Homeರಾಜಕೀಯಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

ಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

- Advertisement -
- Advertisement -
  • ಟೀಮ್ ಗೌರಿ |
ಅಪ್ಪಚ್ಚು
ಚಂದ್ರಕಲಾ
ಜೀವಿಜಯ

ಕೊಡಗಿನ ಮಡಿಕೇರಿಯ ಹಾಲಿ ಶಾಸಕ ಅಪ್ಪಚ್ಚು ರಂಜನ್. ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್‍ನ ಚಂದ್ರಕಲಾರವರಿಗೆ ಕಡೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದ್ದು ಕಾಂಗ್ರೆಸ್ಸಿನಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವು ಮಾದಪ್ಪ ಮತ್ತು ಎಂಎಲ್‍ಸಿ ವೀಣಾ ಅಚ್ಚಯ್ಯ ಇಬ್ಬರೂ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸುವ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಹೊರತು ಮಿಕ್ಕ ಸಮಯದಲ್ಲಿ ನಾಪತ್ತೆಯಾಗಿರುತ್ತಾರೆ. ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಇಲ್ಲಿ ಅಧಿಕಾರದಿಂದ ದೂರವಿದ್ದು ಈ ಬಾರಿ ಒಂದೊಳ್ಳೆಯ ಅವಕಾಶವಿದ್ದು ಕಾಂಗ್ರೆಸ್ ತಾನಾಗಿಯೇ ಕೈಚೆಲ್ಲಿಕೊಂಡಂತಾಗಿದೆ. ಜೆಡಿಎಸ್ ಅಭ್ಯರ್ಥಿ ಜೀವಿಜಯ ಅವರ ಬಗ್ಗೆ ಒಳ್ಳೆ ಅಭಿಪ್ರಾಯಗಳೇನೋ ಕೇಳಿಬರುತ್ತಿವೆಯಾದರೂ ಕಳೆದ ಬಾರಿ ಸೋತುಹೋದ ಇವರು ಮತ್ತೆ ಜನರ ಬಳಿ ಬರಲೇ ಇಲ್ಲವೆಂಬ ಆರೋಪವಿದೆ. ಸ್ವಂತ ಊರಿಗೆ 1 ಕಿಲೋಮೀಟರ್ ದೂರದಲ್ಲಿರುವ ಐಗೂರು ಮಸೀದಿಯ ಬಳಿ ಬಹಿರಂಗವಾಗಿ ಕುರಾನ್ ಸುಟ್ಟಾಗ ಸೌಜನ್ಯಕ್ಕೂ ಅಲ್ಪಸಂಖ್ಯಾತರನ್ನು ಸಂತೈಸದಿರುವುದು ಅವರ ಮೇಲೆ ಅಸಮಾಧಾನ ಮೂಡಿಸಿದೆ. ಜೊತೆಗೆ ಕಾಂಗ್ರೆಸ್ ಚಂದ್ರಕಲಾರವರು ಮತ್ತು ಜೆಡಿಎಸ್ ಜೀವಿಜಯ ಇಬ್ಬರೂ ಅರೆಭಾಷೆ ಗೌಡರಾಗಿರುವ ಕಾರಣ ಮತಗಳು ವಿಭಜನೆಯಾಗುವುದು ಖಚಿತವಾಗಿದೆ. ಈ ಕಾರಣಕ್ಕೆ ಬಿಜೆಪಿಯೇತರ ಶಾಸಕರು ಗೆಲ್ಲುವ ಎಲ್ಲ ಸಾಧ್ಯತೆಗಳೂ ಸಹ ಕ್ಷೀಣಿಸುವ ಸಾಧ್ಯತೆಗಳಿವೆ. ಹಾಲಿ ಶಾಸಕ ವಿರೋಧಿ ಅಲೆಯ ನಡುವೆಯೂ ಅಪ್ಪಚ್ಚು ರಂಜನ್ ಮತ್ತೆ ಆಯ್ಕೆಯಾದರೂ ಆಶ್ಚರ್ಯವಿಲ್ಲ.

ಬೋಪಯ್ಯ

ವಿರಾಜಪೇಟೆ ಕ್ಷೇತ್ರದಲ್ಲಿ ಕೊಡವರದೇ ಮೇಲುಗೈ. ಕಾಂಗ್ರೆಸ್‍ನಿಂದ ಕೊಡವ ಸಮಾಜದ ಅರುಣ್ ಮಾಚಯ್ಯ, ಜೆಡಿಎಸ್‍ನಿಂದ ಸಂಕೇತ ಪೂವಯ್ಯ ಮತ್ತು ಬಿಜೆಪಿ ಕೆ.ಜಿ.ಬೋಪಯ್ಯ ಇವರು ಕಣದಲ್ಲಿದ್ದಾರೆ. ಕೊಡವ ಸಮಾಜ ಇಲ್ಲಿಯವರೆಗೆ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಂಡೇ ಬಂದಿದ್ದು ಅದು ತಮ್ಮ ಪಾರುಪತ್ಯಕ್ಕೆ ಧಕ್ಕೆ ತರಲಾರದು ಎಂದು ಬಲವಾಗಿ ನಂಬಿದೆ. ಆ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೊಡವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದರೂ ಸತತವಾಗಿ ಸೋಲುತ್ತಿದ್ದಾರೆ. ಸ್ವತಃ ಬಿಜೆಪಿಯೇ ಹಿಂದುಮುಂದು ನೋಡಿ ಬೋಪಯ್ಯಗೆ ಟಿಕೆಟ್ ಕೊಟ್ಟರೂ ಕೊಡವರು ಮತ್ತು ಮಲಯಾಳಿ ಈಡಿಗರು ಒಕ್ಕಲಿಗ ಕೆ.ಜಿ.ಬೋಪಯ್ಯರನ್ನೇ ಗೆಲ್ಲಿಸಬೇಕೆಂದು ಬಗೆದಿರುವಂತಿದೆ. ಇಲ್ಲೀವರೆಗೂ ಈ ಎರಡೂ ಜನಾಂಗ ತಮ್ಮಲ್ಲಿರುವ ಅಧಿಕಾರವನ್ನು ಕಾಯ್ದಿರಿಸಿಕೊಳ್ಳಲು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ದಾರಿ ಹಿಡಿಯುವ ಸಾಧ್ಯತೆಗಳೇ ಹೆಚ್ಚಿದೆಯಾದರು ಸದ್ಯದ ಮಟ್ಟಿಗೆ ಕಾಂಗ್ರೆಸ್‍ನ ಅರುಣ್ ಮಾಚಯ್ಯ ಕೂಡಾ ಗೆಲುವಿನ ಸಂಭಾವ್ಯತೆಯನ್ನು ಉಳಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...