Homeಮುಖಪುಟಒಂದು whistle blowers ಪಡೆ ಹುಟ್ಟು ಹಾಕೋಣ

ಒಂದು whistle blowers ಪಡೆ ಹುಟ್ಟು ಹಾಕೋಣ

- Advertisement -
- Advertisement -
  • ದೇವನೂರ ಮಹಾದೇವ |

ಈಗ ಚುನಾವಣೆ ನಮ್ಮ ಮುಂದಿದೆ. ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ದೊಡ್ಡದೊಡ್ಡ ನಾಯಕರು ಆಡುವ ಮಾತುಗಳನ್ನು ಕೇಳಿದರೆ ಚುನಾವಣೆ ಅಂದರೆ ಅದು ನಾಡು ಕಟ್ಟುವ ಕೆಲಸ ಅಂದುಕೊಂಡಿಲ್ಲ, ಬದಲಾಗಿ ರಣರಂಗ ಅಂದ್ಕೊಂಡಿದ್ದಾರೆ. ಅದಕ್ಕಾಗಿ ಠೇಂಕಾರದ ಮಾತಾಡ್ತಾರೆ. ಜೊತೆಗೆ – ಜಾದೂ ಭಾಷೇಲಿ ಮಾತಾಡ್ತಾರೆ, ಹರಾಜು ಹಾಕುವ ಭಾಷೇಲಿ ಮಾತಾಡ್ತಾರೆ. ಒಟ್ಟಿನಲ್ಲಿ ಇವರೆಲ್ಲ ಮರಳಲ್ಲಿ ಮನೆ ಕಟ್ಟುತ್ತಿರುವವರಂತೆ ಕಾಣಿಸ್ತಾರೆ.

ಒಂದೇ ಉದಾಹರಣೆ ಸಾಕು, ಬಿಜೆಪಿ ಪದೇ ಪದೇ ಹೇಳ್ತಾ ಇದೆ- “ನಾವು ಕಾಂಗ್ರೆಸ್‍ಮುಕ್ತ ಕರ್ನಾಟಕ ಮಾಡ್ತೇವೆ” ಅಂತ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಕೂಡ ಹೇಳ್ತಾ ಇದೆ- ‘ನಾವು ಬಿಜೆಪಿಮುಕ್ತ ಕರ್ನಾಟಕ ಮಾಡ್ತೇವೆ’ ಅಂತ. ಇವರು ಏನನ್ನು ಮುಕ್ತ ಮಾಡ್ತಾ ಇದ್ದಾರೆ? ತಾನು ಕೂತ ಮರದ ಕೊಂಬೆಯನ್ನೇ ಕತ್ತರಿಸುವವನ ಮೂರ್ಖತನವಲ್ಲವೆ ಇದು? ಜನತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ವಿಧ್ವಂಸಕ ಕೃತ್ಯವಲ್ಲವೆ ಇದು? – ಇದು ಹೊಣೆಗೇಡಿ ರಾಜಕಾರಣ.

ನಾಡಿಗೆ ತುರ್ತಾಗಿ ಬೇಕಾಗಿರುವುದು ಬರಮುಕ್ತ ಕರ್ನಾಟಕ, ನಿರುದ್ಯೋಗ ಮುಕ್ತ ಕರ್ನಾಟಕ. ನಾವು ಈ ಹೊಣೆಗೇಡಿ ರಾಜಕಾರಣಕ್ಕೆ ಇದನ್ನು ನೆನಪಿಸಬೇಕಾಗಿದೆ.

ಈ ಹೊಣೆಗೇಡಿ ರಾಜಕಾರಣದ ಜೊತೆಗೆ ಅಪ್ರಬುದ್ಧ ರಾಜಕಾರಣವೂ ವಿಜೃಂಭಿಸುತ್ತಿದೆ. ಉದಾಹರಣೆಗೆ ‘ವಿಶ್ವೇಶ್ವರಯ್ಯ ಹೆಸರು ಉಚ್ಚಾರಣೆ ಮಾಡೋ ಕೆಲವರಿಗೆ ಬರೋಲ್ಲ’ ಅಂತ ಇವರು ಹೇಳ್ತಾರೆ, ‘ಇವರಿಗೆ ಬಳ್ಳಾರಿ ಹೆಸರು ಉಚ್ಚಾರಣೆ ಮಾಡೋಕೆ ಬರೋಲ್ಲ’ ಅಂತ ಅವರು ಹೇಳ್ತಾರೆ! ಇಂಥವೇ ಮಾತುಗಳು. ನನಗೂ ಉಚ್ಚಾರಣೆ ಬರಲ್ಲಪ್ಪ, ಏನೀಗ? ಇದೇನು ಘನಂದಾರಿ ಚರ್ಚೆಯೆ? ಇಂಥವರಿಗೆ ಏನೆಂದು ಹೇಳಬೇಕು? ‘ನಿಮಗೆಲ್ಲ ವಯಸ್ಸಾಗಿದೆ, ನಿಜ. ಆದರೆ ನೀವು ಪ್ರೈಮರಿ ಶಾಲೆಯಲ್ಲಿ ಇರಬೇಕಾದವರು’ ಎಂದು ಹೇಳಬೇಕಾಗಿದೆ. ಮಾಧ್ಯಮಗಳು ಇಂಥ ಕ್ಷುಲ್ಲಕವನ್ನೆಲ್ಲಾ ಚರ್ಚಿಸಬಾರದು, ದಯವಿಟ್ಟು.

ಮೊನ್ನೆ ಮೊನ್ನೆ ತಾನೇ ಮೈಸೂರಿನಲ್ಲಿ – ‘ಉದ್ಯೋಗಕ್ಕಾಗಿ ಯುವಜನರು’ ಸಂಘಟನೆಯವರು ಪ್ರವಾಸದಲ್ಲಿದ್ದ ನಮ್ಮ ಪ್ರಧಾನಿಗೆ ಒಂದು ಪ್ರಶ್ನೆ ಕೇಳಿದರು- ‘ಕಳೆದ ಲೋಕಸಭಾ ಚುನಾವಣೆಯಲ್ಲಿ ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದಿರಿ. ಕಿಂಚಿತ್ತೂ ಈಡೇರಲಿಲ್ಲ. ಈ ಬಗ್ಗೆ ಮಾತಾಡಿ’ ಅಂತ. ಇದಕ್ಕೆ ಉತ್ತರಿಸಬೇಕಾದ್ದು ಮಾತು ಕೊಟ್ಟ ಪ್ರಧಾನಿಯವರ ಹೊಣೆಗಾರಿಕೆ. ಆದರೆ ಅವರು ಉತ್ತರಿಸಲಿಲ್ಲ. ಬದಲಾಗಿ, ಮುಂದಿನ ಸಭೆಯಲ್ಲಿ ಅವರು ಆಡಿದ ಮಾತುಗಳು ಏನು ಗೊತ್ತೆ?- ‘ನಾವು ಕಾಮ್‍ಧಾರಿಗಳು, ಅವರು (ಅಂದರೆ ವಿರೋಧ ಪಕ್ಷದವರು) ನಾಮ್‍ಧಾರಿಗಳು’ ಅಂತ! ನುಣುಚಿಕೊಳ್ಳುವ ಇದು ದ್ರೋಹವಲ್ಲವೆ? ಇದು ಮಹಾದ್ರೋಹ. ಇವರು ನಾಡನ್ನು ಕಟ್ಟುತ್ತಿದ್ದಾರೋ ಅಥವ ಪದಗಳನ್ನು ಕಟ್ಟುತ್ತಿದ್ದಾರೋ? ಈ ರಾಜಕಾರಣ ನೋಡುತ್ತಿದ್ದರೆ ಜಿಗುಪ್ಸೆಯಾಗುತ್ತದೆ. ಭಯವೂ ಆಗುತ್ತದೆ.

ಕೆ.ಎಸ್.ಪುಟ್ಟಣ್ಣಯ್ಯ

ಇನ್ನೊಂದು ರಾಜಕಾರಣದ ಮಾತಿನ ಠೇಂಕಾರ; “ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ಭ್ರಷ್ಟರನ್ನೆಲ್ಲಾ ಜೈಲಿಗೆ ಅಟ್ಟುತ್ತೇವೆ”. ಈ ಮಾತಿಗೆ ನಮ್ಮ ಕೆಎಸ್ ಪುಟ್ಟಣ್ಣಯ್ಯ ಹೇಳ್ತಾ ಇದ್ದರು; “ವಿಧಾನಸೌಧದ ಬಾಗಿಲಿಗೆ ಒಂದು ‘ಭ್ರಷ್ಟರ ತಡೆ ಮಿಷಿನ್’ ಇಟ್ಟುಬಿಡೋಣ. ಭ್ರಷ್ಟರು ಬಂದರೆ ಆ ಬಾಗಿಲು ಆಟೋಮ್ಯಾಟಿಕ್ ಮುಚ್ಕೋಬೇಕು – ಅಂಥದ್ದು. ಆ ಮಿಷಿನ್ನೂ ಲಂಚ ಈಸ್ಕಂಡು ಒಳಿಕೆ ಬಿಡ್ದೇ ಇದ್ರೆ – ವಿಧಾನ ಸೌಧದ ಒಳೀಕೆ ಎಷ್ಟು ಜನರಪ್ಪ ಹೋಗೌರು?” ಅಂತಿದ್ದರು. ಇದು ರಾಜಕಾರಣದ ಇಂದಿನ ಪರಿಸ್ಥಿತಿ. ವ್ಯವಸ್ಥೇನೆ ಭ್ರಷ್ಟಗೊಂಡಿದೆ.

ಇಂಥ ದುರಂತ ರಾಜಕಾರಣದ ಸಂದರ್ಭದಲ್ಲಿ- ಸ್ವರಾಜ್ ಇಂಡಿಯಾ ತನ್ನ ಪ್ರಣಾಳಿಕೆ ಬಿಡುಗಡೆ ಮಾಡ್ತಾ ಇದೆ. ‘ಕೆಲವರಿಗೆ ಅಲ್ಲ; ಸಮುದಾಯಕ್ಕೆ ಎಲ್ಲಾ’ ಎಂಬ ಆಶಯದ ಸಸಿ ನೆಡುತ್ತಿದೆ. ಈ ಸ್ವರಾಜ್ ಪ್ರಣಾಳಿಕೆಗೆ ಕಾಪಿರೈಟ್ ಇಲ್ಲ. ಯಾರೇ ಪ್ರಕಟಿಸಬಹುದು. ದಯವಿಟ್ಟು ಚರ್ಚಿಸಿ, ಟೀಕೆ ಮಾಡಿ, ಸಲಹೆ, ಸೂಚನೆ, ಟಿಪ್ಪಣಿ ನೀಡಿ. ಇದು ಮುಕ್ತವಾಗಿದೆ.

ಕೊನೆಯದಾಗಿ, ನಾಡಿನ ಜಾಗೃತ ಪ್ರಜ್ಞೆಗೆ ಒಂದು ವಿನಂತಿ ಮಾಡುವೆ. ಅದೇನೆಂದರೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರಣಾಳಿಕೆಯ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ನೀಡುವ ಭರವಸೆಗಳು- ಇವುಗಳನ್ನೆಲ್ಲಾ ನೆನಪಿಸುವ ಒಂದು ತಿhisಣಟe bಟoತಿeಡಿs ಪಡೆಯನ್ನು ಹುಟ್ಟು ಹಾಕಬೇಕಾಗಿದೆ. ರಾಜ್ಯಕ್ಕೆ ಹತ್ತು ಜನ ಸಾಕು. ಜಿಲ್ಲೆಗೆ ಮೂರು ಜನ. ರಾಜಕೀಯ ಪಕ್ಷಗಳ ಪ್ರಣಾಳಿಕೆಗಳ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ತಿಂಗಳಿಗೊಮ್ಮೆ ಅವರವರ ಮೂತಿಗೆ ಹಿಡಿಯುವ ಒಂದು ಜಾಗರೂಕ ಪಡೆ ಅತ್ಯಗತ್ಯವಾಗಿದೆ. ಇದರಿಂದ ಹೊಣೆಗೇಡಿ ರಾಜಕಾರಣಕ್ಕೆ ಸ್ವಲ್ಪವಾದರೂ ಹೊಣೆಗಾರಿಕೆ ಬರಬಹುದು. ರಾಜಕಾರಣಕ್ಕೆ ಮಾನಮರ್ಯಾದೆ ತಂದುಕೊಡುವ ದಿಕ್ಕಲ್ಲಿ ಇದು ಮೊದಲ ಹೆಜ್ಜೆಯಾಗಲೂಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...