Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

ಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

- Advertisement -
- Advertisement -

| ಹನುಮಂತ ಹಾಲಿಗೇರಿ |

ಕೊಳ್ಳೆಹೊಡೆಯುವವರ ಕೈಗೆ ದೇಶವನ್ನು ಕೊಟ್ಟುಬಿಟ್ಟು ನಾನು ದೇಶ ಕಾಯುವ ಚೌಕಿದಾರ ಅಂತ ಹೇಳ್ಕೊಂಡವನ ಟ್ರೋಲ್‍ಗಳನ್ನು ನಾವು ಕಳೆದ ಒಂದು ವಾರದಿಂದ ಗಮನಿಸುತ್ತಿದ್ದೇವೆ. ಅಂಥವನೇ ಇನ್ನೊಬ್ಬ ಚೌಕಿದಾರರಾದ ಮನು ಬಳಿಗಾರ್ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಗಿರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಬಳಿಗಾರರು ಅಧ್ಯಕ್ಷರಾದ ಮೇಲೆ ಅವರ ಸರ್ವಾಧಿಕಾರದ ಸ್ವಯಂಕೃತ ತಪ್ಪುಗಳು ಒಂದೆರಡಲ್ಲ. ಈಗ ಸೂಕ್ಷ್ಮ ಸಂವೇದನೆಯ ಕವಯತ್ರಿ ರೂಪಾ ಹಾಸನ ಅವರು ಪರಿಷತ್ತಿನ ಅಜೀವ ಸದಸ್ಯತ್ವಕ್ಕೆ ನೀಡಿರುವ ರಾಜಿನಾಮೆ ಪಡೆದುಕೊಂಡು ಮತ್ತೊಮ್ಮೆ ಕನ್ನಡ ಸಾಂಸ್ಕೃತಿಕ ಜೀವಿಗಳಿಂದ ಗೇಲಿಗೊಳಗಾಗಿದ್ದಾರೆ.

ರೂಪಾ ಅವರು ರಾಜಿನಾಮೆ ನೀಡಿದರೆ ನಾನೇನು ಮಾಡಲಿ ಎಂದು ಅವರ ಆಪ್ತರ ಹತ್ತಿರ ಸಮರ್ಥಿಸಿಕೊಳ್ಳುತ್ತಿದ್ದಾರಂತೆ. `ಅವರೇನೋ ರಾಜಿನಾಮೆ ನೀಡಿದರು. ನೀವು ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷ, ಯಾವುದನ್ನು ಸ್ವೀಕರಿಸಬೇಕು. ಯಾವುದನ್ನು ಸ್ವೀಕರಿಸಿಬಾರದು ಎಂಬ ಕಾಮನ್ ಸೆನ್ಸ್ ನಿನಗೆ ಇರಬೇಕಲ್ಲವೇ?’ ಎಂದು ಬಳಿಗಾರರ ಆಪ್ತರೇ ಹಿಂದೆಮುಂದೆ ಆಡಿಕೊಳ್ಳುತ್ತಿದ್ದಾರೆ.

ಅಷ್ಟಕ್ಕೂ ರೂಪಾ ಅವರೇನು ತಮ್ಮ ಸ್ವಾರ್ಥ ಸಾಧನೆಗಾಗಿ ರಾಜೀನಾಮೆ ನೀಡಿದವರಲ್ಲ. ಅವರ ರಾಜೀನಾಮೆಯ ಹಿಂದೆ ಕನ್ನಡ ಶಾಲೆಗಳ ಏಳ್ಗೆಯ ಕುರಿತು ಸರ್ಕಾರ ಮತ್ತು ಸಾಹಿತ್ಯ ಪರಿಷತ್ತುಗಳ ನಿರ್ಲಕ್ಷ್ಯದ ವಿರುದ್ಧದ ಪ್ರತಿರೋಧದ ದನಿ ಇತ್ತು. ಮನೆಯ ಯಜಮಾನ ದಾರಿ ತಪ್ಪಿದಾಗ ಅವನ ತಪ್ಪನ್ನು ಸರಿಪಡಿಸಿ ಸರಿ ದಾರಿಗೆ ತರುವ ಉದ್ದೇಶದಿಂದ ಕನ್ನಡ ಮನೆಯ ಹಿರಿಮಗಳಾಗಿ ರೂಪಾ ಅವರು ಈ ಪತ್ರವನ್ನು ಬರೆದಿದ್ದರೇನೋ, ರಾಜಿನಾಮೆಯನ್ನು ನೀಡಲೇಬೇಕೆಂಬ ಹಟವೇನು ಅವರಲ್ಲಿ ಇದ್ದಂತಿರಲಿಲ್ಲ. ಆದರೆ, ಬಳಿಗಾರರು ರೂಪಾ ಅವರ ಎತ್ತಿರುವ ಮುಖ್ಯ ಪ್ರಶ್ನೆಗಳಾವುದರ ಬಗ್ಗೆಯೂ ಕಿಂಚಿತ್ ಗಮನ ನೀಡದೇ ಆಯ್ತು ಬೀಡಮ್ಮ ಎನ್ನುವ ದುರಹಂಕಾರಿಯಂತೆ ರಾಜೀನಾಮೆ ಪತ್ರಕ್ಕೆ ಅಂಗೀಕಾರದ ಮುದ್ರೆ ಒತ್ತಿ ತಮ್ಮ ಉದ್ದಟತನ ಮೆರೆದಿದ್ದಾರೆ.

ರೂಪಾ ಹಾಸನ ಅವರು ಕಸಾಪದ ದುಂದುವೆಚ್ಚವನ್ನು ಮತ್ತು ಕನ್ನಡಪರ ನಿಷ್ಕಾಳಜಿಯನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಚಂಪಾ ಅವರು ಅಧ್ಯಕ್ಷರಾಗಿದ್ದಾಗಲೂ ಹೀಗೆಯೇ ಅಜೀವ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಕಳಿಸಿದ್ದರು. ಆದರೆ, ಒಬ್ಬ ಹಿರಿಯ ಜೀವಪರ ಕಾಳಜಿಯ ಸಾಹಿತಿಯೂ ಆಗಿರುವ ಚಂಪಾ ಅವರು ರೂಪಾ ಅವರನ್ನು ಕರೆಸಿಕೊಂಡು “ನಿನ್ನ ಅಜೀವ ಸದಸ್ಯತ್ವದ ರಾಜೀನಾಮೆಯನ್ನು ಸ್ವೀಕರಿಸಲು ನಾನೇನು ಅಜೀವ ಅಧ್ಯಕ್ಷನೇ. ಇನ್ನೆರಡು ವರ್ಷ ಅಷ್ಟೆ ನನ್ನ ಆಟ. ನಾನೆ ಅಜೀವ ಅಧ್ಯಕ್ಷನಲ್ಲವೆಂದ ಮೇಲೆ ನಾನ್ಹೇಗೆ ನಿನ್ನ ರಾಜೀನಾಮೆ ತೆಗೆದುಕೊಳ್ಳಲಿಕ್ಕಾಗುತ್ತೆ, ಆಗೂದಿಲ್ಲ. ಆದ್ರೆ ನೀನು ಎತ್ತಿರುವ ಪ್ರಶ್ನೆಗಳೆಲ್ಲವೂ ಮೌಲಿಕವಾದವು. ಕನ್ನಡ ಶಾಲೆಗಳ ಮುಚ್ಚುತ್ತಿರುವುದನ್ನು ನಾನು ವಿರೋಧಿಸುತ್ತೇನೆ. ಸರಕಾರದೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ” ಎಂದು ಸಮಾಧಾನ ಮಾಡಿ ಕಳಿಸಿದ್ದರಂತೆ. ಆದರೆ, ಬಳಿಗಾರರು ಮಾತ್ರ ರೂಪಾ ಅವರ ಯಾವ ಪ್ರಶ್ನೆಗಳಿಗೂ ತಲೆ ಕೆಡಿಸಿಕೊಳ್ಳದೆ ರಾಜೀನಾಮೆಯನ್ನು ಸ್ವೀಕರಿಸುವ ಮೂಲಕ ಕಸಾಪದ ಅಜೀವ ಅಧ್ಯಕ್ಷರಾದವರಂತೆ ವರ್ತಿಸಿದ್ದಾರೆ. ಅವರ ಅಧಿಕಾರ ದಾಹದ ಬಗ್ಗೆ ಗೊತ್ತಿರದ್ದೇನಿಲ್ಲ. ಮೂರು ವರ್ಷದ ಅವಧಿಯನ್ನು ಬೈಲಾ ತಿದ್ದುಪಡಿ ಮಾಡಿಸಿಕೊಂಡು ಐದು ವರ್ಷಕ್ಕೆ ಏರಿಸಿಕೊಂಡಿರುವ ಅವರು ಅಜೀವ ಅಧ್ಯಕ್ಷಗಿರಿಗೂ ಏನಾದ್ರೂ ಹುನ್ನಾರ ಮಾಡಿದ್ರೂ ಮಾಡುವವರೇ ಎಂದು ಅವರ ಪಟಾಲಮ್ಮಿನ ಬಳಗದವರೇ ಮಾತಾಡಿಕೊಳ್ಳುತ್ತಿದ್ದಾರೆ.

ಮನು ಬಳಿಗಾರರ ಸರ್ವಾಧಿಕಾರಿ ಉದ್ದಟತನಗಳು ಒಂದೆರಡಲ್ಲ ಮತ್ತು ಇದೇ ಮೊದಲಲ್ಲ. ಈ ಹಿಂದೆ ಹಿರಿಯರಾದ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದಾಗ, ಆ ಹತ್ಯೆಯನ್ನು ವಿರೋಧಿಸಿ ಯುವ ಬರಹಗಾರರು ಕಸಾಪದ ಅರಳು ಪ್ರಶಸ್ತಿಯನ್ನು ವಾಪಸ್ ಮಾಡಿ ಪ್ರತಿಭಟನೆ ಮಾಡಿದ್ದರು. ಆಗ ಇದೇ ಬಳಿಗಾರರು “ಈ ಹುಡುಗರು ಪ್ರಚಾರಕ್ಕಾಗಿ ಇಂಥ ಅಗ್ಗದ ಗಿಮಿಕ್ ಮಾಡುತ್ತಿದ್ದಾರೆ” ಎಂದು ಲೂಜುಲೂಜಾಗಿ ಮಾತನಾಡುವ ಮೂಲಕ ತಮ್ಮ ಮರ್ಯಾದೆ ಕಳೆದುಕೊಂಡಿದ್ದರು. ತಮ್ಮ ಅಧಿಕಾರದ ಅವಧಿ ಮುಗಿಯಲು ಬಂದಾಗ ಕಸಾಪದ ಬೈಲಾವನ್ನೇ ಬದಲಾಯಿಸಿ ಮೂರು ವರ್ಷದ ಅವಧಿಯನ್ನು ಐದು ವರ್ಷಕ್ಕೆ ಏರಿಸಿಕೊಂಡರು. ಬೈಲಾ ಬದಲಾಯಿಸಿ ಐದು ವರ್ಷ ಮಾಡಿದ್ದು ಕಾನೂನು ಪ್ರಕಾರ ತಪ್ಪೇನೂ ಅಲ್ಲ, ಆದರೆ, ನಿಮಗೆ ಆತ್ಮಸಾಕ್ಷಿ ಅನ್ನೋದಿದ್ರೆ ಈಗ ಖುರ್ಚಿಯಿಂದ ಕೆಳಗಿಳಿಯಿರಿ. ಮುಂದಿನ ಅಧಿಕಾರಾವಧಿಯ ಅಧ್ಯಕ್ಷರು ಬೇಕಾದರೆ ಐದು ವರ್ಷ ಖುರ್ಚಿಯಲ್ಲಿರಲಿ ಎಂಬ ಪ್ರಜ್ಞಾವಂತರ ಕೂಗಿಗೆ ಬಳಿಗಾರರು ಕಿವಿಗೊಡುತ್ತಲೇ ಇಲ್ಲ.

ಇನ್ನು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ವಾನಗಳಂತೂ ಒಂದೆರಡಲ್ಲ. ಆರಂಭದಲ್ಲೇ ಸುಮಂಗಲಿಯರಿಂದ ಪೂರ್ಣಕುಂಭ ಮೆರವಣಿಗೆ ಎಂಬ ಕಂದಾಚಾರದ ವಿರುದ್ಧ ರಾಜ್ಯಾದ್ಯಂತ ಪ್ರತಿರೋಧ ಬುಗಿಲೆದ್ದರೂ ತಮ್ಮ ನವರಂದ್ರಗಳನ್ನೆಲ್ಲ ಮುಚ್ಚಿಕೊಂಡಿದ್ದ ಈ ಬಳಿಗಾರ ಸಾಹೇಬರು ಕೊನೆ ಕ್ಷಣದಲ್ಲಿ  ತಾವು ಅಂದುಕೊಂಡು ಸುಮಂಗಲಿಯರ ಕುಂಭ ಮೆರವಣಿಗೆಯನ್ನು ನಡೆಸಿ ತಮ್ಮ ಹಟವನ್ನೇ ಸಾಧಿಸಿದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೀಗ್ಲಿಯವರಾದ ಈ ಬಳಿಗಾರರ ಮೂಲತಃ ಗೌಡ್ಕಿ ಮನೆತನದಿಂದ ಬಂದವರು. ಆ ಜಮೀನ್ದಾರಿಕೆಯ ಪಳಿಯುಳಿಕೆಯೂ ಅವರ ನಡೆನುಡಿಗಳಲ್ಲಿ ಈಗಲೂ ಜೀವಂತವಾಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಉನ್ನತ ಅಧಿಕಾರದ ಹುದ್ದೆಗಳನ್ನು ಕೂಡ ಅದೇ ಗೌಡ್ಕಿ ಗತ್ತಿನಲ್ಲಿಯೇ ನಿಭಾಯಿಸಿದ್ದರು. ಕುಂತರೂ, ನಿಂತರೂ ಭಲೆ, ಭಲೆ ಎನ್ನುವ, ಬಹುಫರಾಕ್ ಹೇಳುವ ಬಾಲಬಡುಕರಿಗೆ ಮಾತ್ರ ಬಹುತೇಕ ಅನುದಾನ ಮತ್ತು ಅವಕಾಶಗಳನ್ನು ನೀಡಿದವರು. ಮುಂದೆ ಈ ಬಾಲಬಡುಕರೇ ಇವರನ್ನು ಕಸಾಪ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ನೆರವಾದರು. ಕೆಲವು ಪ್ರಜ್ಞಾವಂತ ಹಿರಿಯರು ಕೂಡ ಬಳಿಗಾರರನ್ನು ಚುನಾವಣೆಯ ಸಂದರ್ಭದಲ್ಲಿ ಬೆಂಬಲಿಸಿದ್ದು ವಿಷಾದನೀಯ. ಯಾಕಾದ್ರೂ ಈ ಪುಣ್ಯಾತ್ಮನನ್ನು ಗೆಲ್ಲಿಸಿದೆವೋ ಎಂದು ಈಗ ಅವರೆಲ್ಲ ಮುಖ ಕಿವುಚಿತ್ತಿದ್ದಾರಂತೆ.

ಒಟ್ನಲ್ಲಿ ಈ ಮನುಷ್ಯ ಮನು`ಸ್ಮತಿ’ ಬಳಿಗಾರ್ ಕಸಾಪವವನ್ನು ವಸಾಹತು ಮಾಡಿಕೊಂಡಿದ್ದು ಮತ್ತೊಮ್ಮೆ ಸಾಬೀತಾಗಿದೆ. ಒಂಚೂರು ಸಾಹಿತ್ಯಿಕ ಸಂವೇದನೆ ಇದ್ದಿದ್ದರೆ, ಒಂದಿಷ್ಟು ಕನ್ನಡ ಪುಸ್ತಕಗಳನ್ನು ಓದಿಕೊಂಡಿದ್ದರೆ, ಬಹುಶಃ ಬಳಿಗಾರರು ಹೀಗೆ ಮಾಡುತ್ತಿರಲಿಲ್ಲವೇನೋ. ಈಗಲೂ ಕಾಲ ಮಿಂಚಿಲ್ಲ. ಸಾಂಸ್ಕೃತಿಕ ವಲಯದ ಪ್ರಜ್ಞಾವಂತರೆಲ್ಲರೂ ಒಟ್ಟಾಗಿ ನೀನು ನಿನ್ನ ದುರಾಡಳಿತವನ್ನು ಬಿಡದಿದ್ದರೆ ನಾವೆಲ್ಲರೂ ಸೇರಿ ಅಜೀವ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿ ತಿದ್ದಬೇಕಿದೆ. ಇಲ್ಲದಿದ್ದರೆ ರೂಪಾ ಅವರ ರಾಜೀನಾಮೆ ಅರ್ಥ ಕಳೆದುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...