Homeಚಳವಳಿಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಈ ಊರಿನಲ್ಲಿ ನಾಲ್ಕು ವರ್ಷದಲ್ಲಿ ಎರಡು ಅತ್ಯಾಚಾರ, ಒಂದು ದಲಿತ ದೌರ್ಜನ್ಯ ಪ್ರಕರಣ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ದಲಿತ ಯುವಕನಿಗೆ ಸಾಮೂಹಿಕ ಥಳಿತ, ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ.. ಇವಿಷ್ಟು ಘಟನೆಗಳು ನಾಲ್ಕು ವರ್ಷಗಳ ಅವಧಿಯಲ್ಲಿ ಒಂದೇ ಪ್ರದೇಶದಲ್ಲಿ ನಡೆದಿರುವುದು ಆಡಳಿತ ಯಂತ್ರಾಂಗ ಸಂಪೂರ್ಣ ಕುಸಿದಿರುವುದರ ಜೊತೆಗೆ ಮೇಲ್ಜಾತಿ ಫ್ಯೂಡಲ್ ಗಳ ಅಟ್ಟಹಾಸ ಮುಂದುವರೆದಿರುವುದರ ಸ್ಪಷ್ಟ ನಿದರ್ಶನವಾಗಿದೆ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮೇ 30ರ ಗುರುವಾರ ಉತ್ತರಖಂಡದ ತೆಹ್ರಿಯಲ್ಲಿ ನಡೆದಿದೆ. ಆರೋಪಿ ನಿತಿನ್ ಸಿಂಗ್ ಪವಾರ್ (28) ಮೇಲ್ಜಾತಿಗೆ ಸೇರಿದವನಾಗಿದ್ದು, ಪೊಲೀಸರು ಇವನನ್ನು ಈಗಾಗಲೇ ಬಂಧಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾಲ್ಕು ವರ್ಷಗಳ ಹಿಂದೆ ಇದೇ ಬಾಲಕಿಯ ಸಂಬಂಧಿಯೊಬ್ಬಳನ್ನು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಘಟನೆಯೂ ಇದೇ ಊರಲ್ಲಿ ನಡೆದಿತ್ತು ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಲಿತ ಯುವಕನೊಬ್ಬ ಮದುವೆ ಸಮಾರಂಭವೊಂದರಲ್ಲಿ ಮೇಲ್ಜಾತಿ ಸಮುದಾಯದವರೊಂದಿಗೆ ಊಟ ಮಾಡಿದ ಎಂಬ ಆಕ್ರೋಶದಿಂದ ಯುವಕನನ್ನು ಸಾಯುವ ಹಾಗೆ ಹೊಡೆದಿದ್ದ ಘಟನೆಯೂ ಇತ್ತೀಚೆಗೆ ಇದೇ ಪ್ರದೇಶದ ನೈನಿಭಾಗ್ ನಲ್ಲಿ ನಡೆದಿತ್ತು.

ಪ್ರಸ್ತುತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಕೆಂಪ್ತಿ ಪೊಲೀಸ್ ಠಾಣೆ ಅಧಿಕಾರಿ ಎಂ.ಎಲ್. ಜಖ್ಮೋಲ್ “ ಈ ಘಟನೆ ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದ್ದು, ಬಾಲಕಿಯ ಪೋಷಕರು ಕೂಲಿ ಕೆಲಸಕ್ಕೆ ಹೋಗಿದ್ದರು. ಬಾಲಕಿಯು ನೀರು ತರಲು ಹೋದ ಸಮಯದಲ್ಲಿ ಘಟನೆ ನಡೆದಿದೆ.  ಆರೋಪಿಯು ಬಾಲಕಿಯ ಮನೆ ಹತ್ತಿರವೇ ಅಂಗಡಿಯೊಂದನ್ನು ನಡೆಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ’ ಎಂದಿದ್ದಾರೆ.

‘ತುಂಬಾ ಸಮಯದ ಬಳಿಕೆ ಬಾಲಕಿಯು ಅಳುತ್ತಾ ಮನೆಗೆ ಬಂದದ್ದನ್ನು ನೋಡಿ ಪೋಷಕರು ಕಾರಣ ಕೇಳಿದಾಗ ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾರೆ. ಗುರುವಾರ ಸಂಜೆಯೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ’ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸದ್ಯಕ್ಕೆ ಭಾರತೀಯ ನೀತಿ ಸಂಹಿತೆ ಪ್ರಕಾರ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಹಾಗೂ ಎಸ್ ಸಿ/ಎಸ್ ಟಿ ಅಟ್ರಾಸಿಟಿ ಕಾಯ್ದೆ ಅಡಿ ದೂರು ದಾಖಲಾಗಿದೆ. ಆದರೆ ಪದೇ ಪದೇ ಈ ರೀತಿಯ ಅತ್ಯಾಚಾರ, ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿದ್ದರೂ ಇಲ್ಲಿನ ಪೊಲೀಸ್ ಮತ್ತು ನಾಗರೀಕ ಸಮಾಜ ಕಣ್ಣು ಮಚ್ಚಿ ಕುಳಿತಿರುವುದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ಜಾತಿ ಪದ್ದತಿ ಮತ್ತು ಜಾತಿ ದೌರ್ಜನ್ಯ ಇಂದಿಗೂ ಜಾರಿಯಲ್ಲಿರುವುದರ ಸ್ಪಷ್ಟ ಉದಾಹರಣೆ ಇದಾಗಿದ್ದು ಇದನ್ನು ತಡೆಯಲು ಪ್ರಭುತ್ವ ಮತ್ತು ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಿಲ್ಲ ಎಂಬುದು ಈ ಪ್ರಕರಣಗಳಿಂದ ಕಂಡುಬಂದಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ಥರು ದಲಿತರಾಗಿದ್ದು ಆರೋಪಿಗಳು ಸವರ್ಣಿಯ ಜಾತಿಯವರಾಗಿದ್ದಾರೆ. ತಮ್ಮ ಜಾತಿ ಬಲ, ಅಧಿಕಾರ ಬಲ ಬಳಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಸಹ ಪದೇ ಪದೇ ಇಂತಹ ಘೋರ ಘಟನೆಗಳು ಜರುಗಲು ಕಾರಣವಾಗಿದೆ.

ಈ ರೀತಿಯ ಘಟನೆಗಳು ನವಭಾರತದಲ್ಲಿ ಮುಂದುವರೆಯುತ್ತಿರುವುದು ಮಾನವಕುಲಕ್ಕೆ ನಾಚಿಕೆಗೇಡಿನ ಸಂಗತಿಯಾಗಿದ್ದು ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ದನಿಯೆತ್ತದೆ ಇದಕ್ಕೆ ಪರಿಹಾರವಿಲ್ಲ. ಅಂತಹ ದಿಟ್ಟ ಹೋರಾಟ ಆದಷ್ಟು ಬೇಗ ಮೂಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...