Homeಸಾಮಾಜಿಕಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

ಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

- Advertisement -
- Advertisement -

 ಡಾ. ಕಾರ್ತಿಕ್ ಬಿಟ್ಟು
ಕನ್ನಡಕ್ಕೆ: ರಾಜಶೇಖರ ಅಕ್ಕಿ |

ನಿಮ್ಮ ಕಣ್ಣುಗಳನ್ನು ಮುಚ್ಚಿಕೊಳ್ಳಿ, ಅದರೊಂದಿಗೆ ನಿಮ್ಮ ಕೈಗಳನ್ನು ಮೇಲೆತ್ತಿ. ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಕಾಣಿಸದಿದ್ದರೂ ನೀವು ನಿಮ್ ಕೈಗಳನ್ನು ಮೇಲಕ್ಕೆತ್ತಿದ್ದು ನಿಮಗೆ ಖಂಡಿತವಾಗಿಯೂ ಅನುಭವವಾಗುತ್ತದೆ. ನಿಮ್ಮ ಕೈಗಳು ಎಲ್ಲಿವೆ ಎನ್ನುವುದು ನಿಮಗೆ ತಿಳಿಯುತ್ತದೆ. ಹೀಗೇಕೆ ಎಂದರೆ, ನಮ್ಮ ಮಿದುಳು ದೇಹದ ಅಂಗಗಳ ಆಂತರಿಕ ಸ್ಪರ್ಶವನ್ನು ಗ್ರಹಿಸಿ, ಯಾವ ಅಂಗ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳುವಲ್ಲಿ ಸಶಕ್ತವಾಗಿದೆ.
ಯಾವುದಾದರೊಂದು ಅಪಘಾತಕ್ಕೀಡಾಗಿ ತಮ್ಮ ಕೈಯನ್ನು ಕಳೆದುಕೊಂಡ ವ್ಯಕ್ತಿಗಳಿಗೆ ಈಗ ಇಲ್ಲದಿರುವ ಆ ಕೈ ಇನ್ನೂ ಅಲ್ಲಿಯೇ ಇದೆ ಎನ್ನುವ ಅನುಭವ ಆಗುತ್ತಿರುತ್ತದೆ. ಆ ಕೈ ಅಲ್ಲಿ ಇಲ್ಲದಿರುವುದನ್ನು ಅವರು ಕಾಣಬಹುದು; ಆದರೆ ದೇಹದ ನರಗಳಿಂದ ಬರುವ ಮಾಹಿತಿಯಿಂದ ಆ ಕೈ ಇನ್ನೂ ಅಲ್ಲೇ ಇದೆ ಎಂದು ಮಿದುಳಿನ ಭಾಗ ಅರ್ಥೈಸುತ್ತದೆ. ಇದು ಆ ಕೈ ಜೊತೆಗೆ ಅಲ್ಲಿಯ ನರಗಳನ್ನೂ ತೆಗೆದುಹಾಕಿದ್ದರೂ ಈ ಅನುಭವ ಆಗುತ್ತಲೇ ಇರುತ್ತದೆ. ದೇಹದಲ್ಲಿ ಒಂದು ಅಂಗ ಇರದೇ ಇದ್ದರೂ, ಒಬ್ಬ ವ್ಯಕ್ತಿಯ ದೇಹದಿಂದ ಇಲ್ಲದೇ ಇರುವ ಅಂಗವನ್ನು ಹೇಗೆ ಅನುಭವಿಸಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.
ಕೈಗಳು, ಕಾಲುಗಳು ಹೀಗೆ ಗಂಡು ಮತ್ತು ಹೆಣ್ಣಿನ ದೇಹಗಳು ಬಹುತೇಕವಾಗಿ ಒಂದೇ ಬಗೆಯವಾಗಿರುತ್ತವೆ. ಜನನಾಂಗದ ಮತ್ತು ಎದೆಯ ಭಾಗಗಳು ಬೇರೆಯಾಗಿರುತ್ತವೆ. ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಭವವನ್ನು ತಿಳಿಯುವ ಒಂದು ವಿಧಾನವೇನೆಂದರೆ, ನಮ್ಮ ದೇಹದಲ್ಲಿ ಇರದಿರುವ ಅಥವಾ ನಮ್ಮ ದೇಹದಲ್ಲಿದ್ದ ಅಂಗಕ್ಕಿಂತ ಬೇರೆಯದೇ ಆದ ಒಂದು ಅಂಗದ ಸಂವೇದನೆಯನ್ನು ನಮ್ಮ ಮಿದುಳು ಅಪೇಕ್ಷಿಸುವುದು. ಹಾಗಾಗಿ ಒಬ್ಬ ಟ್ರಾನ್ಸ್‍ಜೆಂಡರ್ ಮಹಿಳೆ ತನಗೆ ಇಲ್ಲದಿರುವ ಸ್ತನಗಳು ಇದ್ದಂತೆ ಭಾವಿಸಬಹುದು. ಹಾಗೂ ತಮ್ಮ ದೇಹದಲ್ಲಿರುವ ಒಂದು ಅಂಗದ ಗ್ರಹಿಕೆ ಮಿದುಳಿಗೆ ಇಲ್ಲದೇ ಇದ್ದಾಗ ತಮ್ಮ ಜನನಾಂಗವನ್ನು ನೋಡಿ ಆ ವ್ಯಕ್ತಿಗಳು ಗೊಂದಲಕ್ಕೊಳಗಾಗಬಹುದು. ಅದರಂತೆ ಟ್ರಾನ್ಸ್‍ಜೆಂಡರ್ ಪುರುಷರು ಎದೆಯ ಭಾಗದಲ್ಲಿ ಒಂದು ರೀತಿಯ ಭಾರವನ್ನು ಅನುಭವಿಸಿ ಗೊಂದಲಕ್ಕೊಳಗಾಗಬಹುದು, ಏಕೆಂದರೆ ಅವರ ಮಿದುಳು ಅದನ್ನು ಅಪೇಕ್ಷಿಸುವುದಿಲ್ಲ. ಅನೇಕ ಟ್ರಾನ್ಸ್‍ಜೆಂಡರ್ ಪುರುಷರು ಪುರುಷರಿಗಿರುವ ಜನನಾಂಗಗಳು ಇರುವಂತೇ ಅನುಭವವಕ್ಕೀಡಾಗಬಹುದು. ವ್ಯಕ್ತಿಗಳ ಅನುವಂಶಿಕ ವ್ಯತ್ಯಾಸದ (genetic variation) ಆಧಾರದ ಮೇಲೆ ದೇಹ ಮತ್ತು ಮಿದುಳುಗಳೆರಡೂ ಸ್ವಲ್ಪ ಮಟ್ಟಿಗೆ ವಿಭಿನ್ನವಾಗಿ ಬೆಳವಣಿಗೆಯಾಗಿ, ತಮ್ಮ ದೇಹದಿಂದ ಅವರ ಮಿದುಳು ಮತ್ತು ದೇಹದ ಅಪೇಕ್ಷೆಗಳು ಬೇರೆಬೇರೆಯಾಗುವುದನ್ನು ಡಿಸ್‍ಫೋರಿಯಾ ಎಂದು ಕರೆಯುತ್ತಾರೆ.
ಇದನ್ನು ತಿಳಿದುಕೊಳ್ಳಲು ಇದನ್ನು ಊಹಿಸಿ; ನಾಳೆ ಬೆಳಗ್ಗೆ ನೀವು ನಿದ್ರೆಯಿಂದ ಎದ್ದಾಗ, ನಿಮ್ಮ ಮಿದುಳು ಮತ್ತು ಮನೋಭಾವಗಳಲ್ಲಿ ಯಾವುದೇ ಬದಲಾವಣೆ ಆಗದೆ, ನಿಮ್ಮ ಭುಜದಿಂದ ಒಂದು ಹೆಚ್ಚಿನ ಕೈ ಉದ್ಭವಿಸಿದೆ ಎಂದುಕೊಳ್ಳಿ. ಈ ಹೊಸ ಕೈ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿಲ್ಲ ಎಂದು ಅಂದುಕೊಳ್ಳೊಣ. ಆದರೂ ಏನೋ ಕಿರಿಕಿರಿ ಅನುಭವಿಸುತ್ತೀರಿ, ಇರಬಾರದ್ದೇಕಿದೇ ಎನ್ನುವ ತೊಂದರೆ ಇರುತ್ತದೆ. ಈ ಅಂಗದಿಂದ ನಿಮಗೆ ಉಂಟಾಗುವ ಅಸೌಖ್ಯದ ಅನುಭವವು, ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಈ ಹೊಸ ಅಂಗ ಎಷ್ಟು ಅಡ್ಡಿಪಡಿಸುತ್ತೆ ಎನ್ನುವುದರ ಜೊತೆಗೆ ನೀವು ಮುಂಚೆ ಮಾಡುತ್ತಿದ್ದ ದೈನಂದಿನ ಚಟುವಟಿಕೆಗಳನ್ನು ಹಾಗೆಯೇ ಮುಂದುವರೆಸಲು ಈ ಅಂಗದಿಂದ ಎಷ್ಟು ಅಡೆತಡೆ ಎದುರಾಗುತ್ತದೆ ಎಂಬುದನ್ನೂ ಸೇರಿ ಅವಲಂಬಿಸಿದೆ.
ಅದರ ಮೇಲೆ, ನೀವು ಎದುರಿಸುವ ಎಲ್ಲಾ ಜನರೂ ಆಶ್ಚರ್ಯ ಹಾಗೂ ಕೌತುಕದಿಂದ ಪ್ರತಿಕ್ರಿಯಿಸಿದಾಗ, ನಿಮ್ಮನ್ನು ಭೇಟಿಯಾಗುವ ಎಲ್ಲರೂ ನಿಮ್ಮ ಭುಜದಿಂದ ಈ ಕೈ ಏಕೆ ಉದ್ಭವಿಸಿದೆ ಎಂದು ಕೇಳಿದಾಗ, ನೀವು ಸಾರ್ವಜನಿಕ ಸಾರಿಗೆಯನ್ನು ಬಳಸಿದಲ್ಲಿ ನೂರಾರು ಜನರು ನಿಮ್ಮನ್ನು ನೋಡಿ ಆಶ್ಚರ್ಯ ಮತ್ತು ಕೌತುಕ ವ್ಯಕ್ತಪಡಿಸಿ, ತಮ್ಮಲ್ಲೇ ಮಾತನಾಡಿಕೊಳ್ಳುತ್ತ ನಿಮ್ಮನ್ನು ಗೇಲಿ ಮಾಡಿದಾಗ, ಇದೇನು ಎಂದು ಕೇಳಿದಾಗ, ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿ ಯಾವ ಅನುಭವಗಳಿಂದ ಹಾದು ಹೋಗಬೇಕಾಗುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ. ದೈಹಿಕ ಅಂಗವೈಕಲ್ಯತೆಯುಳ್ಳವರೂ ಇಂತಹ ಅನುಭವ ಹೊಂದಿರುತ್ತಾರೆ.
ಈಗ ಇನ್ನೊಂದು ಪ್ರಸಂಗವನ್ನು ಊಹಿಸಿ, ನೀವು ಬೆಳಗ್ಗೆ ಎದ್ದಾಗ, ನೀವು ಗಂಡಾಗಿದ್ದರೆ ನಿಮ್ಮ ದೇಹ ಹೆಣ್ಣಿನಂತೆ, ಹೆಣ್ಣಾಗಿದ್ದರೆ ಗಂಡಿನಂತೆ ಬದಲಾಗಿದೆ. ಜನರೊಂದಿಗೆ ವ್ಯವಹರಿಸುವಾಗ ಎಷ್ಟು ಬಾರಿ ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ನೋಡಲಾಗುತ್ತದೆ ಹಾಗೂ ಎಷ್ಟು ಬಾರಿ ನಿಮ್ಮನ್ನು ನೋಡಿ ನಗಲಾಗುತ್ತದೆ, ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನುವುದನ್ನು ಕಂಡುಕೊಳ್ಳಲು ಪ್ರಯತ್ನಿಸಿ. ಹಾಗೂ ನಿಮ್ಮ ಗುರುತು ಮುಂಚಿನಂತೆಯೇ ಇದ್ದು, ನಿಮ್ಮ ಉಡುಪೂ ಮುಂಚಿನಂತಿದ್ದು ಹಾಗೂ ನೀವು ಮುಂಚಿನಂತೇ ವರ್ತಿಸುತ್ತಿದ್ದೀರಿ, ಆದರೆ ನಿಮ್ಮ ದೇಹ ಬದಲಾಗಿದ್ದರೆ?
ಇನ್ನು ಕೊನೆಯ ಒಂದು ಪ್ರಯೋಗ: ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಒಬ್ಬ ವ್ಯಕ್ತಿಯನ್ನು ಊಹಿಸಿ, ಒಬ್ಬ ಡಾಕ್ಟರ್ ಅಂತಿಟ್ಟುಕೊಳ್ಳಿ, ಆ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೀರಿ ಎಂದು ಊಹಿಸಿ. ಈಗ ಕಣ್ಣು ಬಿಡಿ. ನಿಮಗೆ ಆ ಡಾಕ್ಟರ್‍ನ ಜೆಂಡರ್ ನೆನಪಿದೆಯೇ? ಗಂಡೋ, ಹೆಣ್ಣೋ, ಎರಡೂ ಅಲ್ಲವೋ? ನಾವು ಯಾವುದೇ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ಊಹೆ ಮಾಡಿದಾಗ, ಮೊಟ್ಟಮೊದಲಿಗೆ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸುತ್ತೇವೆ. ಇದಕ್ಕೆ ನಮ್ಮ ಭಾಷೆಗಳೂ ಸಹಕರಿಸುತ್ತವೆ. ಅಧಿಕಾಂಶ ಭಾಷೆಗಳ ಸರ್ವನಾಮಗಳು ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ಸೂಚಿಸುತ್ತವೆ (ಬಂಗಾಳಿ ಭಾಷೆ ಹೊರತುಪಡಿಸಿ). ಹಾಗಾಗಿ ಒಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ನಾವು ಊಹೆ ಮಾಡಿದಾಗ, ಆ ವ್ಯಕ್ತಿಯ ವರ್ಗ, ಜಾತಿ, ಧರ್ಮ ಇತ್ಯಾದಿಗಳಿಗಿಂತ ಮುಂಚೆ ಮೂಲಭೂತವಾಗಿ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸಿಕೊಂಡಿರುತ್ತೇವೆ. ನೀವು ಮೊದಲ ಬಾರಿಗೆ ಯಾರನ್ನಾದರೂ ಭೇಟಿಯಾದಾಗ ಮೊದಲು ಅವರ ಜೆಂಡರ್ ಅನ್ನು ಗುರುತಿಸಿ ಅವರನ್ನು ಸಂಬೋಧಿಸಲು ಯಾವ ಭಾಷೆಯನ್ನು ಬಳಸಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯ ದೇಹರಚನೆ ಸಾಮಾಜಿಕವಾಗಿ ಗುರುತಿಸಿಕೊಂಡ ಗಂಡು ಅಥವಾ ಹೆಣ್ಣಿನಂತೆ ಇಲ್ಲದಿದ್ದಾಗ ಗಂಭೀರ ಸಮಸ್ಯೆ ಎದುರಾಗುತ್ತದೆ. ಅನೇಕ ಸಲ ಆ ವ್ಯಕ್ತಿಯನ್ನು ಇನ್ನಷ್ಟು ಸೂಕ್ಷ್ಮವಾಗಿ, ಉಡುಪಿನ ಒಳಗೆ ಎಂತಹ ದೇಹ ಇರಬಹುದು ಎಂದು ನೋಡಲಾಗುತ್ತದೆ. ಆಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ತಮ್ಮ ದೇಹದ ಜೊತೆಗೆ ಇರುವ ಮುಜುಗರ ಇನ್ನಷ್ಟು ಉಲ್ಬಣಗೊಳ್ಳುತ್ತದೆ. ತಾನು ಯಾವ ಜೆಂಡರ್‍ನೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುತ್ತಾರೋ ಆ ಜೆಂಡರ್ ಬದಲಾಗಿ ಬೇರೆ ಜೆಂಡರ್‍ನೊಂದಿಗೆ ಜನರು ಆ ವ್ಯಕ್ತಿಯನ್ನು ಗುರುತಿಸಿದಾಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಖಿನ್ನತೆಗೆ ಒಳಗಾಗಬಹುದು. ಇದು ಡಿಸ್‍ಫೋರಿಯಾದ ಸಾಮಾಜಿಕ ಅಂಶ.
ಹಾಗಾಗಿ ಜೆಂಡರ್ ಅನ್ನು ನೋಡುವ ರೀತಿಯಲ್ಲಿ ಬದಲಾವಣೆ ಮಾಡುತ್ತ, ಸಾಮಾಜಿಕ ಡಿಸ್‍ಫೋರಿಯಾವನ್ನು ಕಡಿಮೆ ಮಾಡಲು ನಮ್ಮ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ಸಮಾಜವು ಜೆಂಡರ್‍ಗಳ ಮೇಲೆ ಹೇರಿದ ನಿರೀಕ್ಷೆಗಳನ್ನು ಕೆಲವರು ಪೂರ್ಣಗೊಳಿಸುತ್ತಾರೋ ಇಲ್ಲವೋ ಎನ್ನುವುದರ ಆಧಾರದ ಮೇಲೆ ಗೇಲಿ ಮಾಡುವುದನ್ನು ಬಿಡಬೇಕಿದೆ. ಸಮಾಜವು ಇಂತಹ ಅಪಹಾಸ್ಯ ಮಾಡುವುದನ್ನು ಬಿಟ್ಟರೆ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಹಾಗೂ ಸಿಸ್‍ಜೆಂಡರ್ ವ್ಯಕ್ತಿಗಳೂ ಕೂಡ ಮುಕ್ತವಾಗಿ ಸಂಚರಿಸಬಹುದು ಮತ್ತು ಜಗತ್ತನ್ನು ಸಾವಧಾನವಾಗಿ ಅನುಭವಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...