Homeಮುಖಪುಟಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

- Advertisement -
- Advertisement -

ಕಳೆದ ಆಗಸ್ಟ್‌ನಲ್ಲಿ ಪ್ರಕಟವಾದ ಅಸ್ಸಾಂನ ರಾಷ್ಟ್ರೀಯ ನಾಗರಿಕರ ನೋಂದಣಿಯ (ಎನ್‌ಆರ್‌ಸಿ) ಅಂತಿಮ ದತ್ತಾಂಶ ಪಟ್ಟಿಯು ವೆಬ್‌ಸೈಟ್‌ನಿಂದ ಕಣ್ಮರೆಯಾಗಿದ್ದು ಕಳವಳಕ್ಕೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಡೇಟಾವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ಈಗ ಅದು ಕ್ಲೌಡ್‌ನಿಂದ ನಾಪತ್ತೆಯಾಗಿದ್ದೆ. ಇದರ ಕುರಿತು ಕೇಂದ್ರ ಗೃಹ ಸಚಿವಾಲಯವು ಎನ್ಆರ್‌ಸಿ ಡೇಟಾ ಸುರಕ್ಷಿತವಾಗಿದೆ ಮತ್ತು “ಕ್ಲೌಡ್‌ನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಾದ ಕಾರಣ ಅದು ಕಾಣುತ್ತಿಲ್ಲ. ಈ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದೆ.

ಆದರೆ ಐಟಿ ಸಂಸ್ಥೆ ವಿಪ್ರೊ ಜೊತೆಗಿನ ಒಪ್ಪಂದವನ್ನು ನವೀಕರಿಸದೇ ಇರುವುದು ದತ್ತಾಂಶ ಕಣ್ಮರೆಗೆ ಕಾರಣ ಎಂದು ಎನ್‌ಆರ್‌ಸಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಅಂತಿಮ ಪಟ್ಟಿಯನ್ನು ಆಗಸ್ಟ್ 31, 2019 ರಂದು ಪ್ರಕಟಿಸಿದೆ. ಅಸ್ಸಾಂ ಎನ್‌ಆರ್‌ಸಿಯಲ್ಲಿ ಭಾರತೀಯ ನಾಗರಿಕರನ್ನು ಹೊರಗಿಡುವ ಮತ್ತು ಸೇರ್ಪಡೆಗೊಳಿಸುವ ಸಂಪೂರ್ಣ ವಿವರವನ್ನು ಅದರ ಅಧಿಕೃತ ವೆಬ್‌ಸೈಟ್ ‘www.nrcassam.nic.in’ ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

“ಬೃಹತ್ ಪ್ರಮಾಣದ ದತ್ತಾಂಶಕ್ಕಾಗಿ ಕ್ಲೌಡ್‌ ಸೇವೆಯನ್ನು ವಿಪ್ರೋ ಒದಗಿಸಿದ್ದರು ಮತ್ತು ಅವರ ಒಪ್ಪಂದವು ಕಳೆದ ವರ್ಷ ಅಕ್ಟೋಬರ್ 19 ರವರೆಗೆ ಇತ್ತು. ಆದಾಗ್ಯೂ, ಇದನ್ನು ನವೀಕರಿಸಲಿಲ್ಲ. ಆದ್ದರಿಂದ, ಡಿಸೆಂಬರ್ 15 ರಿಂದ ಡೇಟಾ ಆಫ್‌ಲೈನ್‌‌ಗೆ ಹೋಗಿತು. ಇದನ್ನು ವಿಪ್ರೋ ಅಮಾನತುಗೊಳಿಸಿದ ನಂತರ ಡಿಸೆಂಬರ್ 24 ರಂದು ನಾನು ಅಧಿಕಾರ ವಹಿಸಿಕೊಂಡಿದ್ದೇನೆ “ಎಂದು ಎನ್ಆರ್ಸಿ ರಾಜ್ಯ ಸಂಯೋಜಕ ಹಿತೇಶ್ ದೇವ್ ಶರ್ಮಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಜನವರಿ 30 ರಂದು ನಡೆದ ಸಭೆಯಲ್ಲಿ ಅಗತ್ಯ ಸಮನ್ವಯತೆ ಮಾಡಲು ರಾಜ್ಯ ಸಮನ್ವಯ ಸಮಿತಿ ನಿರ್ಧರಿಸಿದೆ ಮತ್ತು ಫೆಬ್ರವರಿ ಮೊದಲ ವಾರದಲ್ಲಿ ವಿಪ್ರೊಗೆ ಪತ್ರ ಬರೆದಿದೆ ಎಂದು ಅವರು ಹೇಳಿದರು. “ಒಮ್ಮೆ ವಿಪ್ರೊ ಡೇಟಾವನ್ನು ಲೈವ್ ಮಾಡಿದ ನಂತರ, ಅದು ಸಾರ್ವಜನಿಕರಿಗೆ ಲಭ್ಯವಾಗಲಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಜನರು ಅದನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಶರ್ಮಾ ಮಂಗಳವಾರ ಹೇಳಿದರು.

ಈ ಬೆಳವಣಿಗೆಯನ್ನು ಕಾಂಗ್ರೆಸ್‌ ತೀವ್ರವಾಗಿ ಟೀಕಿಸಿದ್ದು, ನಿಗೂಢ ಬೆಳವಣಿಗೆ ಎಂದು ಕರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...