Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...