Homeಚಳವಳಿಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಈ ಊರಿನಲ್ಲಿ ನಾಲ್ಕು ವರ್ಷದಲ್ಲಿ ಎರಡು ಅತ್ಯಾಚಾರ, ಒಂದು ದಲಿತ ದೌರ್ಜನ್ಯ ಪ್ರಕರಣ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ದಲಿತ ಯುವಕನಿಗೆ ಸಾಮೂಹಿಕ ಥಳಿತ, ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ.. ಇವಿಷ್ಟು ಘಟನೆಗಳು ನಾಲ್ಕು ವರ್ಷಗಳ ಅವಧಿಯಲ್ಲಿ ಒಂದೇ ಪ್ರದೇಶದಲ್ಲಿ ನಡೆದಿರುವುದು ಆಡಳಿತ ಯಂತ್ರಾಂಗ ಸಂಪೂರ್ಣ ಕುಸಿದಿರುವುದರ ಜೊತೆಗೆ ಮೇಲ್ಜಾತಿ ಫ್ಯೂಡಲ್ ಗಳ ಅಟ್ಟಹಾಸ ಮುಂದುವರೆದಿರುವುದರ ಸ್ಪಷ್ಟ ನಿದರ್ಶನವಾಗಿದೆ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮೇ 30ರ ಗುರುವಾರ ಉತ್ತರಖಂಡದ ತೆಹ್ರಿಯಲ್ಲಿ ನಡೆದಿದೆ. ಆರೋಪಿ ನಿತಿನ್ ಸಿಂಗ್ ಪವಾರ್ (28) ಮೇಲ್ಜಾತಿಗೆ ಸೇರಿದವನಾಗಿದ್ದು, ಪೊಲೀಸರು ಇವನನ್ನು ಈಗಾಗಲೇ ಬಂಧಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾಲ್ಕು ವರ್ಷಗಳ ಹಿಂದೆ ಇದೇ ಬಾಲಕಿಯ ಸಂಬಂಧಿಯೊಬ್ಬಳನ್ನು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಘಟನೆಯೂ ಇದೇ ಊರಲ್ಲಿ ನಡೆದಿತ್ತು ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಲಿತ ಯುವಕನೊಬ್ಬ ಮದುವೆ ಸಮಾರಂಭವೊಂದರಲ್ಲಿ ಮೇಲ್ಜಾತಿ ಸಮುದಾಯದವರೊಂದಿಗೆ ಊಟ ಮಾಡಿದ ಎಂಬ ಆಕ್ರೋಶದಿಂದ ಯುವಕನನ್ನು ಸಾಯುವ ಹಾಗೆ ಹೊಡೆದಿದ್ದ ಘಟನೆಯೂ ಇತ್ತೀಚೆಗೆ ಇದೇ ಪ್ರದೇಶದ ನೈನಿಭಾಗ್ ನಲ್ಲಿ ನಡೆದಿತ್ತು.

ಪ್ರಸ್ತುತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಕೆಂಪ್ತಿ ಪೊಲೀಸ್ ಠಾಣೆ ಅಧಿಕಾರಿ ಎಂ.ಎಲ್. ಜಖ್ಮೋಲ್ “ ಈ ಘಟನೆ ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದ್ದು, ಬಾಲಕಿಯ ಪೋಷಕರು ಕೂಲಿ ಕೆಲಸಕ್ಕೆ ಹೋಗಿದ್ದರು. ಬಾಲಕಿಯು ನೀರು ತರಲು ಹೋದ ಸಮಯದಲ್ಲಿ ಘಟನೆ ನಡೆದಿದೆ.  ಆರೋಪಿಯು ಬಾಲಕಿಯ ಮನೆ ಹತ್ತಿರವೇ ಅಂಗಡಿಯೊಂದನ್ನು ನಡೆಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ’ ಎಂದಿದ್ದಾರೆ.

‘ತುಂಬಾ ಸಮಯದ ಬಳಿಕೆ ಬಾಲಕಿಯು ಅಳುತ್ತಾ ಮನೆಗೆ ಬಂದದ್ದನ್ನು ನೋಡಿ ಪೋಷಕರು ಕಾರಣ ಕೇಳಿದಾಗ ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾರೆ. ಗುರುವಾರ ಸಂಜೆಯೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ’ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸದ್ಯಕ್ಕೆ ಭಾರತೀಯ ನೀತಿ ಸಂಹಿತೆ ಪ್ರಕಾರ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಹಾಗೂ ಎಸ್ ಸಿ/ಎಸ್ ಟಿ ಅಟ್ರಾಸಿಟಿ ಕಾಯ್ದೆ ಅಡಿ ದೂರು ದಾಖಲಾಗಿದೆ. ಆದರೆ ಪದೇ ಪದೇ ಈ ರೀತಿಯ ಅತ್ಯಾಚಾರ, ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿದ್ದರೂ ಇಲ್ಲಿನ ಪೊಲೀಸ್ ಮತ್ತು ನಾಗರೀಕ ಸಮಾಜ ಕಣ್ಣು ಮಚ್ಚಿ ಕುಳಿತಿರುವುದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ಜಾತಿ ಪದ್ದತಿ ಮತ್ತು ಜಾತಿ ದೌರ್ಜನ್ಯ ಇಂದಿಗೂ ಜಾರಿಯಲ್ಲಿರುವುದರ ಸ್ಪಷ್ಟ ಉದಾಹರಣೆ ಇದಾಗಿದ್ದು ಇದನ್ನು ತಡೆಯಲು ಪ್ರಭುತ್ವ ಮತ್ತು ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಿಲ್ಲ ಎಂಬುದು ಈ ಪ್ರಕರಣಗಳಿಂದ ಕಂಡುಬಂದಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ಥರು ದಲಿತರಾಗಿದ್ದು ಆರೋಪಿಗಳು ಸವರ್ಣಿಯ ಜಾತಿಯವರಾಗಿದ್ದಾರೆ. ತಮ್ಮ ಜಾತಿ ಬಲ, ಅಧಿಕಾರ ಬಲ ಬಳಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಸಹ ಪದೇ ಪದೇ ಇಂತಹ ಘೋರ ಘಟನೆಗಳು ಜರುಗಲು ಕಾರಣವಾಗಿದೆ.

ಈ ರೀತಿಯ ಘಟನೆಗಳು ನವಭಾರತದಲ್ಲಿ ಮುಂದುವರೆಯುತ್ತಿರುವುದು ಮಾನವಕುಲಕ್ಕೆ ನಾಚಿಕೆಗೇಡಿನ ಸಂಗತಿಯಾಗಿದ್ದು ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ದನಿಯೆತ್ತದೆ ಇದಕ್ಕೆ ಪರಿಹಾರವಿಲ್ಲ. ಅಂತಹ ದಿಟ್ಟ ಹೋರಾಟ ಆದಷ್ಟು ಬೇಗ ಮೂಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...