Homeಅಂಕಣಗಳುಕಂಡದ್ದನ್ನು ಕಂಡಹಾಗೆ ಹೇಳಿದವರು....

ಕಂಡದ್ದನ್ನು ಕಂಡಹಾಗೆ ಹೇಳಿದವರು….

- Advertisement -
- Advertisement -

 ಗೌರಿ ಲಂಕೇಶ್
ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್ ಬುಷ್‍ಗೆ ಕಪಾಳಮೋಕ್ಷವಾಗಿದೆ.
ಸ್ವೀಡನ್ ದೇಶದಲ್ಲಿನ ನೊಬೆಲ್ ಸಮಿತಿ ಈ ವರ್ಷ ಮೊಹ್ಮದ್ ಎಲ್‍ಬರದೈಗೆ ಶಾಂತಿ ಪ್ರಶಸ್ತಿ ಪ್ರಕಟಿಸಿ ಬುಷ್‍ಗೆ ಸೆಡ್ಡು ಹೊಡೆದಿತ್ತಲ್ಲದೆ, ಈ ವಾರ ಹೆರಾಲ್ಡ್ ಪಿಂಟರ್ ಎಂಬ ಬ್ರಿಟಿಷ್ ನಾಟಕಕಾರನಿಗೆ ಪ್ರಶಸ್ತಿ ನೀಡಿ ಅಮೆರಿಕಕ್ಕೆ ಅವಮಾನಿಸಿದೆ. ನೊಬೆಲ್ ಪ್ರಶಸ್ತಿಗಳು ರಾಜಕೀಯ ಪ್ರೇರಿತಗೊಂಡು ಹಲವು ದಶಕಗಳೇ ಕಳೆದಿವೆ. ಹಾಗಾಗಿ ಅಮೆರಿಕಾಕ್ಕೆ ಎದುರಾಗಿ ಈ ಪ್ರಶಸ್ತಿಗಳನ್ನು ಘೋಷಿಸಿರುವುದು ರಾಜಕೀಯ ಕಾರಣಕ್ಕೂ ವಿಪರೀತ ಕುತೂಹಲ ಮೂಡಿಸಿವೆ.
2003ರಲ್ಲಿ ಇರಾಕ್‍ನಲ್ಲಿ weapons of mass destruction ಇದೆ ಎಂಬ ನೆಪವೊಡ್ಡಿ, ಸದ್ದಾಂ ಹುಸೇನ್‍ನಿಂದ ಜಗತ್ತನ್ನೇ ರಕ್ಷಿಸಬೇಕಿದೆ ಎಂದುಹೇಳಿ ಆ ದೇಶದ ಮೇಲೆ ಅಮೆರಿಕಾ ಹರಿಹಾಯ್ದುಹೋಗಲು ಸಜ್ಜಾಗುತ್ತಿದ್ದಾಗ, ಇಂಟರ್‍ನ್ಯಾಶನಲ್ ಅಟೋಮಿಕ್ ಎನರ್ಜಿ ಅಸೋಸಿಯೇಷನ್‍ನ ಮುಖ್ಯಸ್ಥರಾಗಿರುವ ಬರದೈರವರು `ಇರಾಕ್‍ನಲ್ಲಿ ಯಾವ weapons of mass destruction ಇಲ್ಲ’ ಎಂದೇಳಿ ಬುಷ್‍ಗೆ ಸವಾಲೊಡ್ಡಿದ್ದರು. ಆದರೂ ಬುಷ್ ಇರಾಕ್ ಮೇಲೆ ದಾಳಿಯಿಟ್ಟು ಬ್ರಿಟಿಷ್ ಸೈನ್ಯದ ಜೊತೆಗೂಡಿ ಸಾವಿರಾರು ಇರಾಕಿಗಳನ್ನು ಕೊಂದುಹಾಕಿ, ಆ ದೇಶದ ಆತ್ಮವನ್ನೇ ಸರ್ವನಾಶ ಮಾಡಿದ ತರುವಾಯ ಬುಷ್ ಮತ್ತು ಬ್ರಿಟನ್ನಿನ ಬ್ಲೇರ್ ಹೇಳಿದ್ದು ಅಪ್ಪಟ ಸುಳ್ಳು, ಬರದೈ ಹೇಳಿದ್ದೇ ಸತ್ಯ ಎಂದು ಇಡೀ ಜಗತ್ತಿಗೇ ಗೊತ್ತಾಗಿತ್ತು. ತನ್ನ ಕಪಟತನವನ್ನು ಬಹಿರಂಗಪಡಿಸಿದ ಬರದೈಗೆ ಶಾಂತಿ ಪ್ರಶಸ್ತಿ ಸಿಕ್ಕರೆ ಬುಷ್ ಸರ್ಕಾರಕ್ಕೆ ಅವಮಾನವಾಗದೇ ಮತ್ತಿನ್ನೇನು?
ಇನ್ನು ತನ್ನ ಬರಹಗಳಲ್ಲಿ ಪ್ರಸ್ತುತ ಸಾಮಾಜಿಕ ಮತ್ತು ರಾಜಕೀಯ ಅನ್ಯಾಯವನ್ನು ವಿಶ್ಲೇಷಿಸುವ ನಾಟಕಕಾರ ಹೆರಾಲ್ಡ್ ಪಿಂಟರ್ ಅದೆಂತಹ ಅಗ್ರಸ್ಥಾನದಲ್ಲಿದ್ದಾರೆಂದರೆ ಶೇಕ್ಸ್‍ಪಿರಿಯನ್, ಶೆಕಾವಿಯನ್ ಎಂಬ ಪದಗಳು ಗುಣವಾಚಕಗಳಾಗಿವೆಯೋ ಹಾಗೆ ಪಿಂಟರೆಸ್ಕ್ ಎಂಬ ಪದವೂ ಇಂಗ್ಲಿಷ್ ಭಾಷೆಯ ಅಂಗವಾಗಿ ಹೋಗಿದೆ. ಇವರು ಕಳೆದ ಮೂರು ವರ್ಷದಿಂದ ಬುಷ್‍ರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಬುಷ್ ಹೇಳಿದ್ದಕ್ಕೆಲ್ಲ ತಲೆದೂಗುವ ತನ್ನ ದೇಶದ ಪ್ರಧಾನಿ ಬ್ಲೇರ್‍ಗೂ ಕ್ಯಾಕರಿಸಿ ಉಗಿದಿದ್ದಾರೆ. ಅಮೆರಿಕಾದಲ್ಲಿ ಅಧಿಕಾರ ಹಿಡಿದಿರುವವರನ್ನು ಕ್ರಿಮಿನಲ್‍ಗಳ ಗ್ಯಾಂಗ್ ಎಂದೂ, ಬ್ಲೇರ್ ಅನ್ನು ಅಮೆರಿಕಾ ಸರ್ಕಾರದ ಬಾಡಿಗೆಗೆ ಹಿಡಿದಿರುವ ಕ್ರಿಶ್ಚಿಯನ್ ಗೂಂಡಾ ಎಂದೂ ಲೇವಡಿ ಮಾಡಿದ್ದರು. ಅಮೆರಿಕಾ ಮತ್ತು ಬ್ರಿಟನ್ ಸರ್ಕಾರಗಳಿಗೆ ಕಡಿವಾಣ ಹಾಕದಿದ್ದರೆ ಇಡೀ ಜಗತ್ತನ್ನೇ ಮುಳುಗಿಸಿಬಿಡುತ್ತಾರೆ ಎಂಬುದು ಅವರ ಪ್ರಾಮಾಣಿಕ ಆತಂಕ.
ಇಲ್ಲಿ ಬುಷ್ ಮತ್ತು ಬ್ಲೇರ್ ಬಗ್ಗೆ ಪಿಂಟರ್‍ರವರು ನೀಡಿರುವ ಹೇಳಿಕೆಯ ಸ್ಯಾಂಪಲ್‍ಗಳಿವೆ ನೋಡಿ; “ಇರಾಕ್ ಮೇಲೆ ನಡೆದದ್ದು ಭಯೋತ್ಪಾದನೆ. ಆದ್ದರಿಂದ ಬುಷ್ ಮತ್ತು ಬ್ಲೇರ್ ಭಯೋತ್ಪಾದಕರು. ಅವರಿಬ್ಬರನ್ನು ಬಂಧಿಸಿ ಯುದ್ಧಕೋರರೆಂದು ವಿಚಾರಣೆಗೊಳಪಡಿಸಿ ಶಿಕ್ಷಿಸಬೇಕು…..”, “ಅಮೆರಿಕಾ ಈಗ ನಾಜಿಗಳ ಜರ್ಮನಿಯನ್ನು ಹೋಲುತ್ತಿದೆ”, “ಜಗತ್ತಿನ ಅತಿ ಅನಾಹುತಕಾರಿ ಅಸ್ತ್ರಗಳು ಅತಿ ಅನಾಹುತಕಾರಿ ನಾಯಕರ ಕೈಯಲ್ಲಿರದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾನೆ ಬುಷ್. ಆದ್ದರಿಂದ ಅತಿ ಅನಾಹುತಕಾರಿ ನಾಯಕ ಯಾರೆಂದು ತಿಳಿದುಕೊಳ್ಳಲು ಆತ ಒಮ್ಮೆ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳಲಿ”, “ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಬಿಡುಗಡೆಯ ಬಗ್ಗೆ ಮಾತಾಡುವ ಬುಷ್ ಹಾಗೂ ಬ್ಲೇರ್ ನಿಜವಾಗಲೂ ಹೇಳುತ್ತಿರುವುದು ಸಾವು, ನಾಶ ಮತ್ತು ಅಭದ್ರತೆಯ ಬಗ್ಗೆ”…..
ಇವೆಲ್ಲ ಇಂದು ಅಮೆರಿಕಾ ಸರ್ಕಾರ ಕೊತಕೊತ ಕುದಿಯುವಂತೆ ಮಾಡಿರುವುದು ಅಚ್ಚರಿಯೇನಲ್ಲ. ಭಿನ್ನಮತ, ವಾಕ್ ಸ್ವಾತಂತ್ರ್ಯ, ಮಾನವಹಕ್ಕುಗಳು, ದಬ್ಬಾಳಿಕೆ ವಿರೋಧಗಳು ನಿಜಕ್ಕೂ, `ನೋಬಲ್’, ಅಲ್ಲವೇ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...