Homeಮುಖಪುಟಕನ್ಹಯ್ಯ ಹೇಳಿದ ಈ ಪುಟ್ಟ ಕಥೆ

ಕನ್ಹಯ್ಯ ಹೇಳಿದ ಈ ಪುಟ್ಟ ಕಥೆ

- Advertisement -
- Advertisement -

ಒಮ್ಮೆ ದಟ್ಟ ಕಾಡೊಂದಕ್ಕೆ ಬೆಂಕಿ ಬಿದ್ದಿರುತ್ತೆ. ದೊಡ್ಡದೊಡ್ಡ ಮರಗಳು ಒತ್ತಿ ಉರಿದು ಬೂದಿಯಾಗುತ್ತಿದ್ದರೆ, ಪ್ರಾಣಿಪಕ್ಷಿಗಳು ಸುಟ್ಟು ಕರಕಲಾಗುತ್ತಿರುತ್ತವೆ. ಆಗ ಒಂದು ಕೋಗಿಲೆ ತನ್ನ ಪುಟ್ಟ ಕೊಕ್ಕಿನಲ್ಲಿ ನೀರನ್ನು ತುಂಬಿತಂದು, ಸುರಿದು ಬೆಂಕಿ ನಂದಿಸಲು ಯತ್ನಿಸುತ್ತಿರುತ್ತೆ. ಇಡೀ ಜಗತ್ತಿಗೇ ಗೊತ್ತು ಅದರ ಕೊಕ್ಕಿನಿಂದ ಹೊರಬರುವ ನೀರಿನಿಂದ ಏನೂ ಆಗದು ಎಂದು. ಆಗ ಕಾಗೆಯೊಂದು ಕೇಳುತ್ತೆ, “ನೀನು ನೀರು ಸುರಿದುಬಿಟ್ಟರೆ ಬೆಂಕಿ ನಂದಿ ಬಿಡುತ್ತಾ. ಬೆಂಕಿ ಬಿದ್ದಿದೆ ಎಂದರೆ ಅದು ಆರಲೇ ಬೇಕು. ಕಾಲವೇ ಅದನ್ನು ನಂದಿಸುತ್ತೆ. ಮಳೆ ಸುರಿದೋ, ಕಾಡು ಬರಿದಾಗೋ ಬೆಂಕಿ ಆರಿಹೋಗುತ್ತೆ. ಆಮೇಲೆ ಜೀವನ ಯಥಾಪ್ರಕಾರ ಪುನರಾರಂಭವಾಗುತ್ತೆ. ವೃಥಾ ನೀನ್ಯಾಕೆ ಮೈನೋವು ಮಾಡಿಕೊಳ್ಳುತ್ತೀಯ?.” ಕೋಗಿಲೆ ತನ್ನ ಕಾಯಕದಲ್ಲಿ ನಿರತವಾಗಿಯೇ ಉತ್ತರಿಸುತ್ತೆ “ಹೌದು. ನನ್ನ ನೀರಿನಿಂದ ಏನೂ ಆಗುವುದಿಲ್ಲ. ಕಾಲವೇ ಇದನ್ನು ನಂದಿಸುತ್ತೆ. ಆದರೆ ಮುಂದೊಂದು ದಿನ ಎಲ್ಲಾ ಸರಿಯಾದಾಗ, ಮುಂದಿನ ಪೀಳಿಗೆಯವರು ‘ಹೌದು ಕಾಡಿಗೆ ಬೆಂಕಿ ಬಿದ್ದಾಗ ನೀನೇನು ಮಾಡುತ್ತಿದ್ದೆ?’ ಎಂದು ಪ್ರಶ್ನಿಸಿದಾಗ ಕೈಕಟ್ಟಿ ಕೂತಿದ್ದೆ ಎಂದು ಅಪರಾಧಿ ಆಗುವುದಕ್ಕಿಂತ ಬೆಂಕಿ ನಂದಿಸಲು ನನ್ನಿಂದಾದ ಪ್ರಯತ್ನ ಮಾಡುತ್ತಿದ್ದೆ ಎಂದು ಹೆಮ್ಮೆಯಿಂದ ಹೇಳಬಹುದಲ್ಲವೇ! ಕಡೇಪಕ್ಷ ಅಪರಾಧಿ ಸ್ಥಾನದಲ್ಲಾದರು ನನ್ನ ಹೆಸರು ಇರೋದಿಲ್ಲ” ಎಂದು ತನ್ನ ಕಾರ್ಯ ಮುಂದುವರೆಸುತ್ತೆ.

ನಮ್ಮ ದೇಶಕ್ಕೆ ಕೆಟ್ಟ ಘಳಿಗೆ ಬಂದಿದೆ; ಇದನ್ನು ಕಾಲವೇ ಸರಿ ಮಾಡುತ್ತೆ ಅಂತ ನಾವು ಕೈಕಟ್ಟಿ ಕೂತರೆ ನಾವೂ ಅಪರಾಧಿಗಳಾಗುತ್ತೇವೆ. ಮುಂದಿನ ಪೀಳಿಗೆ “ಆಗ ನೀನೇನು ಮಾಡುತ್ತಿದ್ದೆ?” ಎಂದು ಕೇಳಿದರೆ ಕೆಟ್ಟ ಕಾಲವನ್ನು ಹಿಮ್ಮೆಟ್ಟಿಸಲು ನನ್ನಿಂದಾದ ಪ್ರಯತ್ನದಲ್ಲಿ ನಿರತನಾಗಿದ್ದೆ ಎಂದು ಉತ್ತರ ನೀಡುವಷ್ಟಾದರು ಈಗ ಕಾರ್ಯಪ್ರವೃತ್ತರಾಗಬೇಕಿದೆ….. ಇದು ನಮ್ಮ ಹೊಣೆಯೂ ಹೌದು, ಕರ್ತವ್ಯವೂ ಹೌದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...