Homeರಾಜಕೀಯಕರಾವಳಿ ಪೊಲಿಟಿಕ್ಸ್: ಬಿಜೆಪಿಯಲ್ಲಿ ಬಂಟರ ದರ್ಬಾರ್, ಬಿಲ್ಲವರು ಬರ್ಬಾದ್!!

ಕರಾವಳಿ ಪೊಲಿಟಿಕ್ಸ್: ಬಿಜೆಪಿಯಲ್ಲಿ ಬಂಟರ ದರ್ಬಾರ್, ಬಿಲ್ಲವರು ಬರ್ಬಾದ್!!

- Advertisement -
- Advertisement -
ನಹುಷ |
ಅವಿಭಜಿತ ದಕ್ಷಿಣ ಕನ್ನಡದ ಬಿಜೆಪಿ ಬಲಾಢ್ಯ ಬಂಟರ ಮತ್ತು  ಬೂಟಾಟಿಕೆಯ  ಬ್ರಾಹ್ಮಣರ ಪ್ರೈವೇಟ್  ಲಿಮಿಟೆಡ್ ಎಂಬುದನ್ನು  ಮುಗಿದ ಅಸೆಂಬ್ಲಿ ಚುನಾವಣೆ  ನಿಸ್ಸಂಶಯವಾಗಿ  ಸಾಬೀತುಮಾಡಿದೆ!  ಬಹುಸಂಖ್ಯಾತ ಬಿಲ್ಲವರು  ಮತ್ತು ಮೊಗವೀರ, ಕೊಟ್ಟಾರಿ,  ಕುಲಾಲ, ದೇವಾಡಿಗ,  ಕೋಟೆ ಕ್ಷತ್ರಿಯ, ಗಾಣಿಗ,  ಗಟ್ಟಿ,  ನಲಿಕೆ,  ಮರಾಠಿ….. ಮುಂತಾದ ಸಣ್ಣ-ಪುಟ್ಟ ಜಾತಿಯ  ಮುಗ್ಧ ಶೂದ್ರರನ್ನು ಹಿಂದೂತ್ವದ ರಕ್ತಪಿಪಾಸು ಘನಘೋರ ಯುದ್ಧಕ್ಕೆ ಕಾಲಾಳುಗಳಂತೆ ಬಳಸಿ ಬಲಿಹಾಕುವ ಸಂಘ ಪರಿವಾರದ ಹಿಂದೂತ್ವದ  ಸೂತ್ರಧಾರರು ಅಧಿಕಾರ,  ಸುಖ, ಸೌಭಾಗ್ಯಗಳನ್ನು  ಜನಿವಾರಿಗಳಿಗೆ, ಪಾಳೆಗಾರಿ ಬಂಟರ ತುಂಟರಿಗಷ್ಟೇ  ಸೀಮಿತ ಮಾಡಿಕೊಂಡಿದ್ದಾರೆ.
ಕರಾವಳಿಯಲ್ಲಿ ಸರಿಸುಮಾರು ಶೇ.24ರಷ್ಟು ಮುಸ್ಲಿಮರಿದ್ದಾರೆ. ಅವರಷ್ಟೇ ಬಿಲ್ಲವರಿದ್ದಾರೆ. ಈ  ಬಿಲ್ಲವರ ಜತೆ ಇತರ  ಹಿಂದುಳಿದ  ಜನಾಂಗದ ಸಣ್ಣಸಣ್ಣ ಜಾತಿಗಳನ್ನು  ಸೇರಿಸಿದರೆ ಶೇಕಡಾ ಹತ್ತರಷ್ಟಿರುವ  ಬಂಟರು  ಮತ್ತು ಅದಕ್ಕಿಂತ ಕಡಿಮೆ ಇರುವ  ಬ್ರಾಹ್ಮಣರು ಯಾವ ಲೆಕ್ಕಕ್ಕೂ  ಇಲ್ಲ. ಆದರೆ ತೋಳ್ಬಲದ  ಬಂಟರು ಮತ್ತು ತಾಂತ್ರಿಕ ವಿಪ್ರರು ಹಿಂದುಳಿದ  ವರ್ಗದವರನ್ನ  “ಮಂಗ”  ಮಾಡಿ ಬಿಜೆಪಿಯಲ್ಲಿ ಬೆಣ್ಣೆಯನ್ನು ತಿನ್ನುತ್ತಿದ್ದಾರೆ.  ಕರಾವಳಿಗೆ ಹಿಂದೂತ್ವದ ಅಮಲೇರಿರುವುದು ಕರಾರುವಾಕ್ಕಾಗಿ  ಗ್ರಹಿಸಿದ್ದ ಸಂಸದ  ನಳಿನ್ ಕುಮಾರ್ ಕುಟೀಲು  ಎಂಬ  ಬೆಂಕಿ ನವಾಬ  ಮತ್ತು  ವಿಶ್ವ ಬಂಟರ   ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಲಾಡಿ ಸೇರಿಕೊಂಡು  ಸ್ವ-ಜಾತಿಯ ಹೆಚ್ಚು ಕ್ಯಾಂಡಿಡೇಟ್‍ಗಳನ್ನು ಬಿಜೆಪಿಯಿಂದ  ಅಖಾಡಕ್ಕೆ  ಇಳಿಸುವಂತೆ  ಷಡ್ಯಂತ್ರ ಹೆಣೆದಿದ್ದರು.  ಒಂದು  ಹಂತದಲ್ಲಿ ನಳಿನ್, “ಗುರು” ಕಲ್ಲಡ್ಕ ಭಟ್ಟರಿಗೇ ರೋಪು ಹಾಕಿ  ಜಾತಿಬಂಧುಗಳಿಗೆ ಟಿಕೆಟ್ ಕೊಡಿಸಲು ಹಾರಾಡಿದ್ದರು.  ಬೆಚ್ಚಿಬಿದ್ದ ಕಲ್ಲಡ್ಕ ಕಟೀಲ್‍ಗೆ ಶರಣಾಗಿ ಹೋಗಿದ್ದರು.
ಕಲ್ಲಡ್ಕ ಭಟ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ  12  ಸಾಮಾನ್ಯ ಕ್ಷೇತ್ರಗಳ ಪೈಕಿ ಆರರಲ್ಲಿ ಬಂಟರ ಬಹಾದ್ದೂರರಿಗೆ ಟಿಕೆಟ್ ಕೊಡಿಸಲು  ನಳಿನ್-ಮಾಲಾಡಿ ರೈ  ಯಶಸ್ವಿಯಾದರು. ಬೈಂದೂರಲ್ಲಿ  ಸುಕುಮಾರ  ಶಟ್ಟಿ,  ಕುಂದಾಪುರದಲ್ಲಿ ಹಾಲಾಡಿ  ಶ್ರೀನಿವಾಸ್  ಶೆಟ್ಟಿ,  ಸುರತ್ಕಲ್‍ನಲ್ಲಿ ಡಾ|| ಭರತ್  ಶೆಟ್ಟಿ, ಉಳ್ಳಾಲದಲ್ಲಿ  ಸಂತೋಷ  ಶೆಟ್ಟಿ,   ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಎಂಬ  ಲಾಟ್‍ಪೂಟ್  ಬಂಟರಿಗೆ  ಬಿಜೆಪಿ ಹೈಕಮಾಂಡ್ ಕಲ್ಲಡ್ಕ ಭಟ್ಟರಿಗೆ ಟಿಕೆಟ್ ಕೊಡಬೇಕಾಗಿ ಬಂತು! 23  ಹಿಂದೂಗಳನ್ನು  ಸಾಬರು ಕಾಂಗ್ರೆಸ್‍ನ  ಸಿದ್ದು  ಸರಕಾರದ  ಸಹಕಾರದಲ್ಲಿ ಕೊಂದು ಹಾಕಿದರೆಂಬ ನಳಿನ್, ಅನಂತ್‍ಕುಮಾರ್ ಹೆಗಡೆ, ಶೋಭಾ, ಕಲ್ಲಡ್ಕ ಮತ್ತವರ ಬಾಸ್‍ಗಳಾದ ಆದಿತ್ಯನಾಥ,  ಅಮಿತ್ ಶಾಗಳ  ಬೊಬ್ಬೆಗೆ ಕರಾವಳಿಯ  ಬಿಲ್ಲವ  ಮತ್ತಿತರ ಹಿಂದುಳಿದ ವರ್ಗದ ಜನರು ಬ್ರೈನ್‍ವಾಶ್ ಆಗಿದ್ದು ಆರರಲ್ಲಿ ಐದು ಬಂಟರು  ಸಾರಾಸಗಟಾಗಿ  ಶಾಸಕರಾಗಲು  ನೆರವಾಯ್ತು.  ಇದನ್ನು ಮೊದಲೇ ಅಂದಾಜಿಸಿದ್ದ  ನಳಿನ್ ಮತ್ತು ಮಾಲಾಡಿಗುತ್ತು ರೈ,  ಈಗ  ಕರಾವಳಿ ಬಿಜೆಪಿಯಲ್ಲಿ ಬಂಟರ ಸಾಮ್ರಾಜ್ಯ  ಸ್ಥಾಪಿಸಿ ಅಟ್ಟಹಾಸಗೈಯ್ಯುತ್ತಿದ್ದಾರೆ.

ಟಿಕೆಟ್  ಹಂಚಿಕೆಯಾದಾಗ  ಬಿಜೆಪಿಯ ಬಿಲ್ಲವ  ಮುಂದಾಳುಗಳು  ಬೇಸರ ಮಾಡಿಕೊಂಡಿದ್ದರು.  ಇದು ಬಿಜೆಪಿಗೆ ಉಲ್ಟಾ  ಹೊಡೆದು ಕಾಂಗ್ರೆಸ್‍ಗೆ  ಅನುಕೂಲ  ಮಾಡಿಕೊಡುತ್ತದೆಂದು  ರಾಜಕೀಯ  ಪಂಡಿತರು ತರ್ಕ  ಮಾಡಿದ್ದರು.  ದುರಂತವೆಂದರೆ  ಜನವಾರಿಗಳ  ಮತ್ತು  ಬಂಟರ  ನಳಿನ್‍ನ  ಹಿಂದೂತ್ವದ  ಹೋರಾಟದಲ್ಲಿ ಹೆಚ್ಚು  ಹಾನಿಗೊಳಗಾಗಿದ್ದಲ್ಲದೇ  ಜೀವಬಲಿ ಕೊಡಬೇಕಾಗಿ ಬಂದಿದ್ದ  ಬಿಲ್ಲವರಿಗೆ ತಮಗಾದ ಅನ್ಯಾಯ, ಮೋಸ, ವಂಚನೆ ಅರ್ಥವೇ ಆಗಲಿಲ್ಲ. ಹೆಚ್ಚಿನ ಬಿಲ್ಲವರು ಸಂಘ  ಸರದಾರರ  ಹುಸಿ  ಹಿಂದೂತ್ವದ ಮಾತುಗಾರಿಕೆಗೆ ಮರುಳಾಗಿ ಪರಂಪರಾಗತ ಬಂಟರ ಭೂಪರಿಗೆ ಕಣ್ಮುಚ್ಚಿ ಓಟು ಒತ್ತಿದ್ದಾರೆ.  ಕಾರ್ಕಳದಲ್ಲಿ  ಗೆದ್ದ  ಬಾಬಾಬುಡನ್‍ಗಿರಿ-ದತ್ತಪೀಠ  ಭಾನ್ಗಡಿಯ ಬೈಪ್ರಾಡಕ್ಟು ಸುನೀಲ್ ಕುಮಾರ್ ಎಂಬ ಅರೆಬಿಲ್ಲವ-ಅರೆಬ್ರಾಹ್ಮಣ ಒಬ್ಬನೇ ಬಿಜಿಪಿಯ ಘೋಷಿತ  ಬಿಲ್ಲವ ಶಾಸಕ ಇಡೀ ಅವಿಭಜಿತ ದಕ್ಷಿಣ ಕನ್ನಡಕ್ಕೆ!! ಬಿಜಿಪಿ ಟಿಕೇಟ್ ದಯಪಾಲಿಸಿದ್ದ ಏಕೈಕ ಬಿಲ್ಲವ ಸುನೀಲ್‍ಕುಮಾರ.
ಪುತ್ತೂರಿನಲ್ಲಿ  ಬಿಜಿಪಿ ಅಭ್ಯರ್ಥಿಯಾಗಿದ್ದ  ಸಂಜೀವ್ ಮಡಂದೂರ್ ಎಂಬಾತ ಕೇಂದ್ರದ  ನಾಮಕಾವಸ್ಥೆ ಮಂತ್ರಿ ಸದಾನಂದಗೌಡರ ಹತ್ತಿರತ್ತಿರದ ಸಂಬಂಧಿ ಬಂಟ-ಗೌಡ ಕೋಟಾದ ಕ್ಯಾಂಡಿಡೇಟ್. ಹೀಗಾಗಿ ಬರೋಬ್ಬರಿ ಏಳು ಮಂದಿಗೆ ಬಂಟರ  ಲಾಬಿಯಿಂದಾಗಿ ಟಿಕೆಟ್ ಸಿಕ್ಕಿತ್ತು. ಮಡಂದೂರುಗೆ ಸದಾನಂದಗೌಡರಿಗಿಂತ ಸಂಸದ ನಳೀನ್ ಎಂದರೆ ಹೆಚ್ಚು ನಿಷ್ಠೆ. ಬಂಟ-ಗೌಡ ಕೋಟಾದಲ್ಲಿ ಕಮಲ ಹಿಡಿದುಕೊಂಡು ಅಖಾಡಕ್ಕೆ ಇಳಿದವರಲ್ಲಿ ಉಳ್ಳಾಲದ ಸಂತೋಷ ಶೆಟ್ಟಿ ಒಬ್ಬನ ಬಿಟ್ಟರೆ ಉಳಿದವರೆಲ್ಲರೂ   ಕೇಸರಿ ಶಾಸಕರಾಗಿದ್ದಾರೆ. ಬಂಟರ ಕ್ಯಾಂಡಿಡೇಟುಗಳನ್ನು ಗೆಲ್ಲಿಸಿಕೊಳ್ಳಲು ಸಂಸದ ನಳಿನ್  ಮತ್ತು ವಿಶ್ವ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ  ವiಲಾಡಿ ತುಂಬ  ವ್ಯವಸ್ಥಿತ-ರಹಸ್ಯ ಕಾರ್ಯಾಚರಣೆಗೆ  ಇಳಿದಿದ್ದರು. ಹಿಂದುಳಿದ ವರ್ಗದ ಬಿಲ್ಲವರು  ಮತ್ತು ಇತರೆ ಅಮಾಯಕ ಜಾತಿ ಜನಗಳಿಗೆ  ಟೋಪಿ ಏರಿಸಿ ಸ್ವಜಾತಿ ಹುರಿಯಾಳುಗಳ  ಎಂಎಲ್‍ಎ ಮಾಡಿಕೊಳ್ಳಲು ಬಂಟರಿಗೆ ಜಾತಿ ದುರಭಿಮಾನದ ಬೂಸ್ಟ್ ಕುಡಿಸಿ ಪ್ರಚೋದಿಸಿದರು.
ಬಿಜಿಪಿ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆಯೇ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ  ಒಂದು ವಾಟ್ಸಪ್ ಪ್ರಕಟಣೆ ರವಾನಿಸಿದ್ದರು. ಸ್ವಜಾತಿ ಬಂಟರ   ವಲಯದಲ್ಲಿ ಹರಿದಾಡಿದ ಆ ಸಂದೇಶ “ಬಂಟತ್ವ” ಕೆರಳಿಸುವ ಒಕ್ಕಣೆಯಿಂದ ಕೂಡಿದೆ. ತಾನು ಮತ್ತು ಸಂಸದ ನಳಿನ್ ಸರದಾರ ಸೇರಿಕೊಂಡು ಬರೋಬ್ಬರಿ ಆರು ಬಂಟರು ಬಿಜೆಪಿ  ಟಿಕೆಟ್ ಪಡೆಯುವಂತೆ ಮಾಡಿದ್ದೇವೆ. ಈಗ ಇವರೆಲ್ಲರನ್ನ ಗೆಲ್ಲಿಸಿಕೊಳ್ಳುವ ಸವಾಲು  ಬಂಟರ ಮೇಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಬಂಟರ ಮತ್ತು ಬ್ರಾಹ್ಮಣರ ನಾಡಾಗಿದ್ದು ಅದನ್ನ ಉಳಿಸಿಕೊಳ್ಳಲು ಆರೂ ಬಂಟರ ಆಯ್ಕೆಗೆ ಬಂಟರು  ಭಿನ್ನಾಭಿಪ್ರಾಯ ಮರೆತು ಬಿಜೆಪಿಗೆ ಮತ ಹಾಕುವ ಮತ್ತು ಹಾಕಿಸುವ ಕೆಲಸ  ಮಾಡಬೇಕಾಗಿದೆ. ಈ ತಂತ್ರಗಾರಿಕೆ ಹಿಂದುಳಿದ ವರ್ಗದವರಿಗೆ ತಿಳಿಯದಂತೆ ಗೌಪ್ಯವಾಗಿ ಕಾರ್ಯಾಚರಣೆ ಮಾಡಬೇಕೆಂದು ಮಲಾಡಿಗುತ್ತಾ ರೈ ಸಂದೇಶ ಕಳಿಸಿದ್ದರು.
ಬಿಜೆಪಿಯ ಆರೂ ಬಂಟ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸ್ವಜಾತಿ ಬಾಂಧವರಿಗೆ  ಬಂಟರ ಸಂಘದ ಅಧ್ಯಕ್ಷ  ಮಲಾಡಿಗುತ್ತಾ ರೈ  ಪ್ರಚೋದಿಸಿರುವುದರ ಹಿಂದಿನ    ಮರ್ಮ ಕತೂಹಲಕಾರಿಯಾಗಿದೆ. ಸದರಿ ಆರು ಬಂಟರು ಗೆದ್ದರಷ್ಟೇ ಮುಂಬರುವ ಲೋಕಸಭಾ ಎಲೆಕ್ಷನ್‍ನಲ್ಲಿ ಉಡುಪಿ-ಚಿಕ್ಕಮಗಳೂರು ಮತ್ತು ಮಂಗಳೂರು ಪಾರ್ಲಿಮೆಂಟ್ ಕ್ಷೇತ್ರದಲ್ಲಿ  ಬಂಟರ ಜಯಪ್ರಕಾಶ್ ಹೆಗಡೆ ಹಾಗೂ ನಳಿನ್ ಕುಮಾರ್ ಕಟೀಲ್‍ಗೆ ಟಿಕೆಟ್ ಸುಲಭವಾಗಿ ದಕ್ಕುತ್ತದೆ ಎಂಬುದು ಮಲಾಡಿಗುತ್ತ ರೈ ಲೆಕ್ಕಾಚಾರ. ಆಗ ಮಾತ್ರ  ಬಂಟರ ಹಿತಾಸಕ್ತಿಯ ರಕ್ಷಣೆ ಸಾಧ್ಯವೆಂಬ ಭಾವನೆ ಬಂಟರಲ್ಲಿ ಬಿತ್ತಲು ರೈ ಮಸಲತ್ತು ಮಾಡಿದ್ದಾನೆ. ಇದರ ಹಿಂದೆ ನಳಿನ್‍ನ ಕುಟಿಲತೆ ಅಡಗಿದೆ ಎಂಬುದು ಕಟ್ಟರ್ ಚೆಡ್ಡಿಗಳೇ ಈಗ ಪಿಸುಗುಡುತ್ತಿದ್ದಾರೆ. ನಳಿನ್‍ನ ಕಂಡರೆ  ಮೂಗುಮುರಿಯುವ ಕಲ್ಲಡ್ಕ ಕಮಾಂಡ್ ಕೂಡ ಈಗ ಬಂಟರ ಅಧ್ಯಕ್ಷನ “ವಾಟ್ಸ್‍ಆಪ್ ಆಂದೋಲನ”ದ ರೂವಾರಿ ನಳಿನ್  ಎಂದೇ ಕಂಡವರ ಮುಂದೆ ಬಡಬಡಿಸುತ್ತಿದೆ.
ಸೊರಕೆ

ಬಿಜೆಪಿ ಬಿಡಾರದಲ್ಲಿ ಹರಿದಾಡುತ್ತಿರುವ ಮತ್ತೊಂದು ಚರ್ಚೆಯ ಪ್ರಕಾರ ಇದು  ನಳಿನನ್ನು ಹಣಿಯಲು ಬ್ರಾಹ್ಮಣೋತ್ತಮರ್ಯಾರೋ ಮಾಡಿದ ಕಿತಾಪತಿ. ಬಿಲ್ಲವರು ತಿರುಗಿಬಿದ್ದು ಬಂಟ ಕ್ಯಾಂಡಿಡೇಟ್‍ಗಳನ್ನೆಲ್ಲಾ ಸೋಲಿಸಿದರೆ ನಳಿನ್ ಬಿಜೆಪಿಯಲ್ಲಿ ಕಿಮ್ಮತ್ತು ಕಳೆದುಕೊಳ್ಳುತ್ತಾರೆ. ಆಗ ಮತ್ತೆ ಕಲ್ಲಡ್ಕ ಭಟ್ಟರದೇ ಏಕಮೇವಾದ್ವಿತೀಯ ದರ್ಬಾರು  ಸ್ಥಾಪಿತವಾಗುತ್ತದೆಂದು ಬಂಟರ ಸಂಘದ ಅಧ್ಯಕ್ಷನ ಹೆಸರಿನಲ್ಲಿ ಇಂಥದೊಂದು  ಸಂದೇಶ ರವಾನಿಸಲಾಗಿದೆಯಂತೆ. “ದಕ್ಷಿಣ ಕನ್ನಡ  ಮತ್ತು ಉಡುಪಿಯು  ಬಂಟರ-ಬ್ರಾಹ್ಮಣರ ನಾಡು” ಎಂಬ ವಾಕ್ಯ ಮಲಾಡಿಗುತ್ತು ರೈನ ಸಂದೇಶದಲ್ಲಿರುವುದು ಬ್ರಾಹ್ಮಣರ ಭೂಪನ ಕುಚೋದ್ಯದ ಅನುಮಾನ ಹುಟ್ಟುಹಾಕಿದೆ.

ಇದೆಲ್ಲಾ ಬಿಜೆಪಿಯ ಒಳಸುಳಿ ರಾಜಕಾರಣ ಏನೇಇರಲಿ, ಸಂಘಪರಿವಾರದ  ಬ್ರಾಹ್ಮಣರ-ಬಲಾಢ್ಯ ಬಂಟರ ಷಡ್ಯಂತ್ರಕ್ಕೆ ಬಲಿಬೀಳುತ್ತಿರುವ ಬಿಲ್ಲವರಿಗೆ ಬುದ್ಧಿ ಬರುವುದು ಎಂದು? ಹುಸಿ ಹಿಂದೂತ್ವಕ್ಕೆ ಮರುಳಾಗಿ ಬಿಲ್ಲವರು ತಮ್ಮವರ ಆಹುತಿ ಕೊಡುತ್ತಾ  ಬಿಜೆಪಿಗೆ ಬೆಂಬಲಿಸುತ್ತಾ ಹೋದರೆ ಮೇಲುವರ್ಗದ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಲೇ ಇರುತ್ತದೆ. ಇದು ಬಿಲ್ಲವರ ಸ್ವಾಮಿಗೆ, ಜನಾರ್ದನ  ಪೂಜಾರಿ,  ವಿನಯ್ ಕುಮಾರ್ ಸೊರಕೆ,  ಶ್ರೀನಿವಾಸ್  ಪೂಜಾರಿ,  ರುಕ್ಮಯ್ಯ ಪೂಜಾರಿಯಂತ ಬಿಲ್ಲವರ   ಭೂಪರಿಗೆ, ಬಿಲ್ಲವರ ಸಂಘದ ಸರದಾರರಿಗೆಲ್ಲಾ ಅರ್ಥವಾಗೋದು ಯಾವಾಗ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...