Homeರಾಜಕೀಯಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

ಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

- Advertisement -
- Advertisement -
  • ಟೀಮ್ ಗೌರಿ |
ಅಪ್ಪಚ್ಚು
ಚಂದ್ರಕಲಾ
ಜೀವಿಜಯ

ಕೊಡಗಿನ ಮಡಿಕೇರಿಯ ಹಾಲಿ ಶಾಸಕ ಅಪ್ಪಚ್ಚು ರಂಜನ್. ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್‍ನ ಚಂದ್ರಕಲಾರವರಿಗೆ ಕಡೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದ್ದು ಕಾಂಗ್ರೆಸ್ಸಿನಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವು ಮಾದಪ್ಪ ಮತ್ತು ಎಂಎಲ್‍ಸಿ ವೀಣಾ ಅಚ್ಚಯ್ಯ ಇಬ್ಬರೂ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸುವ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಹೊರತು ಮಿಕ್ಕ ಸಮಯದಲ್ಲಿ ನಾಪತ್ತೆಯಾಗಿರುತ್ತಾರೆ. ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಇಲ್ಲಿ ಅಧಿಕಾರದಿಂದ ದೂರವಿದ್ದು ಈ ಬಾರಿ ಒಂದೊಳ್ಳೆಯ ಅವಕಾಶವಿದ್ದು ಕಾಂಗ್ರೆಸ್ ತಾನಾಗಿಯೇ ಕೈಚೆಲ್ಲಿಕೊಂಡಂತಾಗಿದೆ. ಜೆಡಿಎಸ್ ಅಭ್ಯರ್ಥಿ ಜೀವಿಜಯ ಅವರ ಬಗ್ಗೆ ಒಳ್ಳೆ ಅಭಿಪ್ರಾಯಗಳೇನೋ ಕೇಳಿಬರುತ್ತಿವೆಯಾದರೂ ಕಳೆದ ಬಾರಿ ಸೋತುಹೋದ ಇವರು ಮತ್ತೆ ಜನರ ಬಳಿ ಬರಲೇ ಇಲ್ಲವೆಂಬ ಆರೋಪವಿದೆ. ಸ್ವಂತ ಊರಿಗೆ 1 ಕಿಲೋಮೀಟರ್ ದೂರದಲ್ಲಿರುವ ಐಗೂರು ಮಸೀದಿಯ ಬಳಿ ಬಹಿರಂಗವಾಗಿ ಕುರಾನ್ ಸುಟ್ಟಾಗ ಸೌಜನ್ಯಕ್ಕೂ ಅಲ್ಪಸಂಖ್ಯಾತರನ್ನು ಸಂತೈಸದಿರುವುದು ಅವರ ಮೇಲೆ ಅಸಮಾಧಾನ ಮೂಡಿಸಿದೆ. ಜೊತೆಗೆ ಕಾಂಗ್ರೆಸ್ ಚಂದ್ರಕಲಾರವರು ಮತ್ತು ಜೆಡಿಎಸ್ ಜೀವಿಜಯ ಇಬ್ಬರೂ ಅರೆಭಾಷೆ ಗೌಡರಾಗಿರುವ ಕಾರಣ ಮತಗಳು ವಿಭಜನೆಯಾಗುವುದು ಖಚಿತವಾಗಿದೆ. ಈ ಕಾರಣಕ್ಕೆ ಬಿಜೆಪಿಯೇತರ ಶಾಸಕರು ಗೆಲ್ಲುವ ಎಲ್ಲ ಸಾಧ್ಯತೆಗಳೂ ಸಹ ಕ್ಷೀಣಿಸುವ ಸಾಧ್ಯತೆಗಳಿವೆ. ಹಾಲಿ ಶಾಸಕ ವಿರೋಧಿ ಅಲೆಯ ನಡುವೆಯೂ ಅಪ್ಪಚ್ಚು ರಂಜನ್ ಮತ್ತೆ ಆಯ್ಕೆಯಾದರೂ ಆಶ್ಚರ್ಯವಿಲ್ಲ.

ಬೋಪಯ್ಯ

ವಿರಾಜಪೇಟೆ ಕ್ಷೇತ್ರದಲ್ಲಿ ಕೊಡವರದೇ ಮೇಲುಗೈ. ಕಾಂಗ್ರೆಸ್‍ನಿಂದ ಕೊಡವ ಸಮಾಜದ ಅರುಣ್ ಮಾಚಯ್ಯ, ಜೆಡಿಎಸ್‍ನಿಂದ ಸಂಕೇತ ಪೂವಯ್ಯ ಮತ್ತು ಬಿಜೆಪಿ ಕೆ.ಜಿ.ಬೋಪಯ್ಯ ಇವರು ಕಣದಲ್ಲಿದ್ದಾರೆ. ಕೊಡವ ಸಮಾಜ ಇಲ್ಲಿಯವರೆಗೆ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಂಡೇ ಬಂದಿದ್ದು ಅದು ತಮ್ಮ ಪಾರುಪತ್ಯಕ್ಕೆ ಧಕ್ಕೆ ತರಲಾರದು ಎಂದು ಬಲವಾಗಿ ನಂಬಿದೆ. ಆ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೊಡವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದರೂ ಸತತವಾಗಿ ಸೋಲುತ್ತಿದ್ದಾರೆ. ಸ್ವತಃ ಬಿಜೆಪಿಯೇ ಹಿಂದುಮುಂದು ನೋಡಿ ಬೋಪಯ್ಯಗೆ ಟಿಕೆಟ್ ಕೊಟ್ಟರೂ ಕೊಡವರು ಮತ್ತು ಮಲಯಾಳಿ ಈಡಿಗರು ಒಕ್ಕಲಿಗ ಕೆ.ಜಿ.ಬೋಪಯ್ಯರನ್ನೇ ಗೆಲ್ಲಿಸಬೇಕೆಂದು ಬಗೆದಿರುವಂತಿದೆ. ಇಲ್ಲೀವರೆಗೂ ಈ ಎರಡೂ ಜನಾಂಗ ತಮ್ಮಲ್ಲಿರುವ ಅಧಿಕಾರವನ್ನು ಕಾಯ್ದಿರಿಸಿಕೊಳ್ಳಲು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ದಾರಿ ಹಿಡಿಯುವ ಸಾಧ್ಯತೆಗಳೇ ಹೆಚ್ಚಿದೆಯಾದರು ಸದ್ಯದ ಮಟ್ಟಿಗೆ ಕಾಂಗ್ರೆಸ್‍ನ ಅರುಣ್ ಮಾಚಯ್ಯ ಕೂಡಾ ಗೆಲುವಿನ ಸಂಭಾವ್ಯತೆಯನ್ನು ಉಳಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...