Homeಸಾಮಾಜಿಕಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

ಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

- Advertisement -
- Advertisement -

 ಡಾ. ಕಾರ್ತಿಕ್ ಬಿಟ್ಟು
ಕನ್ನಡಕ್ಕೆ: ರಾಜಶೇಖರ ಅಕ್ಕಿ |

ನಿಮ್ಮ ಕಣ್ಣುಗಳನ್ನು ಮುಚ್ಚಿಕೊಳ್ಳಿ, ಅದರೊಂದಿಗೆ ನಿಮ್ಮ ಕೈಗಳನ್ನು ಮೇಲೆತ್ತಿ. ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಕಾಣಿಸದಿದ್ದರೂ ನೀವು ನಿಮ್ ಕೈಗಳನ್ನು ಮೇಲಕ್ಕೆತ್ತಿದ್ದು ನಿಮಗೆ ಖಂಡಿತವಾಗಿಯೂ ಅನುಭವವಾಗುತ್ತದೆ. ನಿಮ್ಮ ಕೈಗಳು ಎಲ್ಲಿವೆ ಎನ್ನುವುದು ನಿಮಗೆ ತಿಳಿಯುತ್ತದೆ. ಹೀಗೇಕೆ ಎಂದರೆ, ನಮ್ಮ ಮಿದುಳು ದೇಹದ ಅಂಗಗಳ ಆಂತರಿಕ ಸ್ಪರ್ಶವನ್ನು ಗ್ರಹಿಸಿ, ಯಾವ ಅಂಗ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳುವಲ್ಲಿ ಸಶಕ್ತವಾಗಿದೆ.
ಯಾವುದಾದರೊಂದು ಅಪಘಾತಕ್ಕೀಡಾಗಿ ತಮ್ಮ ಕೈಯನ್ನು ಕಳೆದುಕೊಂಡ ವ್ಯಕ್ತಿಗಳಿಗೆ ಈಗ ಇಲ್ಲದಿರುವ ಆ ಕೈ ಇನ್ನೂ ಅಲ್ಲಿಯೇ ಇದೆ ಎನ್ನುವ ಅನುಭವ ಆಗುತ್ತಿರುತ್ತದೆ. ಆ ಕೈ ಅಲ್ಲಿ ಇಲ್ಲದಿರುವುದನ್ನು ಅವರು ಕಾಣಬಹುದು; ಆದರೆ ದೇಹದ ನರಗಳಿಂದ ಬರುವ ಮಾಹಿತಿಯಿಂದ ಆ ಕೈ ಇನ್ನೂ ಅಲ್ಲೇ ಇದೆ ಎಂದು ಮಿದುಳಿನ ಭಾಗ ಅರ್ಥೈಸುತ್ತದೆ. ಇದು ಆ ಕೈ ಜೊತೆಗೆ ಅಲ್ಲಿಯ ನರಗಳನ್ನೂ ತೆಗೆದುಹಾಕಿದ್ದರೂ ಈ ಅನುಭವ ಆಗುತ್ತಲೇ ಇರುತ್ತದೆ. ದೇಹದಲ್ಲಿ ಒಂದು ಅಂಗ ಇರದೇ ಇದ್ದರೂ, ಒಬ್ಬ ವ್ಯಕ್ತಿಯ ದೇಹದಿಂದ ಇಲ್ಲದೇ ಇರುವ ಅಂಗವನ್ನು ಹೇಗೆ ಅನುಭವಿಸಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.
ಕೈಗಳು, ಕಾಲುಗಳು ಹೀಗೆ ಗಂಡು ಮತ್ತು ಹೆಣ್ಣಿನ ದೇಹಗಳು ಬಹುತೇಕವಾಗಿ ಒಂದೇ ಬಗೆಯವಾಗಿರುತ್ತವೆ. ಜನನಾಂಗದ ಮತ್ತು ಎದೆಯ ಭಾಗಗಳು ಬೇರೆಯಾಗಿರುತ್ತವೆ. ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಭವವನ್ನು ತಿಳಿಯುವ ಒಂದು ವಿಧಾನವೇನೆಂದರೆ, ನಮ್ಮ ದೇಹದಲ್ಲಿ ಇರದಿರುವ ಅಥವಾ ನಮ್ಮ ದೇಹದಲ್ಲಿದ್ದ ಅಂಗಕ್ಕಿಂತ ಬೇರೆಯದೇ ಆದ ಒಂದು ಅಂಗದ ಸಂವೇದನೆಯನ್ನು ನಮ್ಮ ಮಿದುಳು ಅಪೇಕ್ಷಿಸುವುದು. ಹಾಗಾಗಿ ಒಬ್ಬ ಟ್ರಾನ್ಸ್‍ಜೆಂಡರ್ ಮಹಿಳೆ ತನಗೆ ಇಲ್ಲದಿರುವ ಸ್ತನಗಳು ಇದ್ದಂತೆ ಭಾವಿಸಬಹುದು. ಹಾಗೂ ತಮ್ಮ ದೇಹದಲ್ಲಿರುವ ಒಂದು ಅಂಗದ ಗ್ರಹಿಕೆ ಮಿದುಳಿಗೆ ಇಲ್ಲದೇ ಇದ್ದಾಗ ತಮ್ಮ ಜನನಾಂಗವನ್ನು ನೋಡಿ ಆ ವ್ಯಕ್ತಿಗಳು ಗೊಂದಲಕ್ಕೊಳಗಾಗಬಹುದು. ಅದರಂತೆ ಟ್ರಾನ್ಸ್‍ಜೆಂಡರ್ ಪುರುಷರು ಎದೆಯ ಭಾಗದಲ್ಲಿ ಒಂದು ರೀತಿಯ ಭಾರವನ್ನು ಅನುಭವಿಸಿ ಗೊಂದಲಕ್ಕೊಳಗಾಗಬಹುದು, ಏಕೆಂದರೆ ಅವರ ಮಿದುಳು ಅದನ್ನು ಅಪೇಕ್ಷಿಸುವುದಿಲ್ಲ. ಅನೇಕ ಟ್ರಾನ್ಸ್‍ಜೆಂಡರ್ ಪುರುಷರು ಪುರುಷರಿಗಿರುವ ಜನನಾಂಗಗಳು ಇರುವಂತೇ ಅನುಭವವಕ್ಕೀಡಾಗಬಹುದು. ವ್ಯಕ್ತಿಗಳ ಅನುವಂಶಿಕ ವ್ಯತ್ಯಾಸದ (genetic variation) ಆಧಾರದ ಮೇಲೆ ದೇಹ ಮತ್ತು ಮಿದುಳುಗಳೆರಡೂ ಸ್ವಲ್ಪ ಮಟ್ಟಿಗೆ ವಿಭಿನ್ನವಾಗಿ ಬೆಳವಣಿಗೆಯಾಗಿ, ತಮ್ಮ ದೇಹದಿಂದ ಅವರ ಮಿದುಳು ಮತ್ತು ದೇಹದ ಅಪೇಕ್ಷೆಗಳು ಬೇರೆಬೇರೆಯಾಗುವುದನ್ನು ಡಿಸ್‍ಫೋರಿಯಾ ಎಂದು ಕರೆಯುತ್ತಾರೆ.
ಇದನ್ನು ತಿಳಿದುಕೊಳ್ಳಲು ಇದನ್ನು ಊಹಿಸಿ; ನಾಳೆ ಬೆಳಗ್ಗೆ ನೀವು ನಿದ್ರೆಯಿಂದ ಎದ್ದಾಗ, ನಿಮ್ಮ ಮಿದುಳು ಮತ್ತು ಮನೋಭಾವಗಳಲ್ಲಿ ಯಾವುದೇ ಬದಲಾವಣೆ ಆಗದೆ, ನಿಮ್ಮ ಭುಜದಿಂದ ಒಂದು ಹೆಚ್ಚಿನ ಕೈ ಉದ್ಭವಿಸಿದೆ ಎಂದುಕೊಳ್ಳಿ. ಈ ಹೊಸ ಕೈ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿಲ್ಲ ಎಂದು ಅಂದುಕೊಳ್ಳೊಣ. ಆದರೂ ಏನೋ ಕಿರಿಕಿರಿ ಅನುಭವಿಸುತ್ತೀರಿ, ಇರಬಾರದ್ದೇಕಿದೇ ಎನ್ನುವ ತೊಂದರೆ ಇರುತ್ತದೆ. ಈ ಅಂಗದಿಂದ ನಿಮಗೆ ಉಂಟಾಗುವ ಅಸೌಖ್ಯದ ಅನುಭವವು, ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಈ ಹೊಸ ಅಂಗ ಎಷ್ಟು ಅಡ್ಡಿಪಡಿಸುತ್ತೆ ಎನ್ನುವುದರ ಜೊತೆಗೆ ನೀವು ಮುಂಚೆ ಮಾಡುತ್ತಿದ್ದ ದೈನಂದಿನ ಚಟುವಟಿಕೆಗಳನ್ನು ಹಾಗೆಯೇ ಮುಂದುವರೆಸಲು ಈ ಅಂಗದಿಂದ ಎಷ್ಟು ಅಡೆತಡೆ ಎದುರಾಗುತ್ತದೆ ಎಂಬುದನ್ನೂ ಸೇರಿ ಅವಲಂಬಿಸಿದೆ.
ಅದರ ಮೇಲೆ, ನೀವು ಎದುರಿಸುವ ಎಲ್ಲಾ ಜನರೂ ಆಶ್ಚರ್ಯ ಹಾಗೂ ಕೌತುಕದಿಂದ ಪ್ರತಿಕ್ರಿಯಿಸಿದಾಗ, ನಿಮ್ಮನ್ನು ಭೇಟಿಯಾಗುವ ಎಲ್ಲರೂ ನಿಮ್ಮ ಭುಜದಿಂದ ಈ ಕೈ ಏಕೆ ಉದ್ಭವಿಸಿದೆ ಎಂದು ಕೇಳಿದಾಗ, ನೀವು ಸಾರ್ವಜನಿಕ ಸಾರಿಗೆಯನ್ನು ಬಳಸಿದಲ್ಲಿ ನೂರಾರು ಜನರು ನಿಮ್ಮನ್ನು ನೋಡಿ ಆಶ್ಚರ್ಯ ಮತ್ತು ಕೌತುಕ ವ್ಯಕ್ತಪಡಿಸಿ, ತಮ್ಮಲ್ಲೇ ಮಾತನಾಡಿಕೊಳ್ಳುತ್ತ ನಿಮ್ಮನ್ನು ಗೇಲಿ ಮಾಡಿದಾಗ, ಇದೇನು ಎಂದು ಕೇಳಿದಾಗ, ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿ ಯಾವ ಅನುಭವಗಳಿಂದ ಹಾದು ಹೋಗಬೇಕಾಗುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ. ದೈಹಿಕ ಅಂಗವೈಕಲ್ಯತೆಯುಳ್ಳವರೂ ಇಂತಹ ಅನುಭವ ಹೊಂದಿರುತ್ತಾರೆ.
ಈಗ ಇನ್ನೊಂದು ಪ್ರಸಂಗವನ್ನು ಊಹಿಸಿ, ನೀವು ಬೆಳಗ್ಗೆ ಎದ್ದಾಗ, ನೀವು ಗಂಡಾಗಿದ್ದರೆ ನಿಮ್ಮ ದೇಹ ಹೆಣ್ಣಿನಂತೆ, ಹೆಣ್ಣಾಗಿದ್ದರೆ ಗಂಡಿನಂತೆ ಬದಲಾಗಿದೆ. ಜನರೊಂದಿಗೆ ವ್ಯವಹರಿಸುವಾಗ ಎಷ್ಟು ಬಾರಿ ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ನೋಡಲಾಗುತ್ತದೆ ಹಾಗೂ ಎಷ್ಟು ಬಾರಿ ನಿಮ್ಮನ್ನು ನೋಡಿ ನಗಲಾಗುತ್ತದೆ, ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನುವುದನ್ನು ಕಂಡುಕೊಳ್ಳಲು ಪ್ರಯತ್ನಿಸಿ. ಹಾಗೂ ನಿಮ್ಮ ಗುರುತು ಮುಂಚಿನಂತೆಯೇ ಇದ್ದು, ನಿಮ್ಮ ಉಡುಪೂ ಮುಂಚಿನಂತಿದ್ದು ಹಾಗೂ ನೀವು ಮುಂಚಿನಂತೇ ವರ್ತಿಸುತ್ತಿದ್ದೀರಿ, ಆದರೆ ನಿಮ್ಮ ದೇಹ ಬದಲಾಗಿದ್ದರೆ?
ಇನ್ನು ಕೊನೆಯ ಒಂದು ಪ್ರಯೋಗ: ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಒಬ್ಬ ವ್ಯಕ್ತಿಯನ್ನು ಊಹಿಸಿ, ಒಬ್ಬ ಡಾಕ್ಟರ್ ಅಂತಿಟ್ಟುಕೊಳ್ಳಿ, ಆ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೀರಿ ಎಂದು ಊಹಿಸಿ. ಈಗ ಕಣ್ಣು ಬಿಡಿ. ನಿಮಗೆ ಆ ಡಾಕ್ಟರ್‍ನ ಜೆಂಡರ್ ನೆನಪಿದೆಯೇ? ಗಂಡೋ, ಹೆಣ್ಣೋ, ಎರಡೂ ಅಲ್ಲವೋ? ನಾವು ಯಾವುದೇ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ಊಹೆ ಮಾಡಿದಾಗ, ಮೊಟ್ಟಮೊದಲಿಗೆ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸುತ್ತೇವೆ. ಇದಕ್ಕೆ ನಮ್ಮ ಭಾಷೆಗಳೂ ಸಹಕರಿಸುತ್ತವೆ. ಅಧಿಕಾಂಶ ಭಾಷೆಗಳ ಸರ್ವನಾಮಗಳು ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ಸೂಚಿಸುತ್ತವೆ (ಬಂಗಾಳಿ ಭಾಷೆ ಹೊರತುಪಡಿಸಿ). ಹಾಗಾಗಿ ಒಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ನಾವು ಊಹೆ ಮಾಡಿದಾಗ, ಆ ವ್ಯಕ್ತಿಯ ವರ್ಗ, ಜಾತಿ, ಧರ್ಮ ಇತ್ಯಾದಿಗಳಿಗಿಂತ ಮುಂಚೆ ಮೂಲಭೂತವಾಗಿ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸಿಕೊಂಡಿರುತ್ತೇವೆ. ನೀವು ಮೊದಲ ಬಾರಿಗೆ ಯಾರನ್ನಾದರೂ ಭೇಟಿಯಾದಾಗ ಮೊದಲು ಅವರ ಜೆಂಡರ್ ಅನ್ನು ಗುರುತಿಸಿ ಅವರನ್ನು ಸಂಬೋಧಿಸಲು ಯಾವ ಭಾಷೆಯನ್ನು ಬಳಸಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯ ದೇಹರಚನೆ ಸಾಮಾಜಿಕವಾಗಿ ಗುರುತಿಸಿಕೊಂಡ ಗಂಡು ಅಥವಾ ಹೆಣ್ಣಿನಂತೆ ಇಲ್ಲದಿದ್ದಾಗ ಗಂಭೀರ ಸಮಸ್ಯೆ ಎದುರಾಗುತ್ತದೆ. ಅನೇಕ ಸಲ ಆ ವ್ಯಕ್ತಿಯನ್ನು ಇನ್ನಷ್ಟು ಸೂಕ್ಷ್ಮವಾಗಿ, ಉಡುಪಿನ ಒಳಗೆ ಎಂತಹ ದೇಹ ಇರಬಹುದು ಎಂದು ನೋಡಲಾಗುತ್ತದೆ. ಆಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ತಮ್ಮ ದೇಹದ ಜೊತೆಗೆ ಇರುವ ಮುಜುಗರ ಇನ್ನಷ್ಟು ಉಲ್ಬಣಗೊಳ್ಳುತ್ತದೆ. ತಾನು ಯಾವ ಜೆಂಡರ್‍ನೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುತ್ತಾರೋ ಆ ಜೆಂಡರ್ ಬದಲಾಗಿ ಬೇರೆ ಜೆಂಡರ್‍ನೊಂದಿಗೆ ಜನರು ಆ ವ್ಯಕ್ತಿಯನ್ನು ಗುರುತಿಸಿದಾಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಖಿನ್ನತೆಗೆ ಒಳಗಾಗಬಹುದು. ಇದು ಡಿಸ್‍ಫೋರಿಯಾದ ಸಾಮಾಜಿಕ ಅಂಶ.
ಹಾಗಾಗಿ ಜೆಂಡರ್ ಅನ್ನು ನೋಡುವ ರೀತಿಯಲ್ಲಿ ಬದಲಾವಣೆ ಮಾಡುತ್ತ, ಸಾಮಾಜಿಕ ಡಿಸ್‍ಫೋರಿಯಾವನ್ನು ಕಡಿಮೆ ಮಾಡಲು ನಮ್ಮ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ಸಮಾಜವು ಜೆಂಡರ್‍ಗಳ ಮೇಲೆ ಹೇರಿದ ನಿರೀಕ್ಷೆಗಳನ್ನು ಕೆಲವರು ಪೂರ್ಣಗೊಳಿಸುತ್ತಾರೋ ಇಲ್ಲವೋ ಎನ್ನುವುದರ ಆಧಾರದ ಮೇಲೆ ಗೇಲಿ ಮಾಡುವುದನ್ನು ಬಿಡಬೇಕಿದೆ. ಸಮಾಜವು ಇಂತಹ ಅಪಹಾಸ್ಯ ಮಾಡುವುದನ್ನು ಬಿಟ್ಟರೆ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಹಾಗೂ ಸಿಸ್‍ಜೆಂಡರ್ ವ್ಯಕ್ತಿಗಳೂ ಕೂಡ ಮುಕ್ತವಾಗಿ ಸಂಚರಿಸಬಹುದು ಮತ್ತು ಜಗತ್ತನ್ನು ಸಾವಧಾನವಾಗಿ ಅನುಭವಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...