Homeಮುಖಪುಟಒಂದು whistle blowers ಪಡೆ ಹುಟ್ಟು ಹಾಕೋಣ

ಒಂದು whistle blowers ಪಡೆ ಹುಟ್ಟು ಹಾಕೋಣ

- Advertisement -
- Advertisement -
  • ದೇವನೂರ ಮಹಾದೇವ |

ಈಗ ಚುನಾವಣೆ ನಮ್ಮ ಮುಂದಿದೆ. ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ದೊಡ್ಡದೊಡ್ಡ ನಾಯಕರು ಆಡುವ ಮಾತುಗಳನ್ನು ಕೇಳಿದರೆ ಚುನಾವಣೆ ಅಂದರೆ ಅದು ನಾಡು ಕಟ್ಟುವ ಕೆಲಸ ಅಂದುಕೊಂಡಿಲ್ಲ, ಬದಲಾಗಿ ರಣರಂಗ ಅಂದ್ಕೊಂಡಿದ್ದಾರೆ. ಅದಕ್ಕಾಗಿ ಠೇಂಕಾರದ ಮಾತಾಡ್ತಾರೆ. ಜೊತೆಗೆ – ಜಾದೂ ಭಾಷೇಲಿ ಮಾತಾಡ್ತಾರೆ, ಹರಾಜು ಹಾಕುವ ಭಾಷೇಲಿ ಮಾತಾಡ್ತಾರೆ. ಒಟ್ಟಿನಲ್ಲಿ ಇವರೆಲ್ಲ ಮರಳಲ್ಲಿ ಮನೆ ಕಟ್ಟುತ್ತಿರುವವರಂತೆ ಕಾಣಿಸ್ತಾರೆ.

ಒಂದೇ ಉದಾಹರಣೆ ಸಾಕು, ಬಿಜೆಪಿ ಪದೇ ಪದೇ ಹೇಳ್ತಾ ಇದೆ- “ನಾವು ಕಾಂಗ್ರೆಸ್‍ಮುಕ್ತ ಕರ್ನಾಟಕ ಮಾಡ್ತೇವೆ” ಅಂತ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಕೂಡ ಹೇಳ್ತಾ ಇದೆ- ‘ನಾವು ಬಿಜೆಪಿಮುಕ್ತ ಕರ್ನಾಟಕ ಮಾಡ್ತೇವೆ’ ಅಂತ. ಇವರು ಏನನ್ನು ಮುಕ್ತ ಮಾಡ್ತಾ ಇದ್ದಾರೆ? ತಾನು ಕೂತ ಮರದ ಕೊಂಬೆಯನ್ನೇ ಕತ್ತರಿಸುವವನ ಮೂರ್ಖತನವಲ್ಲವೆ ಇದು? ಜನತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ವಿಧ್ವಂಸಕ ಕೃತ್ಯವಲ್ಲವೆ ಇದು? – ಇದು ಹೊಣೆಗೇಡಿ ರಾಜಕಾರಣ.

ನಾಡಿಗೆ ತುರ್ತಾಗಿ ಬೇಕಾಗಿರುವುದು ಬರಮುಕ್ತ ಕರ್ನಾಟಕ, ನಿರುದ್ಯೋಗ ಮುಕ್ತ ಕರ್ನಾಟಕ. ನಾವು ಈ ಹೊಣೆಗೇಡಿ ರಾಜಕಾರಣಕ್ಕೆ ಇದನ್ನು ನೆನಪಿಸಬೇಕಾಗಿದೆ.

ಈ ಹೊಣೆಗೇಡಿ ರಾಜಕಾರಣದ ಜೊತೆಗೆ ಅಪ್ರಬುದ್ಧ ರಾಜಕಾರಣವೂ ವಿಜೃಂಭಿಸುತ್ತಿದೆ. ಉದಾಹರಣೆಗೆ ‘ವಿಶ್ವೇಶ್ವರಯ್ಯ ಹೆಸರು ಉಚ್ಚಾರಣೆ ಮಾಡೋ ಕೆಲವರಿಗೆ ಬರೋಲ್ಲ’ ಅಂತ ಇವರು ಹೇಳ್ತಾರೆ, ‘ಇವರಿಗೆ ಬಳ್ಳಾರಿ ಹೆಸರು ಉಚ್ಚಾರಣೆ ಮಾಡೋಕೆ ಬರೋಲ್ಲ’ ಅಂತ ಅವರು ಹೇಳ್ತಾರೆ! ಇಂಥವೇ ಮಾತುಗಳು. ನನಗೂ ಉಚ್ಚಾರಣೆ ಬರಲ್ಲಪ್ಪ, ಏನೀಗ? ಇದೇನು ಘನಂದಾರಿ ಚರ್ಚೆಯೆ? ಇಂಥವರಿಗೆ ಏನೆಂದು ಹೇಳಬೇಕು? ‘ನಿಮಗೆಲ್ಲ ವಯಸ್ಸಾಗಿದೆ, ನಿಜ. ಆದರೆ ನೀವು ಪ್ರೈಮರಿ ಶಾಲೆಯಲ್ಲಿ ಇರಬೇಕಾದವರು’ ಎಂದು ಹೇಳಬೇಕಾಗಿದೆ. ಮಾಧ್ಯಮಗಳು ಇಂಥ ಕ್ಷುಲ್ಲಕವನ್ನೆಲ್ಲಾ ಚರ್ಚಿಸಬಾರದು, ದಯವಿಟ್ಟು.

ಮೊನ್ನೆ ಮೊನ್ನೆ ತಾನೇ ಮೈಸೂರಿನಲ್ಲಿ – ‘ಉದ್ಯೋಗಕ್ಕಾಗಿ ಯುವಜನರು’ ಸಂಘಟನೆಯವರು ಪ್ರವಾಸದಲ್ಲಿದ್ದ ನಮ್ಮ ಪ್ರಧಾನಿಗೆ ಒಂದು ಪ್ರಶ್ನೆ ಕೇಳಿದರು- ‘ಕಳೆದ ಲೋಕಸಭಾ ಚುನಾವಣೆಯಲ್ಲಿ ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದಿರಿ. ಕಿಂಚಿತ್ತೂ ಈಡೇರಲಿಲ್ಲ. ಈ ಬಗ್ಗೆ ಮಾತಾಡಿ’ ಅಂತ. ಇದಕ್ಕೆ ಉತ್ತರಿಸಬೇಕಾದ್ದು ಮಾತು ಕೊಟ್ಟ ಪ್ರಧಾನಿಯವರ ಹೊಣೆಗಾರಿಕೆ. ಆದರೆ ಅವರು ಉತ್ತರಿಸಲಿಲ್ಲ. ಬದಲಾಗಿ, ಮುಂದಿನ ಸಭೆಯಲ್ಲಿ ಅವರು ಆಡಿದ ಮಾತುಗಳು ಏನು ಗೊತ್ತೆ?- ‘ನಾವು ಕಾಮ್‍ಧಾರಿಗಳು, ಅವರು (ಅಂದರೆ ವಿರೋಧ ಪಕ್ಷದವರು) ನಾಮ್‍ಧಾರಿಗಳು’ ಅಂತ! ನುಣುಚಿಕೊಳ್ಳುವ ಇದು ದ್ರೋಹವಲ್ಲವೆ? ಇದು ಮಹಾದ್ರೋಹ. ಇವರು ನಾಡನ್ನು ಕಟ್ಟುತ್ತಿದ್ದಾರೋ ಅಥವ ಪದಗಳನ್ನು ಕಟ್ಟುತ್ತಿದ್ದಾರೋ? ಈ ರಾಜಕಾರಣ ನೋಡುತ್ತಿದ್ದರೆ ಜಿಗುಪ್ಸೆಯಾಗುತ್ತದೆ. ಭಯವೂ ಆಗುತ್ತದೆ.

ಕೆ.ಎಸ್.ಪುಟ್ಟಣ್ಣಯ್ಯ

ಇನ್ನೊಂದು ರಾಜಕಾರಣದ ಮಾತಿನ ಠೇಂಕಾರ; “ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ಭ್ರಷ್ಟರನ್ನೆಲ್ಲಾ ಜೈಲಿಗೆ ಅಟ್ಟುತ್ತೇವೆ”. ಈ ಮಾತಿಗೆ ನಮ್ಮ ಕೆಎಸ್ ಪುಟ್ಟಣ್ಣಯ್ಯ ಹೇಳ್ತಾ ಇದ್ದರು; “ವಿಧಾನಸೌಧದ ಬಾಗಿಲಿಗೆ ಒಂದು ‘ಭ್ರಷ್ಟರ ತಡೆ ಮಿಷಿನ್’ ಇಟ್ಟುಬಿಡೋಣ. ಭ್ರಷ್ಟರು ಬಂದರೆ ಆ ಬಾಗಿಲು ಆಟೋಮ್ಯಾಟಿಕ್ ಮುಚ್ಕೋಬೇಕು – ಅಂಥದ್ದು. ಆ ಮಿಷಿನ್ನೂ ಲಂಚ ಈಸ್ಕಂಡು ಒಳಿಕೆ ಬಿಡ್ದೇ ಇದ್ರೆ – ವಿಧಾನ ಸೌಧದ ಒಳೀಕೆ ಎಷ್ಟು ಜನರಪ್ಪ ಹೋಗೌರು?” ಅಂತಿದ್ದರು. ಇದು ರಾಜಕಾರಣದ ಇಂದಿನ ಪರಿಸ್ಥಿತಿ. ವ್ಯವಸ್ಥೇನೆ ಭ್ರಷ್ಟಗೊಂಡಿದೆ.

ಇಂಥ ದುರಂತ ರಾಜಕಾರಣದ ಸಂದರ್ಭದಲ್ಲಿ- ಸ್ವರಾಜ್ ಇಂಡಿಯಾ ತನ್ನ ಪ್ರಣಾಳಿಕೆ ಬಿಡುಗಡೆ ಮಾಡ್ತಾ ಇದೆ. ‘ಕೆಲವರಿಗೆ ಅಲ್ಲ; ಸಮುದಾಯಕ್ಕೆ ಎಲ್ಲಾ’ ಎಂಬ ಆಶಯದ ಸಸಿ ನೆಡುತ್ತಿದೆ. ಈ ಸ್ವರಾಜ್ ಪ್ರಣಾಳಿಕೆಗೆ ಕಾಪಿರೈಟ್ ಇಲ್ಲ. ಯಾರೇ ಪ್ರಕಟಿಸಬಹುದು. ದಯವಿಟ್ಟು ಚರ್ಚಿಸಿ, ಟೀಕೆ ಮಾಡಿ, ಸಲಹೆ, ಸೂಚನೆ, ಟಿಪ್ಪಣಿ ನೀಡಿ. ಇದು ಮುಕ್ತವಾಗಿದೆ.

ಕೊನೆಯದಾಗಿ, ನಾಡಿನ ಜಾಗೃತ ಪ್ರಜ್ಞೆಗೆ ಒಂದು ವಿನಂತಿ ಮಾಡುವೆ. ಅದೇನೆಂದರೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರಣಾಳಿಕೆಯ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ನೀಡುವ ಭರವಸೆಗಳು- ಇವುಗಳನ್ನೆಲ್ಲಾ ನೆನಪಿಸುವ ಒಂದು ತಿhisಣಟe bಟoತಿeಡಿs ಪಡೆಯನ್ನು ಹುಟ್ಟು ಹಾಕಬೇಕಾಗಿದೆ. ರಾಜ್ಯಕ್ಕೆ ಹತ್ತು ಜನ ಸಾಕು. ಜಿಲ್ಲೆಗೆ ಮೂರು ಜನ. ರಾಜಕೀಯ ಪಕ್ಷಗಳ ಪ್ರಣಾಳಿಕೆಗಳ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ತಿಂಗಳಿಗೊಮ್ಮೆ ಅವರವರ ಮೂತಿಗೆ ಹಿಡಿಯುವ ಒಂದು ಜಾಗರೂಕ ಪಡೆ ಅತ್ಯಗತ್ಯವಾಗಿದೆ. ಇದರಿಂದ ಹೊಣೆಗೇಡಿ ರಾಜಕಾರಣಕ್ಕೆ ಸ್ವಲ್ಪವಾದರೂ ಹೊಣೆಗಾರಿಕೆ ಬರಬಹುದು. ರಾಜಕಾರಣಕ್ಕೆ ಮಾನಮರ್ಯಾದೆ ತಂದುಕೊಡುವ ದಿಕ್ಕಲ್ಲಿ ಇದು ಮೊದಲ ಹೆಜ್ಜೆಯಾಗಲೂಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...