Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...