Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...