Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...