Homeಕರ್ನಾಟಕಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

ಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

- Advertisement -
- Advertisement -

| ಡಾ. ಬಿ.ಆರ್.ಮಂಜುನಾಥ್ |(ಲೇಖಕರು, ಸುದೀರ್ಘ ಕಾಲ ಎಡಪಕ್ಷದ ಮುಂಚೂಣಿ ಸ್ಥಾನದಲ್ಲಿದ್ದವರು)

ಮತ್ತೊಮ್ಮೆ ಕಮ್ಯುನಿಸ್ಟ್ ಪಕ್ಷಗಳ ವಿಲೀನದ ಪ್ರಶ್ನೆ ಗಾಳಿಯಲ್ಲಿದೆ. ಸಿಪಿಐ ಪಕ್ಷವು ಇದನ್ನು ಮೂವತ್ತು ವರ್ಷಗಳಿಂದಲೂ ಪ್ರಸ್ತಾಪಿಸುತ್ತಲೇ ಬಂದಿದೆ. ಆದಕ್ಕೆ ಇನ್ನೊಂದು ದೊಡ್ಡ ಪಕ್ಷವಾದ ಸಿಪಿಐ ಎಮ್ ಸ್ಪಂದಿಸಿರಲಿಲ್ಲ. 2015ರಲ್ಲಿ ಆ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಂ ಯಚೂರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ವಿಲೀನದ ಪ್ರಕ್ರಿಯೆಯೇನೂ ಚುರುಕಾಗಿರಲಿಲ್ಲ. ಈ ಬಾರಿ ಚುನಾವಣೆ ಮುಗಿದ ಮೇಲೆ ಸಿಪಿಐ ಮಗದೊಮ್ಮೆ ಪ್ರಸ್ತಾಪಿಸಿದೆ. ಹಾಗಾಗಿ ವಿಷಯ ಮುನ್ನೆಲೆಗೆ ಬಂದಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಡ ಪಕ್ಷಗಳು ವಿಪರೀತ ಪೆಟ್ಟು ತಿಂದಿವೆ. ಅವುಗಳ ಮೂಲ ನೆಲೆಗಳೇ ಧ್ವಂಸವಾಗಿವೆ. ಈ ಬೆಳವಣಿಗೆಯು ಕಾರ್ಯಕರ್ತರಲ್ಲೂ, ಪಕ್ಷದ ಬೆಂಬಲಿಗರಲ್ಲೂ ತೀವ್ರವಾದ ನಿರಾಶೆ, ನೋವುಗಳನ್ನು ಉಂಟು ಮಾಡುವಂಥದ್ದು. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಒಂದು ಹೊಸ ಉತ್ಸಾಹ, ಆಶಾವಾದವನ್ನು ಸೃಷ್ಟಿಸಲು ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳಲ್ಲಿ ವಿವಿಧ ಪಕ್ಷಗಳನ್ನು ಒಂದುಗೂಡಿಸುವುದೂ ಒಂದು ಎಂಬ ಭಾವನೆ ಮೂಡಿದೆ.

ಸಿಪಿಐ ಪಕ್ಷವು ಅನೇಕ ಬಾರಿ ವಿಲೀನಕ್ಕೆ ಅಡ್ಡಿಯಾಗುವಂಥ ಯಾವ ಸೈದ್ಧಾಂತಿಕ ಪ್ರಶ್ನೆಗಳೂ ಉಳಿದಿಲ್ಲ ಎಂದು ಸಾರುತ್ತಾ ಬಂದಿದೆ. ಈ ಮಾತು ಈಗ ಅನೇಕರಿಗೆ ಒಪ್ಪಿಗೆಯಾಗಬಹುದು. ಸೋವಿಯತ್ ಕಮ್ಯುನಿಸ್ಟ್ ಪಕ್ಷದ ಇಪ್ಪತ್ತನೆಯ ಮಹಾಧಿವೇಶನದ ನಂತರ ಉದ್ಭವಿಸಿದ್ದ ಪರಿಷ್ಕರಣವಾದಿ ತೀರ್ಮಾನಗಳ ಕುರಿತಾದ ಚರ್ಚೆ ಈಗ ಹಿಂದಕ್ಕೆ ಸರಿದಿದೆ. ಇನ್ನೊಂದು ಕಡೆ ಚೀನಾ ಕಮ್ಯುನಿಸ್ಟ್ ಪಕ್ಷ ಸಂಪೂರ್ಣವಾಗಿ ಮಾರುಕಟ್ಟೆ ಆರ್ಥಿಕತೆಗೆ ಒಲಿದು, ತನ್ನ ಸದಸ್ಯತ್ವವನ್ನು ಬಂಡವಾಳಗಾರರಿಗೂ ತೆರೆದನಂತರ ಆ ಪಕ್ಷದ ನಿಲುವಿನೊಂದಿಗೆ ಚರ್ಚೆಗಿಳಿಯುವ ಉತ್ಸಾಹವೂ ಯಾವ ಕಮ್ಯುನಿಸ್ಟರಲ್ಲೂ ಉಳಿದಿರಲಿಕ್ಕಿಲ್ಲ!

ಇನ್ನು ದೇಶದ ಎಡ ವಲಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಗ್ರಹಿಸಬೇಕು ಎಂಬುದನ್ನು ಕುರಿತಂತೆ ವಿಭಿನ್ನ ಅಭಿಪ್ರಾಯಗಳಿವೆ. ಕೇರಳದಲ್ಲಿ ಕಾಂಗ್ರೆಸ್‍ಅನ್ನೇ ಮುಖ್ಯ ಪ್ರತಿಸ್ಪರ್ಧಿಯಾಗಿ ಎದುರಿಸಬೇಕಾದ ಅನಿವಾರ್ಯತೆ ಇರುವುದು ಆ ಪಕ್ಷದೊಂದಿಗಿನ ಮೈತ್ರಿಗೆ ತೊಡಕಾಗುವ ಅಂಶ. ಕಾಂಗ್ರೆಸ್ ಜೊತೆ ಸೇರಿದರೆ ಮುಂದೆ ಅಲ್ಲಿ ಬಿಜೆಪಿ ಬಲವಾಗಬಹುದು ಎಂಬ ಆತಂಕ ಕಾಡುತ್ತದೆ. ಬಂಗಾಳದಲ್ಲಿ ಪರಿಸ್ಥಿತಿ ಹಾಗಿಲ್ಲ. ಅಲ್ಲಿ ಎಡ ಪಕ್ಷಗಳು ಬದುಕುಳಿಯುವುದೇ ಇಂದು ದೊಡ್ಡ ಸವಾಲು.

ಅರವತ್ತು- ಎಪ್ಪತ್ತರ ದಶಕದಲ್ಲಿ ಎಡಪಕ್ಷಗಳ ಮಧ್ಯದ ಚರ್ಚೆ, ಪಾಲೆಮಿಕ್ಸ್ ಅನವಶ್ಯಕವಾಗಿ ತಾರಕಕ್ಕೆ ಹೋಗುತ್ತಿತ್ತು. ಆಗ “ನೀನು ಟ್ರಾಟ್ಸ್ಕಿ, ನೀನು ಬುಖಾರಿನ್” ಎಂದು, “ನೀನು ಲಿನ್ ಪಿಯಾವೊನಂತಹ ಎಡ ದುಸ್ಸಾಹಸವಾದಿ”, ನೀನು ಲಿಯು ಶಾವೊ ಕಿ ಯಂತಹ ಬಲ ಪರಿಷ್ಕರಣವಾದಿ” ಎಂದು ಬಯ್ಯುವುದು, ಅದನ್ನು ನಂಬುವುದು ಸಾಮಾನ್ಯವಾಗಿತ್ತು! ಈಗ ಆ ಚಾಳಿ ಕೆಲವೊಂದು ತೀವ್ರಪಂಥೀಯವಾದಿಗಳಾದ ಚಿಕ್ಕ ಪುಟ್ಟ ಪಕ್ಷಗಳಲ್ಲಿ ಉಳಿದಿದೆ. ಈ ಪಕ್ಷಗಳು ನಮ್ಮ ಪಕ್ಷ ಮಾತ್ರ ಭಾರತದ ಕಾರ್ಮಿಕ ವರ್ಗದ ಪಕ್ಷ, ಉಳಿದವು ಪೆಟಿ ಬೂಶ್ರ್ವಾ ಪಕ್ಷಗಳು ಎಂಬ ನಿಲುವನ್ನು ತಾಳುತ್ತವೆ. ಅದು ಅವುಗಳ ಅಸ್ತಿತ್ವದ ಕಾರಣ ಮಾತ್ರವಲ್ಲ, ಅವರವರ ಪ್ರಾಮಾಣಿಕ ನಂಬುಗೆ ಸಹ. ಇನ್ನು ಸಶಸ್ತ್ರ ಹೋರಾಟದಲ್ಲಿರುವ ಸಂಘಟನೆಗಳು ಸಹ ಹೀಗೇ ಭಾವಿಸುತ್ತವೆ. ಅಲ್ಲದೆ ಅವರ ಸಂಘಟನಾತ್ಮಕ ವಿಧಾನಗಳೂ ಯಾರೊಡನೆಯೂ ಹೊಂದಿಕೆಯಾಗದಿರುವುದರಿಂದ ಅವರು ಚರ್ಚೆಯ ಪರಿಧಿಯಿಂದ ಹೊರಗೇ ಉಳಿಯುತ್ತಾರೆ.

ಹೀಗಾಗಿ ವಿವಿಧ ಕಮ್ಯುನಿಸ್ಟ್ ಪಕ್ಷಗಳ ವಿಲೀನ ಎಂಬುದು ಅಂತಿಮ ಲೆಕ್ಕಾಚಾರದಲ್ಲಿ ಸಿಪಿಐ ಮತ್ತು ಸಿಪಿಎಮ್ ಪಕ್ಷಗಳ ವಿಲೀನದ ಪ್ರಶ್ನೆಯಾಗಿ ಉಳಿಯುತ್ತದೆ. ಆದರೆ ಅದೂ ಸುಲಭವಲ್ಲ. ದಶಕಗಳಿಂದ ಬೆಳೆದು ಬಂದಿರುವ ನಿರಾಶೆ, ಅಪನಂಬುಗೆ, ತಳಮಟ್ಟದಲ್ಲಿ -ವಿಶೇಷವಾಗಿ ಯೂನಿಯನ್‍ಗಳಲ್ಲಿ – ತಲೆದೋರುವ ನಾಯಕತ್ವದ ಪ್ರಶ್ನೆ ಇವೆಲ್ಲ ಮೇಲೆ ಒಗ್ಗಟ್ಟು ಬಂದೊಡನೆ ಸ್ವಯಂಚಾಲಿತವಾಗಿ ಪರಿಹಾರ ಕಂಡುಕೊಳ್ಳುವ ಸಮಸ್ಯೆಗಳಲ್ಲ. ಇದಲ್ಲದೆ ದೃಷ್ಟಿಕೋನಗಳಲ್ಲೂ, ಕಾರ್ಯಶೈಲಿಯಲ್ಲೂ ಭಿನ್ನತೆಗಳಿರುತ್ತವೆ. ಒಬ್ಬರಿಗೆ ಇನ್ನೊಬ್ಬರ ನಿಲುವು ಗಡುಸು ಎನಿಸಿದರೆ, ಇನ್ನೊಬ್ಬರಿಗೆ ಮೊದಲಿನವರು ಸಡಿಲ ಎನಿಸಬಹುದು! “ಆಶೆಗಳೇ ಸವಾರಿಗೆ ಅಶ್ವಗಳಾಗುವುದಿಲ್ಲ”!!

ಹಾಗಿದ್ದರೆ ಕಾರ್ಯಸಾಧುವಾದ ಹೆಜ್ಜೆ ಯಾವುದು? ಎರಡೂ ಪಕ್ಷಗಳೂ ಎಲ್ಲ ಕಾರ್ಯಕ್ರಮ, ತೀರ್ಮಾನ ನೀತಿ ನಿರೂಪಣೆಗಳನ್ನು ಒಟ್ಟಾಗಿ ತೆಗೆದುಕೊಳ್ಳುವ ನಿರ್ಧಾರ ಮಾಡಬಹುದು. ಅದು ಗಟ್ಟಿಯಾಗುತ್ತಿದ್ದಂತೆ ಮುಂದೆ ವಿಲೀನಕ್ಕೆ ಭೂಮಿಕೆ ಸಿದ್ಧವಾಗುತ್ತದೆ. ಅದು ಅನೇಕ ವರ್ಷಗಳ ಪ್ರಕ್ರಿಯೆಯಾಗಬಹುದು. ಆದರೆ ಸಂಬಂಧಪಟ್ಟ ಪಕ್ಷಗಳ ದೃಷ್ಟಿಯಿಂದ ಅದು ಅತ್ಯಂತ ಮಹತ್ವದ ಹೆಜ್ಜೆ ಆಗುವುದರಲ್ಲಿ ಸಂದೇಹವಿಲ್ಲ.

ಅದೇನೇ ಇರಲಿ ಪ್ರತಿಗಾಮಿ ಪಕ್ಷಗಳು ವಿಜೃಂಭಿಸುತ್ತಿರುವ ಇಂದಿನ ಸಂದರ್ಭದಲ್ಲಿ ಎಡ ಪಕ್ಷಗಳು ಪರಸ್ಪರ ಹತ್ತಿರವಾಗಬೇಕಾದದ್ದು ಎಲ್ಲರಿಗೂ ಜೀವನ್ಮರಣದ ಪ್ರಶ್ನೆಯೇ. ಶೋಷಿತ ಸಮುದಾಯಗಳು ಇದಕ್ಕಾಗಿ ಹಂಬಲಿಸುತ್ತಾರೆ ಎಂಬುದನ್ನು ಮರೆಯಬಾರದು.

ಇದಕ್ಕಾಗಿ ಅನೇಕ ಸಣ್ಣ ಪುಟ್ಟ ಹೆಜ್ಜೆಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು. ಏನೇ ಭಿನ್ನಾಭಿಪ್ರಾಯಗಳಿರಲಿ ಅದನ್ನು ಸೂಕ್ತವಾದ ವೇದಿಕೆಗಳಲ್ಲಿ ಬಗೆಹರಿಸಿಕೊಳ್ಳುವುದು, ಟೀಕೆ ಅನಗತ್ಯವಾಗಿ ಕಟುವಾಗದಂತೆ ಎಚ್ಚರವಹಿಸುವುದು ಅಗತ್ಯ. ಒಬ್ಬರು ಇನ್ನೊಬ್ಬರ ತ್ಯಾಗ- ಬಲಿದಾನಗಳನ್ನು ಗೌರವಿಸುವುದು, ಪ್ರಯತ್ನಗಳನ್ನು ಮೆಚ್ವಿಕೊಳ್ಳುವುದು, ತಾತ್ವಿಕ ಸಹನೆಯನ್ನು ಹೊಂದಿರುವುದೂ ಸಹ ಅತ್ಯಗತ್ಯ. ಸ್ನೇಹ ವಿಶ್ವಾಸಗಳನ್ನು ಬೆಳೆಸಿಕೊಳ್ಳುತ್ತಾ, ಪರಸ್ಪರ ವಿನಯದಿಂದ ಕಲಿಯುತ್ತಾ ಮುಂದೆ ಸಾಗಬೇಕು. ಇದರ ಅರ್ಥ ಸೈದ್ಧಾಂತಿಕವಾಗಿ ರಾಜಿಯಾಗಬೇಕು ಎಂದಲ್ಲ. ಯಾವ ಭಿನ್ನಾಭಿಪ್ರಾಯವನ್ನು ಎಷ್ಡು ದೂರ ಒಯ್ಯಬೇಕು, ಎಲ್ಲಿಗೆ ನಿಲ್ಲಿಸಬೇಕು ಎಂಬ ಯುಕ್ತಾಯುಕ್ತ ಪರಿಜ್ಞಾನ ಅಷ್ಟೇ. ಸ್ಟಾಲಿನ್ ಅವರು ಲೆನಿನ್ ವ್ಯಕ್ತಿತ್ವವನ್ನು ಮೆಚ್ಚಿಕೊಳ್ಳುತ್ತಾ ಹೇಳಿದ ಮಾತು ಸ್ಮರಣಾರ್ಹ: “ತಾತ್ವಿಕತೆಯಲ್ಲಿ ನಿಷ್ಠೆ, ಅನುಷ್ಠಾನದಲ್ಲಿ ಬಾಗಿ ಬಳುಕುವ ಆಸ್ಥೆ”!

ಒಟ್ಟಿನಲ್ಲಿ ಕ್ರಾಂತಿಕಾರಿ ರಾಜಕೀಯದಲ್ಲಿ ಆದರ್ಶವನ್ನು ಧ್ರುವ ನಕ್ಷತ್ರದಂತೆ ಪರಿಭಾವಿಸುತ್ತಲೇ ದೈನಂದಿನ ಹೋರಾಟದಲ್ಲಿ ಸತತವಾಗಿ ಕಾರ್ಯಕ್ಷಮತೆಗೆ, ಸಾಧ್ಯಾಸಾಧ್ಯತೆಗೆ ಗಮನಕೊಡುತ್ತಾ ಮುನ್ನಡೆಯಬೇಕು. ಬೂಶ್ರ್ವಾ ಪಕ್ಷಗಳೊಂದಿಗೆ ಸಹ ಹೋರಾಟಗಳಲ್ಲಿ ಹೆಜ್ಜೆ ಹಾಕಬೇಕಾಗಬಹುದು. ಗಯಟೆ ಮಹಾ ಕವಿಯ ಈ ಸಾಲುಗಳು ಮಾಕ್ರ್ಸ್‍ಗೆ ತುಂಬಾ ಪ್ರಿಯವಾಗಿತ್ತು:
“ಒಣ ಸಿದ್ಧಾಂತ ಬರಡು ಗೆಳೆಯ! ಬದುಕು ಮಾತ್ರ ನಿತ್ಯ ಹರಿದ್ವರ್ಣ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....