು ಏನನ್ನು ಮುಕ್ತ ಮಾಡ್ತಾ ಇದ್ದಾರೆ? ತಾನು ಕೂತ ಮರದ ಕೊಂಬೆಯನ್ನೇ ಕತ್ತರಿಸುವವನ ಮೂರ್ಖತನವಲ್ಲವೆ ಇದು? ಜನತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ವಿಧ್ವಂಸಕ ಕೃತ್ಯವಲ್ಲವೆ ಇದು? – ಇದು ಹೊಣೆಗೇಡಿ ರಾಜಕಾರಣ.

ನಾಡಿಗೆ ತುರ್ತಾಗಿ ಬೇಕಾಗಿರುವುದು ಬರಮುಕ್ತ ಕರ್ನಾಟಕ, ನಿರುದ್ಯೋಗ ಮುಕ್ತ ಕರ್ನಾಟಕ. ನಾವು ಈ ಹೊಣೆಗೇಡಿ ರಾಜಕಾರಣಕ್ಕೆ ಇದನ್ನು ನೆನಪಿಸಬೇಕಾಗಿದೆ.

ಈ ಹೊಣೆಗೇಡಿ ರಾಜಕಾರಣದ ಜೊತೆಗೆ ಅಪ್ರಬುದ್ಧ ರಾಜಕಾರಣವೂ ವಿಜೃಂಭಿಸುತ್ತಿದೆ. ಉದಾಹರಣೆಗೆ ‘ವಿಶ್ವೇಶ್ವರಯ್ಯ ಹೆಸರು ಉಚ್ಚಾರಣೆ ಮಾಡೋ ಕೆಲವರಿಗೆ ಬರೋಲ್ಲ’ ಅಂತ ಇವರು ಹೇಳ್ತಾರೆ, ‘ಇವರಿಗೆ ಬಳ್ಳಾರಿ ಹೆಸರು ಉಚ್ಚಾರಣೆ ಮಾಡೋಕೆ ಬರೋಲ್ಲ’ ಅಂತ ಅವರು ಹೇಳ್ತಾರೆ! ಇಂಥವೇ ಮಾತುಗಳು. ನನಗೂ ಉಚ್ಚಾರಣೆ ಬರಲ್ಲಪ್ಪ, ಏನೀಗ? ಇದೇನು ಘನಂದಾರಿ ಚರ್ಚೆಯೆ? ಇಂಥವರಿಗೆ ಏನೆಂದು ಹೇಳಬೇಕು? ‘ನಿಮಗೆಲ್ಲ ವಯಸ್ಸಾಗಿದೆ, ನಿಜ. ಆದರೆ ನೀವು ಪ್ರೈಮರಿ ಶಾಲೆಯಲ್ಲಿ ಇರಬೇಕಾದವರು’ ಎಂದು ಹೇಳಬೇಕಾಗಿದೆ. ಮಾಧ್ಯಮಗಳು ಇಂಥ ಕ್ಷುಲ್ಲಕವನ್ನೆಲ್ಲಾ ಚರ್ಚಿಸಬಾರದು, ದಯವಿಟ್ಟು.

ಮೊನ್ನೆ ಮೊನ್ನೆ ತಾನೇ ಮೈಸೂರಿನಲ್ಲಿ – ‘ಉದ್ಯೋಗಕ್ಕಾಗಿ ಯುವಜನರು’ ಸಂಘಟನೆಯವರು ಪ್ರವಾಸದಲ್ಲಿದ್ದ ನಮ್ಮ ಪ್ರಧಾನಿಗೆ ಒಂದು ಪ್ರಶ್ನೆ ಕೇಳಿದರು- ‘ಕಳೆದ ಲೋಕಸಭಾ ಚುನಾವಣೆಯಲ್ಲಿ ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದಿರಿ. ಕಿಂಚಿತ್ತೂ ಈಡೇರಲಿಲ್ಲ. ಈ ಬಗ್ಗೆ ಮಾತಾಡಿ’ ಅಂತ. ಇದಕ್ಕೆ ಉತ್ತರಿಸಬೇಕಾದ್ದು ಮಾತು ಕೊಟ್ಟ ಪ್ರಧಾನಿಯವರ ಹೊಣೆಗಾರಿಕೆ. ಆದರೆ ಅವರು ಉತ್ತರಿಸಲಿಲ್ಲ. ಬದಲಾಗಿ, ಮುಂದಿನ ಸಭೆಯಲ್ಲಿ ಅವರು ಆಡಿದ ಮಾತುಗಳು ಏನು ಗೊತ್ತೆ?- ‘ನಾವು ಕಾಮ್‍ಧಾರಿಗಳು, ಅವರು (ಅಂದರೆ ವಿರೋಧ ಪಕ್ಷದವರು) ನಾಮ್‍ಧಾರಿಗಳು’ ಅಂತ! ನುಣುಚಿಕೊಳ್ಳುವ ಇದು ದ್ರೋಹವಲ್ಲವೆ? ಇದು ಮಹಾದ್ರೋಹ. ಇವರು ನಾಡನ್ನು ಕಟ್ಟುತ್ತಿದ್ದಾರೋ ಅಥವ ಪದಗಳನ್ನು ಕಟ್ಟುತ್ತಿದ್ದಾರೋ? ಈ ರಾಜಕಾರಣ ನೋಡುತ್ತಿದ್ದರೆ ಜಿಗುಪ್ಸೆಯಾಗುತ್ತದೆ. ಭಯವೂ ಆಗುತ್ತದೆ.

ಕೆ.ಎಸ್.ಪುಟ್ಟಣ್ಣಯ್ಯ

ಇನ್ನೊಂದು ರಾಜಕಾರಣದ ಮಾತಿನ ಠೇಂಕಾರ; “ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ಭ್ರಷ್ಟರನ್ನೆಲ್ಲಾ ಜೈಲಿಗೆ ಅಟ್ಟುತ್ತೇವೆ”. ಈ ಮಾತಿಗೆ ನಮ್ಮ ಕೆಎಸ್ ಪುಟ್ಟಣ್ಣಯ್ಯ ಹೇಳ್ತಾ ಇದ್ದರು; “ವಿಧಾನಸೌಧದ ಬಾಗಿಲಿಗೆ ಒಂದು ‘ಭ್ರಷ್ಟರ ತಡೆ ಮಿಷಿನ್’ ಇಟ್ಟುಬಿಡೋಣ. ಭ್ರಷ್ಟರು ಬಂದರೆ ಆ ಬಾಗಿಲು ಆಟೋಮ್ಯಾಟಿಕ್ ಮುಚ್ಕೋಬೇಕು – ಅಂಥದ್ದು. ಆ ಮಿಷಿನ್ನೂ ಲಂಚ ಈಸ್ಕಂಡು ಒಳಿಕೆ ಬಿಡ್ದೇ ಇದ್ರೆ – ವಿಧಾನ ಸೌಧದ ಒಳೀಕೆ ಎಷ್ಟು ಜನರಪ್ಪ ಹೋಗೌರು?” ಅಂತಿದ್ದರು. ಇದು ರಾಜಕಾರಣದ ಇಂದಿನ ಪರಿಸ್ಥಿತಿ. ವ್ಯವಸ್ಥೇನೆ ಭ್ರಷ್ಟಗೊಂಡಿದೆ.

ಇಂಥ ದುರಂತ ರಾಜಕಾರಣದ ಸಂದರ್ಭದಲ್ಲಿ- ಸ್ವರಾಜ್ ಇಂಡಿಯಾ ತನ್ನ ಪ್ರಣಾಳಿಕೆ ಬಿಡುಗಡೆ ಮಾಡ್ತಾ ಇದೆ. ‘ಕೆಲವರಿಗೆ ಅಲ್ಲ; ಸಮುದಾಯಕ್ಕೆ ಎಲ್ಲಾ’ ಎಂಬ ಆಶಯದ ಸಸಿ ನೆಡುತ್ತಿದೆ. ಈ ಸ್ವರಾಜ್ ಪ್ರಣಾಳಿಕೆಗೆ ಕಾಪಿರೈಟ್ ಇಲ್ಲ. ಯಾರೇ ಪ್ರಕಟಿಸಬಹುದು. ದಯವಿಟ್ಟು ಚರ್ಚಿಸಿ, ಟೀಕೆ ಮಾಡಿ, ಸಲಹೆ, ಸೂಚನೆ, ಟಿಪ್ಪಣಿ ನೀಡಿ. ಇದು ಮುಕ್ತವಾಗಿದೆ.

ಕೊನೆಯದಾಗಿ, ನಾಡಿನ ಜಾಗೃತ ಪ್ರಜ್ಞೆಗೆ ಒಂದು ವಿನಂತಿ ಮಾಡುವೆ. ಅದೇನೆಂದರೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರಣಾಳಿಕೆಯ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ನೀಡುವ ಭರವಸೆಗಳು- ಇವುಗಳನ್ನೆಲ್ಲಾ ನೆನಪಿಸುವ ಒಂದು ತಿhisಣಟe bಟoತಿeಡಿs ಪಡೆಯನ್ನು ಹುಟ್ಟು ಹಾಕಬೇಕಾಗಿದೆ. ರಾಜ್ಯಕ್ಕೆ ಹತ್ತು ಜನ ಸಾಕು. ಜಿಲ್ಲೆಗೆ ಮೂರು ಜನ. ರಾಜಕೀಯ ಪಕ್ಷಗಳ ಪ್ರಣಾಳಿಕೆಗಳ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ತಿಂಗಳಿಗೊಮ್ಮೆ ಅವರವರ ಮೂತಿಗೆ ಹಿಡಿಯುವ ಒಂದು ಜಾಗರೂಕ ಪಡೆ ಅತ್ಯಗತ್ಯವಾಗಿದೆ. ಇದರಿಂದ ಹೊಣೆಗೇಡಿ ರಾಜಕಾರಣಕ್ಕೆ ಸ್ವಲ್ಪವಾದರೂ ಹೊಣೆಗಾರಿಕೆ ಬರಬಹುದು. ರಾಜಕಾರಣಕ್ಕೆ ಮಾನಮರ್ಯಾದೆ ತಂದುಕೊಡುವ ದಿಕ್ಕಲ್ಲಿ ಇದು ಮೊದಲ ಹೆಜ್ಜೆಯಾಗಲೂಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...