Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...