HomeUncategorizedಅಣುವೆಂಬ ಅಣು

ಅಣುವೆಂಬ ಅಣು

- Advertisement -
- Advertisement -

ಬೆರಳುಗಳು ಹಾಗೆ ಕೆಳಗೆ ಬೀಳುತ್ತಲಿದ್ದವು. ತೋಡುವವನಿಗೆ ಅರಿವೆ ಇರಲಿಲ್ಲ. ರಕ್ತ ಮಣ್ಣಿನಲ್ಲಿ ಮಣ್ಣಾಗಿ ಹೋಗಹತ್ತಿತ್ತು. ಮಣ್ಣಿನ ಬಣ್ಣದಿಂದಲೋ, ರಕ್ತದ ಬಣ್ಣದಿಂದಲೋ ಎರಡು ಒಂದೇ ಆಗಿದ್ದವು.
ಕೆಳಗೆ ಬಿದ್ದ ಆಕೃತಿ ಉದ್ದನೆಯ ಡೊಣ್ಣೆ ಹುಳುವೋ ಎಂದು ತೆಗೆÉದುಕೊಳ್ಳಲು ಹೋz.À ತನಗೆ ಬೆರಳೆ ಇರಲಿಲ್ಲ. ಒಂದು ಕತ್ತಿ ಇಲ್ಲ, ಮೊನಚಾದ ಯಾವ ಆಕೃತಿ ಇಲ್ಲ. ತನ್ನ ಬೆರಳು ಕೆಳಗೆ ಬಿದ್ದಿದೆ. ಅದೆ, ಅದು ಕೆಳಗೆ ಬಿದ್ದಾಗಲೂ ಗೊತ್ತಾಗಲಿಲ್ಲ.
ಅವನಿಗೆ ಭಯವಾಯಿತು, ಆತ ಕೇಳಿದ್ದ, ಇಲ್ಲಿ ಅಗಿಯಲು ಹೋದರೆ ಬೆರಳುಗಳು ತಿಳಿಯದ ಹಾಗೆ ಕೆಳಗೆ ಬೀಳುತ್ತವೆ ಎಂದು, ಇದು ನಿಜವಾಗಿದೆ. ನೋವಿಲ್ಲದೆ ಅದು ಭಾವವಿಲ್ಲದೆ, ಸ್ಪರ್ಶವಿಲ್ಲದೆ ಬೆರಳುಗಳು ಕೆಳಗೆ ಬಿದ್ದಿದ್ದವು. ಚಾಕು ಚೂರಿ ರಿಕಾಪುಗಳು ಹಾಗೆ ಶೂನ್ಯದಲ್ಲಿ ಪಳಪಳ ಹೊಳೆದಂತಾಯಿತು.
ಆ ಗವಿ ಗಂವೆನ್ನುತ್ತಿತ್ತು, ಬಾವಲಿಗಳು ತಲೆಕೆಳಗಾಗಿ ಜೋತು ಬಿದ್ದು ಮಲಗಿದ್ದವು, ಅಗಿಯುವಿಕೆ ನಿಲ್ಲಿಸಲೋ ಅಥವಾ ಏನು ಮಾಡುವುದು? ಬೆರಳು ಕಳೆದುಕೊಂಡ ಮೇಲೆ ಅಗೆಯುವುದೇತಕ್ಕೆ? ಇನ್ನೂ ಸ್ವಲ್ಪವಿದ್ದರೆ ಅಂಗೈ, ಕೈ, ತಲೆ, ಕಾಲು ಕಾಲ್ಬೆರಳು ಇಡೀ ಸಮಸ್ತ ದೇಹವೇ ಇಲ್ಲವಾಗಬಹುದೇನೋ ಹಾಗೆಯೇ ಆ ಗವಿಯಿಂದ ಹೊರಬಂದ.
ಕಣ್ಣಿಗೆ ಕಾಣದ ಆ ಅಮೂರ್ತ ಯಾವುದು?
ಬಯಲು ಬಾಗಿಲೊಳಗೆ ನಿಂತ ಯಾವದೋ ರಾಕ್ಷಸವೋ, ದೆವ್ವವೋ, ಭೂತವೋ ಕರಾಳು ರಾತ್ರಿಯೇ ಮೂರ್ತತೆ ಹೊಂದಿ ತÀನ್ನ ಬೆರಳು ನುಂಗಿತೋ. ಇದು ಏನು? ಯಾವ ಮಾಯೆ, ಯಾವ ಪವಾಡ, ಯಾವ ಕಾಲನ ಕಾರ್ಕೂಟ ದರ್ಶನ.
ತನ್ನ ಲುಂಗಿಯ ಚುಂಗನ್ನು ಕೈಗೆ ಕಟ್ಟಿದ. ಹೊರಬಂದು ಬಯಲೊಳಗೆ ನಿಂತುಕೊಂಡ.
ಅದಮ್ಯ ಬಯಲು, ಘನದ್ರವ ಅನಿಲಗಳ ಆಳದಲ್ಲಿ ಇನ್ನೂ ಏನೋ ಇದೇ ಅನ್ನಿಸಿತು. ಬೆಟ್ಟಗಳು ದೊಡ್ಡವೋ, ಚಿಕ್ಕವೋ ಬೃಹದಾಕಾರವಾಗಿ ಸಾಲುಸಾಲಾಗಿ ಮಲಗಿಕೊಂಡಿದ್ದವು. ಅವನ್ನು ವ್ಯಾಖ್ಯಾನಿಸಲು ಅವನಲ್ಲಿ ಏನು ಮಾಪನಗಳಿರಲಿಲ್ಲ. ದೊಡ್ಡವು ಎಂದರೆ ಹೇಗೆ ದೊಡ್ಡವು, ಆಕಾರದಲ್ಲೋ? ಕೃತಿಯಲ್ಲೋ? ಪರಿಣಾಮ ಸೃವಿಸುವ ರೀತಿಯಲ್ಲೋ ಎಲ್ಲವನ್ನು ಬೆರಳುಗಳ ಕಳೆದುಕೊಂಡ ಕ್ರಮದಿಂದಲೇ ನೋಡಹತ್ತಿದ. ಈ ಬೆಟ್ಟಗಳು ದಟ್ಟ ಗಾಳಿ ಕಣ್ಣಿಗೆ ಕಾಣುವ ಅನಿಲಗಳಿಂದ ಹಾಗೆ ಕಾಣುತ್ತಿದ್ದವು.
ಮನೆಗೆ ಬಂದ, ಅವನ ಬೆರಳಿಲ್ಲದ ಕೈಗಳ ನೋಡಿ ಹೆಂಡತಿ ಎದೆ ಒಡೆದುಕೊಂಡಳು. ಅಲ್ಲಿಯೇ ಇರುವ ವೈದ್ಯರಲ್ಲಿ ಕರೆದುಕೊಂಡು ಹೋದಳು. ವೈದ್ಯರು ಹೇಳಿದರು, ಇದು ಚಿಗುರಲಾರದ್ದು. ಆಕೆ ಕೇಳಿದಳು ಎರಡು ಬೆರಳುಗಳು ಇಲ್ಲದೆ ಇರಬಹುದೇ?
ಅದು ನಿನ್ನ ಕರ್ಮ, ಇಲ್ಲಿ ಆ ತೋಡುವ ಗಣಿ ಬಂದ ಮೇಲೆ ಈ ಮಣ್ಣಿನಲ್ಲಿ ರೆಸಿಡೂಯಲ್ ಸೇರಿಕೊಂಡಿದೆ. ಅದು ಗೊತ್ತಾಗದ ಹಾಗೆ, ಈ ಊರಲ್ಲಿ ತೋಡುವದೇ ಅಪಾಯ. ಇನ್ನು ಸ್ವಲ್ಪ ದಿನ? ಇಲ್ಲಿಯ ಧೂಳಿನ ಕಣವೇ ಮನುಷ್ಯನನ್ನು ಕತ್ತು ಹಿಸುಕಿ ಕೊಲ್ಲುತ್ತದೆ.
ಹಾಗಾದರೆ ನಾನು ದಿನನಿತ್ಯ ಮಾಡುವ ವ್ಯವಸಾಯ?
ಅದು ಬಿಡಬೇಕಾಗಿ ಬರಬಹುದು
ಈ ಪ್ರಶ್ನೆ ನನ್ನ ಡಾಕ್ಟರ್ ಪ್ರೊಫೇಶನ್‍ಗೆ ಸಂಬಂಧಿಸಿದ್ದು ಅಲ್ಲ, ಇನ್ನೂ ಸ್ವಲ್ಪ ದಿನ, ಈ ಊರಲ್ಲಿ ನನ್ನಂಥವರು ಇರಲಿಕ್ಕೆ ಇಲ್ಲ. ಯಾಕೆಂದರೆ ನಮಗೆ ಆರಾಮವಾಗಿ ಸಾಯಲಿಕ್ಕೆ ಅನೇಕ ಸ್ಥಳಗಳಿವೆ, ಈ ಊರೇ ಬೇಕಾಗಿಲ್ಲ. ಇದನ್ನು ಕಂಡು ಹಿಡಿದವರೇ ಇದರಿಂದಲೇ ಸತ್ತು ಹೋಗಿದ್ದಾರೆ. ನಿಮ್ಮಂಥವರ ಪಾಡೇನು? ಇನ್ನೂ ಸ್ವಲ್ಪ ದಿನ ಊರಲ್ಲಿರುವ ನೀರು, ಗಾಳಿ ಎಲ್ಲವೂ ನಿಮ್ಮನ್ನು ಕೊಲ್ಲುವ ಶೂಲಗಳಾಗುತ್ತವೆ.
ತೋಡದೆ ಊಳದೆ ಉತ್ತದೆ ಬಿತ್ತದೆ ಬದುಕಲು ಸಾಧ್ಯವಿರಲಿಲ್ಲ. ತೋಡಿದರೆ ಸಾವು ಎಂಬುದು ಮತ್ತೆ ಮಾರ್ಧನಿಸುತ್ತದೆ. ಕೈಬೆರಳು ಕಳೆದುಕೊಂಡ ಸ್ಥಿತಿ ನೋಡಿ ಹೆಂಡತಿ ರೊಯ್ಯನೆ ಆಳಹತ್ತಿದಳು. ಮೇಳೆ ಹಿಡಿಯುವುದು ಹೇಗೆ? ಬಿತ್ತುವುದು ಹೇಗೆ? ಬೆಳೆ ಬೆಳೆಯುವುದು ಹೇಗೆ? ಇದು ಒಂದು ಪ್ರಶ್ನೆ.
ಅಲ್ಲಿ ತೋಡಲು ನಿನಗೇನು ಅ,,,,,,,,.ಸಿತ್ತು. ನೀನು ಎರಡು ದಿನದಿಂದ ಗುದ್ದಲಿ, ಸಲಿಕೆ ಹಿಡಿದುಕೊಂಡು ಗವಿಯಲ್ಲಿ ಅಗಿಯಲು ಹೋದಾಗಲೆ ಅನ್ನುಕೊಂಡೆ ಈಗ ಅನುಭವಿಸು ಎಂದು ಬಿಕ್ಕಿಬಿಕ್ಕಿ ಅಳಹತ್ತಿದಳು.
ಅದರ ಮಣ್ಣು ಮಾರಿ ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ನಾನು ಹಾಗೆ ತೋಡಿ ದುಡ್ಡು ಮಾಡಿಕೊಳ್ಳಲು ಹೋಗಿ ಬೆರಳುಗಳ ಕಳೆದುಕೊಂಡೆ. ಬಯ್ಯಬೇಡ, ಬಯ್ಯಲು ಇದು ಸಮಯವಲ್ಲ. ನನ್ನ ಅಂಗವೈಕಲ್ಯದ ನೋವು ನನ್ನನ್ನು ಬಿಡಬೇಕಲ್ಲ. ಗಾಢವಾಗಿ ಕಾಡುತ್ತದೆ. ಅದರಲ್ಲಿ ನಿನ್ನ ಇರಿತ.
ಈ ಊರು ಮನುಷ್ಯರು ವಾಸಿಸಲಿಕ್ಕೆ ಅಲ್ಲ ಕ್ರಿಮಿಕೀಟ, ಪಕ್ಷಿ, ಸರೀಸೃಪಗಳು ವಾಸಿಸಲಿಕ್ಕೂ ಅಯೋಗ್ಯವಾಗಿರುವಂತಹುದು. ಈಗಾಗಲೇ ಈ ಊರಲ್ಲಿ ಅಂತರ್ಗಾಮಿಯಾಗಿ ವಿಷದ ಹೊನಲು ಹರಿಯುತ್ತಿದೆ. ಇನ್ನು ಸ್ವಲ್ಪ ದಿನ, ಅನೇಕರು ಉಸಿರಾಡುವ ಪುಪ್ಪಸ ಕಳೆದುಕೊಂಡಿದ್ದಾರೆ. ಅವರಿಗೆ ರೋಗ ತಗುಲಿಸಿಕೊಂಡಿದ್ದಾರೆ. ಕುಂಡೆಗೆ ಕ್ಯಾನ್ಸರ್ ಹಚ್ಚಿಕೊಂಡಿದ್ದಾರೆ. ಈಗ ನಿನ್ನ ಎರಡು ಬೆರಳುಗಳು ಉದರಿ ಬಿದ್ದುದು ಆಶ್ಚರ್ಯವಿಲ್ಲ. ಇನ್ನೂ ಸ್ವಲ್ಪ ದಿನವಾದರೆ ರುಂಡಮುಂಡಗಳು ಉದುರಿ ಬೀಳಬಹುದು
2
ಬೆರಳುಗಳ ಗಾಯದ ಜಾಗಕ್ಕೆ ಬ್ಯಾಕ್ಟೀರಿಯಗಳೂ ಬಂದಿದ್ದವು. ಸಮೃದ್ಧ ಭೂಮಿಯ ತಿನ್ನಲು.
ಇಂದು ನೋವು ಕೊಂಚ ಹೆಚ್ಚಾಯಿತೋ ಏನೋ? ಚೀರಹತ್ತಿದ. ಹೆಂಡತಿ ನಿನ್ನೆ ಡಾಕ್ಟರ್ ಕೊಟ್ಟ ನೋವು ನಿವಾರಕವನ್ನು ನುಂಗಿಸಿದಳು, ಹಾಗೆ ಮಲಗಿಕೊಂಡ.
ಪರಿಸರ ಹೋರಾಟಗಾರರಾದ ಮಾನಯ್ಯ ಬಂದಿದ್ದಾರೆ. ಯುರೋನಿಯಂ ಅಣು ಯೋಜನೆಗೆ ಧಿಕ್ಕಾರ ಎಂದು ಕೂಗುತ್ತಿದ್ದಾರೆ. ಅವನಿಗೆ ಹಿಂಸೆಯಾಗುತ್ತಿದೆ. ಇಪ್ಪತ್ತು ವರ್ಷದಿಂದ ಅವರು ಕೂಗಿದ ಕೂಗಿನ ಸ್ವರ ಸ್ವಲ್ಪವೂ ಬದಲಾಗಿಲ್ಲ.
ಸ್ವರ ತಾಳ ಲಯ ಎಲ್ಲವೂ ಹಾಗೆಯೇ ಇದೆ. ಅವರ ಜೊತೆÀ ಹತ್ತು ಜನರೂ ಬಂದಿದ್ದಾರೆ. ಇಪ್ಪತ್ತು ವರ್ಷದಿಂದ ಇದ್ದ ಬಡಕಲು ದೇಹ ಕೋಲು ಮುಖದ ಮಾನಯ್ಯನ ಮುಖ ದೇಹ ಈಗ ಬದಲಾಗಿದೆ. ಮುಖದ ಮೇಲ್ಪದರು ಎಣ್ಣೆ ತುಂಬಿಕೊಂಡಿದೆ
ಬಡಕಲು ದೇಹವಿದ್ದದ್ದು ಮೈ ಕೊಬ್ಬಿನಿಂದ ಆವೃತವಾಗಿದೆÉ. ಧ್ವನಿಯಲ್ಲಿ ಆತ್ಮಸ್ಥೈರ್ಯ ಇದೆ. ನಾವು ಈ ಯೋಜನೆ ಊರಿಗೆ ಬಂದಾಗಲೇ ಪ್ರತಿಭಟಿಸಿದೆವು. ಅದನ್ನು ಮೀರಿ ಸರ್ಕಾರ ಈ ಕಸಾಯಿಖಾನೆಯನ್ನು ಇಲ್ಲಿ ಸ್ಥಾಪಿಸಿತು ಎಂದರು ಮಾನಯ್ಯ. ಕಸಾಯಿ ಖಾನೆಯ ಫಲಾನುಭವಿಗಳಲ್ಲಿ ಇವರು ಒಬ್ಬರು ಎಂದು ಅವನಿಗೂ ತಿಳಿದಿತ್ತು. ಅವನಿಗೇಕೆ, ಜಗತ್ತಿಗೂ ತಿಳಿದಿತ್ತು.
ಮಾನಯ್ಯನ ಗುಡಿಸಲು ಮನೆ ಇಂದು ಮೂರು ಅಂತಸ್ತಿನ ಕಟ್ಟಡವಾಗಿದ್ದು ಹಾಗೆಯೇ ಅಲ್ಲವೇ?
ನಿಮಗೆ ಪರಿಹಾರ ಕೊಡಿಸುತ್ತೇವೆ ಎಂದರು ಮಾನಯ್ಯ.
ಯಪ್ಪಾ ಈವತ್ತೋ ಈ ಗತಿ ಇದೆ, ನಾಳೆ ನಾವು ಹೆಂಗ್ ತಿನ್ನಾನು? ಹೆಂಗ್ ಊಳಾನು? ಹೆಂಗಾ…….? ಅಂದಳು ಬೆರಳು ಕಳೆದುಕೊಂಡವನ ಹೆಂಡತಿ. ಈ ಬೆವರ್ಸಿ ಸೂ ಮಗನಿಗೆ ಹೇಳಿದೆ. ಇದ್ದುದರಲ್ಲಿ ತಿನ್ನೋನಾ ಉಣ್ಣೋನ ಬದುಕೋಣ ಇಲ್ಲಾದ ಉಸಾಬರಿ ನಮಗ್ಯಾಕೆ ಎಂದು ಹೇಳಿದರೂ ಕೇಳಬೇಕಲ್ಲ?
ಮಾನಯ್ಯನ ಮುಖದಲ್ಲಿ ಮಿಂಚೊಂದು ಹೊಳೆಯಿತು. ಅವನಿಗೆ ಇದು ವ್ಯಾಪಾರ ಮಾತ್ರ, ಹೋರಾಟ ದಲ್ಲಾಳಿಕರಣಗೊಂಡಿದ್ದು ಆತನ ಮುಖ ಪ್ರಕಟಿಸಿತು.
ಆ ಕಂಪನಿ ಎಂ.ಡಿಯ ಜೊತೆ ಮಾತಾಡುತ್ತೇನೆ. ನೀವು ಯಾವುದೇ ವರ್ತಮಾನ ಪತ್ರಿಕೆ, ಟಿ.ವಿ. ಮುಂದೆ ಹೋಗಬೇಡಿ, ಅಲ್ಲಿಗೆ ಹೋದರೆ ಇದು ಬಗೆಹರಿಯುವ ವಿಷಯವಲ್ಲ, ಆಮೇಲೆ ಕೋರ್ಟ್ ಕವಡೆ ಎಂದು ವ್ಯರ್ಥ ಕಾಲಹರಣ. ಸುಮಾರು 20-25 ವರ್ಷ ನಡೆಯುತ್ತದೆ. ಇಷ್ಟರಲ್ಲಿ ನೀವೇ ಇಲ್ಲವಾಗಬಹುದು.
ಪಕ್ಕದ ಮನೆಯ ಶಿಕ್ಷಕನೊಬ್ಬ ಬಂದು ನೋಡಿ ಮುಂದೊಂದು ದಿನ ನಾವೆಲ್ಲ ಇಲ್ಲವಾಗುತ್ತೇವೆ. ಕಣ್ಣಿಗೆ ಕಾಣದ್ದು ನಮ್ಮ ಅಂಗಗಳನ್ನು ಕತ್ತರಿಸುತ್ತದೆ ಎಂದರೆ ಅದು ಇರಬಹುದೇ? ಎಂದು ಗುನುಗಿದ. ಜಪಾನಿನ ಹಿರೋಶಿಮಾ ನಾಗಾಸಾಕಿ ನಾಶವಾದದ್ದು ಇದರಿಂದಲೇ, ಅಲ್ಲಿ ಏನು ಉತ್ಪತ್ತಿಯಿಲ್ಲ, ಬಿತ್ತುತ್ತಿಲ್ಲ, ಬೆಳೆಯುತ್ತಿಲ್ಲ, ಅಂಗವೈಕಲ್ಯ, ರೋಗ ರುಜಿನ, ಇನ್ನೂ ಇದೆ ಎಂದು ಹೇಳಿದ.
ಎಲ್ಲ ಹೇಳಿದ ಸಂಗತಿಗಳು ಅವನ ಮನಸ್ಸಿನಲ್ಲಿ ಬಿತ್ತಿ ಬೆಳೆಯಹತ್ತಿದವು. ಹೆಂಡತಿ ಮೊದಲ ಗುರು, ಅವಳ ಮಾತು ಕೇಳಿದರೆ ಇದು ಆಗುತ್ತಿರಲಿಲ್ಲವೇನೋ?
ದೊಡ್ಡ ತಪ್ಪು ಮೂಡಿದೆ. ಇದು ಅಲ್ಲದೆ ನನ್ನ ಅಂಗಗಳನ್ನು ಮೂತ್ರಕೋಶವನ್ನು ಹೃದಯವನ್ನು ಒಡೆದು ಹಾಕಬಹುದು ಎಂದು ಹಾಸಿಗೆಗೆ ಉರುಳಿದ, ನಿದ್ರೆ ಎಂಬುದು ಮರೀಚಿಕೆಯಾಗಿತ್ತು.
ಎದ್ದು ಕುಳಿತ, ನೀರು ಕುಡಿದ, ಅಡ್ಡಾಡಿದ, ಬೋಳ ಕೈ ಕಳೆ ಕಳೆದುಕೊಂಡಿತ್ತು. ಮಧ್ಯರಾತ್ರಿಯಾದರೂ ನಿದ್ರೆ ಇಲ್ಲ.
ಡಾಕ್ಟರ್ ಮತ್ತೆ ಹೇಳಿದ್ದರು, ಇದು ಏಳು ತಲೆಮಾರು ಆದರೂ ಮೆಲ್ಲಗೆ ಬಿಡದೆ ಕೊಲ್ಲುವಂತಹುದು. ಆತನಿಗೆ ತಾನು ಮಾಡಿದ ಸಣ್ಣ ತಪ್ಪು ಹೀಗೆ ತಲೆಮಾರನ್ನು ನುಂಗಿ ಹಾಕಬಹುದು ಎಂದು ಅಂದುಕೊಂಡಿರಲಿಲ್ಲ. ನಿದ್ರೆ ಎಂಬುದು ಬಂದುಹೋಗುವ ಜೋಕಾಲಿ ಆಗಿತ್ತು. ಆದರೆ ಮುಂಜಾನೆ ಕೋಳಿ ಕೂಗಿದಂತೆಲ್ಲ ತಣ್ಣನೆಯ ಗಾಳಿ ಜೊಂಪನ್ನು ಹೆಚ್ಚಿಸಲು ಸಹಾಯ ಮಾಡಿತ್ತು. ಕಂಗಳು ಮುಚ್ಚಿದ. ನಿದ್ರೆ ಎಂಬುದು ದಟ್ಟವಾಗುತ್ತ ಹೋಗಹತ್ತಿತ್ತು. ದಟ್ಟತೆಯ ನಿದ್ರೆಯ ಮಧ್ಯೆ ಇನ್ನೂ ಅದರ ಧ್ಯಾನದಲ್ಲೇ ಇತ್ತೇನೋ ಮದ. ಆತನಿಗೆ ಒಂದು ಶೂನ್ಯವೇ ಭಯಾನಕವಾಗಿ ಕಂಡಿತ್ತು. ಅದು ಕನಸೋ, ಭಾವನೆಯೋ ತಿಳಿಯದಾಯಿತು.
ಸಣ್ಣನೆ ಅಣುವೊಂದು ರಭಸವಾಗಿ ಮುನ್ನುಗ್ಗುತ್ತ ಇಲ್ಲಿರುವ ಕಟ್ಟಡಗಳನ್ನು ಒಡೆದು ಹಾಕಿತು. ನದಿಕೊಳ್ಳಗಳನ್ನು ಆಪೋಷನ ತೆಗೆದುಕೊಂಡಿತು. ಸಕಲ ಜೀವರಾಶಿಗಳನ್ನು ನುಂಗುತ್ತ ನುಂಗುತ್ತ ತನ್ನ ಮನೆಯ ಬಾಗಿಲಿಗೆ ಬಂದಿತ್ತು. ತನ್ನ ಮನೆಯೇ ಅದರ ಬಾಯಲ್ಲಿ ಮನೆಯೊಳಗೆ ತಾನು ಎಂಬ ಭಾವನೆ ದಟ್ಟವಾಯಿತು. ಇದು ನಿಜವೋ, ಭ್ರಮೆಯೋ ಅರಿಯದಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...