Homeಅಂಕಣಗಳುಕಂಡದ್ದನ್ನು ಕಂಡಹಾಗೆ ಹೇಳಿದವರು....

ಕಂಡದ್ದನ್ನು ಕಂಡಹಾಗೆ ಹೇಳಿದವರು….

- Advertisement -
- Advertisement -

 ಗೌರಿ ಲಂಕೇಶ್
ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್ ಬುಷ್‍ಗೆ ಕಪಾಳಮೋಕ್ಷವಾಗಿದೆ.
ಸ್ವೀಡನ್ ದೇಶದಲ್ಲಿನ ನೊಬೆಲ್ ಸಮಿತಿ ಈ ವರ್ಷ ಮೊಹ್ಮದ್ ಎಲ್‍ಬರದೈಗೆ ಶಾಂತಿ ಪ್ರಶಸ್ತಿ ಪ್ರಕಟಿಸಿ ಬುಷ್‍ಗೆ ಸೆಡ್ಡು ಹೊಡೆದಿತ್ತಲ್ಲದೆ, ಈ ವಾರ ಹೆರಾಲ್ಡ್ ಪಿಂಟರ್ ಎಂಬ ಬ್ರಿಟಿಷ್ ನಾಟಕಕಾರನಿಗೆ ಪ್ರಶಸ್ತಿ ನೀಡಿ ಅಮೆರಿಕಕ್ಕೆ ಅವಮಾನಿಸಿದೆ. ನೊಬೆಲ್ ಪ್ರಶಸ್ತಿಗಳು ರಾಜಕೀಯ ಪ್ರೇರಿತಗೊಂಡು ಹಲವು ದಶಕಗಳೇ ಕಳೆದಿವೆ. ಹಾಗಾಗಿ ಅಮೆರಿಕಾಕ್ಕೆ ಎದುರಾಗಿ ಈ ಪ್ರಶಸ್ತಿಗಳನ್ನು ಘೋಷಿಸಿರುವುದು ರಾಜಕೀಯ ಕಾರಣಕ್ಕೂ ವಿಪರೀತ ಕುತೂಹಲ ಮೂಡಿಸಿವೆ.
2003ರಲ್ಲಿ ಇರಾಕ್‍ನಲ್ಲಿ weapons of mass destruction ಇದೆ ಎಂಬ ನೆಪವೊಡ್ಡಿ, ಸದ್ದಾಂ ಹುಸೇನ್‍ನಿಂದ ಜಗತ್ತನ್ನೇ ರಕ್ಷಿಸಬೇಕಿದೆ ಎಂದುಹೇಳಿ ಆ ದೇಶದ ಮೇಲೆ ಅಮೆರಿಕಾ ಹರಿಹಾಯ್ದುಹೋಗಲು ಸಜ್ಜಾಗುತ್ತಿದ್ದಾಗ, ಇಂಟರ್‍ನ್ಯಾಶನಲ್ ಅಟೋಮಿಕ್ ಎನರ್ಜಿ ಅಸೋಸಿಯೇಷನ್‍ನ ಮುಖ್ಯಸ್ಥರಾಗಿರುವ ಬರದೈರವರು `ಇರಾಕ್‍ನಲ್ಲಿ ಯಾವ weapons of mass destruction ಇಲ್ಲ’ ಎಂದೇಳಿ ಬುಷ್‍ಗೆ ಸವಾಲೊಡ್ಡಿದ್ದರು. ಆದರೂ ಬುಷ್ ಇರಾಕ್ ಮೇಲೆ ದಾಳಿಯಿಟ್ಟು ಬ್ರಿಟಿಷ್ ಸೈನ್ಯದ ಜೊತೆಗೂಡಿ ಸಾವಿರಾರು ಇರಾಕಿಗಳನ್ನು ಕೊಂದುಹಾಕಿ, ಆ ದೇಶದ ಆತ್ಮವನ್ನೇ ಸರ್ವನಾಶ ಮಾಡಿದ ತರುವಾಯ ಬುಷ್ ಮತ್ತು ಬ್ರಿಟನ್ನಿನ ಬ್ಲೇರ್ ಹೇಳಿದ್ದು ಅಪ್ಪಟ ಸುಳ್ಳು, ಬರದೈ ಹೇಳಿದ್ದೇ ಸತ್ಯ ಎಂದು ಇಡೀ ಜಗತ್ತಿಗೇ ಗೊತ್ತಾಗಿತ್ತು. ತನ್ನ ಕಪಟತನವನ್ನು ಬಹಿರಂಗಪಡಿಸಿದ ಬರದೈಗೆ ಶಾಂತಿ ಪ್ರಶಸ್ತಿ ಸಿಕ್ಕರೆ ಬುಷ್ ಸರ್ಕಾರಕ್ಕೆ ಅವಮಾನವಾಗದೇ ಮತ್ತಿನ್ನೇನು?
ಇನ್ನು ತನ್ನ ಬರಹಗಳಲ್ಲಿ ಪ್ರಸ್ತುತ ಸಾಮಾಜಿಕ ಮತ್ತು ರಾಜಕೀಯ ಅನ್ಯಾಯವನ್ನು ವಿಶ್ಲೇಷಿಸುವ ನಾಟಕಕಾರ ಹೆರಾಲ್ಡ್ ಪಿಂಟರ್ ಅದೆಂತಹ ಅಗ್ರಸ್ಥಾನದಲ್ಲಿದ್ದಾರೆಂದರೆ ಶೇಕ್ಸ್‍ಪಿರಿಯನ್, ಶೆಕಾವಿಯನ್ ಎಂಬ ಪದಗಳು ಗುಣವಾಚಕಗಳಾಗಿವೆಯೋ ಹಾಗೆ ಪಿಂಟರೆಸ್ಕ್ ಎಂಬ ಪದವೂ ಇಂಗ್ಲಿಷ್ ಭಾಷೆಯ ಅಂಗವಾಗಿ ಹೋಗಿದೆ. ಇವರು ಕಳೆದ ಮೂರು ವರ್ಷದಿಂದ ಬುಷ್‍ರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಬುಷ್ ಹೇಳಿದ್ದಕ್ಕೆಲ್ಲ ತಲೆದೂಗುವ ತನ್ನ ದೇಶದ ಪ್ರಧಾನಿ ಬ್ಲೇರ್‍ಗೂ ಕ್ಯಾಕರಿಸಿ ಉಗಿದಿದ್ದಾರೆ. ಅಮೆರಿಕಾದಲ್ಲಿ ಅಧಿಕಾರ ಹಿಡಿದಿರುವವರನ್ನು ಕ್ರಿಮಿನಲ್‍ಗಳ ಗ್ಯಾಂಗ್ ಎಂದೂ, ಬ್ಲೇರ್ ಅನ್ನು ಅಮೆರಿಕಾ ಸರ್ಕಾರದ ಬಾಡಿಗೆಗೆ ಹಿಡಿದಿರುವ ಕ್ರಿಶ್ಚಿಯನ್ ಗೂಂಡಾ ಎಂದೂ ಲೇವಡಿ ಮಾಡಿದ್ದರು. ಅಮೆರಿಕಾ ಮತ್ತು ಬ್ರಿಟನ್ ಸರ್ಕಾರಗಳಿಗೆ ಕಡಿವಾಣ ಹಾಕದಿದ್ದರೆ ಇಡೀ ಜಗತ್ತನ್ನೇ ಮುಳುಗಿಸಿಬಿಡುತ್ತಾರೆ ಎಂಬುದು ಅವರ ಪ್ರಾಮಾಣಿಕ ಆತಂಕ.
ಇಲ್ಲಿ ಬುಷ್ ಮತ್ತು ಬ್ಲೇರ್ ಬಗ್ಗೆ ಪಿಂಟರ್‍ರವರು ನೀಡಿರುವ ಹೇಳಿಕೆಯ ಸ್ಯಾಂಪಲ್‍ಗಳಿವೆ ನೋಡಿ; “ಇರಾಕ್ ಮೇಲೆ ನಡೆದದ್ದು ಭಯೋತ್ಪಾದನೆ. ಆದ್ದರಿಂದ ಬುಷ್ ಮತ್ತು ಬ್ಲೇರ್ ಭಯೋತ್ಪಾದಕರು. ಅವರಿಬ್ಬರನ್ನು ಬಂಧಿಸಿ ಯುದ್ಧಕೋರರೆಂದು ವಿಚಾರಣೆಗೊಳಪಡಿಸಿ ಶಿಕ್ಷಿಸಬೇಕು…..”, “ಅಮೆರಿಕಾ ಈಗ ನಾಜಿಗಳ ಜರ್ಮನಿಯನ್ನು ಹೋಲುತ್ತಿದೆ”, “ಜಗತ್ತಿನ ಅತಿ ಅನಾಹುತಕಾರಿ ಅಸ್ತ್ರಗಳು ಅತಿ ಅನಾಹುತಕಾರಿ ನಾಯಕರ ಕೈಯಲ್ಲಿರದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾನೆ ಬುಷ್. ಆದ್ದರಿಂದ ಅತಿ ಅನಾಹುತಕಾರಿ ನಾಯಕ ಯಾರೆಂದು ತಿಳಿದುಕೊಳ್ಳಲು ಆತ ಒಮ್ಮೆ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳಲಿ”, “ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಬಿಡುಗಡೆಯ ಬಗ್ಗೆ ಮಾತಾಡುವ ಬುಷ್ ಹಾಗೂ ಬ್ಲೇರ್ ನಿಜವಾಗಲೂ ಹೇಳುತ್ತಿರುವುದು ಸಾವು, ನಾಶ ಮತ್ತು ಅಭದ್ರತೆಯ ಬಗ್ಗೆ”…..
ಇವೆಲ್ಲ ಇಂದು ಅಮೆರಿಕಾ ಸರ್ಕಾರ ಕೊತಕೊತ ಕುದಿಯುವಂತೆ ಮಾಡಿರುವುದು ಅಚ್ಚರಿಯೇನಲ್ಲ. ಭಿನ್ನಮತ, ವಾಕ್ ಸ್ವಾತಂತ್ರ್ಯ, ಮಾನವಹಕ್ಕುಗಳು, ದಬ್ಬಾಳಿಕೆ ವಿರೋಧಗಳು ನಿಜಕ್ಕೂ, `ನೋಬಲ್’, ಅಲ್ಲವೇ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...