Homeಕರ್ನಾಟಕಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

ಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

- Advertisement -
| ಮಲ್ಲನಗೌಡರ್ |
ಮೇಲಿನ ತಲೆಬರಹದಷ್ಟೇ ಸಂಕೀರ್ಣವಾಗಿದೆ ರಾಜ್ಯದ ಸದ್ಯದ ರಾಜಕಾರಣ. ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಸ್ನೇಹ, ಮುನಿಸು, ಅಧಿಕಾರ ಪಾಲು, ಆಂತರಿಕ ಭಿನ್ನಮತ ಮತ್ತು ಪಕ್ಷಗಳ ಬಲವರ್ಧನೆ, ನಾಯಕರ ವೈಯಕ್ತಿಕ ಆಕಾಂಕ್ಷೆಗಳು- ಇವೆಲ್ಲವೂ ಸದ್ಯ ಮೇಲುನೋಟಕ್ಕೆ ಭಿನ್ನ ಆಯಾಮಗಳಂತೆ ಕಂಡು ಬಂದರೂ, ಇವೆಲ್ಲವೂ ಹಾಸು ಹೊಕ್ಕಾಗಿ ಒಂದರೊಳಗೊಂದು ಹೆಣೆದುಕೊಂಡಿವೆ. ಸದಾ ಅಧಿಕಾರ ಹಿಡಿಯುವ ಕಾರ್ಯಾಚರಣೆಯನ್ನು ಜೀವಂತವೇ ಇಟ್ಟಿರುವ ಬಿಜೆಪಿಗೆ, 25 ಸೀಟುಗಳ ದಿಗ್ವಿಜಯದ ನಂತರ ಹೈಕಮಾಂಡಿನಿಂದ ಬೆಂಬಲವೂ ಸಿಕ್ಕಂತಿದೆ. ಇಡೀ ರಾಜ್ಯದ ಬಹುಭಾಗದಲ್ಲಿ ನೀರಿನ ಕೊರತೆಯಿದೆ, ಮಳೆಯ ವಿಳಂಬದಿಂದಾಗಿ ಜೂನ್ ಮೂರನೇ ವಾರದಲ್ಲೂ ಬಿತ್ತನೆಯಾಗಿಲ್ಲ. ರಾಜಧಾನಿಯಲ್ಲಿ ಮಾತ್ರ ‘ಕುರ್ಚಿಗಾಗಿ ಕಾಳು ಹಾಕುವ’, ಕಾಲೆಳೆಯುವ ರಾಜಕಾರಣ ಎಗ್ಗಿಲ್ಲದೇ ಸಾಗಿದೆ.
ಸದ್ಯಕ್ಕೆ ಮುಖ್ಯ ಬೆಳವಣಿಗೆ ಎನಿಸಿದ್ದು ಎಐಸಿಸಿಯು ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು. ಇದರ ಜೊತೆಗೇ ಮೈತ್ರಿ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಸೂಚಿಸಿರುವುದು. ಕಾಂಗ್ರೆಸ್ ಹೈಕಮಾಂಡಿನ ಈ ನಡೆಯಿಂದ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಪ್ರಾಬಲ್ಯ ಇನ್ನಷ್ಟು ಹೆಚ್ಚಿದೆ, ಹೆಚ್ಚಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯರ ಮಾತಿಗೆ ತಲೆದೂಗಿರುವ ಹೈಮಾಂಡ್ ಪಕ್ಷ ಕಟ್ಟುವ ಗಟ್ಟಿ ತೀರ್ಮಾನಕ್ಕೆ ಬಂದಿದೆ. ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಬಿಟ್ಟು ಎಲ್ಲ ಹಂತದ ಪದಾಧಿಕಾರಿಗಳಿಗೆ ಗೇಟ್ ತೋರಿಸಲಾಗಿದೆ. ದಶಕಗಳಿಂದ ಪಕ್ಷ ಸಂಘಟನೆ ಮಾಡದೇ ಬರೀ ಅಧಿಕಾರದ ಲಾಭ ಪಡೆಯುತ್ತಲೇ ಬಂದಿದ್ದ ಬಹುಪಾಲು ವಿಸರ್ಜಿತ ಪದಾಧಿಕಾರಿಗಳ ಜಾಗಕ್ಕೆ ನಿಷ್ಟಾವಂತ ಕಾರ್ಯಕರ್ತರನ್ನು ನೇಮಿಸುವ ಕೆಲಸ ನಿರಾಂತಕದ ವಿಷಯ ಅಲ್ಲವೇ ಅಲ್ಲ. ಇತ್ತ ಸಿದ್ದರಾಮಯ್ಯ ಪಕ್ಷ ಸಂಘಟನೆ ಜೊತೆಗೆ ತಮ್ಮ ಶಾಸಕರು ಬಿಜೆಪಿ ಆಮಿಷಕ್ಕೆ ಬೀಳದಂತೆ ತಡೆಯುವ, ಮೂಲ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ತಡೆಯುವ ಜವಾಬ್ದಾರಿಗಳನ್ನು ತಾವೇ ಹೊತ್ತುಕೊಂಡು ಬಂದಿದ್ದಾರೆ.
ಮೈತ್ರಿಯಿಂದ ಕಾಂಗ್ರೆಸ್‍ಗೆ ನಷ್ಟ
ಇದನ್ನು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಲೋಕಸಭೆಯಲ್ಲಿ ಮೈತ್ರಿ ಕಾರಣದಿಂದಾಗಿಯೇ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ ಆಗಿದ್ದು ಮತ್ತು ಅದರ ಲಾಭ ಬಿಜೆಪಿಗೆ ಹೋಗಿದ್ದು ಸತ್ಯ. ಹೀಗಾಗಿ ಮೈತ್ರಿ ಸರ್ಕಾರವನ್ನು ಕಾಪಾಡಿಕೊಂಡೇ, ಪಕ್ಷ ಸಂಘಟನೆ ಮಾಡುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಆದರೆ, ಬಿಜೆಪಿಯ ಆಪರೇಷನ್ ಕಮಲ ಮುಂದುವರೆದೇ ಇರುವ ಹೊತ್ತಿನಲ್ಲಿ ಕಾಂಗ್ರೆಸ್ ತನ್ನ ಭಿನ್ನಮತೀಯ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತನ್ನೂ ಮಾಡಬೇಕಿದೆ. ಸದ್ಯಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗೆ ಸರ್ಕಾರ ಬೀಳದೇ ಇದ್ದರೆ ಸಾಕು ಎಂಬ ಗುರಿಯಷ್ಟೇ ಇರುವಂತಿದೆ.
ಬಿಜೆಪಿ ಹೈಕಮ್ಯಾಂಡ್‍ನಿಂದ ಯಡ್ಡಿಗೆ ಗ್ರೀನ್ ಸಿಗ್ನಲ್?
ಲೋಕಸಭಾ ಚುನಾವಣೆಯ ಗೆಲುವು ಸಿಕ್ಕ ತಕ್ಷಣ ಭಾರೀ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದನ್ನು ಬಿಜೆಪಿ ನಾಯಕರು ಪದೇ ಪದೇ ಹೇಳಿಯೂ ಇದ್ದರು. ಆದರೆ, ಫಲಿತಾಂಶದ ನಂತರ ಅಂಥದ್ದೇನಕ್ಕೂ ಕೈ ಹಾಕಬೇಡಿ ಎಂದು ಹೈಕಮ್ಯಾಂಡ್ ಸೂಚಿಸಿದೆ ಎಂಬ ಮಾತನ್ನು ಸ್ವತಃ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‍ನೊಳಗಿನಿಂದಲೇ ಸರ್ಕಾರ ಬೀಳಿಸುವ ಕೆಲಸ ನಡೆಯುವ ಸಾಧ್ಯತೆ ಇರುವಾಗ, ನಾವೇಕೆ ಕೆಟ್ಟ ಹೆಸರು ತಂದುಕೊಳ್ಳಬೇಕು ಎಂಬುದು ಬಿಜೆಪಿಯ ಇರಾದೆಯಾಗಿತ್ತು. ಆಪರೇಷನ್ ಮಾಡುವುದಕ್ಕಿಂತ ಚುನಾವಣೆಗೇ ಹೋದರೆ ಗೆಲುವು ಬಿಜೆಪಿಯದ್ದೇ ಎನ್ನುವ ಅನಿಸಿಕೆಯೂ ಆ ವಲಯಗಳಲ್ಲಿತ್ತು. ಹಾಗಾಗಿ ಕೆಡವುವುದಕ್ಕಿಂತ, ತಾನೇ ಬಿದ್ದು ಹೋಗಲಿ ಎಂದು ಕಾಯುವುದೇ ಸರಿ ಎಂಬುದು ಬಿಜೆಪಿಯ ನಾಯಕರ ತೀರ್ಮಾನವಾಗಿತ್ತು.
ಆದರೆ, ಅದಾಗಲಿಲ್ಲ. ಯಡಿಯೂರಪ್ಪನವರಿಗೂ ಸುಮ್ಮನೇ ಕೂರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ, ‘ಆಪರೇಷನ್‍ಗೆ ಮುಂದಾಗಿ’ ಎಂಬ ಗ್ರೀನ್ ಸಿಗ್ನಲ್ ಬಂದಿದೆ ಎಂಬ ಸುದ್ದಿಗೆ ವಿಶೇಷ ಮಹತ್ವ ಬಂದಿದೆ. ಮಧ್ಯಂತರ ಚುನಾವಣೆ ಸದ್ಯಕ್ಕಂತೂ ಯಾರಿಗೂ ಬೇಡವಾಗಿದೆ. ಹಾಗಾಗಿ ಆಪರೇಷನ್ ನಡೆಯುವುದೇ ಲೇಸು ಎಂಬ ಪರಿಸ್ಥಿತಿ ಸದ್ಯಕ್ಕಿದೆ.
ಗ್ರಾಮ ವಾಸ್ತವ್ಯ ಜನಪ್ರಿಯತೆ ಮರಳಿ ಪಡೆಯುವುದಕ್ಕೋ, ಜನಪರ ಕೆಲಸ ಮಾಡುವುದಕ್ಕೋ?
ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರುವ ಜನರನ್ನು ಭೇಟಿ ಮಾಡುತ್ತಿದ್ದಾರಾದರೂ, ಅಧಿಕೃತ ಜನತಾದರ್ಶನವನ್ನು ನಡೆಸುತ್ತಿಲ್ಲ. ಗ್ರಾಮ ವಾಸ್ತವ್ಯವೂ ಇರುವುದಿಲ್ಲ ಎಂದು ಹೇಳಿದ್ದರು. ಆದರೀಗ, ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಬರದ ಬಿಸಿ ನಿವಾರಣೆಗೆ ಸರ್ಕಾರ ಪರಿಣಾಮಕಾರಿ ಕೆಲಸ ಮಾಡುವ ತುರ್ತಂತೂ ಈಗಿದೆ. ಆ ಮೂಲಕ ಜನರ ಹತ್ತಿರಕ್ಕೆ ಹೋಗುವ ಅವಕಾಶವೂ ಇದೆ. ಆದರೆ, ಅದನ್ನು ಮಾಡುತ್ತಾರಾ ಅಥವಾ ಪ್ರಚಾರವಷ್ಟೇ ನಡೆಯುತ್ತದಾ ಎಂಬುದನ್ನು ಕಾದು ನೋಡಬೇಕು.
ಸಿದ್ದರಾಮಯ್ಯನವರ ಡಬಲ್ ಕಷ್ಟ
ಮುಖ್ಯಮಂತ್ರಿಯಾಗಿ ಇಳಿದಿರುವ ಸಿದ್ದರಾಮಯ್ಯನವರಿಗೆ ಎರಡರಲ್ಲೊಂದು ಆಗಲೇಬೇಕು. ಒಂದೋ ಅಧಿಕಾರದಲ್ಲಿರಬೇಕು, ಇಲ್ಲವೇ ಜನನಾಯಕನಾಗಿ ಪ್ರತಿಷ್ಠಾಪನೆಯಾಗಬೇಕು. ಕುಮಾರಸ್ವಾಮಿಯವರನ್ನು ಇಳಿಸಿದರೂ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು ಜೆಡಿಎಸ್‍ನವರು ಒಪ್ಪುವುದು ಸಾಧ್ಯವೇ ಇಲ್ಲ. ಇನ್ನು ಜನನಾಯಕನಾಗಬೇಕೆಂದರೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನೂ ಸಂಘಟಿಸಲು ಬೆವರು ಹರಿಸಬೇಕು. ಆದರೆ, ರಾಜ್ಯದೆಲ್ಲೆಡೆ ಹೋದಾಗ, ದೂರದ ದೆಹಲಿ ಸರ್ಕಾರವನ್ನು ಟೀಕಿಸುವುದರಿಂದ ಪ್ರಯೋಜನವಿಲ್ಲ. ರಾಜ್ಯ ಸರ್ಕಾರವನ್ನು ಬಯ್ಯುವುದಿರಲಿ, ಹೊಗಳುತ್ತಾ, ಸಮರ್ಥಿಸುತ್ತಾ ಇರಬೇಕಾಗುತ್ತದೆ. ಹೀಗಾಗಿ ಏನು ಮಾಡುವುದೋ ಗೊತ್ತಾಗದೇ, ರಾಜ್ಯ ಸರ್ಕಾರವನ್ನು ಅಭದ್ರತೆಯಲ್ಲಿಡುತ್ತಲೇ, ತಮ್ಮ ಪ್ರಸ್ತುತತೆ ಉಳಿಸಿಕೊಳ್ಳುವ ಕಸರತ್ತಷ್ಟೇ ಮಾಡುತ್ತಿದ್ದಾರೆ. ಅದರಾಚೆಗೆ, ರಾಜ್ಯದ ಜನರ ಹಿತಾಸಕ್ತಿಯಿಂದ ವರ್ತಿಸುವ ಕಷ್ಟಕರವಾದ ಕೆಲಸ ಅವರಿಂದಾಗುತ್ತಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...