Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

ಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

- Advertisement -
- Advertisement -

| ಹನುಮಂತ ಹಾಲಿಗೇರಿ |

ಕೊಳ್ಳೆಹೊಡೆಯುವವರ ಕೈಗೆ ದೇಶವನ್ನು ಕೊಟ್ಟುಬಿಟ್ಟು ನಾನು ದೇಶ ಕಾಯುವ ಚೌಕಿದಾರ ಅಂತ ಹೇಳ್ಕೊಂಡವನ ಟ್ರೋಲ್‍ಗಳನ್ನು ನಾವು ಕಳೆದ ಒಂದು ವಾರದಿಂದ ಗಮನಿಸುತ್ತಿದ್ದೇವೆ. ಅಂಥವನೇ ಇನ್ನೊಬ್ಬ ಚೌಕಿದಾರರಾದ ಮನು ಬಳಿಗಾರ್ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಗಿರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಬಳಿಗಾರರು ಅಧ್ಯಕ್ಷರಾದ ಮೇಲೆ ಅವರ ಸರ್ವಾಧಿಕಾರದ ಸ್ವಯಂಕೃತ ತಪ್ಪುಗಳು ಒಂದೆರಡಲ್ಲ. ಈಗ ಸೂಕ್ಷ್ಮ ಸಂವೇದನೆಯ ಕವಯತ್ರಿ ರೂಪಾ ಹಾಸನ ಅವರು ಪರಿಷತ್ತಿನ ಅಜೀವ ಸದಸ್ಯತ್ವಕ್ಕೆ ನೀಡಿರುವ ರಾಜಿನಾಮೆ ಪಡೆದುಕೊಂಡು ಮತ್ತೊಮ್ಮೆ ಕನ್ನಡ ಸಾಂಸ್ಕೃತಿಕ ಜೀವಿಗಳಿಂದ ಗೇಲಿಗೊಳಗಾಗಿದ್ದಾರೆ.

ರೂಪಾ ಅವರು ರಾಜಿನಾಮೆ ನೀಡಿದರೆ ನಾನೇನು ಮಾಡಲಿ ಎಂದು ಅವರ ಆಪ್ತರ ಹತ್ತಿರ ಸಮರ್ಥಿಸಿಕೊಳ್ಳುತ್ತಿದ್ದಾರಂತೆ. `ಅವರೇನೋ ರಾಜಿನಾಮೆ ನೀಡಿದರು. ನೀವು ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷ, ಯಾವುದನ್ನು ಸ್ವೀಕರಿಸಬೇಕು. ಯಾವುದನ್ನು ಸ್ವೀಕರಿಸಿಬಾರದು ಎಂಬ ಕಾಮನ್ ಸೆನ್ಸ್ ನಿನಗೆ ಇರಬೇಕಲ್ಲವೇ?’ ಎಂದು ಬಳಿಗಾರರ ಆಪ್ತರೇ ಹಿಂದೆಮುಂದೆ ಆಡಿಕೊಳ್ಳುತ್ತಿದ್ದಾರೆ.

ಅಷ್ಟಕ್ಕೂ ರೂಪಾ ಅವರೇನು ತಮ್ಮ ಸ್ವಾರ್ಥ ಸಾಧನೆಗಾಗಿ ರಾಜೀನಾಮೆ ನೀಡಿದವರಲ್ಲ. ಅವರ ರಾಜೀನಾಮೆಯ ಹಿಂದೆ ಕನ್ನಡ ಶಾಲೆಗಳ ಏಳ್ಗೆಯ ಕುರಿತು ಸರ್ಕಾರ ಮತ್ತು ಸಾಹಿತ್ಯ ಪರಿಷತ್ತುಗಳ ನಿರ್ಲಕ್ಷ್ಯದ ವಿರುದ್ಧದ ಪ್ರತಿರೋಧದ ದನಿ ಇತ್ತು. ಮನೆಯ ಯಜಮಾನ ದಾರಿ ತಪ್ಪಿದಾಗ ಅವನ ತಪ್ಪನ್ನು ಸರಿಪಡಿಸಿ ಸರಿ ದಾರಿಗೆ ತರುವ ಉದ್ದೇಶದಿಂದ ಕನ್ನಡ ಮನೆಯ ಹಿರಿಮಗಳಾಗಿ ರೂಪಾ ಅವರು ಈ ಪತ್ರವನ್ನು ಬರೆದಿದ್ದರೇನೋ, ರಾಜಿನಾಮೆಯನ್ನು ನೀಡಲೇಬೇಕೆಂಬ ಹಟವೇನು ಅವರಲ್ಲಿ ಇದ್ದಂತಿರಲಿಲ್ಲ. ಆದರೆ, ಬಳಿಗಾರರು ರೂಪಾ ಅವರ ಎತ್ತಿರುವ ಮುಖ್ಯ ಪ್ರಶ್ನೆಗಳಾವುದರ ಬಗ್ಗೆಯೂ ಕಿಂಚಿತ್ ಗಮನ ನೀಡದೇ ಆಯ್ತು ಬೀಡಮ್ಮ ಎನ್ನುವ ದುರಹಂಕಾರಿಯಂತೆ ರಾಜೀನಾಮೆ ಪತ್ರಕ್ಕೆ ಅಂಗೀಕಾರದ ಮುದ್ರೆ ಒತ್ತಿ ತಮ್ಮ ಉದ್ದಟತನ ಮೆರೆದಿದ್ದಾರೆ.

ರೂಪಾ ಹಾಸನ ಅವರು ಕಸಾಪದ ದುಂದುವೆಚ್ಚವನ್ನು ಮತ್ತು ಕನ್ನಡಪರ ನಿಷ್ಕಾಳಜಿಯನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಚಂಪಾ ಅವರು ಅಧ್ಯಕ್ಷರಾಗಿದ್ದಾಗಲೂ ಹೀಗೆಯೇ ಅಜೀವ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಕಳಿಸಿದ್ದರು. ಆದರೆ, ಒಬ್ಬ ಹಿರಿಯ ಜೀವಪರ ಕಾಳಜಿಯ ಸಾಹಿತಿಯೂ ಆಗಿರುವ ಚಂಪಾ ಅವರು ರೂಪಾ ಅವರನ್ನು ಕರೆಸಿಕೊಂಡು “ನಿನ್ನ ಅಜೀವ ಸದಸ್ಯತ್ವದ ರಾಜೀನಾಮೆಯನ್ನು ಸ್ವೀಕರಿಸಲು ನಾನೇನು ಅಜೀವ ಅಧ್ಯಕ್ಷನೇ. ಇನ್ನೆರಡು ವರ್ಷ ಅಷ್ಟೆ ನನ್ನ ಆಟ. ನಾನೆ ಅಜೀವ ಅಧ್ಯಕ್ಷನಲ್ಲವೆಂದ ಮೇಲೆ ನಾನ್ಹೇಗೆ ನಿನ್ನ ರಾಜೀನಾಮೆ ತೆಗೆದುಕೊಳ್ಳಲಿಕ್ಕಾಗುತ್ತೆ, ಆಗೂದಿಲ್ಲ. ಆದ್ರೆ ನೀನು ಎತ್ತಿರುವ ಪ್ರಶ್ನೆಗಳೆಲ್ಲವೂ ಮೌಲಿಕವಾದವು. ಕನ್ನಡ ಶಾಲೆಗಳ ಮುಚ್ಚುತ್ತಿರುವುದನ್ನು ನಾನು ವಿರೋಧಿಸುತ್ತೇನೆ. ಸರಕಾರದೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ” ಎಂದು ಸಮಾಧಾನ ಮಾಡಿ ಕಳಿಸಿದ್ದರಂತೆ. ಆದರೆ, ಬಳಿಗಾರರು ಮಾತ್ರ ರೂಪಾ ಅವರ ಯಾವ ಪ್ರಶ್ನೆಗಳಿಗೂ ತಲೆ ಕೆಡಿಸಿಕೊಳ್ಳದೆ ರಾಜೀನಾಮೆಯನ್ನು ಸ್ವೀಕರಿಸುವ ಮೂಲಕ ಕಸಾಪದ ಅಜೀವ ಅಧ್ಯಕ್ಷರಾದವರಂತೆ ವರ್ತಿಸಿದ್ದಾರೆ. ಅವರ ಅಧಿಕಾರ ದಾಹದ ಬಗ್ಗೆ ಗೊತ್ತಿರದ್ದೇನಿಲ್ಲ. ಮೂರು ವರ್ಷದ ಅವಧಿಯನ್ನು ಬೈಲಾ ತಿದ್ದುಪಡಿ ಮಾಡಿಸಿಕೊಂಡು ಐದು ವರ್ಷಕ್ಕೆ ಏರಿಸಿಕೊಂಡಿರುವ ಅವರು ಅಜೀವ ಅಧ್ಯಕ್ಷಗಿರಿಗೂ ಏನಾದ್ರೂ ಹುನ್ನಾರ ಮಾಡಿದ್ರೂ ಮಾಡುವವರೇ ಎಂದು ಅವರ ಪಟಾಲಮ್ಮಿನ ಬಳಗದವರೇ ಮಾತಾಡಿಕೊಳ್ಳುತ್ತಿದ್ದಾರೆ.

ಮನು ಬಳಿಗಾರರ ಸರ್ವಾಧಿಕಾರಿ ಉದ್ದಟತನಗಳು ಒಂದೆರಡಲ್ಲ ಮತ್ತು ಇದೇ ಮೊದಲಲ್ಲ. ಈ ಹಿಂದೆ ಹಿರಿಯರಾದ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದಾಗ, ಆ ಹತ್ಯೆಯನ್ನು ವಿರೋಧಿಸಿ ಯುವ ಬರಹಗಾರರು ಕಸಾಪದ ಅರಳು ಪ್ರಶಸ್ತಿಯನ್ನು ವಾಪಸ್ ಮಾಡಿ ಪ್ರತಿಭಟನೆ ಮಾಡಿದ್ದರು. ಆಗ ಇದೇ ಬಳಿಗಾರರು “ಈ ಹುಡುಗರು ಪ್ರಚಾರಕ್ಕಾಗಿ ಇಂಥ ಅಗ್ಗದ ಗಿಮಿಕ್ ಮಾಡುತ್ತಿದ್ದಾರೆ” ಎಂದು ಲೂಜುಲೂಜಾಗಿ ಮಾತನಾಡುವ ಮೂಲಕ ತಮ್ಮ ಮರ್ಯಾದೆ ಕಳೆದುಕೊಂಡಿದ್ದರು. ತಮ್ಮ ಅಧಿಕಾರದ ಅವಧಿ ಮುಗಿಯಲು ಬಂದಾಗ ಕಸಾಪದ ಬೈಲಾವನ್ನೇ ಬದಲಾಯಿಸಿ ಮೂರು ವರ್ಷದ ಅವಧಿಯನ್ನು ಐದು ವರ್ಷಕ್ಕೆ ಏರಿಸಿಕೊಂಡರು. ಬೈಲಾ ಬದಲಾಯಿಸಿ ಐದು ವರ್ಷ ಮಾಡಿದ್ದು ಕಾನೂನು ಪ್ರಕಾರ ತಪ್ಪೇನೂ ಅಲ್ಲ, ಆದರೆ, ನಿಮಗೆ ಆತ್ಮಸಾಕ್ಷಿ ಅನ್ನೋದಿದ್ರೆ ಈಗ ಖುರ್ಚಿಯಿಂದ ಕೆಳಗಿಳಿಯಿರಿ. ಮುಂದಿನ ಅಧಿಕಾರಾವಧಿಯ ಅಧ್ಯಕ್ಷರು ಬೇಕಾದರೆ ಐದು ವರ್ಷ ಖುರ್ಚಿಯಲ್ಲಿರಲಿ ಎಂಬ ಪ್ರಜ್ಞಾವಂತರ ಕೂಗಿಗೆ ಬಳಿಗಾರರು ಕಿವಿಗೊಡುತ್ತಲೇ ಇಲ್ಲ.

ಇನ್ನು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ವಾನಗಳಂತೂ ಒಂದೆರಡಲ್ಲ. ಆರಂಭದಲ್ಲೇ ಸುಮಂಗಲಿಯರಿಂದ ಪೂರ್ಣಕುಂಭ ಮೆರವಣಿಗೆ ಎಂಬ ಕಂದಾಚಾರದ ವಿರುದ್ಧ ರಾಜ್ಯಾದ್ಯಂತ ಪ್ರತಿರೋಧ ಬುಗಿಲೆದ್ದರೂ ತಮ್ಮ ನವರಂದ್ರಗಳನ್ನೆಲ್ಲ ಮುಚ್ಚಿಕೊಂಡಿದ್ದ ಈ ಬಳಿಗಾರ ಸಾಹೇಬರು ಕೊನೆ ಕ್ಷಣದಲ್ಲಿ  ತಾವು ಅಂದುಕೊಂಡು ಸುಮಂಗಲಿಯರ ಕುಂಭ ಮೆರವಣಿಗೆಯನ್ನು ನಡೆಸಿ ತಮ್ಮ ಹಟವನ್ನೇ ಸಾಧಿಸಿದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೀಗ್ಲಿಯವರಾದ ಈ ಬಳಿಗಾರರ ಮೂಲತಃ ಗೌಡ್ಕಿ ಮನೆತನದಿಂದ ಬಂದವರು. ಆ ಜಮೀನ್ದಾರಿಕೆಯ ಪಳಿಯುಳಿಕೆಯೂ ಅವರ ನಡೆನುಡಿಗಳಲ್ಲಿ ಈಗಲೂ ಜೀವಂತವಾಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಉನ್ನತ ಅಧಿಕಾರದ ಹುದ್ದೆಗಳನ್ನು ಕೂಡ ಅದೇ ಗೌಡ್ಕಿ ಗತ್ತಿನಲ್ಲಿಯೇ ನಿಭಾಯಿಸಿದ್ದರು. ಕುಂತರೂ, ನಿಂತರೂ ಭಲೆ, ಭಲೆ ಎನ್ನುವ, ಬಹುಫರಾಕ್ ಹೇಳುವ ಬಾಲಬಡುಕರಿಗೆ ಮಾತ್ರ ಬಹುತೇಕ ಅನುದಾನ ಮತ್ತು ಅವಕಾಶಗಳನ್ನು ನೀಡಿದವರು. ಮುಂದೆ ಈ ಬಾಲಬಡುಕರೇ ಇವರನ್ನು ಕಸಾಪ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ನೆರವಾದರು. ಕೆಲವು ಪ್ರಜ್ಞಾವಂತ ಹಿರಿಯರು ಕೂಡ ಬಳಿಗಾರರನ್ನು ಚುನಾವಣೆಯ ಸಂದರ್ಭದಲ್ಲಿ ಬೆಂಬಲಿಸಿದ್ದು ವಿಷಾದನೀಯ. ಯಾಕಾದ್ರೂ ಈ ಪುಣ್ಯಾತ್ಮನನ್ನು ಗೆಲ್ಲಿಸಿದೆವೋ ಎಂದು ಈಗ ಅವರೆಲ್ಲ ಮುಖ ಕಿವುಚಿತ್ತಿದ್ದಾರಂತೆ.

ಒಟ್ನಲ್ಲಿ ಈ ಮನುಷ್ಯ ಮನು`ಸ್ಮತಿ’ ಬಳಿಗಾರ್ ಕಸಾಪವವನ್ನು ವಸಾಹತು ಮಾಡಿಕೊಂಡಿದ್ದು ಮತ್ತೊಮ್ಮೆ ಸಾಬೀತಾಗಿದೆ. ಒಂಚೂರು ಸಾಹಿತ್ಯಿಕ ಸಂವೇದನೆ ಇದ್ದಿದ್ದರೆ, ಒಂದಿಷ್ಟು ಕನ್ನಡ ಪುಸ್ತಕಗಳನ್ನು ಓದಿಕೊಂಡಿದ್ದರೆ, ಬಹುಶಃ ಬಳಿಗಾರರು ಹೀಗೆ ಮಾಡುತ್ತಿರಲಿಲ್ಲವೇನೋ. ಈಗಲೂ ಕಾಲ ಮಿಂಚಿಲ್ಲ. ಸಾಂಸ್ಕೃತಿಕ ವಲಯದ ಪ್ರಜ್ಞಾವಂತರೆಲ್ಲರೂ ಒಟ್ಟಾಗಿ ನೀನು ನಿನ್ನ ದುರಾಡಳಿತವನ್ನು ಬಿಡದಿದ್ದರೆ ನಾವೆಲ್ಲರೂ ಸೇರಿ ಅಜೀವ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿ ತಿದ್ದಬೇಕಿದೆ. ಇಲ್ಲದಿದ್ದರೆ ರೂಪಾ ಅವರ ರಾಜೀನಾಮೆ ಅರ್ಥ ಕಳೆದುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...