Homeಕರ್ನಾಟಕಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

ಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

- Advertisement -
| ಮಲ್ಲನಗೌಡರ್ |
ಮೇಲಿನ ತಲೆಬರಹದಷ್ಟೇ ಸಂಕೀರ್ಣವಾಗಿದೆ ರಾಜ್ಯದ ಸದ್ಯದ ರಾಜಕಾರಣ. ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಸ್ನೇಹ, ಮುನಿಸು, ಅಧಿಕಾರ ಪಾಲು, ಆಂತರಿಕ ಭಿನ್ನಮತ ಮತ್ತು ಪಕ್ಷಗಳ ಬಲವರ್ಧನೆ, ನಾಯಕರ ವೈಯಕ್ತಿಕ ಆಕಾಂಕ್ಷೆಗಳು- ಇವೆಲ್ಲವೂ ಸದ್ಯ ಮೇಲುನೋಟಕ್ಕೆ ಭಿನ್ನ ಆಯಾಮಗಳಂತೆ ಕಂಡು ಬಂದರೂ, ಇವೆಲ್ಲವೂ ಹಾಸು ಹೊಕ್ಕಾಗಿ ಒಂದರೊಳಗೊಂದು ಹೆಣೆದುಕೊಂಡಿವೆ. ಸದಾ ಅಧಿಕಾರ ಹಿಡಿಯುವ ಕಾರ್ಯಾಚರಣೆಯನ್ನು ಜೀವಂತವೇ ಇಟ್ಟಿರುವ ಬಿಜೆಪಿಗೆ, 25 ಸೀಟುಗಳ ದಿಗ್ವಿಜಯದ ನಂತರ ಹೈಕಮಾಂಡಿನಿಂದ ಬೆಂಬಲವೂ ಸಿಕ್ಕಂತಿದೆ. ಇಡೀ ರಾಜ್ಯದ ಬಹುಭಾಗದಲ್ಲಿ ನೀರಿನ ಕೊರತೆಯಿದೆ, ಮಳೆಯ ವಿಳಂಬದಿಂದಾಗಿ ಜೂನ್ ಮೂರನೇ ವಾರದಲ್ಲೂ ಬಿತ್ತನೆಯಾಗಿಲ್ಲ. ರಾಜಧಾನಿಯಲ್ಲಿ ಮಾತ್ರ ‘ಕುರ್ಚಿಗಾಗಿ ಕಾಳು ಹಾಕುವ’, ಕಾಲೆಳೆಯುವ ರಾಜಕಾರಣ ಎಗ್ಗಿಲ್ಲದೇ ಸಾಗಿದೆ.
ಸದ್ಯಕ್ಕೆ ಮುಖ್ಯ ಬೆಳವಣಿಗೆ ಎನಿಸಿದ್ದು ಎಐಸಿಸಿಯು ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು. ಇದರ ಜೊತೆಗೇ ಮೈತ್ರಿ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಸೂಚಿಸಿರುವುದು. ಕಾಂಗ್ರೆಸ್ ಹೈಕಮಾಂಡಿನ ಈ ನಡೆಯಿಂದ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಪ್ರಾಬಲ್ಯ ಇನ್ನಷ್ಟು ಹೆಚ್ಚಿದೆ, ಹೆಚ್ಚಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯರ ಮಾತಿಗೆ ತಲೆದೂಗಿರುವ ಹೈಮಾಂಡ್ ಪಕ್ಷ ಕಟ್ಟುವ ಗಟ್ಟಿ ತೀರ್ಮಾನಕ್ಕೆ ಬಂದಿದೆ. ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಬಿಟ್ಟು ಎಲ್ಲ ಹಂತದ ಪದಾಧಿಕಾರಿಗಳಿಗೆ ಗೇಟ್ ತೋರಿಸಲಾಗಿದೆ. ದಶಕಗಳಿಂದ ಪಕ್ಷ ಸಂಘಟನೆ ಮಾಡದೇ ಬರೀ ಅಧಿಕಾರದ ಲಾಭ ಪಡೆಯುತ್ತಲೇ ಬಂದಿದ್ದ ಬಹುಪಾಲು ವಿಸರ್ಜಿತ ಪದಾಧಿಕಾರಿಗಳ ಜಾಗಕ್ಕೆ ನಿಷ್ಟಾವಂತ ಕಾರ್ಯಕರ್ತರನ್ನು ನೇಮಿಸುವ ಕೆಲಸ ನಿರಾಂತಕದ ವಿಷಯ ಅಲ್ಲವೇ ಅಲ್ಲ. ಇತ್ತ ಸಿದ್ದರಾಮಯ್ಯ ಪಕ್ಷ ಸಂಘಟನೆ ಜೊತೆಗೆ ತಮ್ಮ ಶಾಸಕರು ಬಿಜೆಪಿ ಆಮಿಷಕ್ಕೆ ಬೀಳದಂತೆ ತಡೆಯುವ, ಮೂಲ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ತಡೆಯುವ ಜವಾಬ್ದಾರಿಗಳನ್ನು ತಾವೇ ಹೊತ್ತುಕೊಂಡು ಬಂದಿದ್ದಾರೆ.
ಮೈತ್ರಿಯಿಂದ ಕಾಂಗ್ರೆಸ್‍ಗೆ ನಷ್ಟ
ಇದನ್ನು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಲೋಕಸಭೆಯಲ್ಲಿ ಮೈತ್ರಿ ಕಾರಣದಿಂದಾಗಿಯೇ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ ಆಗಿದ್ದು ಮತ್ತು ಅದರ ಲಾಭ ಬಿಜೆಪಿಗೆ ಹೋಗಿದ್ದು ಸತ್ಯ. ಹೀಗಾಗಿ ಮೈತ್ರಿ ಸರ್ಕಾರವನ್ನು ಕಾಪಾಡಿಕೊಂಡೇ, ಪಕ್ಷ ಸಂಘಟನೆ ಮಾಡುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಆದರೆ, ಬಿಜೆಪಿಯ ಆಪರೇಷನ್ ಕಮಲ ಮುಂದುವರೆದೇ ಇರುವ ಹೊತ್ತಿನಲ್ಲಿ ಕಾಂಗ್ರೆಸ್ ತನ್ನ ಭಿನ್ನಮತೀಯ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತನ್ನೂ ಮಾಡಬೇಕಿದೆ. ಸದ್ಯಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗೆ ಸರ್ಕಾರ ಬೀಳದೇ ಇದ್ದರೆ ಸಾಕು ಎಂಬ ಗುರಿಯಷ್ಟೇ ಇರುವಂತಿದೆ.
ಬಿಜೆಪಿ ಹೈಕಮ್ಯಾಂಡ್‍ನಿಂದ ಯಡ್ಡಿಗೆ ಗ್ರೀನ್ ಸಿಗ್ನಲ್?
ಲೋಕಸಭಾ ಚುನಾವಣೆಯ ಗೆಲುವು ಸಿಕ್ಕ ತಕ್ಷಣ ಭಾರೀ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದನ್ನು ಬಿಜೆಪಿ ನಾಯಕರು ಪದೇ ಪದೇ ಹೇಳಿಯೂ ಇದ್ದರು. ಆದರೆ, ಫಲಿತಾಂಶದ ನಂತರ ಅಂಥದ್ದೇನಕ್ಕೂ ಕೈ ಹಾಕಬೇಡಿ ಎಂದು ಹೈಕಮ್ಯಾಂಡ್ ಸೂಚಿಸಿದೆ ಎಂಬ ಮಾತನ್ನು ಸ್ವತಃ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‍ನೊಳಗಿನಿಂದಲೇ ಸರ್ಕಾರ ಬೀಳಿಸುವ ಕೆಲಸ ನಡೆಯುವ ಸಾಧ್ಯತೆ ಇರುವಾಗ, ನಾವೇಕೆ ಕೆಟ್ಟ ಹೆಸರು ತಂದುಕೊಳ್ಳಬೇಕು ಎಂಬುದು ಬಿಜೆಪಿಯ ಇರಾದೆಯಾಗಿತ್ತು. ಆಪರೇಷನ್ ಮಾಡುವುದಕ್ಕಿಂತ ಚುನಾವಣೆಗೇ ಹೋದರೆ ಗೆಲುವು ಬಿಜೆಪಿಯದ್ದೇ ಎನ್ನುವ ಅನಿಸಿಕೆಯೂ ಆ ವಲಯಗಳಲ್ಲಿತ್ತು. ಹಾಗಾಗಿ ಕೆಡವುವುದಕ್ಕಿಂತ, ತಾನೇ ಬಿದ್ದು ಹೋಗಲಿ ಎಂದು ಕಾಯುವುದೇ ಸರಿ ಎಂಬುದು ಬಿಜೆಪಿಯ ನಾಯಕರ ತೀರ್ಮಾನವಾಗಿತ್ತು.
ಆದರೆ, ಅದಾಗಲಿಲ್ಲ. ಯಡಿಯೂರಪ್ಪನವರಿಗೂ ಸುಮ್ಮನೇ ಕೂರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ, ‘ಆಪರೇಷನ್‍ಗೆ ಮುಂದಾಗಿ’ ಎಂಬ ಗ್ರೀನ್ ಸಿಗ್ನಲ್ ಬಂದಿದೆ ಎಂಬ ಸುದ್ದಿಗೆ ವಿಶೇಷ ಮಹತ್ವ ಬಂದಿದೆ. ಮಧ್ಯಂತರ ಚುನಾವಣೆ ಸದ್ಯಕ್ಕಂತೂ ಯಾರಿಗೂ ಬೇಡವಾಗಿದೆ. ಹಾಗಾಗಿ ಆಪರೇಷನ್ ನಡೆಯುವುದೇ ಲೇಸು ಎಂಬ ಪರಿಸ್ಥಿತಿ ಸದ್ಯಕ್ಕಿದೆ.
ಗ್ರಾಮ ವಾಸ್ತವ್ಯ ಜನಪ್ರಿಯತೆ ಮರಳಿ ಪಡೆಯುವುದಕ್ಕೋ, ಜನಪರ ಕೆಲಸ ಮಾಡುವುದಕ್ಕೋ?
ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರುವ ಜನರನ್ನು ಭೇಟಿ ಮಾಡುತ್ತಿದ್ದಾರಾದರೂ, ಅಧಿಕೃತ ಜನತಾದರ್ಶನವನ್ನು ನಡೆಸುತ್ತಿಲ್ಲ. ಗ್ರಾಮ ವಾಸ್ತವ್ಯವೂ ಇರುವುದಿಲ್ಲ ಎಂದು ಹೇಳಿದ್ದರು. ಆದರೀಗ, ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಬರದ ಬಿಸಿ ನಿವಾರಣೆಗೆ ಸರ್ಕಾರ ಪರಿಣಾಮಕಾರಿ ಕೆಲಸ ಮಾಡುವ ತುರ್ತಂತೂ ಈಗಿದೆ. ಆ ಮೂಲಕ ಜನರ ಹತ್ತಿರಕ್ಕೆ ಹೋಗುವ ಅವಕಾಶವೂ ಇದೆ. ಆದರೆ, ಅದನ್ನು ಮಾಡುತ್ತಾರಾ ಅಥವಾ ಪ್ರಚಾರವಷ್ಟೇ ನಡೆಯುತ್ತದಾ ಎಂಬುದನ್ನು ಕಾದು ನೋಡಬೇಕು.
ಸಿದ್ದರಾಮಯ್ಯನವರ ಡಬಲ್ ಕಷ್ಟ
ಮುಖ್ಯಮಂತ್ರಿಯಾಗಿ ಇಳಿದಿರುವ ಸಿದ್ದರಾಮಯ್ಯನವರಿಗೆ ಎರಡರಲ್ಲೊಂದು ಆಗಲೇಬೇಕು. ಒಂದೋ ಅಧಿಕಾರದಲ್ಲಿರಬೇಕು, ಇಲ್ಲವೇ ಜನನಾಯಕನಾಗಿ ಪ್ರತಿಷ್ಠಾಪನೆಯಾಗಬೇಕು. ಕುಮಾರಸ್ವಾಮಿಯವರನ್ನು ಇಳಿಸಿದರೂ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು ಜೆಡಿಎಸ್‍ನವರು ಒಪ್ಪುವುದು ಸಾಧ್ಯವೇ ಇಲ್ಲ. ಇನ್ನು ಜನನಾಯಕನಾಗಬೇಕೆಂದರೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನೂ ಸಂಘಟಿಸಲು ಬೆವರು ಹರಿಸಬೇಕು. ಆದರೆ, ರಾಜ್ಯದೆಲ್ಲೆಡೆ ಹೋದಾಗ, ದೂರದ ದೆಹಲಿ ಸರ್ಕಾರವನ್ನು ಟೀಕಿಸುವುದರಿಂದ ಪ್ರಯೋಜನವಿಲ್ಲ. ರಾಜ್ಯ ಸರ್ಕಾರವನ್ನು ಬಯ್ಯುವುದಿರಲಿ, ಹೊಗಳುತ್ತಾ, ಸಮರ್ಥಿಸುತ್ತಾ ಇರಬೇಕಾಗುತ್ತದೆ. ಹೀಗಾಗಿ ಏನು ಮಾಡುವುದೋ ಗೊತ್ತಾಗದೇ, ರಾಜ್ಯ ಸರ್ಕಾರವನ್ನು ಅಭದ್ರತೆಯಲ್ಲಿಡುತ್ತಲೇ, ತಮ್ಮ ಪ್ರಸ್ತುತತೆ ಉಳಿಸಿಕೊಳ್ಳುವ ಕಸರತ್ತಷ್ಟೇ ಮಾಡುತ್ತಿದ್ದಾರೆ. ಅದರಾಚೆಗೆ, ರಾಜ್ಯದ ಜನರ ಹಿತಾಸಕ್ತಿಯಿಂದ ವರ್ತಿಸುವ ಕಷ್ಟಕರವಾದ ಕೆಲಸ ಅವರಿಂದಾಗುತ್ತಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...