Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...