Homeಮುಖಪುಟಕಾಂಗ್ರೆಸ್ ವಿರುದ್ಧದ ಮೊಕದ್ದಮೆ ವಾಪಸ್ ಪಡೆದ ಅನಿಲ್ ಅಂಬಾನಿ. ಕುತೂಹಲ ಹುಟ್ಟಿಸಿರುವ ನಡೆ

ಕಾಂಗ್ರೆಸ್ ವಿರುದ್ಧದ ಮೊಕದ್ದಮೆ ವಾಪಸ್ ಪಡೆದ ಅನಿಲ್ ಅಂಬಾನಿ. ಕುತೂಹಲ ಹುಟ್ಟಿಸಿರುವ ನಡೆ

ಇದು ಮೋದಿಯವರು ಸರ್ಕಾರ ರಚಿಸುವಷ್ಟು ಬಹುಮತ ಪಡೆಯಲಾರರು ಎಂಬ ಸೂಚನೆಯೇ?

- Advertisement -
- Advertisement -

||ನಾನುಗೌರಿ ಡೆಸ್ಕ್||

ಕಳೆದ ಒಂದು ವರ್ಷದಿಂದ ರಾಫೇಲ್ ಹಗರಣದಲ್ಲಿ ಅನಿಲ್ ಅಂಬಾನಿಯ ಮೇಲೆ ಸತತ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಉದ್ಯಮಿ ಅನಿಲ್ ಅಂಬಾನಿ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ವಾಪಸ್ ಪಡೆದಿದ್ದಾರೆ. ಹೊಸ ಸರ್ಕಾ ರ ಯಾರು ಮಾಡಬಹುದೆಂಬ ಜನರ ನಿರ್ಧಾರ ಅರಿಯಲು 2 ದಿನ ಇರುವಾಗ ಈ ನಡೆಯು ಬಹಳ ಆಶ್ಚರ್ಯ ಹುಟ್ಟಿಸಿದೆ.

ಇದನ್ನೂ ಓದಿ: ರಾಫೇಲ್ ಹಗರಣ ಏನು? ಗಾಬರಿಗೊಳಿಸುವ ಸಂಗತಿಗಳು
ಕಾಂಗ್ರೆಸ್ ಪಕ್ಷವಲ್ಲದೇ, ಆ ಪಕ್ಷದ ಪತ್ರಿಕೆ ನ್ಯಾಷನಲ್ ಹೆರಾಲ್ಡ್ ಮೇಲೆ ಹೂಡಲಾದ ಮೊಕದ್ದಮೆಯನ್ನೂ ಅನಿಲ್ ಅಂಬಾನಿ ವಾಪಸ್ ಪಡೆಯುತ್ತಿದ್ದಾರೆಂದು ಅವರ ವಕೀಲರು ಕೋರ್ಟಿಗೆ ತಿಳಿಸಿದ್ದಾರೆ. ಅಹಮದಾಬಾದ್‍ನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಪಿ.ಜೆ.ತಮಕುವಾಲಾರ ಮುಂದೆ ಇದ್ದ ಈ ಮೊಕದ್ದಮೆಯ ವಿಚಾರದಲ್ಲಿ ಇಂತಹ ಬೆಳವಣಿಗೆ ನಡೆದಿದೆ.


ಎಚ್‍ಎಎಲ್ ಸಂಸ್ಥೆಯ ಜೊತೆ ಫ್ರಾನ್ಸ್‍ನ ಡಸಾಲ್ಟ್ ಕಂಪೆನಿಗೆ ಆಗಿದ್ದ ಒಪ್ಪಂದವನ್ನು, ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯವಾಗಿ ಬದಲಿಸಿ, ಅನಿಲ್ ಅಂಬಾನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸರ್ಕಾರದ ಬೊಕ್ಕಸಕ್ಕೂ ಸಾವಿರಾರು ಕೋಟಿ ರೂ ನಷ್ಟ ಮಾಡಿದ್ದಾರೆ ಎಂಬುದು ಆರೋಪವಾಗಿತ್ತು.

ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿ ದೊಡ್ಡ ಹಗರಣ

ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಇದನ್ನು ಪದೇ ಪದೇ ಹೇಳುತ್ತಾ ಬಂದಿದ್ದರು. ಹಲವು ಪತ್ರಿಕಾಗೋಷ್ಠಿಗಳ ಮೂಲಕ, ಸಂಸತ್ತಿನಲ್ಲಿ ಚರ್ಚೆಯ ಮೂಲಕ ಮತ್ತು ಚುನಾವಣಾ ಭಾಷಣಗಳಲ್ಲಿ ರಾಹುಲ್ ಇದನ್ನು ಬಲವಾಗಿ ಒತ್ತಿ ಹೇಳುತ್ತಿದ್ದರು.


ಪ್ರತಿಯೊಂದು ಸಾರಿಯೂ ಮೋದಿ ಮತ್ತು ಅನಿಲ್ ಅಂಬಾನಿ ಹೆಸರುಗಳನ್ನು ರಾಹುಲ್‍ಗಾಂಧಿ ಜೊತೆ ಜೊತೆಗೇ ಪ್ರಸ್ತಾಪಿಸಿ ಆರೋಪ ಮಾಡುತ್ತಿದ್ದರು. ಹಾಗಾಗಿ ಅಂಬಾನಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈಗ ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದರೂ, ಯುಪಿಎ ಮತ್ತು ತೃತೀಯ ರಂಗವೇ ಅಧಿಕಾರಕ್ಕೆ ಬರುತ್ತದೆ ಎಂದು ಹಲವರು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಸರ್ಕಾರವು ಮೋದಿಯವರದ್ದಾಗದೇ ಹೋಗಬಹುದು ಎಂಬ ಮುನ್ಸೂಚನೆ ಸಿಕ್ಕಿರುವುದರಿಂದಲೇ ಅಂಬಾನಿ ಹೀಗೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...