Homeಮುಖಪುಟಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

ಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

- Advertisement -
- Advertisement -

ಅತ್ಯಚಾರದಲ್ಲಿ ಭಾಗಿಯಾದ 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಸಾಕ್ಷ್ಯನಾಶ ಮಾಡಿದ ಉಳಿದ ಮೂವರಿಗೆ 5 ವರ್ಷ ಜೈಲು ಸಜೆಯ ಶಿಕ್ಷೆಯನ್ನು ಕೋರ್ಟ್ ಘೋಷಿಸಿದೆ. ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್ ಗೆ ಜೀವಾವಧಿ ಘೋಷಿಸಿದ್ದು, ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಪೊಲೀಸರಿಗೆ 5 ವರ್ಷಗಳ ಜೈಲು ಸಜೆಯನ್ನು ವಿಧಿಸಲಾಗಿದೆ.

ಇಂದು ಬೆಳಿಗ್ಗೆ ಆರೋಪಿಗಳನ್ನು ಘೋಷಿಸಿದ್ದು ಸಂಜೆ 4.45ರ ವೇಳೆಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಯಿತು.

ಕಥುವಾ ಪ್ರದೇಶ ಹಾಗೂ ಸುತ್ತಮುತ್ತ ಇರುವ ಅಲೆಮಾರಿಗಳನ್ನು ಭಯಪಡಿಸುವ ಸಲುವಾಗಿ ಹಾಗೂ ಅವರನ್ನು ಅಲ್ಲಿಂದ ಓಡಿಸುವ ಸಲುವಾಗಿಯೂ ಸಹ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಮಾಡಲಾಗಿದೆ ಎಂದು ಘೋರ ಸತ್ಯವು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಎಂಟು ವರ್ಷ ಬಾಲಕಿಯರ ಸಾಮೂಹಿಕ ಬರ್ಬರ ಅತ್ಯಾಚಾರ, ಚಿತ್ರಹಿಂಸೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ದೋಷಿಗಳೆಂದು ಪಠಾಣ್ ಕೋರ್ಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅತ್ಯಾಚಾರ ಆರೋಪಿಗಾಳದ ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್, ತಿಲಕ್ ರಾಜ್, ಸುರೇಂದ್ರ, ಪ್ರವೇಶ್ ದೋಷಿಗಳೆಂದು ಪಠಾಣ್ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ವಿಶಾಲ್ ನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಜನವರಿ 10, 2018ರಲ್ಲಿ ನಡೆದ ಅತ್ಯಾಚಾರ ಪ್ರಕರಣ ವಿಚಾರಣ ನಡೆಸಿದ ಪೊಲೀಸರು 2018 ರ ಎಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 8 ವರ್ಷದ ಬಾಲಕಿಗೆ ಮಾದಕ ಸೇವನೆ ಮಾಡಿಸಿ ದೇವಾಲಯವೊಂದರಲ್ಲಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಮಾಡಿ ಕಲ್ಲಿನಿಂದ ಚಚ್ಚಿ ಕೊಲೆ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಆಡಳಿತದಲ್ಲಿದ್ದ ಬಿಜೆಪಿ-ಪೀಪಲ್ಸ್ ಡೆಮೊಕ್ರಾಟಿಕ್ ಪಾರ್ಟಿ (ಪಿಡಿಪಿ) ಮೈತ್ರಿಕೂಟದ ನಡುವೆ ಬಿಜೆಪಿ ನಾಯಕರು ಚೌಧುರಿ ಲಾಲ್ ಸಿಂಗ್ ಮತ್ತು ಪ್ರಕಾಶ್ ಗಂಗಾ ಈ ಇಬ್ಬರು ಆರೋಪಿಗಳ ರಕ್ಷಣೆಗೆ ನಿಂತಿದ್ದರು ಎಂಬುದು ವಿವಾದ ಸಹ ಆಯಿತು ಬಿಜೆಪಿ ಶಾಸಕ ರಾಜೀವ್ ಜಸ್ ರೊಟಿಯಾ ಎಂಬುವವರು ಆರೋಪಿಗಳ ಪರವಾಗಿ ಬಹಿರಂಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಬಹುತೇಕರು ಖಂಡಿಸಿದ್ದರು.

ಅಷ್ಟು ಮಾತ್ರವಲ್ಲದೇ ಸಂತ್ರಸ್ತೆಯ ಪರವಾಗಿ ವಕೀಲಿಕೆ ನಡೆಸಿದ್ದ ದೀಪಿಕಾ ಸಿಂಗ್ ರಾವತ್ ರವರ ಮೇಲೆ ವಕೀಲರ ಸಂಘದ ಅಧ್ಯಕ್ಷರಾದ ಬಿ.ಎಸ್ ಸಲಾತಿಯ ಎಂಬುವವರು ನ್ಯಾಯಾಲಕ್ಕೆ ಹಾಜರಾಗದಂತೆ ಬಹಿರಂಗವಾಗಿ ಬೆದರಿಕೆ ಹಾಕಿದ್ದ ಘಟನೆಯೂ ಸಹ ನಡೆದಿತ್ತು. ಅವರು ಕೇಸಿನಿಂದ ಹಿಂದೆ ಸರಿಯಬೇಕೆಂದು ಹಲವಾರು ಜೀವಬೆದರಿಕೆಯ ಕರೆಗಳು ಸಹ ದೀಪಿಕಾ ಸಿಂಗ್ ರವರಿಗೆ ಬಂದಿದ್ದವು. ತೀವ್ರ ಒತ್ತಡದ ಕಾರಣದಿಂದಾಗಿ ಕೊನೆಗೆ ಅವರು ಕೇಸಿನಿಂದ ಹಿಂದೆ ಸರಿಯಬೇಕಾಗಿತ್ತು.

ದೀಪಿಕಾ ಸಿಂಗ್ ರಾಜಾವತ್

ನಂತರ ಸಂತ್ರಸ್ತೆಯ ಪರವಾಗಿ ಮುಬಿನ್ ಫಾರೂಖಿ ಎಂಬುವವರು ವಕೀಲಿಕೆ ನಡೆಸಿದ್ದರು. ಇಂದು ಈ ಕೇಸಿನಲ್ಲಿ ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಮೂವರು ಪೋಲಿಸರ ಮೇಲೆ ಸಾಕ್ಷ್ಯನಾಶದ ಆರೋಪ ಸಾಬೀತಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...