Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...