Homeಚಳವಳಿಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಈ ಊರಿನಲ್ಲಿ ನಾಲ್ಕು ವರ್ಷದಲ್ಲಿ ಎರಡು ಅತ್ಯಾಚಾರ, ಒಂದು ದಲಿತ ದೌರ್ಜನ್ಯ ಪ್ರಕರಣ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ದಲಿತ ಯುವಕನಿಗೆ ಸಾಮೂಹಿಕ ಥಳಿತ, ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ.. ಇವಿಷ್ಟು ಘಟನೆಗಳು ನಾಲ್ಕು ವರ್ಷಗಳ ಅವಧಿಯಲ್ಲಿ ಒಂದೇ ಪ್ರದೇಶದಲ್ಲಿ ನಡೆದಿರುವುದು ಆಡಳಿತ ಯಂತ್ರಾಂಗ ಸಂಪೂರ್ಣ ಕುಸಿದಿರುವುದರ ಜೊತೆಗೆ ಮೇಲ್ಜಾತಿ ಫ್ಯೂಡಲ್ ಗಳ ಅಟ್ಟಹಾಸ ಮುಂದುವರೆದಿರುವುದರ ಸ್ಪಷ್ಟ ನಿದರ್ಶನವಾಗಿದೆ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮೇ 30ರ ಗುರುವಾರ ಉತ್ತರಖಂಡದ ತೆಹ್ರಿಯಲ್ಲಿ ನಡೆದಿದೆ. ಆರೋಪಿ ನಿತಿನ್ ಸಿಂಗ್ ಪವಾರ್ (28) ಮೇಲ್ಜಾತಿಗೆ ಸೇರಿದವನಾಗಿದ್ದು, ಪೊಲೀಸರು ಇವನನ್ನು ಈಗಾಗಲೇ ಬಂಧಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾಲ್ಕು ವರ್ಷಗಳ ಹಿಂದೆ ಇದೇ ಬಾಲಕಿಯ ಸಂಬಂಧಿಯೊಬ್ಬಳನ್ನು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಘಟನೆಯೂ ಇದೇ ಊರಲ್ಲಿ ನಡೆದಿತ್ತು ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಲಿತ ಯುವಕನೊಬ್ಬ ಮದುವೆ ಸಮಾರಂಭವೊಂದರಲ್ಲಿ ಮೇಲ್ಜಾತಿ ಸಮುದಾಯದವರೊಂದಿಗೆ ಊಟ ಮಾಡಿದ ಎಂಬ ಆಕ್ರೋಶದಿಂದ ಯುವಕನನ್ನು ಸಾಯುವ ಹಾಗೆ ಹೊಡೆದಿದ್ದ ಘಟನೆಯೂ ಇತ್ತೀಚೆಗೆ ಇದೇ ಪ್ರದೇಶದ ನೈನಿಭಾಗ್ ನಲ್ಲಿ ನಡೆದಿತ್ತು.

ಪ್ರಸ್ತುತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಕೆಂಪ್ತಿ ಪೊಲೀಸ್ ಠಾಣೆ ಅಧಿಕಾರಿ ಎಂ.ಎಲ್. ಜಖ್ಮೋಲ್ “ ಈ ಘಟನೆ ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದ್ದು, ಬಾಲಕಿಯ ಪೋಷಕರು ಕೂಲಿ ಕೆಲಸಕ್ಕೆ ಹೋಗಿದ್ದರು. ಬಾಲಕಿಯು ನೀರು ತರಲು ಹೋದ ಸಮಯದಲ್ಲಿ ಘಟನೆ ನಡೆದಿದೆ.  ಆರೋಪಿಯು ಬಾಲಕಿಯ ಮನೆ ಹತ್ತಿರವೇ ಅಂಗಡಿಯೊಂದನ್ನು ನಡೆಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ’ ಎಂದಿದ್ದಾರೆ.

‘ತುಂಬಾ ಸಮಯದ ಬಳಿಕೆ ಬಾಲಕಿಯು ಅಳುತ್ತಾ ಮನೆಗೆ ಬಂದದ್ದನ್ನು ನೋಡಿ ಪೋಷಕರು ಕಾರಣ ಕೇಳಿದಾಗ ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾರೆ. ಗುರುವಾರ ಸಂಜೆಯೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ’ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸದ್ಯಕ್ಕೆ ಭಾರತೀಯ ನೀತಿ ಸಂಹಿತೆ ಪ್ರಕಾರ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಹಾಗೂ ಎಸ್ ಸಿ/ಎಸ್ ಟಿ ಅಟ್ರಾಸಿಟಿ ಕಾಯ್ದೆ ಅಡಿ ದೂರು ದಾಖಲಾಗಿದೆ. ಆದರೆ ಪದೇ ಪದೇ ಈ ರೀತಿಯ ಅತ್ಯಾಚಾರ, ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿದ್ದರೂ ಇಲ್ಲಿನ ಪೊಲೀಸ್ ಮತ್ತು ನಾಗರೀಕ ಸಮಾಜ ಕಣ್ಣು ಮಚ್ಚಿ ಕುಳಿತಿರುವುದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ಜಾತಿ ಪದ್ದತಿ ಮತ್ತು ಜಾತಿ ದೌರ್ಜನ್ಯ ಇಂದಿಗೂ ಜಾರಿಯಲ್ಲಿರುವುದರ ಸ್ಪಷ್ಟ ಉದಾಹರಣೆ ಇದಾಗಿದ್ದು ಇದನ್ನು ತಡೆಯಲು ಪ್ರಭುತ್ವ ಮತ್ತು ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಿಲ್ಲ ಎಂಬುದು ಈ ಪ್ರಕರಣಗಳಿಂದ ಕಂಡುಬಂದಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ಥರು ದಲಿತರಾಗಿದ್ದು ಆರೋಪಿಗಳು ಸವರ್ಣಿಯ ಜಾತಿಯವರಾಗಿದ್ದಾರೆ. ತಮ್ಮ ಜಾತಿ ಬಲ, ಅಧಿಕಾರ ಬಲ ಬಳಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಸಹ ಪದೇ ಪದೇ ಇಂತಹ ಘೋರ ಘಟನೆಗಳು ಜರುಗಲು ಕಾರಣವಾಗಿದೆ.

ಈ ರೀತಿಯ ಘಟನೆಗಳು ನವಭಾರತದಲ್ಲಿ ಮುಂದುವರೆಯುತ್ತಿರುವುದು ಮಾನವಕುಲಕ್ಕೆ ನಾಚಿಕೆಗೇಡಿನ ಸಂಗತಿಯಾಗಿದ್ದು ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ದನಿಯೆತ್ತದೆ ಇದಕ್ಕೆ ಪರಿಹಾರವಿಲ್ಲ. ಅಂತಹ ದಿಟ್ಟ ಹೋರಾಟ ಆದಷ್ಟು ಬೇಗ ಮೂಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...